Homeಮುಖಪುಟಮೋದಿಜಿ ಕನಿಷ್ಟ 4ಜಿ ಇಂಟರ್ನೆಟ್‌ ಆದರೂ ಕೊಡಿ: ಭಾವನಾತ್ಮಕ ಪತ್ರ ಬರೆದ ಕಾಶ್ಮೀರದ ಬಾಲಕ

ಮೋದಿಜಿ ಕನಿಷ್ಟ 4ಜಿ ಇಂಟರ್ನೆಟ್‌ ಆದರೂ ಕೊಡಿ: ಭಾವನಾತ್ಮಕ ಪತ್ರ ಬರೆದ ಕಾಶ್ಮೀರದ ಬಾಲಕ

ನಾನು 2019ರ ಆಗಸ್ಟ್‌ನಿಂದಲೇ ಶಾಲೆಯಿಂದ ಹೊರಗುಳಿದಿದ್ದೇನೆ. ( ಕಾರಣ ನಿಮಗೆ ಗೊತ್ತಿದೆ ) ಕೆಲ ದಿನಗಳ ಹಿಂದೆ ನಾನು ಶಾಲೆಗೆ ಹೋಗಲು ಆರಂಭಿಸಿದ್ದೇ ಆದರೆ ಕೊರೊನಾ ವೈರಸ್‌ ಕಾರಣಕ್ಕೆ ಮಾರ್ಚ್‌‌ನಿಂದ ಶಾಲೆಗಳನ್ನು ಮುಚ್ಚಲಾಯಿತು.

- Advertisement -
- Advertisement -

ಕೊರೊನಾ ಮುನ್ನೆಚ್ಚರಿಕೆಯ ಭಾಗವಾಗಿ ನಮ್ಮ ಪ್ರಧಾನಿ ಮೋದಿಯವರು 21 ದಿನಗಳ ಲಾಕ್‌ಡೌನ್‌ ಘೋಷಿಸಿದ್ದಾರೆ. ಅದರಲ್ಲಿ ಒಂದು ವಾರ ಕಳೆದಿದ್ದು ಇಷ್ಟಕ್ಕೆ ಬಹಳಷ್ಟು ಜನ ನಲುಗಿಹೋಗಿದ್ದಾರೆ. ಬಡವರು, ವಲಸೆ ಕಾರ್ಮಿಕರು, ನಿರಾಶ್ರಿತರು ಕಂಗೆಟ್ಟಿದ್ದಾರೆ.

ಇನ್ನು ಮನೆಯಲ್ಲಿರಲಾರದೇ ದಿನಸಿ ತರಲೆಂದೋ ಅಥವಾ ಇನ್ಯಾವುದೋ ಅಗತ್ಯ ಕೆಲಸ ಹೋದವರ ಮೇಲೆಯೂ ಕೂಡ ಪೊಲೀಸರು ಲಾಠಿ ಬೀಸಿ ಕೊರೊನಾಕ್ಕಿಂತ ಹೆಚ್ಚಿನ ಭೀತಿ ಉಂಟು ಮಾಡಿದ್ದಾರೆ. ಹಾಗಾಗಿ ಒಂದು ವಾರದ ಲಾಕ್‌ಡೌನ್‌ ತಡೆದುಕೊಳ್ಳಲು ದೇಶದ ಹಲವಾರು ಜನ ಹೆಣಗಾಡುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಆಗಸ್ಟ್‌ 05 ರಿಂದ ಎಂಟು ತಿಂಗಳ ಕಾಲ ಲಾಕ್‌ಡೌನ್‌ ಅನುಭವಿಸುತ್ತಿರುವ ಜಮ್ಮು ಕಾಶ್ಮೀರದ ಜನರ ಪರಿಸ್ಥಿತಿ ಹೇಗಿರಬಹುದು ಎಂದಾದರೂ ಊಹಿಸಿದ್ದೀರಾ? ಅಲ್ಲಿನ 5ನೇ ತರಗತಿಯ ಪುಟ್ಟ ಹುಡುಗನೊಬ್ಬ ಬರೆದಿರುವ ಪತ್ರ ಓದಿದರೆ ಅದರ ಭೀಕರತೆ ಅರ್ಥವಾಗಬಹುದು.

ಆ ಬಾಲಕನ ಪತ್ರಕ ಕನ್ನಡ ಅನುವಾದ ಈ ಕೆಳಗಿನಂತಿದೆ.

ಪ್ರಿಯ ಮೋದಿಜಿ,

ನನ್ನ ಪಿ.ಸಿ.ಎಚ್‌.ಎಸ್‌.ಎಸ್‌ ಶಾಲೆಯು ಒದಗಿಸಿರುವ ಆನ್‌ಲೈನ್‌ ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗದಿರುವುದಕ್ಕೆ ನನಗೆ ಕೋಪ, ಒತ್ತಡ, ನೋವು ಮತ್ತು ಖಿನ್ನತೆ ಉಂಟಾಗಿದೆ. ಏಕೆಂದರೆ 2ಜಿ ಮೊಬೈಲ್‌ ನೆಟ್‌ವರ್ಕ್‌ ಕೆಲಸ ಮಾಡದ ಕಾರಣ ನಾನು ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.

ನಾನು 2019ರ ಆಗಸ್ಟ್‌ನಿಂದಲೇ ಶಾಲೆಯಿಂದ ಹೊರಗುಳಿದಿದ್ದೇನೆ. ( ಕಾರಣ ನಿಮಗೆ ಗೊತ್ತಿದೆ ) ಕೆಲ ದಿನಗಳ ಹಿಂದೆ ನಾನು ಶಾಲೆಗೆ ಹೋಗಲು ಆರಂಭಿಸಿದ್ದೇ ಆದರೆ ಕೊರೊನಾ ವೈರಸ್‌ ಕಾರಣಕ್ಕೆ ಮಾರ್ಚ್‌‌ನಿಂದ ಶಾಲೆಗಳನ್ನು ಮುಚ್ಚಲಾಯಿತು. ಆಗ ನಮ್ಮ ಶಾಲಾ ಶಿಕ್ಷಕರು ಆನ್‌ಲೈನ್‌ ಮೂಲಕ ತರಗತಿಗಳನ್ನು ನಡೆಸಲು ತೀರ್ಮಾನಿಸಿದರು. ಆದರೆ 2ಜಿ ನೆಟ್‌ವರ್ಕ್‌ ಕಾರಣಕ್ಕೆ ಅದು ಸಾಧ್ಯವಾಗಿಲ್ಲ. ಹಾಗಾಗಿ ದಯವಿಟ್ಟು ನಮಗೆ 4ಜಿ ನೆಟ್‌‌ವರ್ಕ್‌ ಅನ್ನು ವಾಪಸ್ ಕೊಡಿ. ನನಗೆ ಕಲಿಕೆಯನ್ನು ಕಳೆದುಕೊಳ್ಳಲು ಇಷ್ಟವಿಲ್ಲ.

ಇಂತಿ

ಪಿ.ಸಿ.ಎಚ್‌.ಎಸ್‌.ಎಸ್‌ ಶಾಲಾ ವಿದ್ಯಾರ್ಥಿ

5ನೇ ತರಗತಿ.

ಈ ಬಾಲಕನ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಒಬ್ಬ ವಿದ್ಯಾರ್ಥಿಯು ತನ್ನ ಕಳವಳವನ್ನು ವ್ಯಕ್ತಪಡಿಸಿ, ಕೆಲವು ಪ್ರಶ್ನೆಗಳನ್ನು ಕೇಳಿದ ಪತ್ರವು ನಮ್ಮೆಲ್ಲ ಭಾರತೀಯರನ್ನು ಯೋಚಿಸುವಂತೆ ಮಾಡಿದೆ. ಇಂದು ದೇಶವು ಈ ಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ, ಎಲ್ಲಾ ವಿದ್ಯಾರ್ಥಿಗಳು ಇಂಟರ್ನೆಟ್ ಸಹಾಯದಿಂದ ಅಧ್ಯಯನ ಮಾಡುತ್ತಿದ್ದಾರೆ. ಆದರೆ ಕೆಲವು ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಮುಂದುವರಿಸಲು ಅದೇ ಅವಕಾಶವನ್ನು ಪಡೆಯುತ್ತಿಲ್ಲ. ಏಕೆಂದರೆ ಸರ್ಕಾರವು ಅವರಲ್ಲಿ 4 ಜಿ ಸೌಲಭ್ಯವನ್ನು ರದ್ದುಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಾವಿರಾರು ವಿದ್ಯಾರ್ಥಿಗಳಿಗೆ ಒಂದೇ ರೀತಿಯ ಶಿಕ್ಷಣದ ಅವಕಾಶ ಸಿಗುತ್ತಿಲ್ಲ ಎಂಬ ಕಾರಣದಿಂದ ತೊಂದರೆಗೀಡಾದ 5 ನೇ ತರಗತಿಯ ವಿದ್ಯಾರ್ಥಿಯು ಪ್ರಧಾನಿಯನ್ನು ಉದ್ದೇಶಿಸಿ ಪತ್ರ ಬರೆದಿದ್ದಾರೆ ಎಂದು ಯೂತ್‌ ಫಾರ್‌ ಸ್ವರಾಜ್‌ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...