Homeಕರ್ನಾಟಕಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

- Advertisement -
- Advertisement -

ಮಂಡ್ಯ ತಾಲ್ಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ‘ತನ್ನ ಅಂತ್ಯಕ್ರಿಯೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ನಟ ಯಶ್‌ ಬರಬೇಕು’ ಎಂದು ಆತ್ಮಹತ್ಯೆ ನೋಟ್‌ ಬರೆದಿಟ್ಟು ಸಾವನಪ್ಪಿದ್ದ 25 ವರ್ಷದ ಯುವಕನ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.

ಯಾರ ಅಭಿಮಾನಿಯೇ ಆಗಲಿ, ಯಾವ ಧರ್ಮ – ಸಿದ್ಧಾಂತವೇ ಇರಲಿ, ಆತ್ಮಹತ್ಯೆ ಮಾಡಿಕೊಳ್ಳುವಂತಹ ದುಡುಕಿನ ನಿರ್ಧಾರ ಬೇಡ. ಪ್ರತೀ ಜೀವವೂ ಅಮೂಲ್ಯ. ಕತ್ತಲು ಕಳೆದ ನಂತರ ಬೆಳಕು ಬಂದಂತೆ, ಕಷ್ಟಗಳು ದೂರಾಗಲೇಬೇಕು. ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ ಎಂದು ನಂತರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ‘ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ಆತ್ನಹತ್ಯೆಗೆ ಶರಣಾದ ಕೃಷ್ಣ ಎಂಬ ಯುವಕನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದೆ. ಆತ್ಮಹತ್ಯೆಗೂ ಮುನ್ನ ಹುಡುಗ ತನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತ ಬರೆದಿಟ್ಟಿದ್ದ, ಆ ಕಾರಣ ಅತ್ಯಂತ ದುಃಖದಿಂದ ಆತನ ಕೊನೆ ಆಸೆ ಈಡೇರಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ಸಮಸ್ಯೆಗಳಿಗೆ ಸಾವು ಎಂದಿಗೂ ಪರಿಹಾರವಲ್ಲ. ಸಮಸ್ಯೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಎಂದರೆ ತಮ್ಮ ಸಮಸ್ಯೆಯನ್ನು ಬೇರೊಬ್ಬರ ಹೆಗಲಿಗೆ ವರ್ಗಾಯಿಸಿದಂತೆ. ಸಾವಿನ ನಂತರವೂ ಸಮಸ್ಯೆ ಹಾಗೆಯೇ ಉಳಿಯುತ್ತೆ, ಆದರೆ ಅಮೂಲ್ಯ ಬದುಕೊಂದು ನಷ್ಟವಾಗುತ್ತೆ. ಕಷ್ಟಗಳು ಬಂದಾಗ ಎದುರಿಸುವ ಗಟ್ಟಿತನ ಪ್ರತಿಯೊಬ್ಬರಲ್ಲೂ ಬರಬೇಕು. ನೆನಪಿರಲಿ, ಸಮಸ್ಯೆಗಳು ತಾತ್ಕಾಲಿಕ, ಆದರೆ ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು ಶಾಶ್ವತ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಸಮಸ್ಯೆಯನ್ನು ಮೆಟ್ಟಿನಿಂತು ಬದುಕು ಕಟ್ಟಿಕೊಂಡಾಗ ಇವನು ನನ್ನ ಅಭಿಮಾನಿ ಎಂದು ಹೇಳಲು ನಮಗೂ ಹೆಮ್ಮೆಯಾಗುತ್ತೆ. ಅಭಿಮಾನಿಯೊಬ್ಬನ ಸಾವು ಎಷ್ಟು ನೋವು ಕೊಡುತ್ತದೋ, ಆತ್ಮಹತ್ಯೆ ಅದರ ಎರಡು ಪಟ್ಟು ಕಾಡುತ್ತದೆ ಎಂದು ಅವರು ವಿ‍ಷಾಧ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್‌ ಬಂಕ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ ಎಂಬಾತ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದನು. ತನ್ನ ಸಾವಿಗೂ ಮುನ್ನ ಆತ್ಮಹತ್ಯೆ ನೋಟ್‌ ಬರೆದಿಟ್ಟಿದ್ದು,  ನನ್ನನ್ನ ಎಲ್ಲರೂ ದಯವಿಟ್ಟು ಕ್ಷಮಿಸಿ. ನಿಮಗೆಲ್ಲಾ ತುಂಬಾ ನೋವು ಕೊಟ್ಟಿದ್ದೇನೆ. ನನ್ನಿಂದ ಅಮ್ಮ-ಅಪ್ಪ-ಸ್ನೇಹಿತರಿರೊಂದಿಗೆ ಉತ್ತಮನಾಗಿ ಇರಲು ಸಾಧ್ಯವಾಗಲಿಲ್ಲ. ತನ್ನ ಪ್ರೇಯಸಿಯೊಂದಿಗೂ ಬದುಕಲು ಆಗಲಿಲ್ಲ. ಹಾಗಾಗಿ ಎಲ್ಲರಿಂದಲೂ ದೂವಾಗುತ್ತಿದ್ದೇನೆ ಎಂದು ಬರೆದಿದ್ದ.

ಅಲ್ಲದೆ, ತನ್ನ ಕೊನೆಯ ಅಸೆಯನ್ನೂ ಬರೆದಿರುವ ಕೃಷ್ಣ, ನಾನು ಸಿದ್ದರಾಮಯ್ಯ ಹಾಗೂ ಯಶ್‌ ಅವರ ಅಪ್ಪಟ ಅಭಿಮಾನಿ. ನನ್ನ ಅಂತ್ಯಕ್ರಿಯೆಗೆ ಅವರಿಬ್ಬರೂ ಬರಬೇಕು. ದಯವಿಟ್ಟು ನನ್ನ ಕೊನೆ ಆಸೆ ಈಡೇರಿಸಿ‌ ಎಂದು ಬರೆದಿದ್ದನು.


ಇದನ್ನೂ ಓದಿ: ಧರ್ಮೇಗೌಡರ ಸಾವಿನಿಂದ ತೆರವಾಗಿದ್ದ ವಿಧಾನ ಪರಿಷತ್‌‌ ಸ್ಥಾನಕ್ಕೆ ಚುನಾವಣೆ ನಿಗದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...