Homeಮುಖಪುಟಸುದ್ದಿಮನೆಯ ಗೆದ್ದಲುಗಳೇ #ಡಿಯರ್_ಮೀಡಿಯಾ

ಸುದ್ದಿಮನೆಯ ಗೆದ್ದಲುಗಳೇ #ಡಿಯರ್_ಮೀಡಿಯಾ

ಅವರ ಜನದ್ರೋಹಗಳನ್ನು ಎತ್ತಿ ತೋರಿಸಹೊರಟರೆ ನೀವೇ ಇನ್ನೊಂದು ಯಾವುದೋ ರಾಜಕೀಯ ಪಕ್ಷದ ಕಾರ್ಯಕರ್ತರೇನೋ ಎಂದು ಸಂಶಯ ಬರುವ ಸ್ಥಿತಿ ಇದೆ! ಆ ಪ್ರಮಾಣದಲ್ಲಿ ರಾಜಕೀಯ ಪ್ರೇರಿತ ಸುದ್ದಿಗಾರಿಕೆ ಇಂದು ಓದುಗರಿಗೆ ದ್ರೋಹ ಮಾಡುತ್ತಿದೆ.

- Advertisement -
- Advertisement -

ಅಕ್ಷರದಲ್ಲಿ ಮುದ್ರಿತವಾದದ್ದು “ಅಂತಿಮ ಸತ್ಯ” ಎಂಬುದನ್ನೇ ಹಾಸಿ, ಹೊದ್ದು ನಂಬಿದ್ದವರಿದ್ದರು. ನಿರ್ಣಾಯಕ ಸಂದರ್ಭ ಎದುರಾದಾಗ “ನೋಡಿ ಬೇಕಿದ್ರೆ… ಹಾಗಂತ ನಾನು ಬರೆದು ಕೊಡ್ತೇನೆ!” ಎಂದು ಹೇಳುವುದು ಸುಮ್ಮನೇ ಅಲ್ಲ. “ಬರೆದು ಕೊಡುವುದು ಅಂತಿಮ ಸತ್ಯ” ಎಂಬ ನಂಬಿಕೆಯ ಫಲ ಅದು.

ಯಾವುದೇ ಸುದ್ದಿ ಖಚಿತವಾಗಬೇಕಿದ್ದರೆ ಪೇಪರಲ್ಲಿ ಬಂದಿದೆಯಾ? ಎಂದು ನೋಡುವ ಕಾಲ ಇತ್ತು. ಏನೇ ಸಮಾಜವಿರೋಧಿ ಕೆಲಸ ಮಾಡಿದರೂ ಪೇಪರಲ್ಲಿ ಬರ್ತದೆ ಎಂಬ ಅಂಜಿಕೆ ಇತ್ತು. ಅದು ಕ್ರಮೇಣ ಮಸುಕಾಗುತ್ತಾ ಬಂದಿದೆ. ಮಾಧ್ಯಮಗಳಿಗೊಂದು ಸಾಮಾಜಿಕ ಗೌರವ ತಕ್ಕಮಟ್ಟಿಗೆ ಇತ್ತು. ಹಾಗೆಂದಾಕ್ಷಣ ಎಲ್ಲವೂ ಸುಸೂತ್ರವಾಗಿತ್ತೆಂದಲ್ಲ. ಬರಹಗಳ ಮೇಲಿನ ಓದುಗರ ನಂಬಿಕೆಗೆ ದ್ರೋಹ ಬಗೆಯುವ ಕೆಲಸ ಎಲ್ಲೋ ಅಲ್ಲೊಂದು-ಇಲ್ಲೊಂದು ಅಪರೂಪಕ್ಕೆ ನಡೆಯುತ್ತಿತ್ತು. ಅದನ್ನು “ಹಳದಿ ಪತ್ರಿಕೋದ್ಯಮ” ಎಂದು ಗುರುತಿಸಲಾಗುತ್ತಿತ್ತು.

ಆದರೆ ಬರಬರುತ್ತಾ ಇಡಿಯ ಪತ್ರಿಕೋದ್ಯಮವೇ ಮಲ್ಟಿಕಲರ್ ಆಗತೊಡಗಿತು. ಅಕ್ಷರಗಳಿಂದಲೇ ದುಡಿದು ತಿನ್ನುವ ಸುದ್ದಿಮನೆಗಳಲ್ಲಿ ತಮ್ಮ ಅನ್ನದಾತರಾದ ಓದುಗರು ತಮ್ಮ ಮೇಲಿರಿಸಿರುವ ನಂಬಿಕೆಗೇ ದ್ರೋಹ ಮಾಡುವ ಕೆಲಸ ಸಾತತ್ಯದೊಂದಿಗೆ ಆರಂಭ ಆದದ್ದು 2010ರ ಸುಮಾರಿಗೆ. ಇದನ್ನು ಓದುಗರು “ಪತ್ರಿಕೆಗಳ ಬೆಲೆ ಸಮರ” ಎಂದೇ ಗುರುತಿಸಿದರೇ ಹೊರತು ಅಲ್ಲಿಂದ ಆಳಕ್ಕೆ ಇಳಿದು ನೋಡಲಿಲ್ಲ. ಸುದ್ದಿ ಚೀಪ್ ಆಯಿತು!

ದೇಶದಾದ್ಯಂತ ಸುದ್ದಿಮನೆಗಳಿಗೆ ಹೀಗೆ ಗೆದ್ದಲು ಹತ್ತಿದ್ದನ್ನು ನಾವು “ಇದು ಮಾಧ್ಯಮವು ಉದ್ಯಮ ಆದದ್ದರ ಫಲ” ಎಂದೇ ವಿಶ್ಲೇಷಿಸುತ್ತಾ ಬಂದೆವು. ಆದರೆ ಗೆದ್ದಲನ್ನು ಗುರುತಿಸಲಿಲ್ಲ. ಅದು ಇಂಚಿಂಚಾಗಿ ಇಡಿಯ ಮಾಧ್ಯಮ ವ್ಯವಸ್ಥೆಯನ್ನು ತಿನ್ನುತ್ತಾ ಬಂದು, 2014 ರ ಲೋಕಸಭಾ ಚುನಾವಣೆಗಳ ರನಪ್ ಹೊತ್ತಿಗೆ ತನ್ನ ಇರುವಿಕೆಯನ್ನು ಪೂರ್ಣಪ್ರಮಾಣದಲ್ಲಿ ತೋರಿಸಿಕೊಂಡಿತು. ಸರಿಯಾಗಿ ಗಮನಿಸಿದರೆ, ಸುದ್ದಿಮನೆಯಲ್ಲಿ ಆಗಿರುವ ಬದಲಾವಣೆಗಳಿಗೆ ಮಾಲಕತ್ವ ಮಾತ್ರ ಕಾರಣ ಅಲ್ಲ; ಬದಲಾಗಿ ಅಲ್ಲಿ ಜಾತಿ, ಗುಂಪು, ಸಿದ್ಧಾಂತ ಮತ್ತಿತರ ಆಯಕಟ್ಟಿನ ಜಾರೆಣ್ಣೆ ಬಳಸಿಕೊಂಡು ನುಸುಳಿ ಕುಳಿತಿರುವ ರಾಜಕೀಯ ದಲ್ಲಾಳಿಗಳು ಕಾರಣ ಎಂಬುದು ಈಗ ಬಯಲಾಗತೊಡಗಿದೆ.

ಸುದ್ದಿಗಳನ್ನು ತಮ್ಮ ಮೂಗಿನ ನೇರಕ್ಕೆ ಬಗ್ಗಿಸಿ ಪ್ರೆಸೆಂಟ್ ಮಾಡುವ ಚಾಳಿ ಸ್ವಲ್ಪ ಕದ್ದುಮುಚ್ಚಿ, ಮುಜುಗರದೊಂದಿಗೆ ಆರಂಭಗೊಂಡದ್ದು, ಈಗ ಪೂರ್ಣಪ್ರಮಾಣದಲ್ಲಿ ವ್ಯವಸ್ಥೆಯ ಭಾಗವಾಗಿಯೇ ನಡೆಯುತ್ತಿದೆ. ಅದು ಬಲುದೊಡ್ಡ ಕಥೆ. ಇಂತಹ ಸನ್ನಿವೇಶದಲ್ಲಿ, ಪ್ರತಿನಿತ್ಯ ಬಹುತೇಕ ಸುದ್ದಿಪುಟಗಳನ್ನು ಕಳ್ಳಸುದ್ದಿ, ಸುಳ್ಳುಸುದ್ದಿ, ನೆಟ್ಟಸುದ್ದಿ, ಕೆಟ್ಟಸುದ್ದಿಗಳು ಆವರಿಸತೊಡಗಿದಾಗ, ಓದುಗರಲ್ಲಿ ಪತ್ರಿಕೆಗಳ ಬಗ್ಗೆ ಅಸಹನೆ ಸ್ಪಷ್ಟವಾಗಿ ತೋರುವಷ್ಟಿತ್ತು. ಆದರೆ, ನಂಬಿಕೆ – ವಾಸ್ತವಗಳ ತೊಳಲಾಟದ ರಭಸದಲ್ಲಿ ಓದುಗ ಕೊಚ್ಚಿಹೋದದ್ದೇ ಜಾಸ್ತಿ. ಅದರ ಫಲವಾಗಿ ಇಂದು ಮಾಧ್ಯಮ ಎಂದರೆ ಛೀ.. ಥೂ.. ಎನ್ನುವುದು ಢಾಳಾಗಿ ಕಾಣಿಸತೊಡಗಿದೆ. ಹಳೆಯ ನಂಬಿಕೆ ಕಳೆದುಹೋಗಿದೆ.

ಒಬ್ಬ ಓದುಗನಾಗಿ ಮತ್ತು ಒಂದೆರಡು ದಶಕ ಸುದ್ದಿಮನೆಗೆ ಮಣ್ಣುಹೊತ್ತವನಾಗಿ, ಕನಿಷ್ಠ ನನ್ನ ಸಂಪರ್ಕದಲ್ಲಿರುವ ಒಂದಿಷ್ಟು ಜನರಿಗಾದರೂ “ಸುದ್ದಿ ಏಕೆ ಹೀಗೆ?” ಎಂಬುದನ್ನು ತಲುಪಿಸಲು ಸೋಷಿಯಲ್ ಮೀಡಿಯಾವನ್ನು ಬಳಸಬಹುದು ಅನ್ನಿಸಿತು. ಅದರ ಫಲವೇ ನನ್ನ ಮಾಧ್ಯಮ ವಿಶ್ಲೇಷಣೆಯ ಮೈಕ್ರೊಬ್ಲಾಗಿಂಗ್ ಪ್ರಯತ್ನ. ಈ ರೀತಿಯ ಮೈಕ್ರೊ ಬ್ಲಾಗಿಂಗ್ ಗೆ ಮೂಲ ಪ್ರೇರಣೆ ನಾನು ಈ ಹಿಂದೆ ಒಂದು ದಿನಪತ್ರಿಕೆಗೆ ಸಣ್ಣ ಅವಧಿಗೆ “ಆಂಬುಡ್ಸ್ ಮನ್” ಆಗಿ ಕೆಲಸ ಮಾಡಿದ್ದು.

2019 ಚುನಾವಣೆಗೆ ರನಪ್ ಆರಂಭಗೊಳ್ಳುವ ಹೊತ್ತಿಗೆ, ಮಾಧ್ಯಮಗಳಿಗೆ ಅಡರಿದ ಈ ರೋಗ ಪೂರ್ಣಪ್ರಮಾಣದ, ವಾಸಿಯಾಗದ ಮಹಾವ್ಯಾಧಿ ಎಂಬುದು ಖಚಿತವಾಗತೊಡಗಿತ್ತು. ಹಾಗಾಗಿ ನನ್ನ ಸುದ್ದಿ ವಿಶ್ಲೇಷಣೆಯ ಕೆಲಸಕ್ಕೆ ಒಂದು ಟ್ರ್ಯಾಕಿಂಗ್ ವ್ಯವಸ್ಥೆ ಮಾಡಿಕೊಳ್ಳುವ ನಿಟ್ಟಿನಲ್ಲಿ #ಡಿಯರ್_ಮೀಡಿಯಾ ಹ್ಯಾಷ್ ಟ್ಯಾಗ್ ನ್ನು ಬಳಸತೊಡಗಿದೆ. ಇದು ಮೊದಲು ಬಳಕೆ ಆದದ್ದು 2018 ಅಕ್ಟೋಬರ್ ತಿಂಗಳಿನಲ್ಲಿ. ಈ ಹ್ಯಾಷ್ ಟ್ಯಾಗ್ ನನ್ನ ಟ್ರ್ಯಾಕಿಂಗ್ ದಾಖಲೆ ಆಗಿ ಬಳಕೆ ಆಗುತ್ತಿದ್ದದ್ದು, ಕ್ರಮೇಣ ಒಂದು ಬ್ರ್ಯಾಂಡ್ ಆಗಿ ಕೂಡ ಕಾಣಿಸತೊಡಗಿದ್ದರ ಸಂಪೂರ್ಣ ಶ್ರೇಯಸ್ಸು, ಮಾಧ್ಯಮಗಳಿಗೆ ಮತ್ತು ಅವು ಮಾಡತೊಡಗಿದ ಎದ್ದುಕಾಣುವ “ಹಲ್ಕಾ” ಕೆಲಸಗಳಿಗೆ ಸೇರಬೇಕು!

ಈ ಮಹಾವ್ಯಾಧಿ ಇಂದು ಎಷ್ಟು ತೀವ್ರವಾಗಿದೆ ಎಂದರೆ, ನೀವು ದಿನನಿತ್ಯ ಅವರ ಜನದ್ರೋಹಗಳನ್ನು ಎತ್ತಿ ತೋರಿಸಹೊರಟರೆ ನೀವೇ ಇನ್ನೊಂದು ಯಾವುದೋ ರಾಜಕೀಯ ಪಕ್ಷದ ಕಾರ್ಯಕರ್ತರೇನೋ ಎಂದು ಸಂಶಯ ಬರುವ ಸ್ಥಿತಿ ಇದೆ! ಆ ಪ್ರಮಾಣದಲ್ಲಿ ರಾಜಕೀಯ ಪ್ರೇರಿತ ಸುದ್ದಿಗಾರಿಕೆ ಇಂದು ಓದುಗರಿಗೆ ದ್ರೋಹ ಮಾಡುತ್ತಿದೆ.

ಇಂಗ್ಲೀಷಿನ ಲ್ಯಾಪ್ ಡಾಗ್ ಮೀಡಿಯಾ, ಹಿಂದಿಯ ಗೋದಿ ಮೀಡಿಯಾ ಕನ್ನಡದಲ್ಲಿ #ಡಿಯರ್_ಮೀಡಿಯಾ ಆಗತೊಡಗಿದೆ. ಮುಂದೊಂದು ದಿನ ಈ ಕ್ರಾನಿಕಲ್ ಕನ್ನಡದ ಮಾಧ್ಯಮಗಳ ಸ್ಥಿತಿಗೆ ಹಿಡಿದ ಕನ್ನಡಿ ಆದರೂ ಆಗಬಹುದೆಂದು ಈಗೀಗ ಅನ್ನಿಸತೊಡಗಿದೆ…!!


ಓದಿ: ’ಮೈ ಡಿಯರ್ ಮೀಡಿಯಾ’: ಸುದ್ದಿಮನೆಗಳು ಸ್ಥಿತ್ಯಂತರಗೊಂಡ ಬಗ್ಗೆ ರಾಜಾರಾಂ ತಲ್ಲೂರು ಅವರ ಬರಹ


ವೀಡಿಯೋ ನೋಡಿ: ಪರಮಾತ್ಮ ಪೊಲಿಟಿಕಲ್ ಮ್ಯಾಜಿಕ್ ಶೋ; ಚಿಲ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...