Homeಕರ್ನಾಟಕಬೆಂಗಳೂರು ಪೊಲೀಸರ ವಶದಲ್ಲಿದ್ದ ದಲಿತ ಯುವಕನ ಸಾವು - ಲಾಕಪ್ ಡೆತ್ ಆರೋಪ

ಬೆಂಗಳೂರು ಪೊಲೀಸರ ವಶದಲ್ಲಿದ್ದ ದಲಿತ ಯುವಕನ ಸಾವು – ಲಾಕಪ್ ಡೆತ್ ಆರೋಪ

- Advertisement -
- Advertisement -

ಬೆಂಗಳೂರಿನ ಜಾಲಿ ಮೊಹಲ್ಲಾದ ನಿವಾಸಿ ದಲಿತ ಯುವಕ ವಿನೋದ್‌ ಎಂಬಾತ ಪೊಲೀಸರ ವಶದಲ್ಲಿದ್ದಾಗಲೇ ಸಾವನ್ನಪ್ಪಿರುವ ಘಟನೆ ಜನವರಿ 05ರಂದು ಕಾಟನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ವರದಿಯಾಗಿದೆ.

2017ರಲ್ಲಿ ದರೋಡೆಗೆ ಸಂಚು ರೂಪಿಸಿದ್ದ ಎಂಬ ಆರೋಪದಡಿ ಬುಧವಾರ ಬಂಧನಕ್ಕೊಳಗಾಗಿದ್ದ 23 ವರ್ಷದ ವಿನೋದ್ ರಾಮಚಂದ್ರನ್ ಗುರುವಾರ ಬೆಳಿಗ್ಗೆ 3.45ರ ಸಮಯದಲ್ಲಿ ಲಾಕಪ್‌ನಲ್ಲಿ ಮಲಗಿದ್ದಾಗಲೇ ನಿಧನರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿನೋದ್ ಕುಟುಂಬ ಪೊಲೀಸರ ಹೇಳಿಕೆಯನ್ನು ಅಲ್ಲಗೆಳೆದಿದ್ದು ಪೊಲೀಸರ ದೌರ್ಜನ್ಯ ಮತ್ತು ಕಿರುಕುಳದಿಂದಲೇ ವಿನೋದ್ ಸಾವನಪ್ಪಿದ್ದಾನೆ ಎಂದು ಆರೋಪಿಸಿದ್ದಾರೆ.

ದರೋಡೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ವಿನೋದ್ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು. ಕೋರ್ಟ್ ಆದೇಶದಂತೆ ಬುಧವಾರ ಮಧ್ಯಾಹ್ನ 12.30ರ ಸಮಯದಲ್ಲಿ ಜಾಲಿ ಪಾಳ್ಯದಿಂದ ಬಂಧಿಸಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿರಿಸಲಾಗಿತ್ತು. ಆದರೆ ಗುರುವಾರ ಬೆಳ್ಳಂಬೆಳಿಗ್ಗೆ 3 ಗಂಟೆ ಸಮಾರಿಗೆ ನೋಡಿದಾಗ ವಿನೋದ್ ಲಾಕಪ್‌ನಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದಾನೆಂದು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು.

ಸುಮಾರು 5 ಗಂಟೆ ಸಮಯಲ್ಲಿ ಜಾಲಿ ಪಾಳ್ಯಕ್ಕೆ ತೆರಳಿದ್ದ ಪೊಲೀಸರು ಅವರ ತಾಯಿಗೆ ವಿನೋದ್ ಆರೋಗ್ಯ ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿಸಿದ್ದರು. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರು ವಿನೋದ್ ಸಾವನಪ್ಪಿರುವುದನ್ನು ಖಚಿತಪಡಿಸಿಕೊಂಡು ಕುಟುಂಬಕ್ಕೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಈ ಕುರಿತು ಮಾಹಿತಿ ನೀಡಿದ್ದು, “ಆರೋಪಿ ವಿರುದ್ಧ 2017ರಲ್ಲಿ ಕಾಟನ್ ಪೇಟೆ ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ ದಾಖಲಾಗಿತ್ತು‌‌‌. ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್​ ಜಾರಿಯಾಗಿತ್ತು. ಬುಧವಾರ ಆತನನ್ನು ಪೊಲೀಸರು ಬಂಧಿಸಿ ಕಾಟನ್‌ಪೇಟೆ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ರಾತ್ರಿ ಠಾಣೆಯಲ್ಲಿ ಮಲಗಿದ್ದ ಆರೋಪಿಯನ್ನು ಗುರುವಾರ ಮುಂಜಾನೆ 3‌.45 ವೇಳೆಗೆ ಪೊಲೀಸ್ ಸಿಬ್ಬಂದಿ ಎಬ್ಬಿಸಲು ಪ್ರಯತ್ನಿಸಿದ್ದಾರೆ. ಆದರೆ ಆತ ಪ್ರಜ್ಞೆ ತಪ್ಪಿದ್ದರಿಂದ ಕೂಡಲೇ ಆಸ್ಪತ್ರೆಗೆ‌ ದಾಖಲಿಸಿದ್ದಾರೆ. ಆದರೆ ಮಾರ್ಗ‌ಮಧ್ಯಯೇ ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸದ್ಯ ಈಗ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಸಾವೆಂದು ಪ್ರಕರಣ ದಾಖಲಿಸಿ, ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಿದ್ದೇವೆ. ಅಲ್ಲದೆ, ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಹಿಸಲಾಗಿದೆ” ಎಂದಿದ್ದಾರೆ.

ಪೊಲೀಸ್ ಕಿರುಕುಳದಿಂದ ವಿನೋದ್ ಸಾವು – ಸ್ಲಂ ಮಹಿಳಾ ಸಂಘಟನೆ ಆರೋಪ

ಪೊಲೀಸ್ ಕಿರುಕುಳದಿಂದಲೇ ವಿನೋದ್ ಸಾವನಪ್ಪಿದ್ದಾರೆ ಎಂದು ಸ್ಲಂ ಮಹಿಳಾ ಸಂಘಟನೆಯ ಮುಖಂಡೆ ಜಾನ್ಸಿ ಆರೋಪಿಸಿದ್ದಾರೆ. “ವಿನೋದ್‌ರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅವರ ಕತ್ತಿನ ಹಿಂಭಾಗದಲ್ಲಿ ರಕ್ತ ಸೋರುತ್ತಿತ್ತು ಎಂದು ಆಸ್ಪತ್ರೆಯ ಸಿಬ್ಬಂದಿಗಳು ತಿಳಿಸಿದ್ದಾರೆ. ಶವಗಾರದ ವಾಚ್‌ಮನ್ ಕೂಡ ಅದನ್ನೆ ಹೇಳಿದ್ದಾರೆ. ಆದರೆ ಪೊಲೀಸರು ಪ್ರಜ್ಞೆ ತಪ್ಪಿ ಸಾವನಪ್ಪಿದ್ದಾನೆ ಎಂದು ಒಮ್ಮೆ, ಹೃದಯಾಘಾತವಾಗಿ ಬಿದ್ದು ಸಾವನಪ್ಪಿದ್ದಾನೆ ಎಂದು ಮತ್ತೊಮ್ಮೆ ಹೇಳುವ ಮೂಲಕ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದ್ದರೆ. ಪೊಲೀಸ್ ಕಿರುಕುಳವೇ ವಿನೋದ್ ಸಾವಿಗೆ ಕಾರಣ” ಎಂದು ಆರೋಪಿಸಿದ್ದಾರೆ.

ಪೊಲೀಸರು ಬಲವಂತವಾಗಿ ವಿನೋದ್ ಅಂತ್ಯಕ್ರಿಯೆ ನಡೆಸಿದ್ದಾರೆ. ಅವರ ತಾಯಿಯನ್ನು ಹೊರತುಪಡಿಸಿ ಉಳಿದ ಯಾರಿಗೂ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಿಲ್ಲ. ಇದು ಕಾನೂನುಬಾಹಿರವಾಗಿದ್ದು ಈ ಪ್ರಕರಣದಲ್ಲಿ ಎಲ್ಲಾ ಸಿಸಿಕ್ಯಾಮರಗಳನ್ನು ಪರಿಶೀಲಿಸಬೇಕು. ಸಮರ್ಪಕ ತನಿಖೆ ನಡೆದು ವಿನೋದ್ ಸಾವಿನ ನಿಖರ ಕಾರಣ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಲಾಕಪ್ ಡೆತ್ …. ಪೋಲೀಸರು ತಮ್ಮ ಜವಾಬ್ದಾರಿಯನ್ನು ಮರೆತು … ಹುಡುನನನ್ನು ಲಾಕಪ್ ನಲ್ಲಿಯೇ ಕೊಂದು ಹಾಕಿದ್ದಾರೆ೦ದರೆ… ಸರಕಾರದ ಸಪೋರ್ಟ್ ಇಲ್ಲದಿದ್ದರೆ ಇದು ಸಾಧ್ಯವೇ?..
    ಆದಕ್ಕೆನೇ ಪೋಲೀಸರ ಮಕ್ಕಳು ಅಡ್ಡ ಕಾಯದಲ್ಲೆ ಹೋಗೋದು …. ಉಪ್ಪು ತಿಂದವರು ನೀರು ಕುಡಿತ್ತಾರೆ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...