Homeಮುಖಪುಟಮಹಾರಾಷ್ಟ್ರ: ಆಸಿಡ್‌ ದಾಳಿ ಆರೋಪಿಗಳಿಗೆ 10 ಲಕ್ಷ ರೂ ದಂಡ

ಮಹಾರಾಷ್ಟ್ರ: ಆಸಿಡ್‌ ದಾಳಿ ಆರೋಪಿಗಳಿಗೆ 10 ಲಕ್ಷ ರೂ ದಂಡ

ಮಹಿಳೆ, ಮಕ್ಕಳ ಮೇಲಿನ ಅಪರಾಧಕ್ಕೆ ಮರಣದಂಡನೆಯಂತಹ ಕಠಿಣ ಕ್ರಮ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಭೀಕರ ಅಪರಾಧಗಳನ್ನು ನಿಗ್ರಹಿಸುವ ಪ್ರಯತ್ನದಲ್ಲಿ, ರಾಜ್ಯ ಕ್ಯಾಬಿನೆಟ್ ಬುಧವಾರ ಶಕ್ತಿ ಕಾಯ್ದೆಯ ಕರಡು ಮಸೂದೆಗೆ ಅನುಮೋದನೆ ನೀಡಿದೆ. ಈ ಕಾಯ್ದೆಯ ಪ್ರಕಾರ ಅಪರಾಧಿಗಳಿಗೆ ಮರಣದಂಡನೆ, ಜೀವಾವಧಿ ಶಿಕ್ಷೆ ಮತ್ತು ಭಾರಿ ದಂಡ ಸೇರಿದಂತೆ ಕಠಿಣ ಶಿಕ್ಷೆಯನ್ನು ವಿಧಿಸಬಹುದು.

ಈ ಕರಡು ಮಸೂದೆಯು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಐಪಿಸಿ, ಸಿಆರ್‌ಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಕಾನೂನಿನ ವಿಭಾಗಗಳನ್ನು ತಿದ್ದುಪಡಿ ಮಾಡಲು ಪ್ರಯತ್ನಿಸುತ್ತದೆ.

ಮುಂಬೈನಲ್ಲಿ ನಡೆದ ಸಂಪುಟ ಸಭೆಯಲ್ಲಿ ಕರಡು ಮಸೂದೆಯನ್ನು ಅಂಗೀಕರಿಸಲಾಗಿದೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಇದನ್ನು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಗೃಹ ಸಚಿವ ಅನಿಲ್ ದೇಶ್‌ಮುಖ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎರಡು ದಿನಗಳ ಚಳಿಗಾಲದ ವಿಧಾನಸಭಾ ಅಧಿವೇಶನ ಮುಂಬೈನಲ್ಲಿ ಡಿಸೆಂಬರ್ 14 ರಿಂದ ಪ್ರಾರಂಭವಾಗುತ್ತದೆ.

ಇದನ್ನೂ ಓದಿ: ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

“ಶಕ್ತಿ ಕಾಯ್ದೆ” ಎಂದು ಕರೆಯಲ್ಪಡುವ ಈ ಮಸೂದೆ ವಿಧಾನಸಭೆಯ ಉಭಯ ಸದನಗಳಲ್ಲಿ ಚರ್ಚೆ ನಡೆದು ನಂತರ ಅನುಮೋದನೆ ಸಿಗಲಿದೆ ಎಂದು ಗೃಹ ಸಚಿವ ಅನಿಲ್ ದೇಶ್‌ಮುಖ್ ಹೇಳಿದರು. ಒಂದು ಪ್ರಕರಣವನ್ನು 15 ದಿನಗಳಲ್ಲಿ ತನಿಖೆ ನಡೆಸಿ, 30 ದಿನಗಳಲ್ಲಿ ವಿಚಾರಣೆಯನ್ನು ಸಂಪೂಣವಾಗಿ ಪೂರ್ಣಗೊಳಿಸಲು ಇದು ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.

ಉಭಯ ಸದನಗಳಲ್ಲಿ ಅನುಮೋದನೆ ಪಡೆದ ನಂತರ, ಮಸೂದೆಯನ್ನು ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಅಧ್ಯಕ್ಷರ ಒಪ್ಪಿಗೆಗಾಗಿ ಕಳುಹಿಸಲಾಗುವುದು ಎಂದು ದೇಶ್‌ಮುಖ್ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ಶಕ್ತಿ ಅಪರಾಧ ಕಾನೂನು (ಮಹಾರಾಷ್ಟ್ರ ತಿದ್ದುಪಡಿ) ಕಾಯ್ದೆ, 2020 ಮತ್ತು ಮಹಾರಾಷ್ಟ್ರ ಶಕ್ತಿ ಅಪರಾಧ ಕಾನೂನಿನ ಅನುಷ್ಠಾನಕ್ಕೆ ವಿಶೇಷ ನ್ಯಾಯಾಲಯ ಮತ್ತು ಕಾರ್ಯತಂತ್ರ ಎಂಬ ಎರಡು ಭಾಗಗಳಲ್ಲಿ ಶಾಸಕಾಂಗದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಹೇಳಿಕೆ ತಿಳಿಸಿದೆ.

ಹೊಸ ಕಾನೂನಿನ ನಿಬಂಧನೆಗಳು ಮಹಿಳೆಯರು ಮತ್ತು ಮಕ್ಕಳ ಮೇಲಿನ ಘೋರ ಲೈಂಗಿಕ ಅಪರಾಧಗಳನ್ನು ನಿಯಂತ್ರಿಸುವ ಗುರಿಯನ್ನು ಈ ಕಠಿಣ ಕಾನೂನು ಹೊಂದಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಅಪರಾಧಿಗಳಿಗೆ ಮರಣದಂಡನೆ ಮತ್ತು ಭಾರಿ ದಂಡ ಸೇರಿದಂತೆ ನಿಗದಿತ ಸಮಯದೊಳಗೆ, ಕಠಿಣ ಶಿಕ್ಷೆಯೊಳಗೆ ತನಿಖೆ ಮತ್ತು ವಿಚಾರಣೆಯನ್ನು ಪೂರ್ಣಗೊಳಿಸಲು ಇದು ಸಹಾಯಕವಾಗುತ್ತದೆ. ಕರಡು ಮಸೂದೆಯ ಪ್ರಕಾರ ಮಹಿಳೆಯರು ಮತ್ತು ಮಕ್ಕಳ ಮೇಲಿನ ಪ್ರಕರಣಗಳ ತನಿಖೆ ಮತ್ತು ವಿಚಾರಣೆಗೆ ವಿಶೇಷ ಪೊಲೀಸ್ ತಂಡಗಳು ಮತ್ತು ಪ್ರತ್ಯೇಕ ನ್ಯಾಯಾಲಯಗಳನ್ನು ರಚಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಅಪರಾಧಿಗಳು ತಪ್ಪಿತಸ್ಥರೆಂದು ಸಾಬೀತಾದರೆ, ಹತ್ತು ವರ್ಷಗಳಿಗಿಂತ ಹೆಚ್ಚಿನ ಅವಧಿವರೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಆದರೆ ಶಿಕ್ಷೆಯನ್ನು ಜೀವಿತಾವಧಿವರೆಗೆ  ವಿಸ್ತರಿಸಬಹುದು. ಕೆಲವು ಘೋರ, ವಿಕೃತ ಅಪರಾಧಗಳ ಪ್ರಕರಣಗಳಲ್ಲಿ ಮರಣದಂಡನೆಗೂ ವಿಸ್ತರಿಸಬಹುದು ಎಂದು ಕರಡಿನಲ್ಲಿ ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಸಿಡ್ ದಾಳಿಗೆ ಒಳಗಾದವರಿಗೆ ಪ್ಲಾಸ್ಟಿಕ್ ಸರ್ಜರಿ ಮತ್ತು ಮುಖದ ಸರ್ಜರಿಗಾಗಿ 10 ಲಕ್ಷ ಮೊತ್ತವನ್ನು, ಅಪರಾಧಿಗಳಿಂದ ದಂಡವಾಗಿ ಸ್ವೀಕರಿಸಿ ನೀಡಲಾಗುವುದು. ಜೊತೆಗೆ ಪ್ರಕರಣ ಕುರಿತು ಎಫ್‌ಐಆರ್‌ ದಾಖಲಾದ ದಿನಾಂಕದಿಂದ 15 ಕೆಲಸದ ದಿನಗಳ ಅವಧಿಯಲ್ಲಿ ತನಿಖೆ ಪೂರ್ಣಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ಶಕ್ತಿ ಕಾಯ್ದೆಯನ್ನು ಆಂಧ್ರಪ್ರದೇಶದ ದಿಶಾ ಕಾಯ್ದೆಯ ಮಾದರಿಯಲ್ಲಿ ರೂಪಿಸಲಾಗಿದ್ದು, ಹೈದರಾಬಾದ್‌ನಲ್ಲಿ ಪಶುವೈದ್ಯರ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದ ನಂತರ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ತಡೆಯಲು ಕಳೆದ ವರ್ಷ ದಿಶಾ ಕಾಯ್ದೆ ತರಲಾಯಿತು.


ಇದನ್ನೂ ಓದಿ: ಪ.ಬಂಗಾಳ: ಬಿಜೆಪಿ ನಾಯಕರ ಮೇಲೆ ಜಾಮೀನು ರಹಿತ ಪ್ರಕರಣದಲ್ಲಿ ಎಫ್‌ಐಆರ್ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...