Homeಕರ್ನಾಟಕಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

- Advertisement -
- Advertisement -

ಮಂಡ್ಯ ತಾಲ್ಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ‘ತನ್ನ ಅಂತ್ಯಕ್ರಿಯೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ನಟ ಯಶ್‌ ಬರಬೇಕು’ ಎಂದು ಆತ್ಮಹತ್ಯೆ ನೋಟ್‌ ಬರೆದಿಟ್ಟು ಸಾವನಪ್ಪಿದ್ದ 25 ವರ್ಷದ ಯುವಕನ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.

ಯಾರ ಅಭಿಮಾನಿಯೇ ಆಗಲಿ, ಯಾವ ಧರ್ಮ – ಸಿದ್ಧಾಂತವೇ ಇರಲಿ, ಆತ್ಮಹತ್ಯೆ ಮಾಡಿಕೊಳ್ಳುವಂತಹ ದುಡುಕಿನ ನಿರ್ಧಾರ ಬೇಡ. ಪ್ರತೀ ಜೀವವೂ ಅಮೂಲ್ಯ. ಕತ್ತಲು ಕಳೆದ ನಂತರ ಬೆಳಕು ಬಂದಂತೆ, ಕಷ್ಟಗಳು ದೂರಾಗಲೇಬೇಕು. ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ ಎಂದು ನಂತರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ‘ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ಆತ್ನಹತ್ಯೆಗೆ ಶರಣಾದ ಕೃಷ್ಣ ಎಂಬ ಯುವಕನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದೆ. ಆತ್ಮಹತ್ಯೆಗೂ ಮುನ್ನ ಹುಡುಗ ತನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತ ಬರೆದಿಟ್ಟಿದ್ದ, ಆ ಕಾರಣ ಅತ್ಯಂತ ದುಃಖದಿಂದ ಆತನ ಕೊನೆ ಆಸೆ ಈಡೇರಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ಸಮಸ್ಯೆಗಳಿಗೆ ಸಾವು ಎಂದಿಗೂ ಪರಿಹಾರವಲ್ಲ. ಸಮಸ್ಯೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಎಂದರೆ ತಮ್ಮ ಸಮಸ್ಯೆಯನ್ನು ಬೇರೊಬ್ಬರ ಹೆಗಲಿಗೆ ವರ್ಗಾಯಿಸಿದಂತೆ. ಸಾವಿನ ನಂತರವೂ ಸಮಸ್ಯೆ ಹಾಗೆಯೇ ಉಳಿಯುತ್ತೆ, ಆದರೆ ಅಮೂಲ್ಯ ಬದುಕೊಂದು ನಷ್ಟವಾಗುತ್ತೆ. ಕಷ್ಟಗಳು ಬಂದಾಗ ಎದುರಿಸುವ ಗಟ್ಟಿತನ ಪ್ರತಿಯೊಬ್ಬರಲ್ಲೂ ಬರಬೇಕು. ನೆನಪಿರಲಿ, ಸಮಸ್ಯೆಗಳು ತಾತ್ಕಾಲಿಕ, ಆದರೆ ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು ಶಾಶ್ವತ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಸಮಸ್ಯೆಯನ್ನು ಮೆಟ್ಟಿನಿಂತು ಬದುಕು ಕಟ್ಟಿಕೊಂಡಾಗ ಇವನು ನನ್ನ ಅಭಿಮಾನಿ ಎಂದು ಹೇಳಲು ನಮಗೂ ಹೆಮ್ಮೆಯಾಗುತ್ತೆ. ಅಭಿಮಾನಿಯೊಬ್ಬನ ಸಾವು ಎಷ್ಟು ನೋವು ಕೊಡುತ್ತದೋ, ಆತ್ಮಹತ್ಯೆ ಅದರ ಎರಡು ಪಟ್ಟು ಕಾಡುತ್ತದೆ ಎಂದು ಅವರು ವಿ‍ಷಾಧ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್‌ ಬಂಕ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ ಎಂಬಾತ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದನು. ತನ್ನ ಸಾವಿಗೂ ಮುನ್ನ ಆತ್ಮಹತ್ಯೆ ನೋಟ್‌ ಬರೆದಿಟ್ಟಿದ್ದು,  ನನ್ನನ್ನ ಎಲ್ಲರೂ ದಯವಿಟ್ಟು ಕ್ಷಮಿಸಿ. ನಿಮಗೆಲ್ಲಾ ತುಂಬಾ ನೋವು ಕೊಟ್ಟಿದ್ದೇನೆ. ನನ್ನಿಂದ ಅಮ್ಮ-ಅಪ್ಪ-ಸ್ನೇಹಿತರಿರೊಂದಿಗೆ ಉತ್ತಮನಾಗಿ ಇರಲು ಸಾಧ್ಯವಾಗಲಿಲ್ಲ. ತನ್ನ ಪ್ರೇಯಸಿಯೊಂದಿಗೂ ಬದುಕಲು ಆಗಲಿಲ್ಲ. ಹಾಗಾಗಿ ಎಲ್ಲರಿಂದಲೂ ದೂವಾಗುತ್ತಿದ್ದೇನೆ ಎಂದು ಬರೆದಿದ್ದ.

ಅಲ್ಲದೆ, ತನ್ನ ಕೊನೆಯ ಅಸೆಯನ್ನೂ ಬರೆದಿರುವ ಕೃಷ್ಣ, ನಾನು ಸಿದ್ದರಾಮಯ್ಯ ಹಾಗೂ ಯಶ್‌ ಅವರ ಅಪ್ಪಟ ಅಭಿಮಾನಿ. ನನ್ನ ಅಂತ್ಯಕ್ರಿಯೆಗೆ ಅವರಿಬ್ಬರೂ ಬರಬೇಕು. ದಯವಿಟ್ಟು ನನ್ನ ಕೊನೆ ಆಸೆ ಈಡೇರಿಸಿ‌ ಎಂದು ಬರೆದಿದ್ದನು.


ಇದನ್ನೂ ಓದಿ: ಧರ್ಮೇಗೌಡರ ಸಾವಿನಿಂದ ತೆರವಾಗಿದ್ದ ವಿಧಾನ ಪರಿಷತ್‌‌ ಸ್ಥಾನಕ್ಕೆ ಚುನಾವಣೆ ನಿಗದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...