Homeಮುಖಪುಟಸುದ್ದಿಮನೆಯ ಗೆದ್ದಲುಗಳೇ #ಡಿಯರ್_ಮೀಡಿಯಾ

ಸುದ್ದಿಮನೆಯ ಗೆದ್ದಲುಗಳೇ #ಡಿಯರ್_ಮೀಡಿಯಾ

ಅವರ ಜನದ್ರೋಹಗಳನ್ನು ಎತ್ತಿ ತೋರಿಸಹೊರಟರೆ ನೀವೇ ಇನ್ನೊಂದು ಯಾವುದೋ ರಾಜಕೀಯ ಪಕ್ಷದ ಕಾರ್ಯಕರ್ತರೇನೋ ಎಂದು ಸಂಶಯ ಬರುವ ಸ್ಥಿತಿ ಇದೆ! ಆ ಪ್ರಮಾಣದಲ್ಲಿ ರಾಜಕೀಯ ಪ್ರೇರಿತ ಸುದ್ದಿಗಾರಿಕೆ ಇಂದು ಓದುಗರಿಗೆ ದ್ರೋಹ ಮಾಡುತ್ತಿದೆ.

- Advertisement -
- Advertisement -

ಅಕ್ಷರದಲ್ಲಿ ಮುದ್ರಿತವಾದದ್ದು “ಅಂತಿಮ ಸತ್ಯ” ಎಂಬುದನ್ನೇ ಹಾಸಿ, ಹೊದ್ದು ನಂಬಿದ್ದವರಿದ್ದರು. ನಿರ್ಣಾಯಕ ಸಂದರ್ಭ ಎದುರಾದಾಗ “ನೋಡಿ ಬೇಕಿದ್ರೆ… ಹಾಗಂತ ನಾನು ಬರೆದು ಕೊಡ್ತೇನೆ!” ಎಂದು ಹೇಳುವುದು ಸುಮ್ಮನೇ ಅಲ್ಲ. “ಬರೆದು ಕೊಡುವುದು ಅಂತಿಮ ಸತ್ಯ” ಎಂಬ ನಂಬಿಕೆಯ ಫಲ ಅದು.

ಯಾವುದೇ ಸುದ್ದಿ ಖಚಿತವಾಗಬೇಕಿದ್ದರೆ ಪೇಪರಲ್ಲಿ ಬಂದಿದೆಯಾ? ಎಂದು ನೋಡುವ ಕಾಲ ಇತ್ತು. ಏನೇ ಸಮಾಜವಿರೋಧಿ ಕೆಲಸ ಮಾಡಿದರೂ ಪೇಪರಲ್ಲಿ ಬರ್ತದೆ ಎಂಬ ಅಂಜಿಕೆ ಇತ್ತು. ಅದು ಕ್ರಮೇಣ ಮಸುಕಾಗುತ್ತಾ ಬಂದಿದೆ. ಮಾಧ್ಯಮಗಳಿಗೊಂದು ಸಾಮಾಜಿಕ ಗೌರವ ತಕ್ಕಮಟ್ಟಿಗೆ ಇತ್ತು. ಹಾಗೆಂದಾಕ್ಷಣ ಎಲ್ಲವೂ ಸುಸೂತ್ರವಾಗಿತ್ತೆಂದಲ್ಲ. ಬರಹಗಳ ಮೇಲಿನ ಓದುಗರ ನಂಬಿಕೆಗೆ ದ್ರೋಹ ಬಗೆಯುವ ಕೆಲಸ ಎಲ್ಲೋ ಅಲ್ಲೊಂದು-ಇಲ್ಲೊಂದು ಅಪರೂಪಕ್ಕೆ ನಡೆಯುತ್ತಿತ್ತು. ಅದನ್ನು “ಹಳದಿ ಪತ್ರಿಕೋದ್ಯಮ” ಎಂದು ಗುರುತಿಸಲಾಗುತ್ತಿತ್ತು.

ಆದರೆ ಬರಬರುತ್ತಾ ಇಡಿಯ ಪತ್ರಿಕೋದ್ಯಮವೇ ಮಲ್ಟಿಕಲರ್ ಆಗತೊಡಗಿತು. ಅಕ್ಷರಗಳಿಂದಲೇ ದುಡಿದು ತಿನ್ನುವ ಸುದ್ದಿಮನೆಗಳಲ್ಲಿ ತಮ್ಮ ಅನ್ನದಾತರಾದ ಓದುಗರು ತಮ್ಮ ಮೇಲಿರಿಸಿರುವ ನಂಬಿಕೆಗೇ ದ್ರೋಹ ಮಾಡುವ ಕೆಲಸ ಸಾತತ್ಯದೊಂದಿಗೆ ಆರಂಭ ಆದದ್ದು 2010ರ ಸುಮಾರಿಗೆ. ಇದನ್ನು ಓದುಗರು “ಪತ್ರಿಕೆಗಳ ಬೆಲೆ ಸಮರ” ಎಂದೇ ಗುರುತಿಸಿದರೇ ಹೊರತು ಅಲ್ಲಿಂದ ಆಳಕ್ಕೆ ಇಳಿದು ನೋಡಲಿಲ್ಲ. ಸುದ್ದಿ ಚೀಪ್ ಆಯಿತು!

ದೇಶದಾದ್ಯಂತ ಸುದ್ದಿಮನೆಗಳಿಗೆ ಹೀಗೆ ಗೆದ್ದಲು ಹತ್ತಿದ್ದನ್ನು ನಾವು “ಇದು ಮಾಧ್ಯಮವು ಉದ್ಯಮ ಆದದ್ದರ ಫಲ” ಎಂದೇ ವಿಶ್ಲೇಷಿಸುತ್ತಾ ಬಂದೆವು. ಆದರೆ ಗೆದ್ದಲನ್ನು ಗುರುತಿಸಲಿಲ್ಲ. ಅದು ಇಂಚಿಂಚಾಗಿ ಇಡಿಯ ಮಾಧ್ಯಮ ವ್ಯವಸ್ಥೆಯನ್ನು ತಿನ್ನುತ್ತಾ ಬಂದು, 2014 ರ ಲೋಕಸಭಾ ಚುನಾವಣೆಗಳ ರನಪ್ ಹೊತ್ತಿಗೆ ತನ್ನ ಇರುವಿಕೆಯನ್ನು ಪೂರ್ಣಪ್ರಮಾಣದಲ್ಲಿ ತೋರಿಸಿಕೊಂಡಿತು. ಸರಿಯಾಗಿ ಗಮನಿಸಿದರೆ, ಸುದ್ದಿಮನೆಯಲ್ಲಿ ಆಗಿರುವ ಬದಲಾವಣೆಗಳಿಗೆ ಮಾಲಕತ್ವ ಮಾತ್ರ ಕಾರಣ ಅಲ್ಲ; ಬದಲಾಗಿ ಅಲ್ಲಿ ಜಾತಿ, ಗುಂಪು, ಸಿದ್ಧಾಂತ ಮತ್ತಿತರ ಆಯಕಟ್ಟಿನ ಜಾರೆಣ್ಣೆ ಬಳಸಿಕೊಂಡು ನುಸುಳಿ ಕುಳಿತಿರುವ ರಾಜಕೀಯ ದಲ್ಲಾಳಿಗಳು ಕಾರಣ ಎಂಬುದು ಈಗ ಬಯಲಾಗತೊಡಗಿದೆ.

ಸುದ್ದಿಗಳನ್ನು ತಮ್ಮ ಮೂಗಿನ ನೇರಕ್ಕೆ ಬಗ್ಗಿಸಿ ಪ್ರೆಸೆಂಟ್ ಮಾಡುವ ಚಾಳಿ ಸ್ವಲ್ಪ ಕದ್ದುಮುಚ್ಚಿ, ಮುಜುಗರದೊಂದಿಗೆ ಆರಂಭಗೊಂಡದ್ದು, ಈಗ ಪೂರ್ಣಪ್ರಮಾಣದಲ್ಲಿ ವ್ಯವಸ್ಥೆಯ ಭಾಗವಾಗಿಯೇ ನಡೆಯುತ್ತಿದೆ. ಅದು ಬಲುದೊಡ್ಡ ಕಥೆ. ಇಂತಹ ಸನ್ನಿವೇಶದಲ್ಲಿ, ಪ್ರತಿನಿತ್ಯ ಬಹುತೇಕ ಸುದ್ದಿಪುಟಗಳನ್ನು ಕಳ್ಳಸುದ್ದಿ, ಸುಳ್ಳುಸುದ್ದಿ, ನೆಟ್ಟಸುದ್ದಿ, ಕೆಟ್ಟಸುದ್ದಿಗಳು ಆವರಿಸತೊಡಗಿದಾಗ, ಓದುಗರಲ್ಲಿ ಪತ್ರಿಕೆಗಳ ಬಗ್ಗೆ ಅಸಹನೆ ಸ್ಪಷ್ಟವಾಗಿ ತೋರುವಷ್ಟಿತ್ತು. ಆದರೆ, ನಂಬಿಕೆ – ವಾಸ್ತವಗಳ ತೊಳಲಾಟದ ರಭಸದಲ್ಲಿ ಓದುಗ ಕೊಚ್ಚಿಹೋದದ್ದೇ ಜಾಸ್ತಿ. ಅದರ ಫಲವಾಗಿ ಇಂದು ಮಾಧ್ಯಮ ಎಂದರೆ ಛೀ.. ಥೂ.. ಎನ್ನುವುದು ಢಾಳಾಗಿ ಕಾಣಿಸತೊಡಗಿದೆ. ಹಳೆಯ ನಂಬಿಕೆ ಕಳೆದುಹೋಗಿದೆ.

ಒಬ್ಬ ಓದುಗನಾಗಿ ಮತ್ತು ಒಂದೆರಡು ದಶಕ ಸುದ್ದಿಮನೆಗೆ ಮಣ್ಣುಹೊತ್ತವನಾಗಿ, ಕನಿಷ್ಠ ನನ್ನ ಸಂಪರ್ಕದಲ್ಲಿರುವ ಒಂದಿಷ್ಟು ಜನರಿಗಾದರೂ “ಸುದ್ದಿ ಏಕೆ ಹೀಗೆ?” ಎಂಬುದನ್ನು ತಲುಪಿಸಲು ಸೋಷಿಯಲ್ ಮೀಡಿಯಾವನ್ನು ಬಳಸಬಹುದು ಅನ್ನಿಸಿತು. ಅದರ ಫಲವೇ ನನ್ನ ಮಾಧ್ಯಮ ವಿಶ್ಲೇಷಣೆಯ ಮೈಕ್ರೊಬ್ಲಾಗಿಂಗ್ ಪ್ರಯತ್ನ. ಈ ರೀತಿಯ ಮೈಕ್ರೊ ಬ್ಲಾಗಿಂಗ್ ಗೆ ಮೂಲ ಪ್ರೇರಣೆ ನಾನು ಈ ಹಿಂದೆ ಒಂದು ದಿನಪತ್ರಿಕೆಗೆ ಸಣ್ಣ ಅವಧಿಗೆ “ಆಂಬುಡ್ಸ್ ಮನ್” ಆಗಿ ಕೆಲಸ ಮಾಡಿದ್ದು.

2019 ಚುನಾವಣೆಗೆ ರನಪ್ ಆರಂಭಗೊಳ್ಳುವ ಹೊತ್ತಿಗೆ, ಮಾಧ್ಯಮಗಳಿಗೆ ಅಡರಿದ ಈ ರೋಗ ಪೂರ್ಣಪ್ರಮಾಣದ, ವಾಸಿಯಾಗದ ಮಹಾವ್ಯಾಧಿ ಎಂಬುದು ಖಚಿತವಾಗತೊಡಗಿತ್ತು. ಹಾಗಾಗಿ ನನ್ನ ಸುದ್ದಿ ವಿಶ್ಲೇಷಣೆಯ ಕೆಲಸಕ್ಕೆ ಒಂದು ಟ್ರ್ಯಾಕಿಂಗ್ ವ್ಯವಸ್ಥೆ ಮಾಡಿಕೊಳ್ಳುವ ನಿಟ್ಟಿನಲ್ಲಿ #ಡಿಯರ್_ಮೀಡಿಯಾ ಹ್ಯಾಷ್ ಟ್ಯಾಗ್ ನ್ನು ಬಳಸತೊಡಗಿದೆ. ಇದು ಮೊದಲು ಬಳಕೆ ಆದದ್ದು 2018 ಅಕ್ಟೋಬರ್ ತಿಂಗಳಿನಲ್ಲಿ. ಈ ಹ್ಯಾಷ್ ಟ್ಯಾಗ್ ನನ್ನ ಟ್ರ್ಯಾಕಿಂಗ್ ದಾಖಲೆ ಆಗಿ ಬಳಕೆ ಆಗುತ್ತಿದ್ದದ್ದು, ಕ್ರಮೇಣ ಒಂದು ಬ್ರ್ಯಾಂಡ್ ಆಗಿ ಕೂಡ ಕಾಣಿಸತೊಡಗಿದ್ದರ ಸಂಪೂರ್ಣ ಶ್ರೇಯಸ್ಸು, ಮಾಧ್ಯಮಗಳಿಗೆ ಮತ್ತು ಅವು ಮಾಡತೊಡಗಿದ ಎದ್ದುಕಾಣುವ “ಹಲ್ಕಾ” ಕೆಲಸಗಳಿಗೆ ಸೇರಬೇಕು!

ಈ ಮಹಾವ್ಯಾಧಿ ಇಂದು ಎಷ್ಟು ತೀವ್ರವಾಗಿದೆ ಎಂದರೆ, ನೀವು ದಿನನಿತ್ಯ ಅವರ ಜನದ್ರೋಹಗಳನ್ನು ಎತ್ತಿ ತೋರಿಸಹೊರಟರೆ ನೀವೇ ಇನ್ನೊಂದು ಯಾವುದೋ ರಾಜಕೀಯ ಪಕ್ಷದ ಕಾರ್ಯಕರ್ತರೇನೋ ಎಂದು ಸಂಶಯ ಬರುವ ಸ್ಥಿತಿ ಇದೆ! ಆ ಪ್ರಮಾಣದಲ್ಲಿ ರಾಜಕೀಯ ಪ್ರೇರಿತ ಸುದ್ದಿಗಾರಿಕೆ ಇಂದು ಓದುಗರಿಗೆ ದ್ರೋಹ ಮಾಡುತ್ತಿದೆ.

ಇಂಗ್ಲೀಷಿನ ಲ್ಯಾಪ್ ಡಾಗ್ ಮೀಡಿಯಾ, ಹಿಂದಿಯ ಗೋದಿ ಮೀಡಿಯಾ ಕನ್ನಡದಲ್ಲಿ #ಡಿಯರ್_ಮೀಡಿಯಾ ಆಗತೊಡಗಿದೆ. ಮುಂದೊಂದು ದಿನ ಈ ಕ್ರಾನಿಕಲ್ ಕನ್ನಡದ ಮಾಧ್ಯಮಗಳ ಸ್ಥಿತಿಗೆ ಹಿಡಿದ ಕನ್ನಡಿ ಆದರೂ ಆಗಬಹುದೆಂದು ಈಗೀಗ ಅನ್ನಿಸತೊಡಗಿದೆ…!!


ಓದಿ: ’ಮೈ ಡಿಯರ್ ಮೀಡಿಯಾ’: ಸುದ್ದಿಮನೆಗಳು ಸ್ಥಿತ್ಯಂತರಗೊಂಡ ಬಗ್ಗೆ ರಾಜಾರಾಂ ತಲ್ಲೂರು ಅವರ ಬರಹ


ವೀಡಿಯೋ ನೋಡಿ: ಪರಮಾತ್ಮ ಪೊಲಿಟಿಕಲ್ ಮ್ಯಾಜಿಕ್ ಶೋ; ಚಿಲ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...