Homeಮುಖಪುಟಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

- Advertisement -
- Advertisement -

ಬೆಂಗಳೂರಿನ ಸ್ವರಾಜ್‌ ಅಭಿಯಾನ್‌ ಸಂಘಟನೆಯ ಕಾರ್ಯಕರ್ತೆಯಾದ ಜರೀನ್‌ ತಾಜ್‌ರವರು ಲಾಕ್‌ಡೌನ್‌ ಘೋಷಿಸಿದಾಗಿನಿಂದಲೂ ವಲಸೆ ಕಾರ್ಮಿಕರಿಗೆ, ಬಡಜನರಿಗೆ, ಸ್ಲಂ ನಿವಾಸಿಗಳಿಗೆ ತಮ್ಮಿಂದಾದಷ್ಟು ಸಹಾಯ ಮಾಡುತ್ತಾ ಬಂದಿದ್ದಾರೆ. ಆದರೆ ಏಪ್ರಿಲ್‌ 4 ಮತ್ತು 6 ರಂದು ಬಡಜನರಿಗೆ ಆಹಾರ ಧಾನ್ಯಗಳನ್ನು ವಿತರಿಸುತ್ತಿದ್ದಾಗ ಅವರು ಮುಸ್ಲಿಂ ಎಂಬ ಕಾರಣಕ್ಕೆ ಹಲವು RSS ಬೆಂಬಲಿಗರು ಅವರ ಮೆಲೆ ಎರಡು ಬಾರಿ ಹಲ್ಲೆ ನಡೆಸಿದ್ದಾರೆ. ಈಗ ಸದ್ಯಕ್ಕೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರಿಂದ ನೊಂದುಕೊಂಡು ಹಿರಿಯ ಸಾಹಿತಿ ಮತ್ತು ಸ್ವರಾಜ್‌ ಇಂಡಿಯಾದ ಮುಖಂಡರಾದ ದೇವನೂರು ಮಹಾದೇವರವರು ಭಾವಪೂರ್ಣ ಪತ್ರ ಬರೆದಿದ್ದಾರೆ.

ಪ್ರೀತಿಯ ಜರೀನ್ ತಾಜ್,

ಬಹಳ ದುಃಖದಿಂದ ನಿಮಗೀ ಪತ್ರವನ್ನು ಬರೆಯುತ್ತಿದ್ದೇನೆ. ವಾಸ್ತವದಲ್ಲಿ ನಿಮಗೆ ಕೃತಜ್ಞತೆಗಳನ್ನು ಸಲ್ಲಿಸಿ, ಅಭಿನಂದಿಸುವ ಸಲುವಾಗಿ ನಾನು ನಿಮ್ಮನ್ನು ಭೇಟಿ ಮಾಡಬೇಕಿತ್ತು. ಆದರೆ ಕ್ಷಮೆ ಕೇಳಿ ಪತ್ರ ಬರೆಯುವ ಸಂದರ್ಭ ಒದಗಿ ಬಂದಿರುವುದು ನೋವುಂಟು ಮಾಡಿದೆ. ಕೊರೊನಾ ಲಾಕ್‍ಡೌನ್‍ನಿಂದ ತಮ್ಮ ಊರಿಗೂ ಸೇರಲಾಗದೇ ಇದ್ದಲ್ಲೂ ಇರಲಾಗದೇ ತುತ್ತು ಅನ್ನಕ್ಕಾಗಿ ಒದ್ದಾಡುತ್ತಿದ್ದ ವಲಸೆ ಕಾರ್ಮಿಕರಿಗೆ ಅನ್ನ ನೀಡುತ್ತಿದ್ದ ನಿಮ್ಮಗಳ ಮೇಲೆ ದಾಳಿ ನಡೆದದ್ದು ಕೇಳಿ ನಿನ್ನೆಯಿಂದ ಇದ್ದಲ್ಲಿ ಇರಲಾಗುತ್ತಿಲ್ಲ. ಮೊನ್ನೆ ಸಂಜೆ 6.30ಕ್ಕೆ ಅಮೃತಹಳ್ಳಿ ಬಳಿ ನಿಮಗೆ ಬೆದರಿಕೆ ಒಡ್ಡಿ, ನಿಮ್ಮ ಮನೆ ಮಕ್ಕಳ ಮೇಲೆ ದಾಳಿ ನಡೆದದ್ದು ನನ್ನ ಗಮನಕ್ಕೆ ಬಂದಿತು. ನಿಜಕ್ಕೂ ಅದು ನಿದ್ದೆಗೆಡಿಸಿತು.


ಇದನ್ನೂ ಓದಿ: ಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ – ಆರೋಪ


ಎಲ್ಲಾ ಮನುಷ್ಯರಲ್ಲೂ ಭೀತಿ ಹುಟ್ಟಿಸಿರುವ ಕೊರೊನಾ ಸೋಂಕು ಹರಡದಂತೆ ದಿಢೀರ್ ಲಾಕ್‍ಡೌನ್ ಘೋಷಿಸಿದಾಗ ಅಸಹಾಯಕರು ಎಲ್ಲೆಲ್ಲಿ ಹೇಗ್ಹೇಗೆ ಸಿಕ್ಕಿಕೊಂಡರೋ ಗೊತ್ತಿಲ್ಲ. ಅಂತಹವರಿಗೆ ಆತುಕೊಳ್ಳುವುದೇ ಮನುಷ್ಯತ್ವ. ಆದರೆ ಈ ಮನುಷ್ಯತ್ವದ ಮೇಲೆಯೇ ದಾಳಿ ನಡೆದಾಗ ಮಾನವೀಯತೆಯೇ ಸೋತು ಹೋಯಿತೇನೋ ಎಂದು ದಿಗಿಲಾಯಿತು. ಆದರೆ ಜರೀನ್, ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ, ಇದರಿಂದ ನಿಮ್ಮ ಮನಸ್ಸಿನಲ್ಲಿ ಮೂಡಿರಬಹುದಾದ ಕಹಿಯನ್ನು ತೆಗೆದುಹಾಕಿ. ನಿಮ್ಮ ಮಾನವೀಯ ಸ್ಪಂದನೆಗಳಿಗೆ ಉದಾರ ಭಾರತದ ನಾಗರಿಕ ಸಮಾಜ ಕೈ ಜೋಡಿಸುತ್ತದೆಂಬ ನಂಬಿಕೆ ನನಗಿದೆ. ಕೊರೊನಾ ಇಲ್ಲದಿದ್ದರೆ ನೇರವಾಗಿಯೇ ಬಂದು ಭೇಟಿ ಮಾಡಿ ಈ ಮಾತುಗಳನ್ನು ಹೇಳುತ್ತಿದ್ದೆ.

ಕ್ಷಮೆಯಿರಲಿ.

(ದೇವನೂರ ಮಹಾದೇವ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...