Homeಕರ್ನಾಟಕಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿ

- Advertisement -
- Advertisement -

ಮಂಡ್ಯ ತಾಲ್ಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ‘ತನ್ನ ಅಂತ್ಯಕ್ರಿಯೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ನಟ ಯಶ್‌ ಬರಬೇಕು’ ಎಂದು ಆತ್ಮಹತ್ಯೆ ನೋಟ್‌ ಬರೆದಿಟ್ಟು ಸಾವನಪ್ಪಿದ್ದ 25 ವರ್ಷದ ಯುವಕನ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.

ಯಾರ ಅಭಿಮಾನಿಯೇ ಆಗಲಿ, ಯಾವ ಧರ್ಮ – ಸಿದ್ಧಾಂತವೇ ಇರಲಿ, ಆತ್ಮಹತ್ಯೆ ಮಾಡಿಕೊಳ್ಳುವಂತಹ ದುಡುಕಿನ ನಿರ್ಧಾರ ಬೇಡ. ಪ್ರತೀ ಜೀವವೂ ಅಮೂಲ್ಯ. ಕತ್ತಲು ಕಳೆದ ನಂತರ ಬೆಳಕು ಬಂದಂತೆ, ಕಷ್ಟಗಳು ದೂರಾಗಲೇಬೇಕು. ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ ಎಂದು ನಂತರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ‘ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ಆತ್ನಹತ್ಯೆಗೆ ಶರಣಾದ ಕೃಷ್ಣ ಎಂಬ ಯುವಕನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದೆ. ಆತ್ಮಹತ್ಯೆಗೂ ಮುನ್ನ ಹುಡುಗ ತನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತ ಬರೆದಿಟ್ಟಿದ್ದ, ಆ ಕಾರಣ ಅತ್ಯಂತ ದುಃಖದಿಂದ ಆತನ ಕೊನೆ ಆಸೆ ಈಡೇರಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ಸಮಸ್ಯೆಗಳಿಗೆ ಸಾವು ಎಂದಿಗೂ ಪರಿಹಾರವಲ್ಲ. ಸಮಸ್ಯೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಎಂದರೆ ತಮ್ಮ ಸಮಸ್ಯೆಯನ್ನು ಬೇರೊಬ್ಬರ ಹೆಗಲಿಗೆ ವರ್ಗಾಯಿಸಿದಂತೆ. ಸಾವಿನ ನಂತರವೂ ಸಮಸ್ಯೆ ಹಾಗೆಯೇ ಉಳಿಯುತ್ತೆ, ಆದರೆ ಅಮೂಲ್ಯ ಬದುಕೊಂದು ನಷ್ಟವಾಗುತ್ತೆ. ಕಷ್ಟಗಳು ಬಂದಾಗ ಎದುರಿಸುವ ಗಟ್ಟಿತನ ಪ್ರತಿಯೊಬ್ಬರಲ್ಲೂ ಬರಬೇಕು. ನೆನಪಿರಲಿ, ಸಮಸ್ಯೆಗಳು ತಾತ್ಕಾಲಿಕ, ಆದರೆ ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು ಶಾಶ್ವತ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಸಮಸ್ಯೆಯನ್ನು ಮೆಟ್ಟಿನಿಂತು ಬದುಕು ಕಟ್ಟಿಕೊಂಡಾಗ ಇವನು ನನ್ನ ಅಭಿಮಾನಿ ಎಂದು ಹೇಳಲು ನಮಗೂ ಹೆಮ್ಮೆಯಾಗುತ್ತೆ. ಅಭಿಮಾನಿಯೊಬ್ಬನ ಸಾವು ಎಷ್ಟು ನೋವು ಕೊಡುತ್ತದೋ, ಆತ್ಮಹತ್ಯೆ ಅದರ ಎರಡು ಪಟ್ಟು ಕಾಡುತ್ತದೆ ಎಂದು ಅವರು ವಿ‍ಷಾಧ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್‌ ಬಂಕ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ ಎಂಬಾತ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದನು. ತನ್ನ ಸಾವಿಗೂ ಮುನ್ನ ಆತ್ಮಹತ್ಯೆ ನೋಟ್‌ ಬರೆದಿಟ್ಟಿದ್ದು,  ನನ್ನನ್ನ ಎಲ್ಲರೂ ದಯವಿಟ್ಟು ಕ್ಷಮಿಸಿ. ನಿಮಗೆಲ್ಲಾ ತುಂಬಾ ನೋವು ಕೊಟ್ಟಿದ್ದೇನೆ. ನನ್ನಿಂದ ಅಮ್ಮ-ಅಪ್ಪ-ಸ್ನೇಹಿತರಿರೊಂದಿಗೆ ಉತ್ತಮನಾಗಿ ಇರಲು ಸಾಧ್ಯವಾಗಲಿಲ್ಲ. ತನ್ನ ಪ್ರೇಯಸಿಯೊಂದಿಗೂ ಬದುಕಲು ಆಗಲಿಲ್ಲ. ಹಾಗಾಗಿ ಎಲ್ಲರಿಂದಲೂ ದೂವಾಗುತ್ತಿದ್ದೇನೆ ಎಂದು ಬರೆದಿದ್ದ.

ಅಲ್ಲದೆ, ತನ್ನ ಕೊನೆಯ ಅಸೆಯನ್ನೂ ಬರೆದಿರುವ ಕೃಷ್ಣ, ನಾನು ಸಿದ್ದರಾಮಯ್ಯ ಹಾಗೂ ಯಶ್‌ ಅವರ ಅಪ್ಪಟ ಅಭಿಮಾನಿ. ನನ್ನ ಅಂತ್ಯಕ್ರಿಯೆಗೆ ಅವರಿಬ್ಬರೂ ಬರಬೇಕು. ದಯವಿಟ್ಟು ನನ್ನ ಕೊನೆ ಆಸೆ ಈಡೇರಿಸಿ‌ ಎಂದು ಬರೆದಿದ್ದನು.


ಇದನ್ನೂ ಓದಿ: ಧರ್ಮೇಗೌಡರ ಸಾವಿನಿಂದ ತೆರವಾಗಿದ್ದ ವಿಧಾನ ಪರಿಷತ್‌‌ ಸ್ಥಾನಕ್ಕೆ ಚುನಾವಣೆ ನಿಗದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...