Homeಮುಖಪುಟಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

- Advertisement -
- Advertisement -

ಬೆಂಗಳೂರಿನ ಸ್ವರಾಜ್‌ ಅಭಿಯಾನ್‌ ಸಂಘಟನೆಯ ಕಾರ್ಯಕರ್ತೆಯಾದ ಜರೀನ್‌ ತಾಜ್‌ರವರು ಲಾಕ್‌ಡೌನ್‌ ಘೋಷಿಸಿದಾಗಿನಿಂದಲೂ ವಲಸೆ ಕಾರ್ಮಿಕರಿಗೆ, ಬಡಜನರಿಗೆ, ಸ್ಲಂ ನಿವಾಸಿಗಳಿಗೆ ತಮ್ಮಿಂದಾದಷ್ಟು ಸಹಾಯ ಮಾಡುತ್ತಾ ಬಂದಿದ್ದಾರೆ. ಆದರೆ ಏಪ್ರಿಲ್‌ 4 ಮತ್ತು 6 ರಂದು ಬಡಜನರಿಗೆ ಆಹಾರ ಧಾನ್ಯಗಳನ್ನು ವಿತರಿಸುತ್ತಿದ್ದಾಗ ಅವರು ಮುಸ್ಲಿಂ ಎಂಬ ಕಾರಣಕ್ಕೆ ಹಲವು RSS ಬೆಂಬಲಿಗರು ಅವರ ಮೆಲೆ ಎರಡು ಬಾರಿ ಹಲ್ಲೆ ನಡೆಸಿದ್ದಾರೆ. ಈಗ ಸದ್ಯಕ್ಕೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರಿಂದ ನೊಂದುಕೊಂಡು ಹಿರಿಯ ಸಾಹಿತಿ ಮತ್ತು ಸ್ವರಾಜ್‌ ಇಂಡಿಯಾದ ಮುಖಂಡರಾದ ದೇವನೂರು ಮಹಾದೇವರವರು ಭಾವಪೂರ್ಣ ಪತ್ರ ಬರೆದಿದ್ದಾರೆ.

ಪ್ರೀತಿಯ ಜರೀನ್ ತಾಜ್,

ಬಹಳ ದುಃಖದಿಂದ ನಿಮಗೀ ಪತ್ರವನ್ನು ಬರೆಯುತ್ತಿದ್ದೇನೆ. ವಾಸ್ತವದಲ್ಲಿ ನಿಮಗೆ ಕೃತಜ್ಞತೆಗಳನ್ನು ಸಲ್ಲಿಸಿ, ಅಭಿನಂದಿಸುವ ಸಲುವಾಗಿ ನಾನು ನಿಮ್ಮನ್ನು ಭೇಟಿ ಮಾಡಬೇಕಿತ್ತು. ಆದರೆ ಕ್ಷಮೆ ಕೇಳಿ ಪತ್ರ ಬರೆಯುವ ಸಂದರ್ಭ ಒದಗಿ ಬಂದಿರುವುದು ನೋವುಂಟು ಮಾಡಿದೆ. ಕೊರೊನಾ ಲಾಕ್‍ಡೌನ್‍ನಿಂದ ತಮ್ಮ ಊರಿಗೂ ಸೇರಲಾಗದೇ ಇದ್ದಲ್ಲೂ ಇರಲಾಗದೇ ತುತ್ತು ಅನ್ನಕ್ಕಾಗಿ ಒದ್ದಾಡುತ್ತಿದ್ದ ವಲಸೆ ಕಾರ್ಮಿಕರಿಗೆ ಅನ್ನ ನೀಡುತ್ತಿದ್ದ ನಿಮ್ಮಗಳ ಮೇಲೆ ದಾಳಿ ನಡೆದದ್ದು ಕೇಳಿ ನಿನ್ನೆಯಿಂದ ಇದ್ದಲ್ಲಿ ಇರಲಾಗುತ್ತಿಲ್ಲ. ಮೊನ್ನೆ ಸಂಜೆ 6.30ಕ್ಕೆ ಅಮೃತಹಳ್ಳಿ ಬಳಿ ನಿಮಗೆ ಬೆದರಿಕೆ ಒಡ್ಡಿ, ನಿಮ್ಮ ಮನೆ ಮಕ್ಕಳ ಮೇಲೆ ದಾಳಿ ನಡೆದದ್ದು ನನ್ನ ಗಮನಕ್ಕೆ ಬಂದಿತು. ನಿಜಕ್ಕೂ ಅದು ನಿದ್ದೆಗೆಡಿಸಿತು.


ಇದನ್ನೂ ಓದಿ: ಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ – ಆರೋಪ


ಎಲ್ಲಾ ಮನುಷ್ಯರಲ್ಲೂ ಭೀತಿ ಹುಟ್ಟಿಸಿರುವ ಕೊರೊನಾ ಸೋಂಕು ಹರಡದಂತೆ ದಿಢೀರ್ ಲಾಕ್‍ಡೌನ್ ಘೋಷಿಸಿದಾಗ ಅಸಹಾಯಕರು ಎಲ್ಲೆಲ್ಲಿ ಹೇಗ್ಹೇಗೆ ಸಿಕ್ಕಿಕೊಂಡರೋ ಗೊತ್ತಿಲ್ಲ. ಅಂತಹವರಿಗೆ ಆತುಕೊಳ್ಳುವುದೇ ಮನುಷ್ಯತ್ವ. ಆದರೆ ಈ ಮನುಷ್ಯತ್ವದ ಮೇಲೆಯೇ ದಾಳಿ ನಡೆದಾಗ ಮಾನವೀಯತೆಯೇ ಸೋತು ಹೋಯಿತೇನೋ ಎಂದು ದಿಗಿಲಾಯಿತು. ಆದರೆ ಜರೀನ್, ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ, ಇದರಿಂದ ನಿಮ್ಮ ಮನಸ್ಸಿನಲ್ಲಿ ಮೂಡಿರಬಹುದಾದ ಕಹಿಯನ್ನು ತೆಗೆದುಹಾಕಿ. ನಿಮ್ಮ ಮಾನವೀಯ ಸ್ಪಂದನೆಗಳಿಗೆ ಉದಾರ ಭಾರತದ ನಾಗರಿಕ ಸಮಾಜ ಕೈ ಜೋಡಿಸುತ್ತದೆಂಬ ನಂಬಿಕೆ ನನಗಿದೆ. ಕೊರೊನಾ ಇಲ್ಲದಿದ್ದರೆ ನೇರವಾಗಿಯೇ ಬಂದು ಭೇಟಿ ಮಾಡಿ ಈ ಮಾತುಗಳನ್ನು ಹೇಳುತ್ತಿದ್ದೆ.

ಕ್ಷಮೆಯಿರಲಿ.

(ದೇವನೂರ ಮಹಾದೇವ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...