Homeಮುಖಪುಟಮಹಾರಾಷ್ಟ್ರ: ಆಸಿಡ್‌ ದಾಳಿ ಆರೋಪಿಗಳಿಗೆ 10 ಲಕ್ಷ ರೂ ದಂಡ

ಮಹಾರಾಷ್ಟ್ರ: ಆಸಿಡ್‌ ದಾಳಿ ಆರೋಪಿಗಳಿಗೆ 10 ಲಕ್ಷ ರೂ ದಂಡ

ಮಹಿಳೆ, ಮಕ್ಕಳ ಮೇಲಿನ ಅಪರಾಧಕ್ಕೆ ಮರಣದಂಡನೆಯಂತಹ ಕಠಿಣ ಕ್ರಮ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಭೀಕರ ಅಪರಾಧಗಳನ್ನು ನಿಗ್ರಹಿಸುವ ಪ್ರಯತ್ನದಲ್ಲಿ, ರಾಜ್ಯ ಕ್ಯಾಬಿನೆಟ್ ಬುಧವಾರ ಶಕ್ತಿ ಕಾಯ್ದೆಯ ಕರಡು ಮಸೂದೆಗೆ ಅನುಮೋದನೆ ನೀಡಿದೆ. ಈ ಕಾಯ್ದೆಯ ಪ್ರಕಾರ ಅಪರಾಧಿಗಳಿಗೆ ಮರಣದಂಡನೆ, ಜೀವಾವಧಿ ಶಿಕ್ಷೆ ಮತ್ತು ಭಾರಿ ದಂಡ ಸೇರಿದಂತೆ ಕಠಿಣ ಶಿಕ್ಷೆಯನ್ನು ವಿಧಿಸಬಹುದು.

ಈ ಕರಡು ಮಸೂದೆಯು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಐಪಿಸಿ, ಸಿಆರ್‌ಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಕಾನೂನಿನ ವಿಭಾಗಗಳನ್ನು ತಿದ್ದುಪಡಿ ಮಾಡಲು ಪ್ರಯತ್ನಿಸುತ್ತದೆ.

ಮುಂಬೈನಲ್ಲಿ ನಡೆದ ಸಂಪುಟ ಸಭೆಯಲ್ಲಿ ಕರಡು ಮಸೂದೆಯನ್ನು ಅಂಗೀಕರಿಸಲಾಗಿದೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಇದನ್ನು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಗೃಹ ಸಚಿವ ಅನಿಲ್ ದೇಶ್‌ಮುಖ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎರಡು ದಿನಗಳ ಚಳಿಗಾಲದ ವಿಧಾನಸಭಾ ಅಧಿವೇಶನ ಮುಂಬೈನಲ್ಲಿ ಡಿಸೆಂಬರ್ 14 ರಿಂದ ಪ್ರಾರಂಭವಾಗುತ್ತದೆ.

ಇದನ್ನೂ ಓದಿ: ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

“ಶಕ್ತಿ ಕಾಯ್ದೆ” ಎಂದು ಕರೆಯಲ್ಪಡುವ ಈ ಮಸೂದೆ ವಿಧಾನಸಭೆಯ ಉಭಯ ಸದನಗಳಲ್ಲಿ ಚರ್ಚೆ ನಡೆದು ನಂತರ ಅನುಮೋದನೆ ಸಿಗಲಿದೆ ಎಂದು ಗೃಹ ಸಚಿವ ಅನಿಲ್ ದೇಶ್‌ಮುಖ್ ಹೇಳಿದರು. ಒಂದು ಪ್ರಕರಣವನ್ನು 15 ದಿನಗಳಲ್ಲಿ ತನಿಖೆ ನಡೆಸಿ, 30 ದಿನಗಳಲ್ಲಿ ವಿಚಾರಣೆಯನ್ನು ಸಂಪೂಣವಾಗಿ ಪೂರ್ಣಗೊಳಿಸಲು ಇದು ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.

ಉಭಯ ಸದನಗಳಲ್ಲಿ ಅನುಮೋದನೆ ಪಡೆದ ನಂತರ, ಮಸೂದೆಯನ್ನು ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಅಧ್ಯಕ್ಷರ ಒಪ್ಪಿಗೆಗಾಗಿ ಕಳುಹಿಸಲಾಗುವುದು ಎಂದು ದೇಶ್‌ಮುಖ್ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ಶಕ್ತಿ ಅಪರಾಧ ಕಾನೂನು (ಮಹಾರಾಷ್ಟ್ರ ತಿದ್ದುಪಡಿ) ಕಾಯ್ದೆ, 2020 ಮತ್ತು ಮಹಾರಾಷ್ಟ್ರ ಶಕ್ತಿ ಅಪರಾಧ ಕಾನೂನಿನ ಅನುಷ್ಠಾನಕ್ಕೆ ವಿಶೇಷ ನ್ಯಾಯಾಲಯ ಮತ್ತು ಕಾರ್ಯತಂತ್ರ ಎಂಬ ಎರಡು ಭಾಗಗಳಲ್ಲಿ ಶಾಸಕಾಂಗದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಹೇಳಿಕೆ ತಿಳಿಸಿದೆ.

ಹೊಸ ಕಾನೂನಿನ ನಿಬಂಧನೆಗಳು ಮಹಿಳೆಯರು ಮತ್ತು ಮಕ್ಕಳ ಮೇಲಿನ ಘೋರ ಲೈಂಗಿಕ ಅಪರಾಧಗಳನ್ನು ನಿಯಂತ್ರಿಸುವ ಗುರಿಯನ್ನು ಈ ಕಠಿಣ ಕಾನೂನು ಹೊಂದಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಅಪರಾಧಿಗಳಿಗೆ ಮರಣದಂಡನೆ ಮತ್ತು ಭಾರಿ ದಂಡ ಸೇರಿದಂತೆ ನಿಗದಿತ ಸಮಯದೊಳಗೆ, ಕಠಿಣ ಶಿಕ್ಷೆಯೊಳಗೆ ತನಿಖೆ ಮತ್ತು ವಿಚಾರಣೆಯನ್ನು ಪೂರ್ಣಗೊಳಿಸಲು ಇದು ಸಹಾಯಕವಾಗುತ್ತದೆ. ಕರಡು ಮಸೂದೆಯ ಪ್ರಕಾರ ಮಹಿಳೆಯರು ಮತ್ತು ಮಕ್ಕಳ ಮೇಲಿನ ಪ್ರಕರಣಗಳ ತನಿಖೆ ಮತ್ತು ವಿಚಾರಣೆಗೆ ವಿಶೇಷ ಪೊಲೀಸ್ ತಂಡಗಳು ಮತ್ತು ಪ್ರತ್ಯೇಕ ನ್ಯಾಯಾಲಯಗಳನ್ನು ರಚಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಅಪರಾಧಿಗಳು ತಪ್ಪಿತಸ್ಥರೆಂದು ಸಾಬೀತಾದರೆ, ಹತ್ತು ವರ್ಷಗಳಿಗಿಂತ ಹೆಚ್ಚಿನ ಅವಧಿವರೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಆದರೆ ಶಿಕ್ಷೆಯನ್ನು ಜೀವಿತಾವಧಿವರೆಗೆ  ವಿಸ್ತರಿಸಬಹುದು. ಕೆಲವು ಘೋರ, ವಿಕೃತ ಅಪರಾಧಗಳ ಪ್ರಕರಣಗಳಲ್ಲಿ ಮರಣದಂಡನೆಗೂ ವಿಸ್ತರಿಸಬಹುದು ಎಂದು ಕರಡಿನಲ್ಲಿ ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಸಿಡ್ ದಾಳಿಗೆ ಒಳಗಾದವರಿಗೆ ಪ್ಲಾಸ್ಟಿಕ್ ಸರ್ಜರಿ ಮತ್ತು ಮುಖದ ಸರ್ಜರಿಗಾಗಿ 10 ಲಕ್ಷ ಮೊತ್ತವನ್ನು, ಅಪರಾಧಿಗಳಿಂದ ದಂಡವಾಗಿ ಸ್ವೀಕರಿಸಿ ನೀಡಲಾಗುವುದು. ಜೊತೆಗೆ ಪ್ರಕರಣ ಕುರಿತು ಎಫ್‌ಐಆರ್‌ ದಾಖಲಾದ ದಿನಾಂಕದಿಂದ 15 ಕೆಲಸದ ದಿನಗಳ ಅವಧಿಯಲ್ಲಿ ತನಿಖೆ ಪೂರ್ಣಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ಶಕ್ತಿ ಕಾಯ್ದೆಯನ್ನು ಆಂಧ್ರಪ್ರದೇಶದ ದಿಶಾ ಕಾಯ್ದೆಯ ಮಾದರಿಯಲ್ಲಿ ರೂಪಿಸಲಾಗಿದ್ದು, ಹೈದರಾಬಾದ್‌ನಲ್ಲಿ ಪಶುವೈದ್ಯರ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದ ನಂತರ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ತಡೆಯಲು ಕಳೆದ ವರ್ಷ ದಿಶಾ ಕಾಯ್ದೆ ತರಲಾಯಿತು.


ಇದನ್ನೂ ಓದಿ: ಪ.ಬಂಗಾಳ: ಬಿಜೆಪಿ ನಾಯಕರ ಮೇಲೆ ಜಾಮೀನು ರಹಿತ ಪ್ರಕರಣದಲ್ಲಿ ಎಫ್‌ಐಆರ್ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...