Homeಮುಖಪುಟಮೋದಿಜಿ ಕನಿಷ್ಟ 4ಜಿ ಇಂಟರ್ನೆಟ್‌ ಆದರೂ ಕೊಡಿ: ಭಾವನಾತ್ಮಕ ಪತ್ರ ಬರೆದ ಕಾಶ್ಮೀರದ ಬಾಲಕ

ಮೋದಿಜಿ ಕನಿಷ್ಟ 4ಜಿ ಇಂಟರ್ನೆಟ್‌ ಆದರೂ ಕೊಡಿ: ಭಾವನಾತ್ಮಕ ಪತ್ರ ಬರೆದ ಕಾಶ್ಮೀರದ ಬಾಲಕ

ನಾನು 2019ರ ಆಗಸ್ಟ್‌ನಿಂದಲೇ ಶಾಲೆಯಿಂದ ಹೊರಗುಳಿದಿದ್ದೇನೆ. ( ಕಾರಣ ನಿಮಗೆ ಗೊತ್ತಿದೆ ) ಕೆಲ ದಿನಗಳ ಹಿಂದೆ ನಾನು ಶಾಲೆಗೆ ಹೋಗಲು ಆರಂಭಿಸಿದ್ದೇ ಆದರೆ ಕೊರೊನಾ ವೈರಸ್‌ ಕಾರಣಕ್ಕೆ ಮಾರ್ಚ್‌‌ನಿಂದ ಶಾಲೆಗಳನ್ನು ಮುಚ್ಚಲಾಯಿತು.

- Advertisement -
- Advertisement -

ಕೊರೊನಾ ಮುನ್ನೆಚ್ಚರಿಕೆಯ ಭಾಗವಾಗಿ ನಮ್ಮ ಪ್ರಧಾನಿ ಮೋದಿಯವರು 21 ದಿನಗಳ ಲಾಕ್‌ಡೌನ್‌ ಘೋಷಿಸಿದ್ದಾರೆ. ಅದರಲ್ಲಿ ಒಂದು ವಾರ ಕಳೆದಿದ್ದು ಇಷ್ಟಕ್ಕೆ ಬಹಳಷ್ಟು ಜನ ನಲುಗಿಹೋಗಿದ್ದಾರೆ. ಬಡವರು, ವಲಸೆ ಕಾರ್ಮಿಕರು, ನಿರಾಶ್ರಿತರು ಕಂಗೆಟ್ಟಿದ್ದಾರೆ.

ಇನ್ನು ಮನೆಯಲ್ಲಿರಲಾರದೇ ದಿನಸಿ ತರಲೆಂದೋ ಅಥವಾ ಇನ್ಯಾವುದೋ ಅಗತ್ಯ ಕೆಲಸ ಹೋದವರ ಮೇಲೆಯೂ ಕೂಡ ಪೊಲೀಸರು ಲಾಠಿ ಬೀಸಿ ಕೊರೊನಾಕ್ಕಿಂತ ಹೆಚ್ಚಿನ ಭೀತಿ ಉಂಟು ಮಾಡಿದ್ದಾರೆ. ಹಾಗಾಗಿ ಒಂದು ವಾರದ ಲಾಕ್‌ಡೌನ್‌ ತಡೆದುಕೊಳ್ಳಲು ದೇಶದ ಹಲವಾರು ಜನ ಹೆಣಗಾಡುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಆಗಸ್ಟ್‌ 05 ರಿಂದ ಎಂಟು ತಿಂಗಳ ಕಾಲ ಲಾಕ್‌ಡೌನ್‌ ಅನುಭವಿಸುತ್ತಿರುವ ಜಮ್ಮು ಕಾಶ್ಮೀರದ ಜನರ ಪರಿಸ್ಥಿತಿ ಹೇಗಿರಬಹುದು ಎಂದಾದರೂ ಊಹಿಸಿದ್ದೀರಾ? ಅಲ್ಲಿನ 5ನೇ ತರಗತಿಯ ಪುಟ್ಟ ಹುಡುಗನೊಬ್ಬ ಬರೆದಿರುವ ಪತ್ರ ಓದಿದರೆ ಅದರ ಭೀಕರತೆ ಅರ್ಥವಾಗಬಹುದು.

ಆ ಬಾಲಕನ ಪತ್ರಕ ಕನ್ನಡ ಅನುವಾದ ಈ ಕೆಳಗಿನಂತಿದೆ.

ಪ್ರಿಯ ಮೋದಿಜಿ,

ನನ್ನ ಪಿ.ಸಿ.ಎಚ್‌.ಎಸ್‌.ಎಸ್‌ ಶಾಲೆಯು ಒದಗಿಸಿರುವ ಆನ್‌ಲೈನ್‌ ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗದಿರುವುದಕ್ಕೆ ನನಗೆ ಕೋಪ, ಒತ್ತಡ, ನೋವು ಮತ್ತು ಖಿನ್ನತೆ ಉಂಟಾಗಿದೆ. ಏಕೆಂದರೆ 2ಜಿ ಮೊಬೈಲ್‌ ನೆಟ್‌ವರ್ಕ್‌ ಕೆಲಸ ಮಾಡದ ಕಾರಣ ನಾನು ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.

ನಾನು 2019ರ ಆಗಸ್ಟ್‌ನಿಂದಲೇ ಶಾಲೆಯಿಂದ ಹೊರಗುಳಿದಿದ್ದೇನೆ. ( ಕಾರಣ ನಿಮಗೆ ಗೊತ್ತಿದೆ ) ಕೆಲ ದಿನಗಳ ಹಿಂದೆ ನಾನು ಶಾಲೆಗೆ ಹೋಗಲು ಆರಂಭಿಸಿದ್ದೇ ಆದರೆ ಕೊರೊನಾ ವೈರಸ್‌ ಕಾರಣಕ್ಕೆ ಮಾರ್ಚ್‌‌ನಿಂದ ಶಾಲೆಗಳನ್ನು ಮುಚ್ಚಲಾಯಿತು. ಆಗ ನಮ್ಮ ಶಾಲಾ ಶಿಕ್ಷಕರು ಆನ್‌ಲೈನ್‌ ಮೂಲಕ ತರಗತಿಗಳನ್ನು ನಡೆಸಲು ತೀರ್ಮಾನಿಸಿದರು. ಆದರೆ 2ಜಿ ನೆಟ್‌ವರ್ಕ್‌ ಕಾರಣಕ್ಕೆ ಅದು ಸಾಧ್ಯವಾಗಿಲ್ಲ. ಹಾಗಾಗಿ ದಯವಿಟ್ಟು ನಮಗೆ 4ಜಿ ನೆಟ್‌‌ವರ್ಕ್‌ ಅನ್ನು ವಾಪಸ್ ಕೊಡಿ. ನನಗೆ ಕಲಿಕೆಯನ್ನು ಕಳೆದುಕೊಳ್ಳಲು ಇಷ್ಟವಿಲ್ಲ.

ಇಂತಿ

ಪಿ.ಸಿ.ಎಚ್‌.ಎಸ್‌.ಎಸ್‌ ಶಾಲಾ ವಿದ್ಯಾರ್ಥಿ

5ನೇ ತರಗತಿ.

ಈ ಬಾಲಕನ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಒಬ್ಬ ವಿದ್ಯಾರ್ಥಿಯು ತನ್ನ ಕಳವಳವನ್ನು ವ್ಯಕ್ತಪಡಿಸಿ, ಕೆಲವು ಪ್ರಶ್ನೆಗಳನ್ನು ಕೇಳಿದ ಪತ್ರವು ನಮ್ಮೆಲ್ಲ ಭಾರತೀಯರನ್ನು ಯೋಚಿಸುವಂತೆ ಮಾಡಿದೆ. ಇಂದು ದೇಶವು ಈ ಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ, ಎಲ್ಲಾ ವಿದ್ಯಾರ್ಥಿಗಳು ಇಂಟರ್ನೆಟ್ ಸಹಾಯದಿಂದ ಅಧ್ಯಯನ ಮಾಡುತ್ತಿದ್ದಾರೆ. ಆದರೆ ಕೆಲವು ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಮುಂದುವರಿಸಲು ಅದೇ ಅವಕಾಶವನ್ನು ಪಡೆಯುತ್ತಿಲ್ಲ. ಏಕೆಂದರೆ ಸರ್ಕಾರವು ಅವರಲ್ಲಿ 4 ಜಿ ಸೌಲಭ್ಯವನ್ನು ರದ್ದುಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಾವಿರಾರು ವಿದ್ಯಾರ್ಥಿಗಳಿಗೆ ಒಂದೇ ರೀತಿಯ ಶಿಕ್ಷಣದ ಅವಕಾಶ ಸಿಗುತ್ತಿಲ್ಲ ಎಂಬ ಕಾರಣದಿಂದ ತೊಂದರೆಗೀಡಾದ 5 ನೇ ತರಗತಿಯ ವಿದ್ಯಾರ್ಥಿಯು ಪ್ರಧಾನಿಯನ್ನು ಉದ್ದೇಶಿಸಿ ಪತ್ರ ಬರೆದಿದ್ದಾರೆ ಎಂದು ಯೂತ್‌ ಫಾರ್‌ ಸ್ವರಾಜ್‌ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...