Homeಕರ್ನಾಟಕಕೋಮುದ್ವೇಷದಿಂದ ಸಾವು: ಬಿಜೆಪಿ ಸರ್ಕಾರದಲ್ಲಿ ತಾರತಮ್ಯಕ್ಕೆ ಒಳಗಾಗಿದ್ದ 4 ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಕೋಮುದ್ವೇಷದಿಂದ ಸಾವು: ಬಿಜೆಪಿ ಸರ್ಕಾರದಲ್ಲಿ ತಾರತಮ್ಯಕ್ಕೆ ಒಳಗಾಗಿದ್ದ 4 ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ದಕ್ಷಿಣ ಕನ್ನಡ ಜಿಲ್ಲೆಯ ಮಸೂದ್, ಫಾಝಿಲ್, ಜಲೀಲ್, ದೀಪಕ್ ರಾವ್ ಕುಟುಂಬಗಳಿಗೆ ನೂತನ ಕಾಂಗ್ರೆಸ್ ಸರ್ಕಾರ ತಲಾ 25 ಲಕ್ಷ ರೂಗಳ ಪರಿಹಾರ ಘೋಷಿಸಿದೆ.

- Advertisement -
- Advertisement -

ಬಿಜೆಪಿ ಆಡಳಿತದಲ್ಲಿ ಕೋಮು ದ್ವೇಷದಿಂದ ಕೊಲೆಗೀಡಾಗಿ, ಆಗಿನ ಸರ್ಕಾರದ ತಾರತಮ್ಯದಿಂದ ಪರಿಹಾರ ವಂಚಿತರಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಸೂದ್, ಫಾಝಿಲ್, ಜಲೀಲ್, ದೀಪಕ್ ರಾವ್ ಕುಟುಂಬಗಳಿಗೆ ನೂತನ ಕಾಂಗ್ರೆಸ್ ಸರ್ಕಾರ ತಲಾ 25 ಲಕ್ಷ ರೂಗಳ ಪರಿಹಾರ ಘೋಷಿಸಿದೆ.

ಕಳೆದ 5 ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ಕೋಮು ದ್ವೇ‍ಷದಿಂದಾಗಿ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು ಸಿಎಂ ಸಿದ್ದರಾಮಯ್ಯನವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಬೆಳ್ಳಾರೆಯ ಮಹಮ್ಮದ್ ಮಸೂದ್, ಸುರತ್ಕಲ್‌ನ ಮೊಹಮ್ಮದ್ ಫಾಝಿಲ್, ಕಾಟಿಪಳ್ಳದ ಅಬ್ದುಲ್ ಜಲೀಲ್ ಮತ್ತು ಕಾಟಿಪಳ್ಳದ ದೀಪಕ್ ರಾವ್ ಅವರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ 19 ಜುಲೈ 2022ರಂದು ಮಸೂದ್ ಎಂಬ ಮುಸ್ಲಿಂ ಯುವಕನನ್ನು ಕೊಲೆ ಮಾಡಲಾಯಿತು. ಕ್ಷುಲ್ಲಕ ಕಾರಣಕ್ಕೆ ಮಸೂದ್ (18) ಮೇಲೆ ಕೆಲವರು ಹಲ್ಲೆ ನಡೆಸಿ ಕೊಂದಿದ್ದರು. ನಂತರ ಅದೇ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬ ಯುವಕನನ್ನು 26 ಜುಲೈ 2022ರಂದು ದುಷ್ಕರ್ಮಿಗಳು ಹತ್ಯೆ ಮಾಡಿದರು. ಇಷ್ಟಕ್ಕೆ ನಿಲ್ಲದೆ ಒಂದು ದಿನದ ನಂತರದಲ್ಲಿ ಮಂಗಳೂರಿನ ಸುರತ್ಕಲ್‌ನಲ್ಲಿ 28 ಜುಲೈ 2022ರಂದು ಫಾಝಿಲ್‌ ಎಂಬ ಅಮಾಯಕನನ್ನು ಕೊಲ್ಲಲಾಯಿತು. ಈ ಪ್ರಕರಣಗಳ ಹಿಂದೆ ಕೋಮುದ್ವೇಷ ಕೆಲಸ ಮಾಡಿತ್ತು.

ಪ್ರವೀಣ್‌ ಮನೆಗೆ ಬಿಜೆಪಿಯ ಜನಪ್ರತಿನಿಧಿಗಳು ಭೇಟಿ ನೀಡಿದರು. ಸಿಎಂ ತೆರಳಿ 25 ಲಕ್ಷ ರೂ ಪರಿಹಾರ ಘೋಷಿಸಿದರು. ಆದರೆ ಅದೇ ಸಂದರ್ಭದಲ್ಲಿ ಕೊಲೆಯಾದ ಮಸೂದ್‌ಗಾಗಲೀ, ಫಾಝಿಲ್‌ಗಾಗಲೀ ಸರ್ಕಾರ ಪರಿಹಾರವನ್ನು ಘೋಷಿಸಲಿಲ್ಲ. ಅಮಾಯಕರಾದ ಮಸೂದ್‌, ಫಾಝಿಲ್‌ ಕುಟುಂಬವನ್ನು ಭೇಟಿ ಮಾಡಿ ಕನಿಷ್ಠ ಸಂತ್ವಾನವನ್ನು ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಸಂವಿಧಾನವನ್ನು ಪಾಲಿಸುವುದಾಗಿ, ಯಾವುದೇ ಜಾತಿ, ಮತದ ಆಧಾರದಲ್ಲಿ ಅಧಿಕಾರ ನಡೆಸುವುದಿಲ್ಲವೆಂದು ಪ್ರಮಾಣ ವಚನ ಸ್ವೀಕರಿಸಿದ ಸಿಎಂ ವರ್ತನೆ ಅತ್ಯಂತ ಬಾಲಿಶವಾಗಿತ್ತು. ಈ ಕೊಲೆಗಳಿಂದ ಜರ್ಜರಿತವಾದ ಪೋಷಕರ ನೋವಿಗೆ ಧರ್ಮ, ಜಾತಿಯ ಸೋಂಕು ಇರುವುದಿಲ್ಲ ಎಂಬ ಕನಿಷ್ಠ ಅಂತಃಕರಣವೂ ರಾಜ್ಯವನ್ನಾಳುವ ಪಕ್ಷಕ್ಕೆ ಇಲ್ಲವೇ ಎಂಬ ಪ್ರಶ್ನೆ ಎದುರಾಗಿತ್ತು.

ಮಂಗಳೂರಿನ ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ 2022ರ ಡಿಸೆಂಬರ್ 24ರಂದು ಅಬ್ದುಲ್ ಜಲೀಲ್‌ ಎಂಬುವವರನ್ನು ಧರ್ಮದ್ವೇಷದ ಕಾರಣಕ್ಕಾಗಿ ಕೊಲ್ಲಲಾಗಿತ್ತು.

ಜನವರಿ 3 2018 ರಂದು ದೀಪಕ್‌ ರಾವ್ ಎಂಬ ಯುವಕ ಕೊಲ್ಲಲ್ಪಟ್ಟರು. ಆ ಸಮಯದಲ್ಲಿ ದೀಪಕ್ ಬಜರಂಗದಳ ಮತ್ತು ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹೇಳಿತ್ತು. ಆಗಿನ್ನೂ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದರು. ಅವರು ಸಂತ್ರಸ್ತರ ಮನೆಗೆ ಭೇಟಿ ನೀಡಿದ್ದರು.

ಇದನ್ನೂ ಓದಿ: ಮತೀಯ ಗೂಂಡಾಗಿರಿಯಿಂದ ಹಿಡಿದು ಶಾಲಾ ಕೊಠಡಿಯ ಕೇಸರಿ ಬಣ್ಣದವರೆಗೆ: ಬೊಮ್ಮಾಯಿ ಸರ್ಕಾರದ ಕೋಮು ರಾಜಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...