Homeಮುಖಪುಟಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

- Advertisement -
- Advertisement -

ಬೆಂಗಳೂರಿನ ಸ್ವರಾಜ್‌ ಅಭಿಯಾನ್‌ ಸಂಘಟನೆಯ ಕಾರ್ಯಕರ್ತೆಯಾದ ಜರೀನ್‌ ತಾಜ್‌ರವರು ಲಾಕ್‌ಡೌನ್‌ ಘೋಷಿಸಿದಾಗಿನಿಂದಲೂ ವಲಸೆ ಕಾರ್ಮಿಕರಿಗೆ, ಬಡಜನರಿಗೆ, ಸ್ಲಂ ನಿವಾಸಿಗಳಿಗೆ ತಮ್ಮಿಂದಾದಷ್ಟು ಸಹಾಯ ಮಾಡುತ್ತಾ ಬಂದಿದ್ದಾರೆ. ಆದರೆ ಏಪ್ರಿಲ್‌ 4 ಮತ್ತು 6 ರಂದು ಬಡಜನರಿಗೆ ಆಹಾರ ಧಾನ್ಯಗಳನ್ನು ವಿತರಿಸುತ್ತಿದ್ದಾಗ ಅವರು ಮುಸ್ಲಿಂ ಎಂಬ ಕಾರಣಕ್ಕೆ ಹಲವು RSS ಬೆಂಬಲಿಗರು ಅವರ ಮೆಲೆ ಎರಡು ಬಾರಿ ಹಲ್ಲೆ ನಡೆಸಿದ್ದಾರೆ. ಈಗ ಸದ್ಯಕ್ಕೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರಿಂದ ನೊಂದುಕೊಂಡು ಹಿರಿಯ ಸಾಹಿತಿ ಮತ್ತು ಸ್ವರಾಜ್‌ ಇಂಡಿಯಾದ ಮುಖಂಡರಾದ ದೇವನೂರು ಮಹಾದೇವರವರು ಭಾವಪೂರ್ಣ ಪತ್ರ ಬರೆದಿದ್ದಾರೆ.

ಪ್ರೀತಿಯ ಜರೀನ್ ತಾಜ್,

ಬಹಳ ದುಃಖದಿಂದ ನಿಮಗೀ ಪತ್ರವನ್ನು ಬರೆಯುತ್ತಿದ್ದೇನೆ. ವಾಸ್ತವದಲ್ಲಿ ನಿಮಗೆ ಕೃತಜ್ಞತೆಗಳನ್ನು ಸಲ್ಲಿಸಿ, ಅಭಿನಂದಿಸುವ ಸಲುವಾಗಿ ನಾನು ನಿಮ್ಮನ್ನು ಭೇಟಿ ಮಾಡಬೇಕಿತ್ತು. ಆದರೆ ಕ್ಷಮೆ ಕೇಳಿ ಪತ್ರ ಬರೆಯುವ ಸಂದರ್ಭ ಒದಗಿ ಬಂದಿರುವುದು ನೋವುಂಟು ಮಾಡಿದೆ. ಕೊರೊನಾ ಲಾಕ್‍ಡೌನ್‍ನಿಂದ ತಮ್ಮ ಊರಿಗೂ ಸೇರಲಾಗದೇ ಇದ್ದಲ್ಲೂ ಇರಲಾಗದೇ ತುತ್ತು ಅನ್ನಕ್ಕಾಗಿ ಒದ್ದಾಡುತ್ತಿದ್ದ ವಲಸೆ ಕಾರ್ಮಿಕರಿಗೆ ಅನ್ನ ನೀಡುತ್ತಿದ್ದ ನಿಮ್ಮಗಳ ಮೇಲೆ ದಾಳಿ ನಡೆದದ್ದು ಕೇಳಿ ನಿನ್ನೆಯಿಂದ ಇದ್ದಲ್ಲಿ ಇರಲಾಗುತ್ತಿಲ್ಲ. ಮೊನ್ನೆ ಸಂಜೆ 6.30ಕ್ಕೆ ಅಮೃತಹಳ್ಳಿ ಬಳಿ ನಿಮಗೆ ಬೆದರಿಕೆ ಒಡ್ಡಿ, ನಿಮ್ಮ ಮನೆ ಮಕ್ಕಳ ಮೇಲೆ ದಾಳಿ ನಡೆದದ್ದು ನನ್ನ ಗಮನಕ್ಕೆ ಬಂದಿತು. ನಿಜಕ್ಕೂ ಅದು ನಿದ್ದೆಗೆಡಿಸಿತು.


ಇದನ್ನೂ ಓದಿ: ಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ – ಆರೋಪ


ಎಲ್ಲಾ ಮನುಷ್ಯರಲ್ಲೂ ಭೀತಿ ಹುಟ್ಟಿಸಿರುವ ಕೊರೊನಾ ಸೋಂಕು ಹರಡದಂತೆ ದಿಢೀರ್ ಲಾಕ್‍ಡೌನ್ ಘೋಷಿಸಿದಾಗ ಅಸಹಾಯಕರು ಎಲ್ಲೆಲ್ಲಿ ಹೇಗ್ಹೇಗೆ ಸಿಕ್ಕಿಕೊಂಡರೋ ಗೊತ್ತಿಲ್ಲ. ಅಂತಹವರಿಗೆ ಆತುಕೊಳ್ಳುವುದೇ ಮನುಷ್ಯತ್ವ. ಆದರೆ ಈ ಮನುಷ್ಯತ್ವದ ಮೇಲೆಯೇ ದಾಳಿ ನಡೆದಾಗ ಮಾನವೀಯತೆಯೇ ಸೋತು ಹೋಯಿತೇನೋ ಎಂದು ದಿಗಿಲಾಯಿತು. ಆದರೆ ಜರೀನ್, ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ, ಇದರಿಂದ ನಿಮ್ಮ ಮನಸ್ಸಿನಲ್ಲಿ ಮೂಡಿರಬಹುದಾದ ಕಹಿಯನ್ನು ತೆಗೆದುಹಾಕಿ. ನಿಮ್ಮ ಮಾನವೀಯ ಸ್ಪಂದನೆಗಳಿಗೆ ಉದಾರ ಭಾರತದ ನಾಗರಿಕ ಸಮಾಜ ಕೈ ಜೋಡಿಸುತ್ತದೆಂಬ ನಂಬಿಕೆ ನನಗಿದೆ. ಕೊರೊನಾ ಇಲ್ಲದಿದ್ದರೆ ನೇರವಾಗಿಯೇ ಬಂದು ಭೇಟಿ ಮಾಡಿ ಈ ಮಾತುಗಳನ್ನು ಹೇಳುತ್ತಿದ್ದೆ.

ಕ್ಷಮೆಯಿರಲಿ.

(ದೇವನೂರ ಮಹಾದೇವ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...