Homeಮುಖಪುಟಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

ಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

- Advertisement -
- Advertisement -

ವಿವಾದಾತ್ಮಕ ಲಸಿಕೆ ಕೊವ್ಯಾಕ್ಸಿನ್‌ನ ಮೂರನೇ ಹಂತದ ಟ್ರಯಲ್‌ನಲ್ಲಿ ಲಸಿಕೆ ಪಡೆದ ವ್ಯಕ್ತಿಯೊಬ್ಬರು ಸಾವೀಗೀಡಾಗಿದ್ದಾರೆ. ಈ ಕುರಿತು ಶನಿವಾರ ಪ್ರಕಟಣೆ ನೀಡಿರುವ ಕೊವ್ಯಾಕ್ಸಿನ್ ಉತ್ಪಾದಕ ಭಾರತ್ ಬಯೋಟೆಕ್, ವ್ಯಕ್ತಿಗೆ ವಿಷ ಸೇವನೆ ಮಾಡಿಸಿರುವ ಶಂಕೆಯಿದ್ದು, ಆ ಕಾರಣಕ್ಕೆ ಹೃದಯ ಉಸಿರಾಟ ವೈಫಲ್ಯದಿಂದ ವ್ಯಕ್ತಿ ಮೃತನಾಗಿರಬಹುದು. ಈ ಪ್ರಕರಣ ಈಗ ಪೊಲೀಸ್ ತನಿಖೆಯಲ್ಲಿದೆ ಎಂದು ವಿವರಣೆ ನೀಡಿದೆ. ಈ ಹೇಳಿಕೆಯು ಭೋಪಾಲ್‌ನ ಗಾಂಧಿ ಮೆಡಿಕಲ್ ಕಾಲೇಜ್ ನೀಡಿದ ಮರಣೋತ್ತರ ಪರೀಕ್ಷೆಯ ವರದಿಯನ್ನು ಆಧರಿಸಿದೆ.

‘ನಮ್ಮ ಒಬ್ಬ ಸ್ವಯಂಸೇವಕ ಡಿಸೆಂಬರ್ 21 ರಂದು ಮೃತಪಟ್ಟ. ಈ ಸಾವಿನ ಕುರಿತು ಮೃತರ ಮಗ ಪೀಪಲ್ಸ್ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ & ರಿಸರ್ಚ್ ಸೆಂಟರ್‌ಗೆ ವರದಿ ಮಾಡಿದರು. ಮೃತ ಸ್ವಯಂಸೇವಕ ಮೂರನೇ ಹಂತದ ಟ್ರಯಲ್‌ಗೆ ಸೇರ್ಪಡೆಯಾಗುವ ಮುನ್ನ ಎಲ್ಲ ಮಾನದಂಡಗಳಲ್ಲೂ ಅರ್ಹರಾಗಿದ್ದರು. ಆ ವ್ಯಕ್ತಿಗೆ ಡೋಸ್ ನೀಡಿದ ಹಿಂದಿನ 7 ದಿನಗಳ ಕಾಲ ಅವರು ಆರೋಗ್ಯವಂತರಾಗಿದ್ದರು ಎಂದು ನಮ್ಮ ದಾಖಲೆ ಹೇಳುತ್ತಿವೆ. ಡೋಸ್ ಪಡೆದ 9 ದಿನಗಳ ನಂತರ ಆ ವ್ಯಕ್ತಿ ಮೃತರಾಗಿದ್ದು, ಪ್ರಾಥಮಿಕ ಪರಿಶೀಲನೆಗಳ ಪ್ರಕಾರ ಸಾವು ಡೋಸಿಂಗ್ ಕಾರಣದಿಂದ ಸಂಭವಿಸಿಲ್ಲ’ ಎಂದು ಭಾರತ್ ಬಯೋಟೆಕ್ ಪ್ರಕಟಣೆ ಹೇಳುತ್ತಿದೆ.

“ಮೃತ ಸ್ವಯಂಸೇವಕ ‘ಅಧ್ಯಯನದ ಲಸಿಕೆ’ (study vaccine) ಅಥವಾ ಪ್ಲಾಸಿಬೊ ಪಡೆದಿದ್ದರೆ ಎಂಬುದನ್ನು ನಾವು ಖಚಿತವಾಗಿ ಹೇಳಲು ಆಧಾರಗಳಿಲ್ಲ” ಎಂದೂ ಹೇಳುವ ಮೂಲಕ ಭಾರತ್ ಬಯೋಟೆಕ್ ಗೊಂದಲ ಮೂಡಿಸಿದೆ.

ಭಾರತದ ಔಷಧ ನಿಯಂತ್ರಕರು ಕೊವಿಶೀಲ್ಡ್ ಮತ್ತು ಈ ವಿವಾದಾತ್ಮಕ ಕೊವ್ಯಾಕ್ಸಿನ್ ತುರ್ತು ಬಳಕೆಗೆ ಈಗಾಗಲೇ ಅನುಮತಿ ನೀಡಿದ್ದಾರೆ. ಜನೆವರಿ 16 ರಿಂದ ಲಸಿಕಾ ಕಾರ್ಯಕ್ರಮ ಆರಂಭವಾಗಲಿದೆ.

3ನೇ ಹಂತದ ಟ್ರಯಲ್ಸ್ ಪೂರ್ಣಗೊಳಿಸಿಲ್ಲ ಮತ್ತು ಸುರಕ್ಷತಾ, ಪರಿಣಾಮಕಾರಿತ್ವದ ದತ್ತಾಂಶ-ಮಾಹಿತಿಯನ್ನು ಪ್ರಕಟಿಸಿಲ್ಲ ಎಂಬ ವಿವಾದಕ್ಕೆ ಈಡಾಗಿರುವ ಏಕೈಕ ದೇಸಿ ಲಸಿಕೆ ಕೊವ್ಯಾಕ್ಸಿನ್, ಈಗ 3ನೇ ಹಂತದ ಟ್ರಯಲ್‌ನ ಸ್ವಯಂಸೇವಕರೊಬ್ಬರ ಸಾವಿನ ನಂತರ ಇನ್ನಷ್ಟು ಆತಂಕ ಮೂಡಿಸಿದೆ.

2019ರ ‘ನ್ಯೂ ಡ್ರಗ್ಸ್ & ಕ್ಲಿನಿಕಲ್ ಟ್ರಯಲ್ ರೂಲ್ಸ್’ (NDCT) ಪ್ರಕಾರ ಈ ಪ್ರಕರಣವನ್ನು ಕಂಪನಿಯ ಸೈಟ್ ತಂಡವು, Institutional Ethics Committee, the Central Drugs Control Standards Organization (CDSCO) and the Data Safety Monitoring Board (DSMB) ಸಂಸ್ಥೆಗಳಿಗೆ ವರದಿ ಮಾಡಿದೆ.

ಸ್ವಯಂಸೇವಕರಲ್ಲಿ ಮೊದಲೇ ಸುಪ್ತವಾಗಿದ್ದ ರೋಗಗಳೂ ಸಾವಿಗೆ ಕಾರಣ ಇರಬಹುದು ಎಂಬ ಭಾರತ್ ಬಯೋಟೆಕ್ ಹೇಳಿಕೆಯನ್ನೂ ಗಮನಿಸಬೇಕು. ಆದರೆ ಯಾವುದೇ ಕಾರಣವಿರಲಿ, ಟ್ರಯಲ್ಸ್‌ನಲ್ಲಿ ಸ್ವಯಂಸೇವಕ ಸಾವೀಗೀಡಾದರೆ ಅದನ್ನು ಉನ್ನತ ಸಂಸ್ಥೆಗಳ ಗಮನಕ್ಕೆ ತರಬೇಕು ಎಂದು New Drugs & Clinical Trials Rules (NDCT) ಹೇಳುತ್ತದೆ.

ಈಗ ಉನ್ನತ ಸಂಸ್ಥೆಗಳ ಗಮನಕ್ಕೆ ಈ ವಿಷಯ ಬಂದಾಗಿದೆ. ಅವರು ಕ್ರಮ ಕೈಗೊಳ್ಳಬಹುದು ಎಂದು ಯಾವ ವಿಶ್ವಾಸದಿಂದ ಹೇಳುವುದು?


ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...