Homeಮುಖಪುಟಮಹಾರಾಷ್ಟ್ರ: ಆಸಿಡ್‌ ದಾಳಿ ಆರೋಪಿಗಳಿಗೆ 10 ಲಕ್ಷ ರೂ ದಂಡ

ಮಹಾರಾಷ್ಟ್ರ: ಆಸಿಡ್‌ ದಾಳಿ ಆರೋಪಿಗಳಿಗೆ 10 ಲಕ್ಷ ರೂ ದಂಡ

ಮಹಿಳೆ, ಮಕ್ಕಳ ಮೇಲಿನ ಅಪರಾಧಕ್ಕೆ ಮರಣದಂಡನೆಯಂತಹ ಕಠಿಣ ಕ್ರಮ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಭೀಕರ ಅಪರಾಧಗಳನ್ನು ನಿಗ್ರಹಿಸುವ ಪ್ರಯತ್ನದಲ್ಲಿ, ರಾಜ್ಯ ಕ್ಯಾಬಿನೆಟ್ ಬುಧವಾರ ಶಕ್ತಿ ಕಾಯ್ದೆಯ ಕರಡು ಮಸೂದೆಗೆ ಅನುಮೋದನೆ ನೀಡಿದೆ. ಈ ಕಾಯ್ದೆಯ ಪ್ರಕಾರ ಅಪರಾಧಿಗಳಿಗೆ ಮರಣದಂಡನೆ, ಜೀವಾವಧಿ ಶಿಕ್ಷೆ ಮತ್ತು ಭಾರಿ ದಂಡ ಸೇರಿದಂತೆ ಕಠಿಣ ಶಿಕ್ಷೆಯನ್ನು ವಿಧಿಸಬಹುದು.

ಈ ಕರಡು ಮಸೂದೆಯು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಐಪಿಸಿ, ಸಿಆರ್‌ಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಕಾನೂನಿನ ವಿಭಾಗಗಳನ್ನು ತಿದ್ದುಪಡಿ ಮಾಡಲು ಪ್ರಯತ್ನಿಸುತ್ತದೆ.

ಮುಂಬೈನಲ್ಲಿ ನಡೆದ ಸಂಪುಟ ಸಭೆಯಲ್ಲಿ ಕರಡು ಮಸೂದೆಯನ್ನು ಅಂಗೀಕರಿಸಲಾಗಿದೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಇದನ್ನು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಗೃಹ ಸಚಿವ ಅನಿಲ್ ದೇಶ್‌ಮುಖ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎರಡು ದಿನಗಳ ಚಳಿಗಾಲದ ವಿಧಾನಸಭಾ ಅಧಿವೇಶನ ಮುಂಬೈನಲ್ಲಿ ಡಿಸೆಂಬರ್ 14 ರಿಂದ ಪ್ರಾರಂಭವಾಗುತ್ತದೆ.

ಇದನ್ನೂ ಓದಿ: ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

“ಶಕ್ತಿ ಕಾಯ್ದೆ” ಎಂದು ಕರೆಯಲ್ಪಡುವ ಈ ಮಸೂದೆ ವಿಧಾನಸಭೆಯ ಉಭಯ ಸದನಗಳಲ್ಲಿ ಚರ್ಚೆ ನಡೆದು ನಂತರ ಅನುಮೋದನೆ ಸಿಗಲಿದೆ ಎಂದು ಗೃಹ ಸಚಿವ ಅನಿಲ್ ದೇಶ್‌ಮುಖ್ ಹೇಳಿದರು. ಒಂದು ಪ್ರಕರಣವನ್ನು 15 ದಿನಗಳಲ್ಲಿ ತನಿಖೆ ನಡೆಸಿ, 30 ದಿನಗಳಲ್ಲಿ ವಿಚಾರಣೆಯನ್ನು ಸಂಪೂಣವಾಗಿ ಪೂರ್ಣಗೊಳಿಸಲು ಇದು ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.

ಉಭಯ ಸದನಗಳಲ್ಲಿ ಅನುಮೋದನೆ ಪಡೆದ ನಂತರ, ಮಸೂದೆಯನ್ನು ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಅಧ್ಯಕ್ಷರ ಒಪ್ಪಿಗೆಗಾಗಿ ಕಳುಹಿಸಲಾಗುವುದು ಎಂದು ದೇಶ್‌ಮುಖ್ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ಶಕ್ತಿ ಅಪರಾಧ ಕಾನೂನು (ಮಹಾರಾಷ್ಟ್ರ ತಿದ್ದುಪಡಿ) ಕಾಯ್ದೆ, 2020 ಮತ್ತು ಮಹಾರಾಷ್ಟ್ರ ಶಕ್ತಿ ಅಪರಾಧ ಕಾನೂನಿನ ಅನುಷ್ಠಾನಕ್ಕೆ ವಿಶೇಷ ನ್ಯಾಯಾಲಯ ಮತ್ತು ಕಾರ್ಯತಂತ್ರ ಎಂಬ ಎರಡು ಭಾಗಗಳಲ್ಲಿ ಶಾಸಕಾಂಗದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಹೇಳಿಕೆ ತಿಳಿಸಿದೆ.

ಹೊಸ ಕಾನೂನಿನ ನಿಬಂಧನೆಗಳು ಮಹಿಳೆಯರು ಮತ್ತು ಮಕ್ಕಳ ಮೇಲಿನ ಘೋರ ಲೈಂಗಿಕ ಅಪರಾಧಗಳನ್ನು ನಿಯಂತ್ರಿಸುವ ಗುರಿಯನ್ನು ಈ ಕಠಿಣ ಕಾನೂನು ಹೊಂದಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಅಪರಾಧಿಗಳಿಗೆ ಮರಣದಂಡನೆ ಮತ್ತು ಭಾರಿ ದಂಡ ಸೇರಿದಂತೆ ನಿಗದಿತ ಸಮಯದೊಳಗೆ, ಕಠಿಣ ಶಿಕ್ಷೆಯೊಳಗೆ ತನಿಖೆ ಮತ್ತು ವಿಚಾರಣೆಯನ್ನು ಪೂರ್ಣಗೊಳಿಸಲು ಇದು ಸಹಾಯಕವಾಗುತ್ತದೆ. ಕರಡು ಮಸೂದೆಯ ಪ್ರಕಾರ ಮಹಿಳೆಯರು ಮತ್ತು ಮಕ್ಕಳ ಮೇಲಿನ ಪ್ರಕರಣಗಳ ತನಿಖೆ ಮತ್ತು ವಿಚಾರಣೆಗೆ ವಿಶೇಷ ಪೊಲೀಸ್ ತಂಡಗಳು ಮತ್ತು ಪ್ರತ್ಯೇಕ ನ್ಯಾಯಾಲಯಗಳನ್ನು ರಚಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಅಪರಾಧಿಗಳು ತಪ್ಪಿತಸ್ಥರೆಂದು ಸಾಬೀತಾದರೆ, ಹತ್ತು ವರ್ಷಗಳಿಗಿಂತ ಹೆಚ್ಚಿನ ಅವಧಿವರೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಆದರೆ ಶಿಕ್ಷೆಯನ್ನು ಜೀವಿತಾವಧಿವರೆಗೆ  ವಿಸ್ತರಿಸಬಹುದು. ಕೆಲವು ಘೋರ, ವಿಕೃತ ಅಪರಾಧಗಳ ಪ್ರಕರಣಗಳಲ್ಲಿ ಮರಣದಂಡನೆಗೂ ವಿಸ್ತರಿಸಬಹುದು ಎಂದು ಕರಡಿನಲ್ಲಿ ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಸಿಡ್ ದಾಳಿಗೆ ಒಳಗಾದವರಿಗೆ ಪ್ಲಾಸ್ಟಿಕ್ ಸರ್ಜರಿ ಮತ್ತು ಮುಖದ ಸರ್ಜರಿಗಾಗಿ 10 ಲಕ್ಷ ಮೊತ್ತವನ್ನು, ಅಪರಾಧಿಗಳಿಂದ ದಂಡವಾಗಿ ಸ್ವೀಕರಿಸಿ ನೀಡಲಾಗುವುದು. ಜೊತೆಗೆ ಪ್ರಕರಣ ಕುರಿತು ಎಫ್‌ಐಆರ್‌ ದಾಖಲಾದ ದಿನಾಂಕದಿಂದ 15 ಕೆಲಸದ ದಿನಗಳ ಅವಧಿಯಲ್ಲಿ ತನಿಖೆ ಪೂರ್ಣಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ಶಕ್ತಿ ಕಾಯ್ದೆಯನ್ನು ಆಂಧ್ರಪ್ರದೇಶದ ದಿಶಾ ಕಾಯ್ದೆಯ ಮಾದರಿಯಲ್ಲಿ ರೂಪಿಸಲಾಗಿದ್ದು, ಹೈದರಾಬಾದ್‌ನಲ್ಲಿ ಪಶುವೈದ್ಯರ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದ ನಂತರ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ತಡೆಯಲು ಕಳೆದ ವರ್ಷ ದಿಶಾ ಕಾಯ್ದೆ ತರಲಾಯಿತು.


ಇದನ್ನೂ ಓದಿ: ಪ.ಬಂಗಾಳ: ಬಿಜೆಪಿ ನಾಯಕರ ಮೇಲೆ ಜಾಮೀನು ರಹಿತ ಪ್ರಕರಣದಲ್ಲಿ ಎಫ್‌ಐಆರ್ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...