Homeಮುಖಪುಟಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

ಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

- Advertisement -
- Advertisement -

ವಿವಾದಾತ್ಮಕ ಲಸಿಕೆ ಕೊವ್ಯಾಕ್ಸಿನ್‌ನ ಮೂರನೇ ಹಂತದ ಟ್ರಯಲ್‌ನಲ್ಲಿ ಲಸಿಕೆ ಪಡೆದ ವ್ಯಕ್ತಿಯೊಬ್ಬರು ಸಾವೀಗೀಡಾಗಿದ್ದಾರೆ. ಈ ಕುರಿತು ಶನಿವಾರ ಪ್ರಕಟಣೆ ನೀಡಿರುವ ಕೊವ್ಯಾಕ್ಸಿನ್ ಉತ್ಪಾದಕ ಭಾರತ್ ಬಯೋಟೆಕ್, ವ್ಯಕ್ತಿಗೆ ವಿಷ ಸೇವನೆ ಮಾಡಿಸಿರುವ ಶಂಕೆಯಿದ್ದು, ಆ ಕಾರಣಕ್ಕೆ ಹೃದಯ ಉಸಿರಾಟ ವೈಫಲ್ಯದಿಂದ ವ್ಯಕ್ತಿ ಮೃತನಾಗಿರಬಹುದು. ಈ ಪ್ರಕರಣ ಈಗ ಪೊಲೀಸ್ ತನಿಖೆಯಲ್ಲಿದೆ ಎಂದು ವಿವರಣೆ ನೀಡಿದೆ. ಈ ಹೇಳಿಕೆಯು ಭೋಪಾಲ್‌ನ ಗಾಂಧಿ ಮೆಡಿಕಲ್ ಕಾಲೇಜ್ ನೀಡಿದ ಮರಣೋತ್ತರ ಪರೀಕ್ಷೆಯ ವರದಿಯನ್ನು ಆಧರಿಸಿದೆ.

‘ನಮ್ಮ ಒಬ್ಬ ಸ್ವಯಂಸೇವಕ ಡಿಸೆಂಬರ್ 21 ರಂದು ಮೃತಪಟ್ಟ. ಈ ಸಾವಿನ ಕುರಿತು ಮೃತರ ಮಗ ಪೀಪಲ್ಸ್ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ & ರಿಸರ್ಚ್ ಸೆಂಟರ್‌ಗೆ ವರದಿ ಮಾಡಿದರು. ಮೃತ ಸ್ವಯಂಸೇವಕ ಮೂರನೇ ಹಂತದ ಟ್ರಯಲ್‌ಗೆ ಸೇರ್ಪಡೆಯಾಗುವ ಮುನ್ನ ಎಲ್ಲ ಮಾನದಂಡಗಳಲ್ಲೂ ಅರ್ಹರಾಗಿದ್ದರು. ಆ ವ್ಯಕ್ತಿಗೆ ಡೋಸ್ ನೀಡಿದ ಹಿಂದಿನ 7 ದಿನಗಳ ಕಾಲ ಅವರು ಆರೋಗ್ಯವಂತರಾಗಿದ್ದರು ಎಂದು ನಮ್ಮ ದಾಖಲೆ ಹೇಳುತ್ತಿವೆ. ಡೋಸ್ ಪಡೆದ 9 ದಿನಗಳ ನಂತರ ಆ ವ್ಯಕ್ತಿ ಮೃತರಾಗಿದ್ದು, ಪ್ರಾಥಮಿಕ ಪರಿಶೀಲನೆಗಳ ಪ್ರಕಾರ ಸಾವು ಡೋಸಿಂಗ್ ಕಾರಣದಿಂದ ಸಂಭವಿಸಿಲ್ಲ’ ಎಂದು ಭಾರತ್ ಬಯೋಟೆಕ್ ಪ್ರಕಟಣೆ ಹೇಳುತ್ತಿದೆ.

“ಮೃತ ಸ್ವಯಂಸೇವಕ ‘ಅಧ್ಯಯನದ ಲಸಿಕೆ’ (study vaccine) ಅಥವಾ ಪ್ಲಾಸಿಬೊ ಪಡೆದಿದ್ದರೆ ಎಂಬುದನ್ನು ನಾವು ಖಚಿತವಾಗಿ ಹೇಳಲು ಆಧಾರಗಳಿಲ್ಲ” ಎಂದೂ ಹೇಳುವ ಮೂಲಕ ಭಾರತ್ ಬಯೋಟೆಕ್ ಗೊಂದಲ ಮೂಡಿಸಿದೆ.

ಭಾರತದ ಔಷಧ ನಿಯಂತ್ರಕರು ಕೊವಿಶೀಲ್ಡ್ ಮತ್ತು ಈ ವಿವಾದಾತ್ಮಕ ಕೊವ್ಯಾಕ್ಸಿನ್ ತುರ್ತು ಬಳಕೆಗೆ ಈಗಾಗಲೇ ಅನುಮತಿ ನೀಡಿದ್ದಾರೆ. ಜನೆವರಿ 16 ರಿಂದ ಲಸಿಕಾ ಕಾರ್ಯಕ್ರಮ ಆರಂಭವಾಗಲಿದೆ.

3ನೇ ಹಂತದ ಟ್ರಯಲ್ಸ್ ಪೂರ್ಣಗೊಳಿಸಿಲ್ಲ ಮತ್ತು ಸುರಕ್ಷತಾ, ಪರಿಣಾಮಕಾರಿತ್ವದ ದತ್ತಾಂಶ-ಮಾಹಿತಿಯನ್ನು ಪ್ರಕಟಿಸಿಲ್ಲ ಎಂಬ ವಿವಾದಕ್ಕೆ ಈಡಾಗಿರುವ ಏಕೈಕ ದೇಸಿ ಲಸಿಕೆ ಕೊವ್ಯಾಕ್ಸಿನ್, ಈಗ 3ನೇ ಹಂತದ ಟ್ರಯಲ್‌ನ ಸ್ವಯಂಸೇವಕರೊಬ್ಬರ ಸಾವಿನ ನಂತರ ಇನ್ನಷ್ಟು ಆತಂಕ ಮೂಡಿಸಿದೆ.

2019ರ ‘ನ್ಯೂ ಡ್ರಗ್ಸ್ & ಕ್ಲಿನಿಕಲ್ ಟ್ರಯಲ್ ರೂಲ್ಸ್’ (NDCT) ಪ್ರಕಾರ ಈ ಪ್ರಕರಣವನ್ನು ಕಂಪನಿಯ ಸೈಟ್ ತಂಡವು, Institutional Ethics Committee, the Central Drugs Control Standards Organization (CDSCO) and the Data Safety Monitoring Board (DSMB) ಸಂಸ್ಥೆಗಳಿಗೆ ವರದಿ ಮಾಡಿದೆ.

ಸ್ವಯಂಸೇವಕರಲ್ಲಿ ಮೊದಲೇ ಸುಪ್ತವಾಗಿದ್ದ ರೋಗಗಳೂ ಸಾವಿಗೆ ಕಾರಣ ಇರಬಹುದು ಎಂಬ ಭಾರತ್ ಬಯೋಟೆಕ್ ಹೇಳಿಕೆಯನ್ನೂ ಗಮನಿಸಬೇಕು. ಆದರೆ ಯಾವುದೇ ಕಾರಣವಿರಲಿ, ಟ್ರಯಲ್ಸ್‌ನಲ್ಲಿ ಸ್ವಯಂಸೇವಕ ಸಾವೀಗೀಡಾದರೆ ಅದನ್ನು ಉನ್ನತ ಸಂಸ್ಥೆಗಳ ಗಮನಕ್ಕೆ ತರಬೇಕು ಎಂದು New Drugs & Clinical Trials Rules (NDCT) ಹೇಳುತ್ತದೆ.

ಈಗ ಉನ್ನತ ಸಂಸ್ಥೆಗಳ ಗಮನಕ್ಕೆ ಈ ವಿಷಯ ಬಂದಾಗಿದೆ. ಅವರು ಕ್ರಮ ಕೈಗೊಳ್ಳಬಹುದು ಎಂದು ಯಾವ ವಿಶ್ವಾಸದಿಂದ ಹೇಳುವುದು?


ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...