Homeಮುಖಪುಟಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

ಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

- Advertisement -
- Advertisement -

ವಿವಾದಾತ್ಮಕ ಲಸಿಕೆ ಕೊವ್ಯಾಕ್ಸಿನ್‌ನ ಮೂರನೇ ಹಂತದ ಟ್ರಯಲ್‌ನಲ್ಲಿ ಲಸಿಕೆ ಪಡೆದ ವ್ಯಕ್ತಿಯೊಬ್ಬರು ಸಾವೀಗೀಡಾಗಿದ್ದಾರೆ. ಈ ಕುರಿತು ಶನಿವಾರ ಪ್ರಕಟಣೆ ನೀಡಿರುವ ಕೊವ್ಯಾಕ್ಸಿನ್ ಉತ್ಪಾದಕ ಭಾರತ್ ಬಯೋಟೆಕ್, ವ್ಯಕ್ತಿಗೆ ವಿಷ ಸೇವನೆ ಮಾಡಿಸಿರುವ ಶಂಕೆಯಿದ್ದು, ಆ ಕಾರಣಕ್ಕೆ ಹೃದಯ ಉಸಿರಾಟ ವೈಫಲ್ಯದಿಂದ ವ್ಯಕ್ತಿ ಮೃತನಾಗಿರಬಹುದು. ಈ ಪ್ರಕರಣ ಈಗ ಪೊಲೀಸ್ ತನಿಖೆಯಲ್ಲಿದೆ ಎಂದು ವಿವರಣೆ ನೀಡಿದೆ. ಈ ಹೇಳಿಕೆಯು ಭೋಪಾಲ್‌ನ ಗಾಂಧಿ ಮೆಡಿಕಲ್ ಕಾಲೇಜ್ ನೀಡಿದ ಮರಣೋತ್ತರ ಪರೀಕ್ಷೆಯ ವರದಿಯನ್ನು ಆಧರಿಸಿದೆ.

‘ನಮ್ಮ ಒಬ್ಬ ಸ್ವಯಂಸೇವಕ ಡಿಸೆಂಬರ್ 21 ರಂದು ಮೃತಪಟ್ಟ. ಈ ಸಾವಿನ ಕುರಿತು ಮೃತರ ಮಗ ಪೀಪಲ್ಸ್ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ & ರಿಸರ್ಚ್ ಸೆಂಟರ್‌ಗೆ ವರದಿ ಮಾಡಿದರು. ಮೃತ ಸ್ವಯಂಸೇವಕ ಮೂರನೇ ಹಂತದ ಟ್ರಯಲ್‌ಗೆ ಸೇರ್ಪಡೆಯಾಗುವ ಮುನ್ನ ಎಲ್ಲ ಮಾನದಂಡಗಳಲ್ಲೂ ಅರ್ಹರಾಗಿದ್ದರು. ಆ ವ್ಯಕ್ತಿಗೆ ಡೋಸ್ ನೀಡಿದ ಹಿಂದಿನ 7 ದಿನಗಳ ಕಾಲ ಅವರು ಆರೋಗ್ಯವಂತರಾಗಿದ್ದರು ಎಂದು ನಮ್ಮ ದಾಖಲೆ ಹೇಳುತ್ತಿವೆ. ಡೋಸ್ ಪಡೆದ 9 ದಿನಗಳ ನಂತರ ಆ ವ್ಯಕ್ತಿ ಮೃತರಾಗಿದ್ದು, ಪ್ರಾಥಮಿಕ ಪರಿಶೀಲನೆಗಳ ಪ್ರಕಾರ ಸಾವು ಡೋಸಿಂಗ್ ಕಾರಣದಿಂದ ಸಂಭವಿಸಿಲ್ಲ’ ಎಂದು ಭಾರತ್ ಬಯೋಟೆಕ್ ಪ್ರಕಟಣೆ ಹೇಳುತ್ತಿದೆ.

“ಮೃತ ಸ್ವಯಂಸೇವಕ ‘ಅಧ್ಯಯನದ ಲಸಿಕೆ’ (study vaccine) ಅಥವಾ ಪ್ಲಾಸಿಬೊ ಪಡೆದಿದ್ದರೆ ಎಂಬುದನ್ನು ನಾವು ಖಚಿತವಾಗಿ ಹೇಳಲು ಆಧಾರಗಳಿಲ್ಲ” ಎಂದೂ ಹೇಳುವ ಮೂಲಕ ಭಾರತ್ ಬಯೋಟೆಕ್ ಗೊಂದಲ ಮೂಡಿಸಿದೆ.

ಭಾರತದ ಔಷಧ ನಿಯಂತ್ರಕರು ಕೊವಿಶೀಲ್ಡ್ ಮತ್ತು ಈ ವಿವಾದಾತ್ಮಕ ಕೊವ್ಯಾಕ್ಸಿನ್ ತುರ್ತು ಬಳಕೆಗೆ ಈಗಾಗಲೇ ಅನುಮತಿ ನೀಡಿದ್ದಾರೆ. ಜನೆವರಿ 16 ರಿಂದ ಲಸಿಕಾ ಕಾರ್ಯಕ್ರಮ ಆರಂಭವಾಗಲಿದೆ.

3ನೇ ಹಂತದ ಟ್ರಯಲ್ಸ್ ಪೂರ್ಣಗೊಳಿಸಿಲ್ಲ ಮತ್ತು ಸುರಕ್ಷತಾ, ಪರಿಣಾಮಕಾರಿತ್ವದ ದತ್ತಾಂಶ-ಮಾಹಿತಿಯನ್ನು ಪ್ರಕಟಿಸಿಲ್ಲ ಎಂಬ ವಿವಾದಕ್ಕೆ ಈಡಾಗಿರುವ ಏಕೈಕ ದೇಸಿ ಲಸಿಕೆ ಕೊವ್ಯಾಕ್ಸಿನ್, ಈಗ 3ನೇ ಹಂತದ ಟ್ರಯಲ್‌ನ ಸ್ವಯಂಸೇವಕರೊಬ್ಬರ ಸಾವಿನ ನಂತರ ಇನ್ನಷ್ಟು ಆತಂಕ ಮೂಡಿಸಿದೆ.

2019ರ ‘ನ್ಯೂ ಡ್ರಗ್ಸ್ & ಕ್ಲಿನಿಕಲ್ ಟ್ರಯಲ್ ರೂಲ್ಸ್’ (NDCT) ಪ್ರಕಾರ ಈ ಪ್ರಕರಣವನ್ನು ಕಂಪನಿಯ ಸೈಟ್ ತಂಡವು, Institutional Ethics Committee, the Central Drugs Control Standards Organization (CDSCO) and the Data Safety Monitoring Board (DSMB) ಸಂಸ್ಥೆಗಳಿಗೆ ವರದಿ ಮಾಡಿದೆ.

ಸ್ವಯಂಸೇವಕರಲ್ಲಿ ಮೊದಲೇ ಸುಪ್ತವಾಗಿದ್ದ ರೋಗಗಳೂ ಸಾವಿಗೆ ಕಾರಣ ಇರಬಹುದು ಎಂಬ ಭಾರತ್ ಬಯೋಟೆಕ್ ಹೇಳಿಕೆಯನ್ನೂ ಗಮನಿಸಬೇಕು. ಆದರೆ ಯಾವುದೇ ಕಾರಣವಿರಲಿ, ಟ್ರಯಲ್ಸ್‌ನಲ್ಲಿ ಸ್ವಯಂಸೇವಕ ಸಾವೀಗೀಡಾದರೆ ಅದನ್ನು ಉನ್ನತ ಸಂಸ್ಥೆಗಳ ಗಮನಕ್ಕೆ ತರಬೇಕು ಎಂದು New Drugs & Clinical Trials Rules (NDCT) ಹೇಳುತ್ತದೆ.

ಈಗ ಉನ್ನತ ಸಂಸ್ಥೆಗಳ ಗಮನಕ್ಕೆ ಈ ವಿಷಯ ಬಂದಾಗಿದೆ. ಅವರು ಕ್ರಮ ಕೈಗೊಳ್ಳಬಹುದು ಎಂದು ಯಾವ ವಿಶ್ವಾಸದಿಂದ ಹೇಳುವುದು?


ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...