Homeಮುಖಪುಟಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

- Advertisement -
- Advertisement -

ಬೆಂಗಳೂರಿನ ಸ್ವರಾಜ್‌ ಅಭಿಯಾನ್‌ ಸಂಘಟನೆಯ ಕಾರ್ಯಕರ್ತೆಯಾದ ಜರೀನ್‌ ತಾಜ್‌ರವರು ಲಾಕ್‌ಡೌನ್‌ ಘೋಷಿಸಿದಾಗಿನಿಂದಲೂ ವಲಸೆ ಕಾರ್ಮಿಕರಿಗೆ, ಬಡಜನರಿಗೆ, ಸ್ಲಂ ನಿವಾಸಿಗಳಿಗೆ ತಮ್ಮಿಂದಾದಷ್ಟು ಸಹಾಯ ಮಾಡುತ್ತಾ ಬಂದಿದ್ದಾರೆ. ಆದರೆ ಏಪ್ರಿಲ್‌ 4 ಮತ್ತು 6 ರಂದು ಬಡಜನರಿಗೆ ಆಹಾರ ಧಾನ್ಯಗಳನ್ನು ವಿತರಿಸುತ್ತಿದ್ದಾಗ ಅವರು ಮುಸ್ಲಿಂ ಎಂಬ ಕಾರಣಕ್ಕೆ ಹಲವು RSS ಬೆಂಬಲಿಗರು ಅವರ ಮೆಲೆ ಎರಡು ಬಾರಿ ಹಲ್ಲೆ ನಡೆಸಿದ್ದಾರೆ. ಈಗ ಸದ್ಯಕ್ಕೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರಿಂದ ನೊಂದುಕೊಂಡು ಹಿರಿಯ ಸಾಹಿತಿ ಮತ್ತು ಸ್ವರಾಜ್‌ ಇಂಡಿಯಾದ ಮುಖಂಡರಾದ ದೇವನೂರು ಮಹಾದೇವರವರು ಭಾವಪೂರ್ಣ ಪತ್ರ ಬರೆದಿದ್ದಾರೆ.

ಪ್ರೀತಿಯ ಜರೀನ್ ತಾಜ್,

ಬಹಳ ದುಃಖದಿಂದ ನಿಮಗೀ ಪತ್ರವನ್ನು ಬರೆಯುತ್ತಿದ್ದೇನೆ. ವಾಸ್ತವದಲ್ಲಿ ನಿಮಗೆ ಕೃತಜ್ಞತೆಗಳನ್ನು ಸಲ್ಲಿಸಿ, ಅಭಿನಂದಿಸುವ ಸಲುವಾಗಿ ನಾನು ನಿಮ್ಮನ್ನು ಭೇಟಿ ಮಾಡಬೇಕಿತ್ತು. ಆದರೆ ಕ್ಷಮೆ ಕೇಳಿ ಪತ್ರ ಬರೆಯುವ ಸಂದರ್ಭ ಒದಗಿ ಬಂದಿರುವುದು ನೋವುಂಟು ಮಾಡಿದೆ. ಕೊರೊನಾ ಲಾಕ್‍ಡೌನ್‍ನಿಂದ ತಮ್ಮ ಊರಿಗೂ ಸೇರಲಾಗದೇ ಇದ್ದಲ್ಲೂ ಇರಲಾಗದೇ ತುತ್ತು ಅನ್ನಕ್ಕಾಗಿ ಒದ್ದಾಡುತ್ತಿದ್ದ ವಲಸೆ ಕಾರ್ಮಿಕರಿಗೆ ಅನ್ನ ನೀಡುತ್ತಿದ್ದ ನಿಮ್ಮಗಳ ಮೇಲೆ ದಾಳಿ ನಡೆದದ್ದು ಕೇಳಿ ನಿನ್ನೆಯಿಂದ ಇದ್ದಲ್ಲಿ ಇರಲಾಗುತ್ತಿಲ್ಲ. ಮೊನ್ನೆ ಸಂಜೆ 6.30ಕ್ಕೆ ಅಮೃತಹಳ್ಳಿ ಬಳಿ ನಿಮಗೆ ಬೆದರಿಕೆ ಒಡ್ಡಿ, ನಿಮ್ಮ ಮನೆ ಮಕ್ಕಳ ಮೇಲೆ ದಾಳಿ ನಡೆದದ್ದು ನನ್ನ ಗಮನಕ್ಕೆ ಬಂದಿತು. ನಿಜಕ್ಕೂ ಅದು ನಿದ್ದೆಗೆಡಿಸಿತು.


ಇದನ್ನೂ ಓದಿ: ಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ – ಆರೋಪ


ಎಲ್ಲಾ ಮನುಷ್ಯರಲ್ಲೂ ಭೀತಿ ಹುಟ್ಟಿಸಿರುವ ಕೊರೊನಾ ಸೋಂಕು ಹರಡದಂತೆ ದಿಢೀರ್ ಲಾಕ್‍ಡೌನ್ ಘೋಷಿಸಿದಾಗ ಅಸಹಾಯಕರು ಎಲ್ಲೆಲ್ಲಿ ಹೇಗ್ಹೇಗೆ ಸಿಕ್ಕಿಕೊಂಡರೋ ಗೊತ್ತಿಲ್ಲ. ಅಂತಹವರಿಗೆ ಆತುಕೊಳ್ಳುವುದೇ ಮನುಷ್ಯತ್ವ. ಆದರೆ ಈ ಮನುಷ್ಯತ್ವದ ಮೇಲೆಯೇ ದಾಳಿ ನಡೆದಾಗ ಮಾನವೀಯತೆಯೇ ಸೋತು ಹೋಯಿತೇನೋ ಎಂದು ದಿಗಿಲಾಯಿತು. ಆದರೆ ಜರೀನ್, ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ, ಇದರಿಂದ ನಿಮ್ಮ ಮನಸ್ಸಿನಲ್ಲಿ ಮೂಡಿರಬಹುದಾದ ಕಹಿಯನ್ನು ತೆಗೆದುಹಾಕಿ. ನಿಮ್ಮ ಮಾನವೀಯ ಸ್ಪಂದನೆಗಳಿಗೆ ಉದಾರ ಭಾರತದ ನಾಗರಿಕ ಸಮಾಜ ಕೈ ಜೋಡಿಸುತ್ತದೆಂಬ ನಂಬಿಕೆ ನನಗಿದೆ. ಕೊರೊನಾ ಇಲ್ಲದಿದ್ದರೆ ನೇರವಾಗಿಯೇ ಬಂದು ಭೇಟಿ ಮಾಡಿ ಈ ಮಾತುಗಳನ್ನು ಹೇಳುತ್ತಿದ್ದೆ.

ಕ್ಷಮೆಯಿರಲಿ.

(ದೇವನೂರ ಮಹಾದೇವ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...