Homeಕರ್ನಾಟಕಬೆಂಗಳೂರು ಪೊಲೀಸರ ವಶದಲ್ಲಿದ್ದ ದಲಿತ ಯುವಕನ ಸಾವು - ಲಾಕಪ್ ಡೆತ್ ಆರೋಪ

ಬೆಂಗಳೂರು ಪೊಲೀಸರ ವಶದಲ್ಲಿದ್ದ ದಲಿತ ಯುವಕನ ಸಾವು – ಲಾಕಪ್ ಡೆತ್ ಆರೋಪ

- Advertisement -
- Advertisement -

ಬೆಂಗಳೂರಿನ ಜಾಲಿ ಮೊಹಲ್ಲಾದ ನಿವಾಸಿ ದಲಿತ ಯುವಕ ವಿನೋದ್‌ ಎಂಬಾತ ಪೊಲೀಸರ ವಶದಲ್ಲಿದ್ದಾಗಲೇ ಸಾವನ್ನಪ್ಪಿರುವ ಘಟನೆ ಜನವರಿ 05ರಂದು ಕಾಟನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ವರದಿಯಾಗಿದೆ.

2017ರಲ್ಲಿ ದರೋಡೆಗೆ ಸಂಚು ರೂಪಿಸಿದ್ದ ಎಂಬ ಆರೋಪದಡಿ ಬುಧವಾರ ಬಂಧನಕ್ಕೊಳಗಾಗಿದ್ದ 23 ವರ್ಷದ ವಿನೋದ್ ರಾಮಚಂದ್ರನ್ ಗುರುವಾರ ಬೆಳಿಗ್ಗೆ 3.45ರ ಸಮಯದಲ್ಲಿ ಲಾಕಪ್‌ನಲ್ಲಿ ಮಲಗಿದ್ದಾಗಲೇ ನಿಧನರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿನೋದ್ ಕುಟುಂಬ ಪೊಲೀಸರ ಹೇಳಿಕೆಯನ್ನು ಅಲ್ಲಗೆಳೆದಿದ್ದು ಪೊಲೀಸರ ದೌರ್ಜನ್ಯ ಮತ್ತು ಕಿರುಕುಳದಿಂದಲೇ ವಿನೋದ್ ಸಾವನಪ್ಪಿದ್ದಾನೆ ಎಂದು ಆರೋಪಿಸಿದ್ದಾರೆ.

ದರೋಡೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ವಿನೋದ್ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು. ಕೋರ್ಟ್ ಆದೇಶದಂತೆ ಬುಧವಾರ ಮಧ್ಯಾಹ್ನ 12.30ರ ಸಮಯದಲ್ಲಿ ಜಾಲಿ ಪಾಳ್ಯದಿಂದ ಬಂಧಿಸಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿರಿಸಲಾಗಿತ್ತು. ಆದರೆ ಗುರುವಾರ ಬೆಳ್ಳಂಬೆಳಿಗ್ಗೆ 3 ಗಂಟೆ ಸಮಾರಿಗೆ ನೋಡಿದಾಗ ವಿನೋದ್ ಲಾಕಪ್‌ನಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದಾನೆಂದು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು.

ಸುಮಾರು 5 ಗಂಟೆ ಸಮಯಲ್ಲಿ ಜಾಲಿ ಪಾಳ್ಯಕ್ಕೆ ತೆರಳಿದ್ದ ಪೊಲೀಸರು ಅವರ ತಾಯಿಗೆ ವಿನೋದ್ ಆರೋಗ್ಯ ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿಸಿದ್ದರು. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರು ವಿನೋದ್ ಸಾವನಪ್ಪಿರುವುದನ್ನು ಖಚಿತಪಡಿಸಿಕೊಂಡು ಕುಟುಂಬಕ್ಕೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಈ ಕುರಿತು ಮಾಹಿತಿ ನೀಡಿದ್ದು, “ಆರೋಪಿ ವಿರುದ್ಧ 2017ರಲ್ಲಿ ಕಾಟನ್ ಪೇಟೆ ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ ದಾಖಲಾಗಿತ್ತು‌‌‌. ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್​ ಜಾರಿಯಾಗಿತ್ತು. ಬುಧವಾರ ಆತನನ್ನು ಪೊಲೀಸರು ಬಂಧಿಸಿ ಕಾಟನ್‌ಪೇಟೆ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ರಾತ್ರಿ ಠಾಣೆಯಲ್ಲಿ ಮಲಗಿದ್ದ ಆರೋಪಿಯನ್ನು ಗುರುವಾರ ಮುಂಜಾನೆ 3‌.45 ವೇಳೆಗೆ ಪೊಲೀಸ್ ಸಿಬ್ಬಂದಿ ಎಬ್ಬಿಸಲು ಪ್ರಯತ್ನಿಸಿದ್ದಾರೆ. ಆದರೆ ಆತ ಪ್ರಜ್ಞೆ ತಪ್ಪಿದ್ದರಿಂದ ಕೂಡಲೇ ಆಸ್ಪತ್ರೆಗೆ‌ ದಾಖಲಿಸಿದ್ದಾರೆ. ಆದರೆ ಮಾರ್ಗ‌ಮಧ್ಯಯೇ ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸದ್ಯ ಈಗ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಸಾವೆಂದು ಪ್ರಕರಣ ದಾಖಲಿಸಿ, ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಿದ್ದೇವೆ. ಅಲ್ಲದೆ, ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಹಿಸಲಾಗಿದೆ” ಎಂದಿದ್ದಾರೆ.

ಪೊಲೀಸ್ ಕಿರುಕುಳದಿಂದ ವಿನೋದ್ ಸಾವು – ಸ್ಲಂ ಮಹಿಳಾ ಸಂಘಟನೆ ಆರೋಪ

ಪೊಲೀಸ್ ಕಿರುಕುಳದಿಂದಲೇ ವಿನೋದ್ ಸಾವನಪ್ಪಿದ್ದಾರೆ ಎಂದು ಸ್ಲಂ ಮಹಿಳಾ ಸಂಘಟನೆಯ ಮುಖಂಡೆ ಜಾನ್ಸಿ ಆರೋಪಿಸಿದ್ದಾರೆ. “ವಿನೋದ್‌ರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅವರ ಕತ್ತಿನ ಹಿಂಭಾಗದಲ್ಲಿ ರಕ್ತ ಸೋರುತ್ತಿತ್ತು ಎಂದು ಆಸ್ಪತ್ರೆಯ ಸಿಬ್ಬಂದಿಗಳು ತಿಳಿಸಿದ್ದಾರೆ. ಶವಗಾರದ ವಾಚ್‌ಮನ್ ಕೂಡ ಅದನ್ನೆ ಹೇಳಿದ್ದಾರೆ. ಆದರೆ ಪೊಲೀಸರು ಪ್ರಜ್ಞೆ ತಪ್ಪಿ ಸಾವನಪ್ಪಿದ್ದಾನೆ ಎಂದು ಒಮ್ಮೆ, ಹೃದಯಾಘಾತವಾಗಿ ಬಿದ್ದು ಸಾವನಪ್ಪಿದ್ದಾನೆ ಎಂದು ಮತ್ತೊಮ್ಮೆ ಹೇಳುವ ಮೂಲಕ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದ್ದರೆ. ಪೊಲೀಸ್ ಕಿರುಕುಳವೇ ವಿನೋದ್ ಸಾವಿಗೆ ಕಾರಣ” ಎಂದು ಆರೋಪಿಸಿದ್ದಾರೆ.

ಪೊಲೀಸರು ಬಲವಂತವಾಗಿ ವಿನೋದ್ ಅಂತ್ಯಕ್ರಿಯೆ ನಡೆಸಿದ್ದಾರೆ. ಅವರ ತಾಯಿಯನ್ನು ಹೊರತುಪಡಿಸಿ ಉಳಿದ ಯಾರಿಗೂ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಿಲ್ಲ. ಇದು ಕಾನೂನುಬಾಹಿರವಾಗಿದ್ದು ಈ ಪ್ರಕರಣದಲ್ಲಿ ಎಲ್ಲಾ ಸಿಸಿಕ್ಯಾಮರಗಳನ್ನು ಪರಿಶೀಲಿಸಬೇಕು. ಸಮರ್ಪಕ ತನಿಖೆ ನಡೆದು ವಿನೋದ್ ಸಾವಿನ ನಿಖರ ಕಾರಣ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಲಾಕಪ್ ಡೆತ್ …. ಪೋಲೀಸರು ತಮ್ಮ ಜವಾಬ್ದಾರಿಯನ್ನು ಮರೆತು … ಹುಡುನನನ್ನು ಲಾಕಪ್ ನಲ್ಲಿಯೇ ಕೊಂದು ಹಾಕಿದ್ದಾರೆ೦ದರೆ… ಸರಕಾರದ ಸಪೋರ್ಟ್ ಇಲ್ಲದಿದ್ದರೆ ಇದು ಸಾಧ್ಯವೇ?..
    ಆದಕ್ಕೆನೇ ಪೋಲೀಸರ ಮಕ್ಕಳು ಅಡ್ಡ ಕಾಯದಲ್ಲೆ ಹೋಗೋದು …. ಉಪ್ಪು ತಿಂದವರು ನೀರು ಕುಡಿತ್ತಾರೆ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...