Homeಮುಖಪುಟಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

- Advertisement -
- Advertisement -

ಬೆಂಗಳೂರಿನ ಸ್ವರಾಜ್‌ ಅಭಿಯಾನ್‌ ಸಂಘಟನೆಯ ಕಾರ್ಯಕರ್ತೆಯಾದ ಜರೀನ್‌ ತಾಜ್‌ರವರು ಲಾಕ್‌ಡೌನ್‌ ಘೋಷಿಸಿದಾಗಿನಿಂದಲೂ ವಲಸೆ ಕಾರ್ಮಿಕರಿಗೆ, ಬಡಜನರಿಗೆ, ಸ್ಲಂ ನಿವಾಸಿಗಳಿಗೆ ತಮ್ಮಿಂದಾದಷ್ಟು ಸಹಾಯ ಮಾಡುತ್ತಾ ಬಂದಿದ್ದಾರೆ. ಆದರೆ ಏಪ್ರಿಲ್‌ 4 ಮತ್ತು 6 ರಂದು ಬಡಜನರಿಗೆ ಆಹಾರ ಧಾನ್ಯಗಳನ್ನು ವಿತರಿಸುತ್ತಿದ್ದಾಗ ಅವರು ಮುಸ್ಲಿಂ ಎಂಬ ಕಾರಣಕ್ಕೆ ಹಲವು RSS ಬೆಂಬಲಿಗರು ಅವರ ಮೆಲೆ ಎರಡು ಬಾರಿ ಹಲ್ಲೆ ನಡೆಸಿದ್ದಾರೆ. ಈಗ ಸದ್ಯಕ್ಕೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರಿಂದ ನೊಂದುಕೊಂಡು ಹಿರಿಯ ಸಾಹಿತಿ ಮತ್ತು ಸ್ವರಾಜ್‌ ಇಂಡಿಯಾದ ಮುಖಂಡರಾದ ದೇವನೂರು ಮಹಾದೇವರವರು ಭಾವಪೂರ್ಣ ಪತ್ರ ಬರೆದಿದ್ದಾರೆ.

ಪ್ರೀತಿಯ ಜರೀನ್ ತಾಜ್,

ಬಹಳ ದುಃಖದಿಂದ ನಿಮಗೀ ಪತ್ರವನ್ನು ಬರೆಯುತ್ತಿದ್ದೇನೆ. ವಾಸ್ತವದಲ್ಲಿ ನಿಮಗೆ ಕೃತಜ್ಞತೆಗಳನ್ನು ಸಲ್ಲಿಸಿ, ಅಭಿನಂದಿಸುವ ಸಲುವಾಗಿ ನಾನು ನಿಮ್ಮನ್ನು ಭೇಟಿ ಮಾಡಬೇಕಿತ್ತು. ಆದರೆ ಕ್ಷಮೆ ಕೇಳಿ ಪತ್ರ ಬರೆಯುವ ಸಂದರ್ಭ ಒದಗಿ ಬಂದಿರುವುದು ನೋವುಂಟು ಮಾಡಿದೆ. ಕೊರೊನಾ ಲಾಕ್‍ಡೌನ್‍ನಿಂದ ತಮ್ಮ ಊರಿಗೂ ಸೇರಲಾಗದೇ ಇದ್ದಲ್ಲೂ ಇರಲಾಗದೇ ತುತ್ತು ಅನ್ನಕ್ಕಾಗಿ ಒದ್ದಾಡುತ್ತಿದ್ದ ವಲಸೆ ಕಾರ್ಮಿಕರಿಗೆ ಅನ್ನ ನೀಡುತ್ತಿದ್ದ ನಿಮ್ಮಗಳ ಮೇಲೆ ದಾಳಿ ನಡೆದದ್ದು ಕೇಳಿ ನಿನ್ನೆಯಿಂದ ಇದ್ದಲ್ಲಿ ಇರಲಾಗುತ್ತಿಲ್ಲ. ಮೊನ್ನೆ ಸಂಜೆ 6.30ಕ್ಕೆ ಅಮೃತಹಳ್ಳಿ ಬಳಿ ನಿಮಗೆ ಬೆದರಿಕೆ ಒಡ್ಡಿ, ನಿಮ್ಮ ಮನೆ ಮಕ್ಕಳ ಮೇಲೆ ದಾಳಿ ನಡೆದದ್ದು ನನ್ನ ಗಮನಕ್ಕೆ ಬಂದಿತು. ನಿಜಕ್ಕೂ ಅದು ನಿದ್ದೆಗೆಡಿಸಿತು.


ಇದನ್ನೂ ಓದಿ: ಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ – ಆರೋಪ


ಎಲ್ಲಾ ಮನುಷ್ಯರಲ್ಲೂ ಭೀತಿ ಹುಟ್ಟಿಸಿರುವ ಕೊರೊನಾ ಸೋಂಕು ಹರಡದಂತೆ ದಿಢೀರ್ ಲಾಕ್‍ಡೌನ್ ಘೋಷಿಸಿದಾಗ ಅಸಹಾಯಕರು ಎಲ್ಲೆಲ್ಲಿ ಹೇಗ್ಹೇಗೆ ಸಿಕ್ಕಿಕೊಂಡರೋ ಗೊತ್ತಿಲ್ಲ. ಅಂತಹವರಿಗೆ ಆತುಕೊಳ್ಳುವುದೇ ಮನುಷ್ಯತ್ವ. ಆದರೆ ಈ ಮನುಷ್ಯತ್ವದ ಮೇಲೆಯೇ ದಾಳಿ ನಡೆದಾಗ ಮಾನವೀಯತೆಯೇ ಸೋತು ಹೋಯಿತೇನೋ ಎಂದು ದಿಗಿಲಾಯಿತು. ಆದರೆ ಜರೀನ್, ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ, ಇದರಿಂದ ನಿಮ್ಮ ಮನಸ್ಸಿನಲ್ಲಿ ಮೂಡಿರಬಹುದಾದ ಕಹಿಯನ್ನು ತೆಗೆದುಹಾಕಿ. ನಿಮ್ಮ ಮಾನವೀಯ ಸ್ಪಂದನೆಗಳಿಗೆ ಉದಾರ ಭಾರತದ ನಾಗರಿಕ ಸಮಾಜ ಕೈ ಜೋಡಿಸುತ್ತದೆಂಬ ನಂಬಿಕೆ ನನಗಿದೆ. ಕೊರೊನಾ ಇಲ್ಲದಿದ್ದರೆ ನೇರವಾಗಿಯೇ ಬಂದು ಭೇಟಿ ಮಾಡಿ ಈ ಮಾತುಗಳನ್ನು ಹೇಳುತ್ತಿದ್ದೆ.

ಕ್ಷಮೆಯಿರಲಿ.

(ದೇವನೂರ ಮಹಾದೇವ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...