Homeಕರ್ನಾಟಕಬೆಂಗಳೂರು ಪೊಲೀಸರ ವಶದಲ್ಲಿದ್ದ ದಲಿತ ಯುವಕನ ಸಾವು - ಲಾಕಪ್ ಡೆತ್ ಆರೋಪ

ಬೆಂಗಳೂರು ಪೊಲೀಸರ ವಶದಲ್ಲಿದ್ದ ದಲಿತ ಯುವಕನ ಸಾವು – ಲಾಕಪ್ ಡೆತ್ ಆರೋಪ

- Advertisement -
- Advertisement -

ಬೆಂಗಳೂರಿನ ಜಾಲಿ ಮೊಹಲ್ಲಾದ ನಿವಾಸಿ ದಲಿತ ಯುವಕ ವಿನೋದ್‌ ಎಂಬಾತ ಪೊಲೀಸರ ವಶದಲ್ಲಿದ್ದಾಗಲೇ ಸಾವನ್ನಪ್ಪಿರುವ ಘಟನೆ ಜನವರಿ 05ರಂದು ಕಾಟನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ವರದಿಯಾಗಿದೆ.

2017ರಲ್ಲಿ ದರೋಡೆಗೆ ಸಂಚು ರೂಪಿಸಿದ್ದ ಎಂಬ ಆರೋಪದಡಿ ಬುಧವಾರ ಬಂಧನಕ್ಕೊಳಗಾಗಿದ್ದ 23 ವರ್ಷದ ವಿನೋದ್ ರಾಮಚಂದ್ರನ್ ಗುರುವಾರ ಬೆಳಿಗ್ಗೆ 3.45ರ ಸಮಯದಲ್ಲಿ ಲಾಕಪ್‌ನಲ್ಲಿ ಮಲಗಿದ್ದಾಗಲೇ ನಿಧನರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿನೋದ್ ಕುಟುಂಬ ಪೊಲೀಸರ ಹೇಳಿಕೆಯನ್ನು ಅಲ್ಲಗೆಳೆದಿದ್ದು ಪೊಲೀಸರ ದೌರ್ಜನ್ಯ ಮತ್ತು ಕಿರುಕುಳದಿಂದಲೇ ವಿನೋದ್ ಸಾವನಪ್ಪಿದ್ದಾನೆ ಎಂದು ಆರೋಪಿಸಿದ್ದಾರೆ.

ದರೋಡೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ವಿನೋದ್ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು. ಕೋರ್ಟ್ ಆದೇಶದಂತೆ ಬುಧವಾರ ಮಧ್ಯಾಹ್ನ 12.30ರ ಸಮಯದಲ್ಲಿ ಜಾಲಿ ಪಾಳ್ಯದಿಂದ ಬಂಧಿಸಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿರಿಸಲಾಗಿತ್ತು. ಆದರೆ ಗುರುವಾರ ಬೆಳ್ಳಂಬೆಳಿಗ್ಗೆ 3 ಗಂಟೆ ಸಮಾರಿಗೆ ನೋಡಿದಾಗ ವಿನೋದ್ ಲಾಕಪ್‌ನಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದಾನೆಂದು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು.

ಸುಮಾರು 5 ಗಂಟೆ ಸಮಯಲ್ಲಿ ಜಾಲಿ ಪಾಳ್ಯಕ್ಕೆ ತೆರಳಿದ್ದ ಪೊಲೀಸರು ಅವರ ತಾಯಿಗೆ ವಿನೋದ್ ಆರೋಗ್ಯ ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿಸಿದ್ದರು. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರು ವಿನೋದ್ ಸಾವನಪ್ಪಿರುವುದನ್ನು ಖಚಿತಪಡಿಸಿಕೊಂಡು ಕುಟುಂಬಕ್ಕೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಈ ಕುರಿತು ಮಾಹಿತಿ ನೀಡಿದ್ದು, “ಆರೋಪಿ ವಿರುದ್ಧ 2017ರಲ್ಲಿ ಕಾಟನ್ ಪೇಟೆ ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ ದಾಖಲಾಗಿತ್ತು‌‌‌. ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್​ ಜಾರಿಯಾಗಿತ್ತು. ಬುಧವಾರ ಆತನನ್ನು ಪೊಲೀಸರು ಬಂಧಿಸಿ ಕಾಟನ್‌ಪೇಟೆ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ರಾತ್ರಿ ಠಾಣೆಯಲ್ಲಿ ಮಲಗಿದ್ದ ಆರೋಪಿಯನ್ನು ಗುರುವಾರ ಮುಂಜಾನೆ 3‌.45 ವೇಳೆಗೆ ಪೊಲೀಸ್ ಸಿಬ್ಬಂದಿ ಎಬ್ಬಿಸಲು ಪ್ರಯತ್ನಿಸಿದ್ದಾರೆ. ಆದರೆ ಆತ ಪ್ರಜ್ಞೆ ತಪ್ಪಿದ್ದರಿಂದ ಕೂಡಲೇ ಆಸ್ಪತ್ರೆಗೆ‌ ದಾಖಲಿಸಿದ್ದಾರೆ. ಆದರೆ ಮಾರ್ಗ‌ಮಧ್ಯಯೇ ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸದ್ಯ ಈಗ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಸಾವೆಂದು ಪ್ರಕರಣ ದಾಖಲಿಸಿ, ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಿದ್ದೇವೆ. ಅಲ್ಲದೆ, ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಹಿಸಲಾಗಿದೆ” ಎಂದಿದ್ದಾರೆ.

ಪೊಲೀಸ್ ಕಿರುಕುಳದಿಂದ ವಿನೋದ್ ಸಾವು – ಸ್ಲಂ ಮಹಿಳಾ ಸಂಘಟನೆ ಆರೋಪ

ಪೊಲೀಸ್ ಕಿರುಕುಳದಿಂದಲೇ ವಿನೋದ್ ಸಾವನಪ್ಪಿದ್ದಾರೆ ಎಂದು ಸ್ಲಂ ಮಹಿಳಾ ಸಂಘಟನೆಯ ಮುಖಂಡೆ ಜಾನ್ಸಿ ಆರೋಪಿಸಿದ್ದಾರೆ. “ವಿನೋದ್‌ರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅವರ ಕತ್ತಿನ ಹಿಂಭಾಗದಲ್ಲಿ ರಕ್ತ ಸೋರುತ್ತಿತ್ತು ಎಂದು ಆಸ್ಪತ್ರೆಯ ಸಿಬ್ಬಂದಿಗಳು ತಿಳಿಸಿದ್ದಾರೆ. ಶವಗಾರದ ವಾಚ್‌ಮನ್ ಕೂಡ ಅದನ್ನೆ ಹೇಳಿದ್ದಾರೆ. ಆದರೆ ಪೊಲೀಸರು ಪ್ರಜ್ಞೆ ತಪ್ಪಿ ಸಾವನಪ್ಪಿದ್ದಾನೆ ಎಂದು ಒಮ್ಮೆ, ಹೃದಯಾಘಾತವಾಗಿ ಬಿದ್ದು ಸಾವನಪ್ಪಿದ್ದಾನೆ ಎಂದು ಮತ್ತೊಮ್ಮೆ ಹೇಳುವ ಮೂಲಕ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದ್ದರೆ. ಪೊಲೀಸ್ ಕಿರುಕುಳವೇ ವಿನೋದ್ ಸಾವಿಗೆ ಕಾರಣ” ಎಂದು ಆರೋಪಿಸಿದ್ದಾರೆ.

ಪೊಲೀಸರು ಬಲವಂತವಾಗಿ ವಿನೋದ್ ಅಂತ್ಯಕ್ರಿಯೆ ನಡೆಸಿದ್ದಾರೆ. ಅವರ ತಾಯಿಯನ್ನು ಹೊರತುಪಡಿಸಿ ಉಳಿದ ಯಾರಿಗೂ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಿಲ್ಲ. ಇದು ಕಾನೂನುಬಾಹಿರವಾಗಿದ್ದು ಈ ಪ್ರಕರಣದಲ್ಲಿ ಎಲ್ಲಾ ಸಿಸಿಕ್ಯಾಮರಗಳನ್ನು ಪರಿಶೀಲಿಸಬೇಕು. ಸಮರ್ಪಕ ತನಿಖೆ ನಡೆದು ವಿನೋದ್ ಸಾವಿನ ನಿಖರ ಕಾರಣ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಲಾಕಪ್ ಡೆತ್ …. ಪೋಲೀಸರು ತಮ್ಮ ಜವಾಬ್ದಾರಿಯನ್ನು ಮರೆತು … ಹುಡುನನನ್ನು ಲಾಕಪ್ ನಲ್ಲಿಯೇ ಕೊಂದು ಹಾಕಿದ್ದಾರೆ೦ದರೆ… ಸರಕಾರದ ಸಪೋರ್ಟ್ ಇಲ್ಲದಿದ್ದರೆ ಇದು ಸಾಧ್ಯವೇ?..
    ಆದಕ್ಕೆನೇ ಪೋಲೀಸರ ಮಕ್ಕಳು ಅಡ್ಡ ಕಾಯದಲ್ಲೆ ಹೋಗೋದು …. ಉಪ್ಪು ತಿಂದವರು ನೀರು ಕುಡಿತ್ತಾರೆ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...