Homeಕರ್ನಾಟಕಬೆಂಗಳೂರು ಪೊಲೀಸರ ವಶದಲ್ಲಿದ್ದ ದಲಿತ ಯುವಕನ ಸಾವು - ಲಾಕಪ್ ಡೆತ್ ಆರೋಪ

ಬೆಂಗಳೂರು ಪೊಲೀಸರ ವಶದಲ್ಲಿದ್ದ ದಲಿತ ಯುವಕನ ಸಾವು – ಲಾಕಪ್ ಡೆತ್ ಆರೋಪ

- Advertisement -
- Advertisement -

ಬೆಂಗಳೂರಿನ ಜಾಲಿ ಮೊಹಲ್ಲಾದ ನಿವಾಸಿ ದಲಿತ ಯುವಕ ವಿನೋದ್‌ ಎಂಬಾತ ಪೊಲೀಸರ ವಶದಲ್ಲಿದ್ದಾಗಲೇ ಸಾವನ್ನಪ್ಪಿರುವ ಘಟನೆ ಜನವರಿ 05ರಂದು ಕಾಟನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ವರದಿಯಾಗಿದೆ.

2017ರಲ್ಲಿ ದರೋಡೆಗೆ ಸಂಚು ರೂಪಿಸಿದ್ದ ಎಂಬ ಆರೋಪದಡಿ ಬುಧವಾರ ಬಂಧನಕ್ಕೊಳಗಾಗಿದ್ದ 23 ವರ್ಷದ ವಿನೋದ್ ರಾಮಚಂದ್ರನ್ ಗುರುವಾರ ಬೆಳಿಗ್ಗೆ 3.45ರ ಸಮಯದಲ್ಲಿ ಲಾಕಪ್‌ನಲ್ಲಿ ಮಲಗಿದ್ದಾಗಲೇ ನಿಧನರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿನೋದ್ ಕುಟುಂಬ ಪೊಲೀಸರ ಹೇಳಿಕೆಯನ್ನು ಅಲ್ಲಗೆಳೆದಿದ್ದು ಪೊಲೀಸರ ದೌರ್ಜನ್ಯ ಮತ್ತು ಕಿರುಕುಳದಿಂದಲೇ ವಿನೋದ್ ಸಾವನಪ್ಪಿದ್ದಾನೆ ಎಂದು ಆರೋಪಿಸಿದ್ದಾರೆ.

ದರೋಡೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ವಿನೋದ್ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು. ಕೋರ್ಟ್ ಆದೇಶದಂತೆ ಬುಧವಾರ ಮಧ್ಯಾಹ್ನ 12.30ರ ಸಮಯದಲ್ಲಿ ಜಾಲಿ ಪಾಳ್ಯದಿಂದ ಬಂಧಿಸಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿರಿಸಲಾಗಿತ್ತು. ಆದರೆ ಗುರುವಾರ ಬೆಳ್ಳಂಬೆಳಿಗ್ಗೆ 3 ಗಂಟೆ ಸಮಾರಿಗೆ ನೋಡಿದಾಗ ವಿನೋದ್ ಲಾಕಪ್‌ನಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದಾನೆಂದು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು.

ಸುಮಾರು 5 ಗಂಟೆ ಸಮಯಲ್ಲಿ ಜಾಲಿ ಪಾಳ್ಯಕ್ಕೆ ತೆರಳಿದ್ದ ಪೊಲೀಸರು ಅವರ ತಾಯಿಗೆ ವಿನೋದ್ ಆರೋಗ್ಯ ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿಸಿದ್ದರು. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರು ವಿನೋದ್ ಸಾವನಪ್ಪಿರುವುದನ್ನು ಖಚಿತಪಡಿಸಿಕೊಂಡು ಕುಟುಂಬಕ್ಕೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಈ ಕುರಿತು ಮಾಹಿತಿ ನೀಡಿದ್ದು, “ಆರೋಪಿ ವಿರುದ್ಧ 2017ರಲ್ಲಿ ಕಾಟನ್ ಪೇಟೆ ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ ದಾಖಲಾಗಿತ್ತು‌‌‌. ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್​ ಜಾರಿಯಾಗಿತ್ತು. ಬುಧವಾರ ಆತನನ್ನು ಪೊಲೀಸರು ಬಂಧಿಸಿ ಕಾಟನ್‌ಪೇಟೆ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ರಾತ್ರಿ ಠಾಣೆಯಲ್ಲಿ ಮಲಗಿದ್ದ ಆರೋಪಿಯನ್ನು ಗುರುವಾರ ಮುಂಜಾನೆ 3‌.45 ವೇಳೆಗೆ ಪೊಲೀಸ್ ಸಿಬ್ಬಂದಿ ಎಬ್ಬಿಸಲು ಪ್ರಯತ್ನಿಸಿದ್ದಾರೆ. ಆದರೆ ಆತ ಪ್ರಜ್ಞೆ ತಪ್ಪಿದ್ದರಿಂದ ಕೂಡಲೇ ಆಸ್ಪತ್ರೆಗೆ‌ ದಾಖಲಿಸಿದ್ದಾರೆ. ಆದರೆ ಮಾರ್ಗ‌ಮಧ್ಯಯೇ ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸದ್ಯ ಈಗ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಸಾವೆಂದು ಪ್ರಕರಣ ದಾಖಲಿಸಿ, ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಿದ್ದೇವೆ. ಅಲ್ಲದೆ, ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಹಿಸಲಾಗಿದೆ” ಎಂದಿದ್ದಾರೆ.

ಪೊಲೀಸ್ ಕಿರುಕುಳದಿಂದ ವಿನೋದ್ ಸಾವು – ಸ್ಲಂ ಮಹಿಳಾ ಸಂಘಟನೆ ಆರೋಪ

ಪೊಲೀಸ್ ಕಿರುಕುಳದಿಂದಲೇ ವಿನೋದ್ ಸಾವನಪ್ಪಿದ್ದಾರೆ ಎಂದು ಸ್ಲಂ ಮಹಿಳಾ ಸಂಘಟನೆಯ ಮುಖಂಡೆ ಜಾನ್ಸಿ ಆರೋಪಿಸಿದ್ದಾರೆ. “ವಿನೋದ್‌ರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅವರ ಕತ್ತಿನ ಹಿಂಭಾಗದಲ್ಲಿ ರಕ್ತ ಸೋರುತ್ತಿತ್ತು ಎಂದು ಆಸ್ಪತ್ರೆಯ ಸಿಬ್ಬಂದಿಗಳು ತಿಳಿಸಿದ್ದಾರೆ. ಶವಗಾರದ ವಾಚ್‌ಮನ್ ಕೂಡ ಅದನ್ನೆ ಹೇಳಿದ್ದಾರೆ. ಆದರೆ ಪೊಲೀಸರು ಪ್ರಜ್ಞೆ ತಪ್ಪಿ ಸಾವನಪ್ಪಿದ್ದಾನೆ ಎಂದು ಒಮ್ಮೆ, ಹೃದಯಾಘಾತವಾಗಿ ಬಿದ್ದು ಸಾವನಪ್ಪಿದ್ದಾನೆ ಎಂದು ಮತ್ತೊಮ್ಮೆ ಹೇಳುವ ಮೂಲಕ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದ್ದರೆ. ಪೊಲೀಸ್ ಕಿರುಕುಳವೇ ವಿನೋದ್ ಸಾವಿಗೆ ಕಾರಣ” ಎಂದು ಆರೋಪಿಸಿದ್ದಾರೆ.

ಪೊಲೀಸರು ಬಲವಂತವಾಗಿ ವಿನೋದ್ ಅಂತ್ಯಕ್ರಿಯೆ ನಡೆಸಿದ್ದಾರೆ. ಅವರ ತಾಯಿಯನ್ನು ಹೊರತುಪಡಿಸಿ ಉಳಿದ ಯಾರಿಗೂ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಿಲ್ಲ. ಇದು ಕಾನೂನುಬಾಹಿರವಾಗಿದ್ದು ಈ ಪ್ರಕರಣದಲ್ಲಿ ಎಲ್ಲಾ ಸಿಸಿಕ್ಯಾಮರಗಳನ್ನು ಪರಿಶೀಲಿಸಬೇಕು. ಸಮರ್ಪಕ ತನಿಖೆ ನಡೆದು ವಿನೋದ್ ಸಾವಿನ ನಿಖರ ಕಾರಣ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಲಾಕಪ್ ಡೆತ್ …. ಪೋಲೀಸರು ತಮ್ಮ ಜವಾಬ್ದಾರಿಯನ್ನು ಮರೆತು … ಹುಡುನನನ್ನು ಲಾಕಪ್ ನಲ್ಲಿಯೇ ಕೊಂದು ಹಾಕಿದ್ದಾರೆ೦ದರೆ… ಸರಕಾರದ ಸಪೋರ್ಟ್ ಇಲ್ಲದಿದ್ದರೆ ಇದು ಸಾಧ್ಯವೇ?..
    ಆದಕ್ಕೆನೇ ಪೋಲೀಸರ ಮಕ್ಕಳು ಅಡ್ಡ ಕಾಯದಲ್ಲೆ ಹೋಗೋದು …. ಉಪ್ಪು ತಿಂದವರು ನೀರು ಕುಡಿತ್ತಾರೆ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...