Homeಕರ್ನಾಟಕಕೋಮುದ್ವೇಷದಿಂದ ಸಾವು: ಬಿಜೆಪಿ ಸರ್ಕಾರದಲ್ಲಿ ತಾರತಮ್ಯಕ್ಕೆ ಒಳಗಾಗಿದ್ದ 4 ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಕೋಮುದ್ವೇಷದಿಂದ ಸಾವು: ಬಿಜೆಪಿ ಸರ್ಕಾರದಲ್ಲಿ ತಾರತಮ್ಯಕ್ಕೆ ಒಳಗಾಗಿದ್ದ 4 ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ದಕ್ಷಿಣ ಕನ್ನಡ ಜಿಲ್ಲೆಯ ಮಸೂದ್, ಫಾಝಿಲ್, ಜಲೀಲ್, ದೀಪಕ್ ರಾವ್ ಕುಟುಂಬಗಳಿಗೆ ನೂತನ ಕಾಂಗ್ರೆಸ್ ಸರ್ಕಾರ ತಲಾ 25 ಲಕ್ಷ ರೂಗಳ ಪರಿಹಾರ ಘೋಷಿಸಿದೆ.

- Advertisement -
- Advertisement -

ಬಿಜೆಪಿ ಆಡಳಿತದಲ್ಲಿ ಕೋಮು ದ್ವೇಷದಿಂದ ಕೊಲೆಗೀಡಾಗಿ, ಆಗಿನ ಸರ್ಕಾರದ ತಾರತಮ್ಯದಿಂದ ಪರಿಹಾರ ವಂಚಿತರಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಸೂದ್, ಫಾಝಿಲ್, ಜಲೀಲ್, ದೀಪಕ್ ರಾವ್ ಕುಟುಂಬಗಳಿಗೆ ನೂತನ ಕಾಂಗ್ರೆಸ್ ಸರ್ಕಾರ ತಲಾ 25 ಲಕ್ಷ ರೂಗಳ ಪರಿಹಾರ ಘೋಷಿಸಿದೆ.

ಕಳೆದ 5 ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ಕೋಮು ದ್ವೇ‍ಷದಿಂದಾಗಿ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು ಸಿಎಂ ಸಿದ್ದರಾಮಯ್ಯನವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಬೆಳ್ಳಾರೆಯ ಮಹಮ್ಮದ್ ಮಸೂದ್, ಸುರತ್ಕಲ್‌ನ ಮೊಹಮ್ಮದ್ ಫಾಝಿಲ್, ಕಾಟಿಪಳ್ಳದ ಅಬ್ದುಲ್ ಜಲೀಲ್ ಮತ್ತು ಕಾಟಿಪಳ್ಳದ ದೀಪಕ್ ರಾವ್ ಅವರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ 19 ಜುಲೈ 2022ರಂದು ಮಸೂದ್ ಎಂಬ ಮುಸ್ಲಿಂ ಯುವಕನನ್ನು ಕೊಲೆ ಮಾಡಲಾಯಿತು. ಕ್ಷುಲ್ಲಕ ಕಾರಣಕ್ಕೆ ಮಸೂದ್ (18) ಮೇಲೆ ಕೆಲವರು ಹಲ್ಲೆ ನಡೆಸಿ ಕೊಂದಿದ್ದರು. ನಂತರ ಅದೇ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬ ಯುವಕನನ್ನು 26 ಜುಲೈ 2022ರಂದು ದುಷ್ಕರ್ಮಿಗಳು ಹತ್ಯೆ ಮಾಡಿದರು. ಇಷ್ಟಕ್ಕೆ ನಿಲ್ಲದೆ ಒಂದು ದಿನದ ನಂತರದಲ್ಲಿ ಮಂಗಳೂರಿನ ಸುರತ್ಕಲ್‌ನಲ್ಲಿ 28 ಜುಲೈ 2022ರಂದು ಫಾಝಿಲ್‌ ಎಂಬ ಅಮಾಯಕನನ್ನು ಕೊಲ್ಲಲಾಯಿತು. ಈ ಪ್ರಕರಣಗಳ ಹಿಂದೆ ಕೋಮುದ್ವೇಷ ಕೆಲಸ ಮಾಡಿತ್ತು.

ಪ್ರವೀಣ್‌ ಮನೆಗೆ ಬಿಜೆಪಿಯ ಜನಪ್ರತಿನಿಧಿಗಳು ಭೇಟಿ ನೀಡಿದರು. ಸಿಎಂ ತೆರಳಿ 25 ಲಕ್ಷ ರೂ ಪರಿಹಾರ ಘೋಷಿಸಿದರು. ಆದರೆ ಅದೇ ಸಂದರ್ಭದಲ್ಲಿ ಕೊಲೆಯಾದ ಮಸೂದ್‌ಗಾಗಲೀ, ಫಾಝಿಲ್‌ಗಾಗಲೀ ಸರ್ಕಾರ ಪರಿಹಾರವನ್ನು ಘೋಷಿಸಲಿಲ್ಲ. ಅಮಾಯಕರಾದ ಮಸೂದ್‌, ಫಾಝಿಲ್‌ ಕುಟುಂಬವನ್ನು ಭೇಟಿ ಮಾಡಿ ಕನಿಷ್ಠ ಸಂತ್ವಾನವನ್ನು ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಸಂವಿಧಾನವನ್ನು ಪಾಲಿಸುವುದಾಗಿ, ಯಾವುದೇ ಜಾತಿ, ಮತದ ಆಧಾರದಲ್ಲಿ ಅಧಿಕಾರ ನಡೆಸುವುದಿಲ್ಲವೆಂದು ಪ್ರಮಾಣ ವಚನ ಸ್ವೀಕರಿಸಿದ ಸಿಎಂ ವರ್ತನೆ ಅತ್ಯಂತ ಬಾಲಿಶವಾಗಿತ್ತು. ಈ ಕೊಲೆಗಳಿಂದ ಜರ್ಜರಿತವಾದ ಪೋಷಕರ ನೋವಿಗೆ ಧರ್ಮ, ಜಾತಿಯ ಸೋಂಕು ಇರುವುದಿಲ್ಲ ಎಂಬ ಕನಿಷ್ಠ ಅಂತಃಕರಣವೂ ರಾಜ್ಯವನ್ನಾಳುವ ಪಕ್ಷಕ್ಕೆ ಇಲ್ಲವೇ ಎಂಬ ಪ್ರಶ್ನೆ ಎದುರಾಗಿತ್ತು.

ಮಂಗಳೂರಿನ ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ 2022ರ ಡಿಸೆಂಬರ್ 24ರಂದು ಅಬ್ದುಲ್ ಜಲೀಲ್‌ ಎಂಬುವವರನ್ನು ಧರ್ಮದ್ವೇಷದ ಕಾರಣಕ್ಕಾಗಿ ಕೊಲ್ಲಲಾಗಿತ್ತು.

ಜನವರಿ 3 2018 ರಂದು ದೀಪಕ್‌ ರಾವ್ ಎಂಬ ಯುವಕ ಕೊಲ್ಲಲ್ಪಟ್ಟರು. ಆ ಸಮಯದಲ್ಲಿ ದೀಪಕ್ ಬಜರಂಗದಳ ಮತ್ತು ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹೇಳಿತ್ತು. ಆಗಿನ್ನೂ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದರು. ಅವರು ಸಂತ್ರಸ್ತರ ಮನೆಗೆ ಭೇಟಿ ನೀಡಿದ್ದರು.

ಇದನ್ನೂ ಓದಿ: ಮತೀಯ ಗೂಂಡಾಗಿರಿಯಿಂದ ಹಿಡಿದು ಶಾಲಾ ಕೊಠಡಿಯ ಕೇಸರಿ ಬಣ್ಣದವರೆಗೆ: ಬೊಮ್ಮಾಯಿ ಸರ್ಕಾರದ ಕೋಮು ರಾಜಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...