Homeಕರ್ನಾಟಕಬೆಂಗಳೂರು ಪೊಲೀಸರ ವಶದಲ್ಲಿದ್ದ ದಲಿತ ಯುವಕನ ಸಾವು - ಲಾಕಪ್ ಡೆತ್ ಆರೋಪ

ಬೆಂಗಳೂರು ಪೊಲೀಸರ ವಶದಲ್ಲಿದ್ದ ದಲಿತ ಯುವಕನ ಸಾವು – ಲಾಕಪ್ ಡೆತ್ ಆರೋಪ

- Advertisement -
- Advertisement -

ಬೆಂಗಳೂರಿನ ಜಾಲಿ ಮೊಹಲ್ಲಾದ ನಿವಾಸಿ ದಲಿತ ಯುವಕ ವಿನೋದ್‌ ಎಂಬಾತ ಪೊಲೀಸರ ವಶದಲ್ಲಿದ್ದಾಗಲೇ ಸಾವನ್ನಪ್ಪಿರುವ ಘಟನೆ ಜನವರಿ 05ರಂದು ಕಾಟನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ವರದಿಯಾಗಿದೆ.

2017ರಲ್ಲಿ ದರೋಡೆಗೆ ಸಂಚು ರೂಪಿಸಿದ್ದ ಎಂಬ ಆರೋಪದಡಿ ಬುಧವಾರ ಬಂಧನಕ್ಕೊಳಗಾಗಿದ್ದ 23 ವರ್ಷದ ವಿನೋದ್ ರಾಮಚಂದ್ರನ್ ಗುರುವಾರ ಬೆಳಿಗ್ಗೆ 3.45ರ ಸಮಯದಲ್ಲಿ ಲಾಕಪ್‌ನಲ್ಲಿ ಮಲಗಿದ್ದಾಗಲೇ ನಿಧನರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿನೋದ್ ಕುಟುಂಬ ಪೊಲೀಸರ ಹೇಳಿಕೆಯನ್ನು ಅಲ್ಲಗೆಳೆದಿದ್ದು ಪೊಲೀಸರ ದೌರ್ಜನ್ಯ ಮತ್ತು ಕಿರುಕುಳದಿಂದಲೇ ವಿನೋದ್ ಸಾವನಪ್ಪಿದ್ದಾನೆ ಎಂದು ಆರೋಪಿಸಿದ್ದಾರೆ.

ದರೋಡೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ವಿನೋದ್ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು. ಕೋರ್ಟ್ ಆದೇಶದಂತೆ ಬುಧವಾರ ಮಧ್ಯಾಹ್ನ 12.30ರ ಸಮಯದಲ್ಲಿ ಜಾಲಿ ಪಾಳ್ಯದಿಂದ ಬಂಧಿಸಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿರಿಸಲಾಗಿತ್ತು. ಆದರೆ ಗುರುವಾರ ಬೆಳ್ಳಂಬೆಳಿಗ್ಗೆ 3 ಗಂಟೆ ಸಮಾರಿಗೆ ನೋಡಿದಾಗ ವಿನೋದ್ ಲಾಕಪ್‌ನಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದಾನೆಂದು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು.

ಸುಮಾರು 5 ಗಂಟೆ ಸಮಯಲ್ಲಿ ಜಾಲಿ ಪಾಳ್ಯಕ್ಕೆ ತೆರಳಿದ್ದ ಪೊಲೀಸರು ಅವರ ತಾಯಿಗೆ ವಿನೋದ್ ಆರೋಗ್ಯ ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿಸಿದ್ದರು. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರು ವಿನೋದ್ ಸಾವನಪ್ಪಿರುವುದನ್ನು ಖಚಿತಪಡಿಸಿಕೊಂಡು ಕುಟುಂಬಕ್ಕೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಈ ಕುರಿತು ಮಾಹಿತಿ ನೀಡಿದ್ದು, “ಆರೋಪಿ ವಿರುದ್ಧ 2017ರಲ್ಲಿ ಕಾಟನ್ ಪೇಟೆ ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ ದಾಖಲಾಗಿತ್ತು‌‌‌. ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್​ ಜಾರಿಯಾಗಿತ್ತು. ಬುಧವಾರ ಆತನನ್ನು ಪೊಲೀಸರು ಬಂಧಿಸಿ ಕಾಟನ್‌ಪೇಟೆ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ರಾತ್ರಿ ಠಾಣೆಯಲ್ಲಿ ಮಲಗಿದ್ದ ಆರೋಪಿಯನ್ನು ಗುರುವಾರ ಮುಂಜಾನೆ 3‌.45 ವೇಳೆಗೆ ಪೊಲೀಸ್ ಸಿಬ್ಬಂದಿ ಎಬ್ಬಿಸಲು ಪ್ರಯತ್ನಿಸಿದ್ದಾರೆ. ಆದರೆ ಆತ ಪ್ರಜ್ಞೆ ತಪ್ಪಿದ್ದರಿಂದ ಕೂಡಲೇ ಆಸ್ಪತ್ರೆಗೆ‌ ದಾಖಲಿಸಿದ್ದಾರೆ. ಆದರೆ ಮಾರ್ಗ‌ಮಧ್ಯಯೇ ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸದ್ಯ ಈಗ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಸಾವೆಂದು ಪ್ರಕರಣ ದಾಖಲಿಸಿ, ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಿದ್ದೇವೆ. ಅಲ್ಲದೆ, ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಹಿಸಲಾಗಿದೆ” ಎಂದಿದ್ದಾರೆ.

ಪೊಲೀಸ್ ಕಿರುಕುಳದಿಂದ ವಿನೋದ್ ಸಾವು – ಸ್ಲಂ ಮಹಿಳಾ ಸಂಘಟನೆ ಆರೋಪ

ಪೊಲೀಸ್ ಕಿರುಕುಳದಿಂದಲೇ ವಿನೋದ್ ಸಾವನಪ್ಪಿದ್ದಾರೆ ಎಂದು ಸ್ಲಂ ಮಹಿಳಾ ಸಂಘಟನೆಯ ಮುಖಂಡೆ ಜಾನ್ಸಿ ಆರೋಪಿಸಿದ್ದಾರೆ. “ವಿನೋದ್‌ರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅವರ ಕತ್ತಿನ ಹಿಂಭಾಗದಲ್ಲಿ ರಕ್ತ ಸೋರುತ್ತಿತ್ತು ಎಂದು ಆಸ್ಪತ್ರೆಯ ಸಿಬ್ಬಂದಿಗಳು ತಿಳಿಸಿದ್ದಾರೆ. ಶವಗಾರದ ವಾಚ್‌ಮನ್ ಕೂಡ ಅದನ್ನೆ ಹೇಳಿದ್ದಾರೆ. ಆದರೆ ಪೊಲೀಸರು ಪ್ರಜ್ಞೆ ತಪ್ಪಿ ಸಾವನಪ್ಪಿದ್ದಾನೆ ಎಂದು ಒಮ್ಮೆ, ಹೃದಯಾಘಾತವಾಗಿ ಬಿದ್ದು ಸಾವನಪ್ಪಿದ್ದಾನೆ ಎಂದು ಮತ್ತೊಮ್ಮೆ ಹೇಳುವ ಮೂಲಕ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದ್ದರೆ. ಪೊಲೀಸ್ ಕಿರುಕುಳವೇ ವಿನೋದ್ ಸಾವಿಗೆ ಕಾರಣ” ಎಂದು ಆರೋಪಿಸಿದ್ದಾರೆ.

ಪೊಲೀಸರು ಬಲವಂತವಾಗಿ ವಿನೋದ್ ಅಂತ್ಯಕ್ರಿಯೆ ನಡೆಸಿದ್ದಾರೆ. ಅವರ ತಾಯಿಯನ್ನು ಹೊರತುಪಡಿಸಿ ಉಳಿದ ಯಾರಿಗೂ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಿಲ್ಲ. ಇದು ಕಾನೂನುಬಾಹಿರವಾಗಿದ್ದು ಈ ಪ್ರಕರಣದಲ್ಲಿ ಎಲ್ಲಾ ಸಿಸಿಕ್ಯಾಮರಗಳನ್ನು ಪರಿಶೀಲಿಸಬೇಕು. ಸಮರ್ಪಕ ತನಿಖೆ ನಡೆದು ವಿನೋದ್ ಸಾವಿನ ನಿಖರ ಕಾರಣ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಲಾಕಪ್ ಡೆತ್ …. ಪೋಲೀಸರು ತಮ್ಮ ಜವಾಬ್ದಾರಿಯನ್ನು ಮರೆತು … ಹುಡುನನನ್ನು ಲಾಕಪ್ ನಲ್ಲಿಯೇ ಕೊಂದು ಹಾಕಿದ್ದಾರೆ೦ದರೆ… ಸರಕಾರದ ಸಪೋರ್ಟ್ ಇಲ್ಲದಿದ್ದರೆ ಇದು ಸಾಧ್ಯವೇ?..
    ಆದಕ್ಕೆನೇ ಪೋಲೀಸರ ಮಕ್ಕಳು ಅಡ್ಡ ಕಾಯದಲ್ಲೆ ಹೋಗೋದು …. ಉಪ್ಪು ತಿಂದವರು ನೀರು ಕುಡಿತ್ತಾರೆ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...