Homeಮುಖಪುಟಸುದ್ದಿಮನೆಯ ಗೆದ್ದಲುಗಳೇ #ಡಿಯರ್_ಮೀಡಿಯಾ

ಸುದ್ದಿಮನೆಯ ಗೆದ್ದಲುಗಳೇ #ಡಿಯರ್_ಮೀಡಿಯಾ

ಅವರ ಜನದ್ರೋಹಗಳನ್ನು ಎತ್ತಿ ತೋರಿಸಹೊರಟರೆ ನೀವೇ ಇನ್ನೊಂದು ಯಾವುದೋ ರಾಜಕೀಯ ಪಕ್ಷದ ಕಾರ್ಯಕರ್ತರೇನೋ ಎಂದು ಸಂಶಯ ಬರುವ ಸ್ಥಿತಿ ಇದೆ! ಆ ಪ್ರಮಾಣದಲ್ಲಿ ರಾಜಕೀಯ ಪ್ರೇರಿತ ಸುದ್ದಿಗಾರಿಕೆ ಇಂದು ಓದುಗರಿಗೆ ದ್ರೋಹ ಮಾಡುತ್ತಿದೆ.

- Advertisement -
- Advertisement -

ಅಕ್ಷರದಲ್ಲಿ ಮುದ್ರಿತವಾದದ್ದು “ಅಂತಿಮ ಸತ್ಯ” ಎಂಬುದನ್ನೇ ಹಾಸಿ, ಹೊದ್ದು ನಂಬಿದ್ದವರಿದ್ದರು. ನಿರ್ಣಾಯಕ ಸಂದರ್ಭ ಎದುರಾದಾಗ “ನೋಡಿ ಬೇಕಿದ್ರೆ… ಹಾಗಂತ ನಾನು ಬರೆದು ಕೊಡ್ತೇನೆ!” ಎಂದು ಹೇಳುವುದು ಸುಮ್ಮನೇ ಅಲ್ಲ. “ಬರೆದು ಕೊಡುವುದು ಅಂತಿಮ ಸತ್ಯ” ಎಂಬ ನಂಬಿಕೆಯ ಫಲ ಅದು.

ಯಾವುದೇ ಸುದ್ದಿ ಖಚಿತವಾಗಬೇಕಿದ್ದರೆ ಪೇಪರಲ್ಲಿ ಬಂದಿದೆಯಾ? ಎಂದು ನೋಡುವ ಕಾಲ ಇತ್ತು. ಏನೇ ಸಮಾಜವಿರೋಧಿ ಕೆಲಸ ಮಾಡಿದರೂ ಪೇಪರಲ್ಲಿ ಬರ್ತದೆ ಎಂಬ ಅಂಜಿಕೆ ಇತ್ತು. ಅದು ಕ್ರಮೇಣ ಮಸುಕಾಗುತ್ತಾ ಬಂದಿದೆ. ಮಾಧ್ಯಮಗಳಿಗೊಂದು ಸಾಮಾಜಿಕ ಗೌರವ ತಕ್ಕಮಟ್ಟಿಗೆ ಇತ್ತು. ಹಾಗೆಂದಾಕ್ಷಣ ಎಲ್ಲವೂ ಸುಸೂತ್ರವಾಗಿತ್ತೆಂದಲ್ಲ. ಬರಹಗಳ ಮೇಲಿನ ಓದುಗರ ನಂಬಿಕೆಗೆ ದ್ರೋಹ ಬಗೆಯುವ ಕೆಲಸ ಎಲ್ಲೋ ಅಲ್ಲೊಂದು-ಇಲ್ಲೊಂದು ಅಪರೂಪಕ್ಕೆ ನಡೆಯುತ್ತಿತ್ತು. ಅದನ್ನು “ಹಳದಿ ಪತ್ರಿಕೋದ್ಯಮ” ಎಂದು ಗುರುತಿಸಲಾಗುತ್ತಿತ್ತು.

ಆದರೆ ಬರಬರುತ್ತಾ ಇಡಿಯ ಪತ್ರಿಕೋದ್ಯಮವೇ ಮಲ್ಟಿಕಲರ್ ಆಗತೊಡಗಿತು. ಅಕ್ಷರಗಳಿಂದಲೇ ದುಡಿದು ತಿನ್ನುವ ಸುದ್ದಿಮನೆಗಳಲ್ಲಿ ತಮ್ಮ ಅನ್ನದಾತರಾದ ಓದುಗರು ತಮ್ಮ ಮೇಲಿರಿಸಿರುವ ನಂಬಿಕೆಗೇ ದ್ರೋಹ ಮಾಡುವ ಕೆಲಸ ಸಾತತ್ಯದೊಂದಿಗೆ ಆರಂಭ ಆದದ್ದು 2010ರ ಸುಮಾರಿಗೆ. ಇದನ್ನು ಓದುಗರು “ಪತ್ರಿಕೆಗಳ ಬೆಲೆ ಸಮರ” ಎಂದೇ ಗುರುತಿಸಿದರೇ ಹೊರತು ಅಲ್ಲಿಂದ ಆಳಕ್ಕೆ ಇಳಿದು ನೋಡಲಿಲ್ಲ. ಸುದ್ದಿ ಚೀಪ್ ಆಯಿತು!

ದೇಶದಾದ್ಯಂತ ಸುದ್ದಿಮನೆಗಳಿಗೆ ಹೀಗೆ ಗೆದ್ದಲು ಹತ್ತಿದ್ದನ್ನು ನಾವು “ಇದು ಮಾಧ್ಯಮವು ಉದ್ಯಮ ಆದದ್ದರ ಫಲ” ಎಂದೇ ವಿಶ್ಲೇಷಿಸುತ್ತಾ ಬಂದೆವು. ಆದರೆ ಗೆದ್ದಲನ್ನು ಗುರುತಿಸಲಿಲ್ಲ. ಅದು ಇಂಚಿಂಚಾಗಿ ಇಡಿಯ ಮಾಧ್ಯಮ ವ್ಯವಸ್ಥೆಯನ್ನು ತಿನ್ನುತ್ತಾ ಬಂದು, 2014 ರ ಲೋಕಸಭಾ ಚುನಾವಣೆಗಳ ರನಪ್ ಹೊತ್ತಿಗೆ ತನ್ನ ಇರುವಿಕೆಯನ್ನು ಪೂರ್ಣಪ್ರಮಾಣದಲ್ಲಿ ತೋರಿಸಿಕೊಂಡಿತು. ಸರಿಯಾಗಿ ಗಮನಿಸಿದರೆ, ಸುದ್ದಿಮನೆಯಲ್ಲಿ ಆಗಿರುವ ಬದಲಾವಣೆಗಳಿಗೆ ಮಾಲಕತ್ವ ಮಾತ್ರ ಕಾರಣ ಅಲ್ಲ; ಬದಲಾಗಿ ಅಲ್ಲಿ ಜಾತಿ, ಗುಂಪು, ಸಿದ್ಧಾಂತ ಮತ್ತಿತರ ಆಯಕಟ್ಟಿನ ಜಾರೆಣ್ಣೆ ಬಳಸಿಕೊಂಡು ನುಸುಳಿ ಕುಳಿತಿರುವ ರಾಜಕೀಯ ದಲ್ಲಾಳಿಗಳು ಕಾರಣ ಎಂಬುದು ಈಗ ಬಯಲಾಗತೊಡಗಿದೆ.

ಸುದ್ದಿಗಳನ್ನು ತಮ್ಮ ಮೂಗಿನ ನೇರಕ್ಕೆ ಬಗ್ಗಿಸಿ ಪ್ರೆಸೆಂಟ್ ಮಾಡುವ ಚಾಳಿ ಸ್ವಲ್ಪ ಕದ್ದುಮುಚ್ಚಿ, ಮುಜುಗರದೊಂದಿಗೆ ಆರಂಭಗೊಂಡದ್ದು, ಈಗ ಪೂರ್ಣಪ್ರಮಾಣದಲ್ಲಿ ವ್ಯವಸ್ಥೆಯ ಭಾಗವಾಗಿಯೇ ನಡೆಯುತ್ತಿದೆ. ಅದು ಬಲುದೊಡ್ಡ ಕಥೆ. ಇಂತಹ ಸನ್ನಿವೇಶದಲ್ಲಿ, ಪ್ರತಿನಿತ್ಯ ಬಹುತೇಕ ಸುದ್ದಿಪುಟಗಳನ್ನು ಕಳ್ಳಸುದ್ದಿ, ಸುಳ್ಳುಸುದ್ದಿ, ನೆಟ್ಟಸುದ್ದಿ, ಕೆಟ್ಟಸುದ್ದಿಗಳು ಆವರಿಸತೊಡಗಿದಾಗ, ಓದುಗರಲ್ಲಿ ಪತ್ರಿಕೆಗಳ ಬಗ್ಗೆ ಅಸಹನೆ ಸ್ಪಷ್ಟವಾಗಿ ತೋರುವಷ್ಟಿತ್ತು. ಆದರೆ, ನಂಬಿಕೆ – ವಾಸ್ತವಗಳ ತೊಳಲಾಟದ ರಭಸದಲ್ಲಿ ಓದುಗ ಕೊಚ್ಚಿಹೋದದ್ದೇ ಜಾಸ್ತಿ. ಅದರ ಫಲವಾಗಿ ಇಂದು ಮಾಧ್ಯಮ ಎಂದರೆ ಛೀ.. ಥೂ.. ಎನ್ನುವುದು ಢಾಳಾಗಿ ಕಾಣಿಸತೊಡಗಿದೆ. ಹಳೆಯ ನಂಬಿಕೆ ಕಳೆದುಹೋಗಿದೆ.

ಒಬ್ಬ ಓದುಗನಾಗಿ ಮತ್ತು ಒಂದೆರಡು ದಶಕ ಸುದ್ದಿಮನೆಗೆ ಮಣ್ಣುಹೊತ್ತವನಾಗಿ, ಕನಿಷ್ಠ ನನ್ನ ಸಂಪರ್ಕದಲ್ಲಿರುವ ಒಂದಿಷ್ಟು ಜನರಿಗಾದರೂ “ಸುದ್ದಿ ಏಕೆ ಹೀಗೆ?” ಎಂಬುದನ್ನು ತಲುಪಿಸಲು ಸೋಷಿಯಲ್ ಮೀಡಿಯಾವನ್ನು ಬಳಸಬಹುದು ಅನ್ನಿಸಿತು. ಅದರ ಫಲವೇ ನನ್ನ ಮಾಧ್ಯಮ ವಿಶ್ಲೇಷಣೆಯ ಮೈಕ್ರೊಬ್ಲಾಗಿಂಗ್ ಪ್ರಯತ್ನ. ಈ ರೀತಿಯ ಮೈಕ್ರೊ ಬ್ಲಾಗಿಂಗ್ ಗೆ ಮೂಲ ಪ್ರೇರಣೆ ನಾನು ಈ ಹಿಂದೆ ಒಂದು ದಿನಪತ್ರಿಕೆಗೆ ಸಣ್ಣ ಅವಧಿಗೆ “ಆಂಬುಡ್ಸ್ ಮನ್” ಆಗಿ ಕೆಲಸ ಮಾಡಿದ್ದು.

2019 ಚುನಾವಣೆಗೆ ರನಪ್ ಆರಂಭಗೊಳ್ಳುವ ಹೊತ್ತಿಗೆ, ಮಾಧ್ಯಮಗಳಿಗೆ ಅಡರಿದ ಈ ರೋಗ ಪೂರ್ಣಪ್ರಮಾಣದ, ವಾಸಿಯಾಗದ ಮಹಾವ್ಯಾಧಿ ಎಂಬುದು ಖಚಿತವಾಗತೊಡಗಿತ್ತು. ಹಾಗಾಗಿ ನನ್ನ ಸುದ್ದಿ ವಿಶ್ಲೇಷಣೆಯ ಕೆಲಸಕ್ಕೆ ಒಂದು ಟ್ರ್ಯಾಕಿಂಗ್ ವ್ಯವಸ್ಥೆ ಮಾಡಿಕೊಳ್ಳುವ ನಿಟ್ಟಿನಲ್ಲಿ #ಡಿಯರ್_ಮೀಡಿಯಾ ಹ್ಯಾಷ್ ಟ್ಯಾಗ್ ನ್ನು ಬಳಸತೊಡಗಿದೆ. ಇದು ಮೊದಲು ಬಳಕೆ ಆದದ್ದು 2018 ಅಕ್ಟೋಬರ್ ತಿಂಗಳಿನಲ್ಲಿ. ಈ ಹ್ಯಾಷ್ ಟ್ಯಾಗ್ ನನ್ನ ಟ್ರ್ಯಾಕಿಂಗ್ ದಾಖಲೆ ಆಗಿ ಬಳಕೆ ಆಗುತ್ತಿದ್ದದ್ದು, ಕ್ರಮೇಣ ಒಂದು ಬ್ರ್ಯಾಂಡ್ ಆಗಿ ಕೂಡ ಕಾಣಿಸತೊಡಗಿದ್ದರ ಸಂಪೂರ್ಣ ಶ್ರೇಯಸ್ಸು, ಮಾಧ್ಯಮಗಳಿಗೆ ಮತ್ತು ಅವು ಮಾಡತೊಡಗಿದ ಎದ್ದುಕಾಣುವ “ಹಲ್ಕಾ” ಕೆಲಸಗಳಿಗೆ ಸೇರಬೇಕು!

ಈ ಮಹಾವ್ಯಾಧಿ ಇಂದು ಎಷ್ಟು ತೀವ್ರವಾಗಿದೆ ಎಂದರೆ, ನೀವು ದಿನನಿತ್ಯ ಅವರ ಜನದ್ರೋಹಗಳನ್ನು ಎತ್ತಿ ತೋರಿಸಹೊರಟರೆ ನೀವೇ ಇನ್ನೊಂದು ಯಾವುದೋ ರಾಜಕೀಯ ಪಕ್ಷದ ಕಾರ್ಯಕರ್ತರೇನೋ ಎಂದು ಸಂಶಯ ಬರುವ ಸ್ಥಿತಿ ಇದೆ! ಆ ಪ್ರಮಾಣದಲ್ಲಿ ರಾಜಕೀಯ ಪ್ರೇರಿತ ಸುದ್ದಿಗಾರಿಕೆ ಇಂದು ಓದುಗರಿಗೆ ದ್ರೋಹ ಮಾಡುತ್ತಿದೆ.

ಇಂಗ್ಲೀಷಿನ ಲ್ಯಾಪ್ ಡಾಗ್ ಮೀಡಿಯಾ, ಹಿಂದಿಯ ಗೋದಿ ಮೀಡಿಯಾ ಕನ್ನಡದಲ್ಲಿ #ಡಿಯರ್_ಮೀಡಿಯಾ ಆಗತೊಡಗಿದೆ. ಮುಂದೊಂದು ದಿನ ಈ ಕ್ರಾನಿಕಲ್ ಕನ್ನಡದ ಮಾಧ್ಯಮಗಳ ಸ್ಥಿತಿಗೆ ಹಿಡಿದ ಕನ್ನಡಿ ಆದರೂ ಆಗಬಹುದೆಂದು ಈಗೀಗ ಅನ್ನಿಸತೊಡಗಿದೆ…!!


ಓದಿ: ’ಮೈ ಡಿಯರ್ ಮೀಡಿಯಾ’: ಸುದ್ದಿಮನೆಗಳು ಸ್ಥಿತ್ಯಂತರಗೊಂಡ ಬಗ್ಗೆ ರಾಜಾರಾಂ ತಲ್ಲೂರು ಅವರ ಬರಹ


ವೀಡಿಯೋ ನೋಡಿ: ಪರಮಾತ್ಮ ಪೊಲಿಟಿಕಲ್ ಮ್ಯಾಜಿಕ್ ಶೋ; ಚಿಲ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...