Homeಮುಖಪುಟಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

ಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

- Advertisement -
- Advertisement -

ವಿವಾದಾತ್ಮಕ ಲಸಿಕೆ ಕೊವ್ಯಾಕ್ಸಿನ್‌ನ ಮೂರನೇ ಹಂತದ ಟ್ರಯಲ್‌ನಲ್ಲಿ ಲಸಿಕೆ ಪಡೆದ ವ್ಯಕ್ತಿಯೊಬ್ಬರು ಸಾವೀಗೀಡಾಗಿದ್ದಾರೆ. ಈ ಕುರಿತು ಶನಿವಾರ ಪ್ರಕಟಣೆ ನೀಡಿರುವ ಕೊವ್ಯಾಕ್ಸಿನ್ ಉತ್ಪಾದಕ ಭಾರತ್ ಬಯೋಟೆಕ್, ವ್ಯಕ್ತಿಗೆ ವಿಷ ಸೇವನೆ ಮಾಡಿಸಿರುವ ಶಂಕೆಯಿದ್ದು, ಆ ಕಾರಣಕ್ಕೆ ಹೃದಯ ಉಸಿರಾಟ ವೈಫಲ್ಯದಿಂದ ವ್ಯಕ್ತಿ ಮೃತನಾಗಿರಬಹುದು. ಈ ಪ್ರಕರಣ ಈಗ ಪೊಲೀಸ್ ತನಿಖೆಯಲ್ಲಿದೆ ಎಂದು ವಿವರಣೆ ನೀಡಿದೆ. ಈ ಹೇಳಿಕೆಯು ಭೋಪಾಲ್‌ನ ಗಾಂಧಿ ಮೆಡಿಕಲ್ ಕಾಲೇಜ್ ನೀಡಿದ ಮರಣೋತ್ತರ ಪರೀಕ್ಷೆಯ ವರದಿಯನ್ನು ಆಧರಿಸಿದೆ.

‘ನಮ್ಮ ಒಬ್ಬ ಸ್ವಯಂಸೇವಕ ಡಿಸೆಂಬರ್ 21 ರಂದು ಮೃತಪಟ್ಟ. ಈ ಸಾವಿನ ಕುರಿತು ಮೃತರ ಮಗ ಪೀಪಲ್ಸ್ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ & ರಿಸರ್ಚ್ ಸೆಂಟರ್‌ಗೆ ವರದಿ ಮಾಡಿದರು. ಮೃತ ಸ್ವಯಂಸೇವಕ ಮೂರನೇ ಹಂತದ ಟ್ರಯಲ್‌ಗೆ ಸೇರ್ಪಡೆಯಾಗುವ ಮುನ್ನ ಎಲ್ಲ ಮಾನದಂಡಗಳಲ್ಲೂ ಅರ್ಹರಾಗಿದ್ದರು. ಆ ವ್ಯಕ್ತಿಗೆ ಡೋಸ್ ನೀಡಿದ ಹಿಂದಿನ 7 ದಿನಗಳ ಕಾಲ ಅವರು ಆರೋಗ್ಯವಂತರಾಗಿದ್ದರು ಎಂದು ನಮ್ಮ ದಾಖಲೆ ಹೇಳುತ್ತಿವೆ. ಡೋಸ್ ಪಡೆದ 9 ದಿನಗಳ ನಂತರ ಆ ವ್ಯಕ್ತಿ ಮೃತರಾಗಿದ್ದು, ಪ್ರಾಥಮಿಕ ಪರಿಶೀಲನೆಗಳ ಪ್ರಕಾರ ಸಾವು ಡೋಸಿಂಗ್ ಕಾರಣದಿಂದ ಸಂಭವಿಸಿಲ್ಲ’ ಎಂದು ಭಾರತ್ ಬಯೋಟೆಕ್ ಪ್ರಕಟಣೆ ಹೇಳುತ್ತಿದೆ.

“ಮೃತ ಸ್ವಯಂಸೇವಕ ‘ಅಧ್ಯಯನದ ಲಸಿಕೆ’ (study vaccine) ಅಥವಾ ಪ್ಲಾಸಿಬೊ ಪಡೆದಿದ್ದರೆ ಎಂಬುದನ್ನು ನಾವು ಖಚಿತವಾಗಿ ಹೇಳಲು ಆಧಾರಗಳಿಲ್ಲ” ಎಂದೂ ಹೇಳುವ ಮೂಲಕ ಭಾರತ್ ಬಯೋಟೆಕ್ ಗೊಂದಲ ಮೂಡಿಸಿದೆ.

ಭಾರತದ ಔಷಧ ನಿಯಂತ್ರಕರು ಕೊವಿಶೀಲ್ಡ್ ಮತ್ತು ಈ ವಿವಾದಾತ್ಮಕ ಕೊವ್ಯಾಕ್ಸಿನ್ ತುರ್ತು ಬಳಕೆಗೆ ಈಗಾಗಲೇ ಅನುಮತಿ ನೀಡಿದ್ದಾರೆ. ಜನೆವರಿ 16 ರಿಂದ ಲಸಿಕಾ ಕಾರ್ಯಕ್ರಮ ಆರಂಭವಾಗಲಿದೆ.

3ನೇ ಹಂತದ ಟ್ರಯಲ್ಸ್ ಪೂರ್ಣಗೊಳಿಸಿಲ್ಲ ಮತ್ತು ಸುರಕ್ಷತಾ, ಪರಿಣಾಮಕಾರಿತ್ವದ ದತ್ತಾಂಶ-ಮಾಹಿತಿಯನ್ನು ಪ್ರಕಟಿಸಿಲ್ಲ ಎಂಬ ವಿವಾದಕ್ಕೆ ಈಡಾಗಿರುವ ಏಕೈಕ ದೇಸಿ ಲಸಿಕೆ ಕೊವ್ಯಾಕ್ಸಿನ್, ಈಗ 3ನೇ ಹಂತದ ಟ್ರಯಲ್‌ನ ಸ್ವಯಂಸೇವಕರೊಬ್ಬರ ಸಾವಿನ ನಂತರ ಇನ್ನಷ್ಟು ಆತಂಕ ಮೂಡಿಸಿದೆ.

2019ರ ‘ನ್ಯೂ ಡ್ರಗ್ಸ್ & ಕ್ಲಿನಿಕಲ್ ಟ್ರಯಲ್ ರೂಲ್ಸ್’ (NDCT) ಪ್ರಕಾರ ಈ ಪ್ರಕರಣವನ್ನು ಕಂಪನಿಯ ಸೈಟ್ ತಂಡವು, Institutional Ethics Committee, the Central Drugs Control Standards Organization (CDSCO) and the Data Safety Monitoring Board (DSMB) ಸಂಸ್ಥೆಗಳಿಗೆ ವರದಿ ಮಾಡಿದೆ.

ಸ್ವಯಂಸೇವಕರಲ್ಲಿ ಮೊದಲೇ ಸುಪ್ತವಾಗಿದ್ದ ರೋಗಗಳೂ ಸಾವಿಗೆ ಕಾರಣ ಇರಬಹುದು ಎಂಬ ಭಾರತ್ ಬಯೋಟೆಕ್ ಹೇಳಿಕೆಯನ್ನೂ ಗಮನಿಸಬೇಕು. ಆದರೆ ಯಾವುದೇ ಕಾರಣವಿರಲಿ, ಟ್ರಯಲ್ಸ್‌ನಲ್ಲಿ ಸ್ವಯಂಸೇವಕ ಸಾವೀಗೀಡಾದರೆ ಅದನ್ನು ಉನ್ನತ ಸಂಸ್ಥೆಗಳ ಗಮನಕ್ಕೆ ತರಬೇಕು ಎಂದು New Drugs & Clinical Trials Rules (NDCT) ಹೇಳುತ್ತದೆ.

ಈಗ ಉನ್ನತ ಸಂಸ್ಥೆಗಳ ಗಮನಕ್ಕೆ ಈ ವಿಷಯ ಬಂದಾಗಿದೆ. ಅವರು ಕ್ರಮ ಕೈಗೊಳ್ಳಬಹುದು ಎಂದು ಯಾವ ವಿಶ್ವಾಸದಿಂದ ಹೇಳುವುದು?


ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...