Homeಮುಖಪುಟಮಹಾರಾಷ್ಟ್ರ: ಆಸಿಡ್‌ ದಾಳಿ ಆರೋಪಿಗಳಿಗೆ 10 ಲಕ್ಷ ರೂ ದಂಡ

ಮಹಾರಾಷ್ಟ್ರ: ಆಸಿಡ್‌ ದಾಳಿ ಆರೋಪಿಗಳಿಗೆ 10 ಲಕ್ಷ ರೂ ದಂಡ

ಮಹಿಳೆ, ಮಕ್ಕಳ ಮೇಲಿನ ಅಪರಾಧಕ್ಕೆ ಮರಣದಂಡನೆಯಂತಹ ಕಠಿಣ ಕ್ರಮ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಭೀಕರ ಅಪರಾಧಗಳನ್ನು ನಿಗ್ರಹಿಸುವ ಪ್ರಯತ್ನದಲ್ಲಿ, ರಾಜ್ಯ ಕ್ಯಾಬಿನೆಟ್ ಬುಧವಾರ ಶಕ್ತಿ ಕಾಯ್ದೆಯ ಕರಡು ಮಸೂದೆಗೆ ಅನುಮೋದನೆ ನೀಡಿದೆ. ಈ ಕಾಯ್ದೆಯ ಪ್ರಕಾರ ಅಪರಾಧಿಗಳಿಗೆ ಮರಣದಂಡನೆ, ಜೀವಾವಧಿ ಶಿಕ್ಷೆ ಮತ್ತು ಭಾರಿ ದಂಡ ಸೇರಿದಂತೆ ಕಠಿಣ ಶಿಕ್ಷೆಯನ್ನು ವಿಧಿಸಬಹುದು.

ಈ ಕರಡು ಮಸೂದೆಯು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಐಪಿಸಿ, ಸಿಆರ್‌ಪಿಸಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಕಾನೂನಿನ ವಿಭಾಗಗಳನ್ನು ತಿದ್ದುಪಡಿ ಮಾಡಲು ಪ್ರಯತ್ನಿಸುತ್ತದೆ.

ಮುಂಬೈನಲ್ಲಿ ನಡೆದ ಸಂಪುಟ ಸಭೆಯಲ್ಲಿ ಕರಡು ಮಸೂದೆಯನ್ನು ಅಂಗೀಕರಿಸಲಾಗಿದೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಇದನ್ನು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಗೃಹ ಸಚಿವ ಅನಿಲ್ ದೇಶ್‌ಮುಖ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎರಡು ದಿನಗಳ ಚಳಿಗಾಲದ ವಿಧಾನಸಭಾ ಅಧಿವೇಶನ ಮುಂಬೈನಲ್ಲಿ ಡಿಸೆಂಬರ್ 14 ರಿಂದ ಪ್ರಾರಂಭವಾಗುತ್ತದೆ.

ಇದನ್ನೂ ಓದಿ: ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

“ಶಕ್ತಿ ಕಾಯ್ದೆ” ಎಂದು ಕರೆಯಲ್ಪಡುವ ಈ ಮಸೂದೆ ವಿಧಾನಸಭೆಯ ಉಭಯ ಸದನಗಳಲ್ಲಿ ಚರ್ಚೆ ನಡೆದು ನಂತರ ಅನುಮೋದನೆ ಸಿಗಲಿದೆ ಎಂದು ಗೃಹ ಸಚಿವ ಅನಿಲ್ ದೇಶ್‌ಮುಖ್ ಹೇಳಿದರು. ಒಂದು ಪ್ರಕರಣವನ್ನು 15 ದಿನಗಳಲ್ಲಿ ತನಿಖೆ ನಡೆಸಿ, 30 ದಿನಗಳಲ್ಲಿ ವಿಚಾರಣೆಯನ್ನು ಸಂಪೂಣವಾಗಿ ಪೂರ್ಣಗೊಳಿಸಲು ಇದು ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.

ಉಭಯ ಸದನಗಳಲ್ಲಿ ಅನುಮೋದನೆ ಪಡೆದ ನಂತರ, ಮಸೂದೆಯನ್ನು ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಅಧ್ಯಕ್ಷರ ಒಪ್ಪಿಗೆಗಾಗಿ ಕಳುಹಿಸಲಾಗುವುದು ಎಂದು ದೇಶ್‌ಮುಖ್ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ಶಕ್ತಿ ಅಪರಾಧ ಕಾನೂನು (ಮಹಾರಾಷ್ಟ್ರ ತಿದ್ದುಪಡಿ) ಕಾಯ್ದೆ, 2020 ಮತ್ತು ಮಹಾರಾಷ್ಟ್ರ ಶಕ್ತಿ ಅಪರಾಧ ಕಾನೂನಿನ ಅನುಷ್ಠಾನಕ್ಕೆ ವಿಶೇಷ ನ್ಯಾಯಾಲಯ ಮತ್ತು ಕಾರ್ಯತಂತ್ರ ಎಂಬ ಎರಡು ಭಾಗಗಳಲ್ಲಿ ಶಾಸಕಾಂಗದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಹೇಳಿಕೆ ತಿಳಿಸಿದೆ.

ಹೊಸ ಕಾನೂನಿನ ನಿಬಂಧನೆಗಳು ಮಹಿಳೆಯರು ಮತ್ತು ಮಕ್ಕಳ ಮೇಲಿನ ಘೋರ ಲೈಂಗಿಕ ಅಪರಾಧಗಳನ್ನು ನಿಯಂತ್ರಿಸುವ ಗುರಿಯನ್ನು ಈ ಕಠಿಣ ಕಾನೂನು ಹೊಂದಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಅಪರಾಧಿಗಳಿಗೆ ಮರಣದಂಡನೆ ಮತ್ತು ಭಾರಿ ದಂಡ ಸೇರಿದಂತೆ ನಿಗದಿತ ಸಮಯದೊಳಗೆ, ಕಠಿಣ ಶಿಕ್ಷೆಯೊಳಗೆ ತನಿಖೆ ಮತ್ತು ವಿಚಾರಣೆಯನ್ನು ಪೂರ್ಣಗೊಳಿಸಲು ಇದು ಸಹಾಯಕವಾಗುತ್ತದೆ. ಕರಡು ಮಸೂದೆಯ ಪ್ರಕಾರ ಮಹಿಳೆಯರು ಮತ್ತು ಮಕ್ಕಳ ಮೇಲಿನ ಪ್ರಕರಣಗಳ ತನಿಖೆ ಮತ್ತು ವಿಚಾರಣೆಗೆ ವಿಶೇಷ ಪೊಲೀಸ್ ತಂಡಗಳು ಮತ್ತು ಪ್ರತ್ಯೇಕ ನ್ಯಾಯಾಲಯಗಳನ್ನು ರಚಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಅಪರಾಧಿಗಳು ತಪ್ಪಿತಸ್ಥರೆಂದು ಸಾಬೀತಾದರೆ, ಹತ್ತು ವರ್ಷಗಳಿಗಿಂತ ಹೆಚ್ಚಿನ ಅವಧಿವರೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಆದರೆ ಶಿಕ್ಷೆಯನ್ನು ಜೀವಿತಾವಧಿವರೆಗೆ  ವಿಸ್ತರಿಸಬಹುದು. ಕೆಲವು ಘೋರ, ವಿಕೃತ ಅಪರಾಧಗಳ ಪ್ರಕರಣಗಳಲ್ಲಿ ಮರಣದಂಡನೆಗೂ ವಿಸ್ತರಿಸಬಹುದು ಎಂದು ಕರಡಿನಲ್ಲಿ ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಸಿಡ್ ದಾಳಿಗೆ ಒಳಗಾದವರಿಗೆ ಪ್ಲಾಸ್ಟಿಕ್ ಸರ್ಜರಿ ಮತ್ತು ಮುಖದ ಸರ್ಜರಿಗಾಗಿ 10 ಲಕ್ಷ ಮೊತ್ತವನ್ನು, ಅಪರಾಧಿಗಳಿಂದ ದಂಡವಾಗಿ ಸ್ವೀಕರಿಸಿ ನೀಡಲಾಗುವುದು. ಜೊತೆಗೆ ಪ್ರಕರಣ ಕುರಿತು ಎಫ್‌ಐಆರ್‌ ದಾಖಲಾದ ದಿನಾಂಕದಿಂದ 15 ಕೆಲಸದ ದಿನಗಳ ಅವಧಿಯಲ್ಲಿ ತನಿಖೆ ಪೂರ್ಣಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.

ಶಕ್ತಿ ಕಾಯ್ದೆಯನ್ನು ಆಂಧ್ರಪ್ರದೇಶದ ದಿಶಾ ಕಾಯ್ದೆಯ ಮಾದರಿಯಲ್ಲಿ ರೂಪಿಸಲಾಗಿದ್ದು, ಹೈದರಾಬಾದ್‌ನಲ್ಲಿ ಪಶುವೈದ್ಯರ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದ ನಂತರ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ತಡೆಯಲು ಕಳೆದ ವರ್ಷ ದಿಶಾ ಕಾಯ್ದೆ ತರಲಾಯಿತು.


ಇದನ್ನೂ ಓದಿ: ಪ.ಬಂಗಾಳ: ಬಿಜೆಪಿ ನಾಯಕರ ಮೇಲೆ ಜಾಮೀನು ರಹಿತ ಪ್ರಕರಣದಲ್ಲಿ ಎಫ್‌ಐಆರ್ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...