Homeಮುಖಪುಟಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

ಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

- Advertisement -
- Advertisement -

ವಿವಾದಾತ್ಮಕ ಲಸಿಕೆ ಕೊವ್ಯಾಕ್ಸಿನ್‌ನ ಮೂರನೇ ಹಂತದ ಟ್ರಯಲ್‌ನಲ್ಲಿ ಲಸಿಕೆ ಪಡೆದ ವ್ಯಕ್ತಿಯೊಬ್ಬರು ಸಾವೀಗೀಡಾಗಿದ್ದಾರೆ. ಈ ಕುರಿತು ಶನಿವಾರ ಪ್ರಕಟಣೆ ನೀಡಿರುವ ಕೊವ್ಯಾಕ್ಸಿನ್ ಉತ್ಪಾದಕ ಭಾರತ್ ಬಯೋಟೆಕ್, ವ್ಯಕ್ತಿಗೆ ವಿಷ ಸೇವನೆ ಮಾಡಿಸಿರುವ ಶಂಕೆಯಿದ್ದು, ಆ ಕಾರಣಕ್ಕೆ ಹೃದಯ ಉಸಿರಾಟ ವೈಫಲ್ಯದಿಂದ ವ್ಯಕ್ತಿ ಮೃತನಾಗಿರಬಹುದು. ಈ ಪ್ರಕರಣ ಈಗ ಪೊಲೀಸ್ ತನಿಖೆಯಲ್ಲಿದೆ ಎಂದು ವಿವರಣೆ ನೀಡಿದೆ. ಈ ಹೇಳಿಕೆಯು ಭೋಪಾಲ್‌ನ ಗಾಂಧಿ ಮೆಡಿಕಲ್ ಕಾಲೇಜ್ ನೀಡಿದ ಮರಣೋತ್ತರ ಪರೀಕ್ಷೆಯ ವರದಿಯನ್ನು ಆಧರಿಸಿದೆ.

‘ನಮ್ಮ ಒಬ್ಬ ಸ್ವಯಂಸೇವಕ ಡಿಸೆಂಬರ್ 21 ರಂದು ಮೃತಪಟ್ಟ. ಈ ಸಾವಿನ ಕುರಿತು ಮೃತರ ಮಗ ಪೀಪಲ್ಸ್ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ & ರಿಸರ್ಚ್ ಸೆಂಟರ್‌ಗೆ ವರದಿ ಮಾಡಿದರು. ಮೃತ ಸ್ವಯಂಸೇವಕ ಮೂರನೇ ಹಂತದ ಟ್ರಯಲ್‌ಗೆ ಸೇರ್ಪಡೆಯಾಗುವ ಮುನ್ನ ಎಲ್ಲ ಮಾನದಂಡಗಳಲ್ಲೂ ಅರ್ಹರಾಗಿದ್ದರು. ಆ ವ್ಯಕ್ತಿಗೆ ಡೋಸ್ ನೀಡಿದ ಹಿಂದಿನ 7 ದಿನಗಳ ಕಾಲ ಅವರು ಆರೋಗ್ಯವಂತರಾಗಿದ್ದರು ಎಂದು ನಮ್ಮ ದಾಖಲೆ ಹೇಳುತ್ತಿವೆ. ಡೋಸ್ ಪಡೆದ 9 ದಿನಗಳ ನಂತರ ಆ ವ್ಯಕ್ತಿ ಮೃತರಾಗಿದ್ದು, ಪ್ರಾಥಮಿಕ ಪರಿಶೀಲನೆಗಳ ಪ್ರಕಾರ ಸಾವು ಡೋಸಿಂಗ್ ಕಾರಣದಿಂದ ಸಂಭವಿಸಿಲ್ಲ’ ಎಂದು ಭಾರತ್ ಬಯೋಟೆಕ್ ಪ್ರಕಟಣೆ ಹೇಳುತ್ತಿದೆ.

“ಮೃತ ಸ್ವಯಂಸೇವಕ ‘ಅಧ್ಯಯನದ ಲಸಿಕೆ’ (study vaccine) ಅಥವಾ ಪ್ಲಾಸಿಬೊ ಪಡೆದಿದ್ದರೆ ಎಂಬುದನ್ನು ನಾವು ಖಚಿತವಾಗಿ ಹೇಳಲು ಆಧಾರಗಳಿಲ್ಲ” ಎಂದೂ ಹೇಳುವ ಮೂಲಕ ಭಾರತ್ ಬಯೋಟೆಕ್ ಗೊಂದಲ ಮೂಡಿಸಿದೆ.

ಭಾರತದ ಔಷಧ ನಿಯಂತ್ರಕರು ಕೊವಿಶೀಲ್ಡ್ ಮತ್ತು ಈ ವಿವಾದಾತ್ಮಕ ಕೊವ್ಯಾಕ್ಸಿನ್ ತುರ್ತು ಬಳಕೆಗೆ ಈಗಾಗಲೇ ಅನುಮತಿ ನೀಡಿದ್ದಾರೆ. ಜನೆವರಿ 16 ರಿಂದ ಲಸಿಕಾ ಕಾರ್ಯಕ್ರಮ ಆರಂಭವಾಗಲಿದೆ.

3ನೇ ಹಂತದ ಟ್ರಯಲ್ಸ್ ಪೂರ್ಣಗೊಳಿಸಿಲ್ಲ ಮತ್ತು ಸುರಕ್ಷತಾ, ಪರಿಣಾಮಕಾರಿತ್ವದ ದತ್ತಾಂಶ-ಮಾಹಿತಿಯನ್ನು ಪ್ರಕಟಿಸಿಲ್ಲ ಎಂಬ ವಿವಾದಕ್ಕೆ ಈಡಾಗಿರುವ ಏಕೈಕ ದೇಸಿ ಲಸಿಕೆ ಕೊವ್ಯಾಕ್ಸಿನ್, ಈಗ 3ನೇ ಹಂತದ ಟ್ರಯಲ್‌ನ ಸ್ವಯಂಸೇವಕರೊಬ್ಬರ ಸಾವಿನ ನಂತರ ಇನ್ನಷ್ಟು ಆತಂಕ ಮೂಡಿಸಿದೆ.

2019ರ ‘ನ್ಯೂ ಡ್ರಗ್ಸ್ & ಕ್ಲಿನಿಕಲ್ ಟ್ರಯಲ್ ರೂಲ್ಸ್’ (NDCT) ಪ್ರಕಾರ ಈ ಪ್ರಕರಣವನ್ನು ಕಂಪನಿಯ ಸೈಟ್ ತಂಡವು, Institutional Ethics Committee, the Central Drugs Control Standards Organization (CDSCO) and the Data Safety Monitoring Board (DSMB) ಸಂಸ್ಥೆಗಳಿಗೆ ವರದಿ ಮಾಡಿದೆ.

ಸ್ವಯಂಸೇವಕರಲ್ಲಿ ಮೊದಲೇ ಸುಪ್ತವಾಗಿದ್ದ ರೋಗಗಳೂ ಸಾವಿಗೆ ಕಾರಣ ಇರಬಹುದು ಎಂಬ ಭಾರತ್ ಬಯೋಟೆಕ್ ಹೇಳಿಕೆಯನ್ನೂ ಗಮನಿಸಬೇಕು. ಆದರೆ ಯಾವುದೇ ಕಾರಣವಿರಲಿ, ಟ್ರಯಲ್ಸ್‌ನಲ್ಲಿ ಸ್ವಯಂಸೇವಕ ಸಾವೀಗೀಡಾದರೆ ಅದನ್ನು ಉನ್ನತ ಸಂಸ್ಥೆಗಳ ಗಮನಕ್ಕೆ ತರಬೇಕು ಎಂದು New Drugs & Clinical Trials Rules (NDCT) ಹೇಳುತ್ತದೆ.

ಈಗ ಉನ್ನತ ಸಂಸ್ಥೆಗಳ ಗಮನಕ್ಕೆ ಈ ವಿಷಯ ಬಂದಾಗಿದೆ. ಅವರು ಕ್ರಮ ಕೈಗೊಳ್ಳಬಹುದು ಎಂದು ಯಾವ ವಿಶ್ವಾಸದಿಂದ ಹೇಳುವುದು?


ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...