Homeಮುಖಪುಟಸುದ್ದಿಮನೆಯ ಗೆದ್ದಲುಗಳೇ #ಡಿಯರ್_ಮೀಡಿಯಾ

ಸುದ್ದಿಮನೆಯ ಗೆದ್ದಲುಗಳೇ #ಡಿಯರ್_ಮೀಡಿಯಾ

ಅವರ ಜನದ್ರೋಹಗಳನ್ನು ಎತ್ತಿ ತೋರಿಸಹೊರಟರೆ ನೀವೇ ಇನ್ನೊಂದು ಯಾವುದೋ ರಾಜಕೀಯ ಪಕ್ಷದ ಕಾರ್ಯಕರ್ತರೇನೋ ಎಂದು ಸಂಶಯ ಬರುವ ಸ್ಥಿತಿ ಇದೆ! ಆ ಪ್ರಮಾಣದಲ್ಲಿ ರಾಜಕೀಯ ಪ್ರೇರಿತ ಸುದ್ದಿಗಾರಿಕೆ ಇಂದು ಓದುಗರಿಗೆ ದ್ರೋಹ ಮಾಡುತ್ತಿದೆ.

- Advertisement -
- Advertisement -

ಅಕ್ಷರದಲ್ಲಿ ಮುದ್ರಿತವಾದದ್ದು “ಅಂತಿಮ ಸತ್ಯ” ಎಂಬುದನ್ನೇ ಹಾಸಿ, ಹೊದ್ದು ನಂಬಿದ್ದವರಿದ್ದರು. ನಿರ್ಣಾಯಕ ಸಂದರ್ಭ ಎದುರಾದಾಗ “ನೋಡಿ ಬೇಕಿದ್ರೆ… ಹಾಗಂತ ನಾನು ಬರೆದು ಕೊಡ್ತೇನೆ!” ಎಂದು ಹೇಳುವುದು ಸುಮ್ಮನೇ ಅಲ್ಲ. “ಬರೆದು ಕೊಡುವುದು ಅಂತಿಮ ಸತ್ಯ” ಎಂಬ ನಂಬಿಕೆಯ ಫಲ ಅದು.

ಯಾವುದೇ ಸುದ್ದಿ ಖಚಿತವಾಗಬೇಕಿದ್ದರೆ ಪೇಪರಲ್ಲಿ ಬಂದಿದೆಯಾ? ಎಂದು ನೋಡುವ ಕಾಲ ಇತ್ತು. ಏನೇ ಸಮಾಜವಿರೋಧಿ ಕೆಲಸ ಮಾಡಿದರೂ ಪೇಪರಲ್ಲಿ ಬರ್ತದೆ ಎಂಬ ಅಂಜಿಕೆ ಇತ್ತು. ಅದು ಕ್ರಮೇಣ ಮಸುಕಾಗುತ್ತಾ ಬಂದಿದೆ. ಮಾಧ್ಯಮಗಳಿಗೊಂದು ಸಾಮಾಜಿಕ ಗೌರವ ತಕ್ಕಮಟ್ಟಿಗೆ ಇತ್ತು. ಹಾಗೆಂದಾಕ್ಷಣ ಎಲ್ಲವೂ ಸುಸೂತ್ರವಾಗಿತ್ತೆಂದಲ್ಲ. ಬರಹಗಳ ಮೇಲಿನ ಓದುಗರ ನಂಬಿಕೆಗೆ ದ್ರೋಹ ಬಗೆಯುವ ಕೆಲಸ ಎಲ್ಲೋ ಅಲ್ಲೊಂದು-ಇಲ್ಲೊಂದು ಅಪರೂಪಕ್ಕೆ ನಡೆಯುತ್ತಿತ್ತು. ಅದನ್ನು “ಹಳದಿ ಪತ್ರಿಕೋದ್ಯಮ” ಎಂದು ಗುರುತಿಸಲಾಗುತ್ತಿತ್ತು.

ಆದರೆ ಬರಬರುತ್ತಾ ಇಡಿಯ ಪತ್ರಿಕೋದ್ಯಮವೇ ಮಲ್ಟಿಕಲರ್ ಆಗತೊಡಗಿತು. ಅಕ್ಷರಗಳಿಂದಲೇ ದುಡಿದು ತಿನ್ನುವ ಸುದ್ದಿಮನೆಗಳಲ್ಲಿ ತಮ್ಮ ಅನ್ನದಾತರಾದ ಓದುಗರು ತಮ್ಮ ಮೇಲಿರಿಸಿರುವ ನಂಬಿಕೆಗೇ ದ್ರೋಹ ಮಾಡುವ ಕೆಲಸ ಸಾತತ್ಯದೊಂದಿಗೆ ಆರಂಭ ಆದದ್ದು 2010ರ ಸುಮಾರಿಗೆ. ಇದನ್ನು ಓದುಗರು “ಪತ್ರಿಕೆಗಳ ಬೆಲೆ ಸಮರ” ಎಂದೇ ಗುರುತಿಸಿದರೇ ಹೊರತು ಅಲ್ಲಿಂದ ಆಳಕ್ಕೆ ಇಳಿದು ನೋಡಲಿಲ್ಲ. ಸುದ್ದಿ ಚೀಪ್ ಆಯಿತು!

ದೇಶದಾದ್ಯಂತ ಸುದ್ದಿಮನೆಗಳಿಗೆ ಹೀಗೆ ಗೆದ್ದಲು ಹತ್ತಿದ್ದನ್ನು ನಾವು “ಇದು ಮಾಧ್ಯಮವು ಉದ್ಯಮ ಆದದ್ದರ ಫಲ” ಎಂದೇ ವಿಶ್ಲೇಷಿಸುತ್ತಾ ಬಂದೆವು. ಆದರೆ ಗೆದ್ದಲನ್ನು ಗುರುತಿಸಲಿಲ್ಲ. ಅದು ಇಂಚಿಂಚಾಗಿ ಇಡಿಯ ಮಾಧ್ಯಮ ವ್ಯವಸ್ಥೆಯನ್ನು ತಿನ್ನುತ್ತಾ ಬಂದು, 2014 ರ ಲೋಕಸಭಾ ಚುನಾವಣೆಗಳ ರನಪ್ ಹೊತ್ತಿಗೆ ತನ್ನ ಇರುವಿಕೆಯನ್ನು ಪೂರ್ಣಪ್ರಮಾಣದಲ್ಲಿ ತೋರಿಸಿಕೊಂಡಿತು. ಸರಿಯಾಗಿ ಗಮನಿಸಿದರೆ, ಸುದ್ದಿಮನೆಯಲ್ಲಿ ಆಗಿರುವ ಬದಲಾವಣೆಗಳಿಗೆ ಮಾಲಕತ್ವ ಮಾತ್ರ ಕಾರಣ ಅಲ್ಲ; ಬದಲಾಗಿ ಅಲ್ಲಿ ಜಾತಿ, ಗುಂಪು, ಸಿದ್ಧಾಂತ ಮತ್ತಿತರ ಆಯಕಟ್ಟಿನ ಜಾರೆಣ್ಣೆ ಬಳಸಿಕೊಂಡು ನುಸುಳಿ ಕುಳಿತಿರುವ ರಾಜಕೀಯ ದಲ್ಲಾಳಿಗಳು ಕಾರಣ ಎಂಬುದು ಈಗ ಬಯಲಾಗತೊಡಗಿದೆ.

ಸುದ್ದಿಗಳನ್ನು ತಮ್ಮ ಮೂಗಿನ ನೇರಕ್ಕೆ ಬಗ್ಗಿಸಿ ಪ್ರೆಸೆಂಟ್ ಮಾಡುವ ಚಾಳಿ ಸ್ವಲ್ಪ ಕದ್ದುಮುಚ್ಚಿ, ಮುಜುಗರದೊಂದಿಗೆ ಆರಂಭಗೊಂಡದ್ದು, ಈಗ ಪೂರ್ಣಪ್ರಮಾಣದಲ್ಲಿ ವ್ಯವಸ್ಥೆಯ ಭಾಗವಾಗಿಯೇ ನಡೆಯುತ್ತಿದೆ. ಅದು ಬಲುದೊಡ್ಡ ಕಥೆ. ಇಂತಹ ಸನ್ನಿವೇಶದಲ್ಲಿ, ಪ್ರತಿನಿತ್ಯ ಬಹುತೇಕ ಸುದ್ದಿಪುಟಗಳನ್ನು ಕಳ್ಳಸುದ್ದಿ, ಸುಳ್ಳುಸುದ್ದಿ, ನೆಟ್ಟಸುದ್ದಿ, ಕೆಟ್ಟಸುದ್ದಿಗಳು ಆವರಿಸತೊಡಗಿದಾಗ, ಓದುಗರಲ್ಲಿ ಪತ್ರಿಕೆಗಳ ಬಗ್ಗೆ ಅಸಹನೆ ಸ್ಪಷ್ಟವಾಗಿ ತೋರುವಷ್ಟಿತ್ತು. ಆದರೆ, ನಂಬಿಕೆ – ವಾಸ್ತವಗಳ ತೊಳಲಾಟದ ರಭಸದಲ್ಲಿ ಓದುಗ ಕೊಚ್ಚಿಹೋದದ್ದೇ ಜಾಸ್ತಿ. ಅದರ ಫಲವಾಗಿ ಇಂದು ಮಾಧ್ಯಮ ಎಂದರೆ ಛೀ.. ಥೂ.. ಎನ್ನುವುದು ಢಾಳಾಗಿ ಕಾಣಿಸತೊಡಗಿದೆ. ಹಳೆಯ ನಂಬಿಕೆ ಕಳೆದುಹೋಗಿದೆ.

ಒಬ್ಬ ಓದುಗನಾಗಿ ಮತ್ತು ಒಂದೆರಡು ದಶಕ ಸುದ್ದಿಮನೆಗೆ ಮಣ್ಣುಹೊತ್ತವನಾಗಿ, ಕನಿಷ್ಠ ನನ್ನ ಸಂಪರ್ಕದಲ್ಲಿರುವ ಒಂದಿಷ್ಟು ಜನರಿಗಾದರೂ “ಸುದ್ದಿ ಏಕೆ ಹೀಗೆ?” ಎಂಬುದನ್ನು ತಲುಪಿಸಲು ಸೋಷಿಯಲ್ ಮೀಡಿಯಾವನ್ನು ಬಳಸಬಹುದು ಅನ್ನಿಸಿತು. ಅದರ ಫಲವೇ ನನ್ನ ಮಾಧ್ಯಮ ವಿಶ್ಲೇಷಣೆಯ ಮೈಕ್ರೊಬ್ಲಾಗಿಂಗ್ ಪ್ರಯತ್ನ. ಈ ರೀತಿಯ ಮೈಕ್ರೊ ಬ್ಲಾಗಿಂಗ್ ಗೆ ಮೂಲ ಪ್ರೇರಣೆ ನಾನು ಈ ಹಿಂದೆ ಒಂದು ದಿನಪತ್ರಿಕೆಗೆ ಸಣ್ಣ ಅವಧಿಗೆ “ಆಂಬುಡ್ಸ್ ಮನ್” ಆಗಿ ಕೆಲಸ ಮಾಡಿದ್ದು.

2019 ಚುನಾವಣೆಗೆ ರನಪ್ ಆರಂಭಗೊಳ್ಳುವ ಹೊತ್ತಿಗೆ, ಮಾಧ್ಯಮಗಳಿಗೆ ಅಡರಿದ ಈ ರೋಗ ಪೂರ್ಣಪ್ರಮಾಣದ, ವಾಸಿಯಾಗದ ಮಹಾವ್ಯಾಧಿ ಎಂಬುದು ಖಚಿತವಾಗತೊಡಗಿತ್ತು. ಹಾಗಾಗಿ ನನ್ನ ಸುದ್ದಿ ವಿಶ್ಲೇಷಣೆಯ ಕೆಲಸಕ್ಕೆ ಒಂದು ಟ್ರ್ಯಾಕಿಂಗ್ ವ್ಯವಸ್ಥೆ ಮಾಡಿಕೊಳ್ಳುವ ನಿಟ್ಟಿನಲ್ಲಿ #ಡಿಯರ್_ಮೀಡಿಯಾ ಹ್ಯಾಷ್ ಟ್ಯಾಗ್ ನ್ನು ಬಳಸತೊಡಗಿದೆ. ಇದು ಮೊದಲು ಬಳಕೆ ಆದದ್ದು 2018 ಅಕ್ಟೋಬರ್ ತಿಂಗಳಿನಲ್ಲಿ. ಈ ಹ್ಯಾಷ್ ಟ್ಯಾಗ್ ನನ್ನ ಟ್ರ್ಯಾಕಿಂಗ್ ದಾಖಲೆ ಆಗಿ ಬಳಕೆ ಆಗುತ್ತಿದ್ದದ್ದು, ಕ್ರಮೇಣ ಒಂದು ಬ್ರ್ಯಾಂಡ್ ಆಗಿ ಕೂಡ ಕಾಣಿಸತೊಡಗಿದ್ದರ ಸಂಪೂರ್ಣ ಶ್ರೇಯಸ್ಸು, ಮಾಧ್ಯಮಗಳಿಗೆ ಮತ್ತು ಅವು ಮಾಡತೊಡಗಿದ ಎದ್ದುಕಾಣುವ “ಹಲ್ಕಾ” ಕೆಲಸಗಳಿಗೆ ಸೇರಬೇಕು!

ಈ ಮಹಾವ್ಯಾಧಿ ಇಂದು ಎಷ್ಟು ತೀವ್ರವಾಗಿದೆ ಎಂದರೆ, ನೀವು ದಿನನಿತ್ಯ ಅವರ ಜನದ್ರೋಹಗಳನ್ನು ಎತ್ತಿ ತೋರಿಸಹೊರಟರೆ ನೀವೇ ಇನ್ನೊಂದು ಯಾವುದೋ ರಾಜಕೀಯ ಪಕ್ಷದ ಕಾರ್ಯಕರ್ತರೇನೋ ಎಂದು ಸಂಶಯ ಬರುವ ಸ್ಥಿತಿ ಇದೆ! ಆ ಪ್ರಮಾಣದಲ್ಲಿ ರಾಜಕೀಯ ಪ್ರೇರಿತ ಸುದ್ದಿಗಾರಿಕೆ ಇಂದು ಓದುಗರಿಗೆ ದ್ರೋಹ ಮಾಡುತ್ತಿದೆ.

ಇಂಗ್ಲೀಷಿನ ಲ್ಯಾಪ್ ಡಾಗ್ ಮೀಡಿಯಾ, ಹಿಂದಿಯ ಗೋದಿ ಮೀಡಿಯಾ ಕನ್ನಡದಲ್ಲಿ #ಡಿಯರ್_ಮೀಡಿಯಾ ಆಗತೊಡಗಿದೆ. ಮುಂದೊಂದು ದಿನ ಈ ಕ್ರಾನಿಕಲ್ ಕನ್ನಡದ ಮಾಧ್ಯಮಗಳ ಸ್ಥಿತಿಗೆ ಹಿಡಿದ ಕನ್ನಡಿ ಆದರೂ ಆಗಬಹುದೆಂದು ಈಗೀಗ ಅನ್ನಿಸತೊಡಗಿದೆ…!!


ಓದಿ: ’ಮೈ ಡಿಯರ್ ಮೀಡಿಯಾ’: ಸುದ್ದಿಮನೆಗಳು ಸ್ಥಿತ್ಯಂತರಗೊಂಡ ಬಗ್ಗೆ ರಾಜಾರಾಂ ತಲ್ಲೂರು ಅವರ ಬರಹ


ವೀಡಿಯೋ ನೋಡಿ: ಪರಮಾತ್ಮ ಪೊಲಿಟಿಕಲ್ ಮ್ಯಾಜಿಕ್ ಶೋ; ಚಿಲ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...