Homeಮುಖಪುಟಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

ಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

- Advertisement -
- Advertisement -

ವಿವಾದಾತ್ಮಕ ಲಸಿಕೆ ಕೊವ್ಯಾಕ್ಸಿನ್‌ನ ಮೂರನೇ ಹಂತದ ಟ್ರಯಲ್‌ನಲ್ಲಿ ಲಸಿಕೆ ಪಡೆದ ವ್ಯಕ್ತಿಯೊಬ್ಬರು ಸಾವೀಗೀಡಾಗಿದ್ದಾರೆ. ಈ ಕುರಿತು ಶನಿವಾರ ಪ್ರಕಟಣೆ ನೀಡಿರುವ ಕೊವ್ಯಾಕ್ಸಿನ್ ಉತ್ಪಾದಕ ಭಾರತ್ ಬಯೋಟೆಕ್, ವ್ಯಕ್ತಿಗೆ ವಿಷ ಸೇವನೆ ಮಾಡಿಸಿರುವ ಶಂಕೆಯಿದ್ದು, ಆ ಕಾರಣಕ್ಕೆ ಹೃದಯ ಉಸಿರಾಟ ವೈಫಲ್ಯದಿಂದ ವ್ಯಕ್ತಿ ಮೃತನಾಗಿರಬಹುದು. ಈ ಪ್ರಕರಣ ಈಗ ಪೊಲೀಸ್ ತನಿಖೆಯಲ್ಲಿದೆ ಎಂದು ವಿವರಣೆ ನೀಡಿದೆ. ಈ ಹೇಳಿಕೆಯು ಭೋಪಾಲ್‌ನ ಗಾಂಧಿ ಮೆಡಿಕಲ್ ಕಾಲೇಜ್ ನೀಡಿದ ಮರಣೋತ್ತರ ಪರೀಕ್ಷೆಯ ವರದಿಯನ್ನು ಆಧರಿಸಿದೆ.

‘ನಮ್ಮ ಒಬ್ಬ ಸ್ವಯಂಸೇವಕ ಡಿಸೆಂಬರ್ 21 ರಂದು ಮೃತಪಟ್ಟ. ಈ ಸಾವಿನ ಕುರಿತು ಮೃತರ ಮಗ ಪೀಪಲ್ಸ್ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ & ರಿಸರ್ಚ್ ಸೆಂಟರ್‌ಗೆ ವರದಿ ಮಾಡಿದರು. ಮೃತ ಸ್ವಯಂಸೇವಕ ಮೂರನೇ ಹಂತದ ಟ್ರಯಲ್‌ಗೆ ಸೇರ್ಪಡೆಯಾಗುವ ಮುನ್ನ ಎಲ್ಲ ಮಾನದಂಡಗಳಲ್ಲೂ ಅರ್ಹರಾಗಿದ್ದರು. ಆ ವ್ಯಕ್ತಿಗೆ ಡೋಸ್ ನೀಡಿದ ಹಿಂದಿನ 7 ದಿನಗಳ ಕಾಲ ಅವರು ಆರೋಗ್ಯವಂತರಾಗಿದ್ದರು ಎಂದು ನಮ್ಮ ದಾಖಲೆ ಹೇಳುತ್ತಿವೆ. ಡೋಸ್ ಪಡೆದ 9 ದಿನಗಳ ನಂತರ ಆ ವ್ಯಕ್ತಿ ಮೃತರಾಗಿದ್ದು, ಪ್ರಾಥಮಿಕ ಪರಿಶೀಲನೆಗಳ ಪ್ರಕಾರ ಸಾವು ಡೋಸಿಂಗ್ ಕಾರಣದಿಂದ ಸಂಭವಿಸಿಲ್ಲ’ ಎಂದು ಭಾರತ್ ಬಯೋಟೆಕ್ ಪ್ರಕಟಣೆ ಹೇಳುತ್ತಿದೆ.

“ಮೃತ ಸ್ವಯಂಸೇವಕ ‘ಅಧ್ಯಯನದ ಲಸಿಕೆ’ (study vaccine) ಅಥವಾ ಪ್ಲಾಸಿಬೊ ಪಡೆದಿದ್ದರೆ ಎಂಬುದನ್ನು ನಾವು ಖಚಿತವಾಗಿ ಹೇಳಲು ಆಧಾರಗಳಿಲ್ಲ” ಎಂದೂ ಹೇಳುವ ಮೂಲಕ ಭಾರತ್ ಬಯೋಟೆಕ್ ಗೊಂದಲ ಮೂಡಿಸಿದೆ.

ಭಾರತದ ಔಷಧ ನಿಯಂತ್ರಕರು ಕೊವಿಶೀಲ್ಡ್ ಮತ್ತು ಈ ವಿವಾದಾತ್ಮಕ ಕೊವ್ಯಾಕ್ಸಿನ್ ತುರ್ತು ಬಳಕೆಗೆ ಈಗಾಗಲೇ ಅನುಮತಿ ನೀಡಿದ್ದಾರೆ. ಜನೆವರಿ 16 ರಿಂದ ಲಸಿಕಾ ಕಾರ್ಯಕ್ರಮ ಆರಂಭವಾಗಲಿದೆ.

3ನೇ ಹಂತದ ಟ್ರಯಲ್ಸ್ ಪೂರ್ಣಗೊಳಿಸಿಲ್ಲ ಮತ್ತು ಸುರಕ್ಷತಾ, ಪರಿಣಾಮಕಾರಿತ್ವದ ದತ್ತಾಂಶ-ಮಾಹಿತಿಯನ್ನು ಪ್ರಕಟಿಸಿಲ್ಲ ಎಂಬ ವಿವಾದಕ್ಕೆ ಈಡಾಗಿರುವ ಏಕೈಕ ದೇಸಿ ಲಸಿಕೆ ಕೊವ್ಯಾಕ್ಸಿನ್, ಈಗ 3ನೇ ಹಂತದ ಟ್ರಯಲ್‌ನ ಸ್ವಯಂಸೇವಕರೊಬ್ಬರ ಸಾವಿನ ನಂತರ ಇನ್ನಷ್ಟು ಆತಂಕ ಮೂಡಿಸಿದೆ.

2019ರ ‘ನ್ಯೂ ಡ್ರಗ್ಸ್ & ಕ್ಲಿನಿಕಲ್ ಟ್ರಯಲ್ ರೂಲ್ಸ್’ (NDCT) ಪ್ರಕಾರ ಈ ಪ್ರಕರಣವನ್ನು ಕಂಪನಿಯ ಸೈಟ್ ತಂಡವು, Institutional Ethics Committee, the Central Drugs Control Standards Organization (CDSCO) and the Data Safety Monitoring Board (DSMB) ಸಂಸ್ಥೆಗಳಿಗೆ ವರದಿ ಮಾಡಿದೆ.

ಸ್ವಯಂಸೇವಕರಲ್ಲಿ ಮೊದಲೇ ಸುಪ್ತವಾಗಿದ್ದ ರೋಗಗಳೂ ಸಾವಿಗೆ ಕಾರಣ ಇರಬಹುದು ಎಂಬ ಭಾರತ್ ಬಯೋಟೆಕ್ ಹೇಳಿಕೆಯನ್ನೂ ಗಮನಿಸಬೇಕು. ಆದರೆ ಯಾವುದೇ ಕಾರಣವಿರಲಿ, ಟ್ರಯಲ್ಸ್‌ನಲ್ಲಿ ಸ್ವಯಂಸೇವಕ ಸಾವೀಗೀಡಾದರೆ ಅದನ್ನು ಉನ್ನತ ಸಂಸ್ಥೆಗಳ ಗಮನಕ್ಕೆ ತರಬೇಕು ಎಂದು New Drugs & Clinical Trials Rules (NDCT) ಹೇಳುತ್ತದೆ.

ಈಗ ಉನ್ನತ ಸಂಸ್ಥೆಗಳ ಗಮನಕ್ಕೆ ಈ ವಿಷಯ ಬಂದಾಗಿದೆ. ಅವರು ಕ್ರಮ ಕೈಗೊಳ್ಳಬಹುದು ಎಂದು ಯಾವ ವಿಶ್ವಾಸದಿಂದ ಹೇಳುವುದು?


ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...