Homeಮುಖಪುಟಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

- Advertisement -
- Advertisement -

ಬೆಂಗಳೂರಿನ ಸ್ವರಾಜ್‌ ಅಭಿಯಾನ್‌ ಸಂಘಟನೆಯ ಕಾರ್ಯಕರ್ತೆಯಾದ ಜರೀನ್‌ ತಾಜ್‌ರವರು ಲಾಕ್‌ಡೌನ್‌ ಘೋಷಿಸಿದಾಗಿನಿಂದಲೂ ವಲಸೆ ಕಾರ್ಮಿಕರಿಗೆ, ಬಡಜನರಿಗೆ, ಸ್ಲಂ ನಿವಾಸಿಗಳಿಗೆ ತಮ್ಮಿಂದಾದಷ್ಟು ಸಹಾಯ ಮಾಡುತ್ತಾ ಬಂದಿದ್ದಾರೆ. ಆದರೆ ಏಪ್ರಿಲ್‌ 4 ಮತ್ತು 6 ರಂದು ಬಡಜನರಿಗೆ ಆಹಾರ ಧಾನ್ಯಗಳನ್ನು ವಿತರಿಸುತ್ತಿದ್ದಾಗ ಅವರು ಮುಸ್ಲಿಂ ಎಂಬ ಕಾರಣಕ್ಕೆ ಹಲವು RSS ಬೆಂಬಲಿಗರು ಅವರ ಮೆಲೆ ಎರಡು ಬಾರಿ ಹಲ್ಲೆ ನಡೆಸಿದ್ದಾರೆ. ಈಗ ಸದ್ಯಕ್ಕೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರಿಂದ ನೊಂದುಕೊಂಡು ಹಿರಿಯ ಸಾಹಿತಿ ಮತ್ತು ಸ್ವರಾಜ್‌ ಇಂಡಿಯಾದ ಮುಖಂಡರಾದ ದೇವನೂರು ಮಹಾದೇವರವರು ಭಾವಪೂರ್ಣ ಪತ್ರ ಬರೆದಿದ್ದಾರೆ.

ಪ್ರೀತಿಯ ಜರೀನ್ ತಾಜ್,

ಬಹಳ ದುಃಖದಿಂದ ನಿಮಗೀ ಪತ್ರವನ್ನು ಬರೆಯುತ್ತಿದ್ದೇನೆ. ವಾಸ್ತವದಲ್ಲಿ ನಿಮಗೆ ಕೃತಜ್ಞತೆಗಳನ್ನು ಸಲ್ಲಿಸಿ, ಅಭಿನಂದಿಸುವ ಸಲುವಾಗಿ ನಾನು ನಿಮ್ಮನ್ನು ಭೇಟಿ ಮಾಡಬೇಕಿತ್ತು. ಆದರೆ ಕ್ಷಮೆ ಕೇಳಿ ಪತ್ರ ಬರೆಯುವ ಸಂದರ್ಭ ಒದಗಿ ಬಂದಿರುವುದು ನೋವುಂಟು ಮಾಡಿದೆ. ಕೊರೊನಾ ಲಾಕ್‍ಡೌನ್‍ನಿಂದ ತಮ್ಮ ಊರಿಗೂ ಸೇರಲಾಗದೇ ಇದ್ದಲ್ಲೂ ಇರಲಾಗದೇ ತುತ್ತು ಅನ್ನಕ್ಕಾಗಿ ಒದ್ದಾಡುತ್ತಿದ್ದ ವಲಸೆ ಕಾರ್ಮಿಕರಿಗೆ ಅನ್ನ ನೀಡುತ್ತಿದ್ದ ನಿಮ್ಮಗಳ ಮೇಲೆ ದಾಳಿ ನಡೆದದ್ದು ಕೇಳಿ ನಿನ್ನೆಯಿಂದ ಇದ್ದಲ್ಲಿ ಇರಲಾಗುತ್ತಿಲ್ಲ. ಮೊನ್ನೆ ಸಂಜೆ 6.30ಕ್ಕೆ ಅಮೃತಹಳ್ಳಿ ಬಳಿ ನಿಮಗೆ ಬೆದರಿಕೆ ಒಡ್ಡಿ, ನಿಮ್ಮ ಮನೆ ಮಕ್ಕಳ ಮೇಲೆ ದಾಳಿ ನಡೆದದ್ದು ನನ್ನ ಗಮನಕ್ಕೆ ಬಂದಿತು. ನಿಜಕ್ಕೂ ಅದು ನಿದ್ದೆಗೆಡಿಸಿತು.


ಇದನ್ನೂ ಓದಿ: ಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ – ಆರೋಪ


ಎಲ್ಲಾ ಮನುಷ್ಯರಲ್ಲೂ ಭೀತಿ ಹುಟ್ಟಿಸಿರುವ ಕೊರೊನಾ ಸೋಂಕು ಹರಡದಂತೆ ದಿಢೀರ್ ಲಾಕ್‍ಡೌನ್ ಘೋಷಿಸಿದಾಗ ಅಸಹಾಯಕರು ಎಲ್ಲೆಲ್ಲಿ ಹೇಗ್ಹೇಗೆ ಸಿಕ್ಕಿಕೊಂಡರೋ ಗೊತ್ತಿಲ್ಲ. ಅಂತಹವರಿಗೆ ಆತುಕೊಳ್ಳುವುದೇ ಮನುಷ್ಯತ್ವ. ಆದರೆ ಈ ಮನುಷ್ಯತ್ವದ ಮೇಲೆಯೇ ದಾಳಿ ನಡೆದಾಗ ಮಾನವೀಯತೆಯೇ ಸೋತು ಹೋಯಿತೇನೋ ಎಂದು ದಿಗಿಲಾಯಿತು. ಆದರೆ ಜರೀನ್, ಎಲ್ಲಾ ಜಾತಿ, ಧರ್ಮಗಳಲ್ಲಿ ಇಂತಹ ಅನಾಗರಿಕತೆ ಇದ್ದೇ ಇದೆ. ಅಂತಹವರು ಇಂತಹ ಅಮಾನವೀಯವಾದ ಕೃತ್ಯಗಳಿಗೆ ಇಳಿಯುತ್ತಾರೆ. ಇಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ನೀವು ಕಹಿ ಅನುಭವಿಸಬಾರದು ಎಂದು ಪ್ರಾರ್ಥಿಸುತ್ತೇನೆ.

ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ, ಇದರಿಂದ ನಿಮ್ಮ ಮನಸ್ಸಿನಲ್ಲಿ ಮೂಡಿರಬಹುದಾದ ಕಹಿಯನ್ನು ತೆಗೆದುಹಾಕಿ. ನಿಮ್ಮ ಮಾನವೀಯ ಸ್ಪಂದನೆಗಳಿಗೆ ಉದಾರ ಭಾರತದ ನಾಗರಿಕ ಸಮಾಜ ಕೈ ಜೋಡಿಸುತ್ತದೆಂಬ ನಂಬಿಕೆ ನನಗಿದೆ. ಕೊರೊನಾ ಇಲ್ಲದಿದ್ದರೆ ನೇರವಾಗಿಯೇ ಬಂದು ಭೇಟಿ ಮಾಡಿ ಈ ಮಾತುಗಳನ್ನು ಹೇಳುತ್ತಿದ್ದೆ.

ಕ್ಷಮೆಯಿರಲಿ.

(ದೇವನೂರ ಮಹಾದೇವ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...