Homeಮುಖಪುಟಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

ಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

- Advertisement -
- Advertisement -

ವಿವಾದಾತ್ಮಕ ಲಸಿಕೆ ಕೊವ್ಯಾಕ್ಸಿನ್‌ನ ಮೂರನೇ ಹಂತದ ಟ್ರಯಲ್‌ನಲ್ಲಿ ಲಸಿಕೆ ಪಡೆದ ವ್ಯಕ್ತಿಯೊಬ್ಬರು ಸಾವೀಗೀಡಾಗಿದ್ದಾರೆ. ಈ ಕುರಿತು ಶನಿವಾರ ಪ್ರಕಟಣೆ ನೀಡಿರುವ ಕೊವ್ಯಾಕ್ಸಿನ್ ಉತ್ಪಾದಕ ಭಾರತ್ ಬಯೋಟೆಕ್, ವ್ಯಕ್ತಿಗೆ ವಿಷ ಸೇವನೆ ಮಾಡಿಸಿರುವ ಶಂಕೆಯಿದ್ದು, ಆ ಕಾರಣಕ್ಕೆ ಹೃದಯ ಉಸಿರಾಟ ವೈಫಲ್ಯದಿಂದ ವ್ಯಕ್ತಿ ಮೃತನಾಗಿರಬಹುದು. ಈ ಪ್ರಕರಣ ಈಗ ಪೊಲೀಸ್ ತನಿಖೆಯಲ್ಲಿದೆ ಎಂದು ವಿವರಣೆ ನೀಡಿದೆ. ಈ ಹೇಳಿಕೆಯು ಭೋಪಾಲ್‌ನ ಗಾಂಧಿ ಮೆಡಿಕಲ್ ಕಾಲೇಜ್ ನೀಡಿದ ಮರಣೋತ್ತರ ಪರೀಕ್ಷೆಯ ವರದಿಯನ್ನು ಆಧರಿಸಿದೆ.

‘ನಮ್ಮ ಒಬ್ಬ ಸ್ವಯಂಸೇವಕ ಡಿಸೆಂಬರ್ 21 ರಂದು ಮೃತಪಟ್ಟ. ಈ ಸಾವಿನ ಕುರಿತು ಮೃತರ ಮಗ ಪೀಪಲ್ಸ್ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ & ರಿಸರ್ಚ್ ಸೆಂಟರ್‌ಗೆ ವರದಿ ಮಾಡಿದರು. ಮೃತ ಸ್ವಯಂಸೇವಕ ಮೂರನೇ ಹಂತದ ಟ್ರಯಲ್‌ಗೆ ಸೇರ್ಪಡೆಯಾಗುವ ಮುನ್ನ ಎಲ್ಲ ಮಾನದಂಡಗಳಲ್ಲೂ ಅರ್ಹರಾಗಿದ್ದರು. ಆ ವ್ಯಕ್ತಿಗೆ ಡೋಸ್ ನೀಡಿದ ಹಿಂದಿನ 7 ದಿನಗಳ ಕಾಲ ಅವರು ಆರೋಗ್ಯವಂತರಾಗಿದ್ದರು ಎಂದು ನಮ್ಮ ದಾಖಲೆ ಹೇಳುತ್ತಿವೆ. ಡೋಸ್ ಪಡೆದ 9 ದಿನಗಳ ನಂತರ ಆ ವ್ಯಕ್ತಿ ಮೃತರಾಗಿದ್ದು, ಪ್ರಾಥಮಿಕ ಪರಿಶೀಲನೆಗಳ ಪ್ರಕಾರ ಸಾವು ಡೋಸಿಂಗ್ ಕಾರಣದಿಂದ ಸಂಭವಿಸಿಲ್ಲ’ ಎಂದು ಭಾರತ್ ಬಯೋಟೆಕ್ ಪ್ರಕಟಣೆ ಹೇಳುತ್ತಿದೆ.

“ಮೃತ ಸ್ವಯಂಸೇವಕ ‘ಅಧ್ಯಯನದ ಲಸಿಕೆ’ (study vaccine) ಅಥವಾ ಪ್ಲಾಸಿಬೊ ಪಡೆದಿದ್ದರೆ ಎಂಬುದನ್ನು ನಾವು ಖಚಿತವಾಗಿ ಹೇಳಲು ಆಧಾರಗಳಿಲ್ಲ” ಎಂದೂ ಹೇಳುವ ಮೂಲಕ ಭಾರತ್ ಬಯೋಟೆಕ್ ಗೊಂದಲ ಮೂಡಿಸಿದೆ.

ಭಾರತದ ಔಷಧ ನಿಯಂತ್ರಕರು ಕೊವಿಶೀಲ್ಡ್ ಮತ್ತು ಈ ವಿವಾದಾತ್ಮಕ ಕೊವ್ಯಾಕ್ಸಿನ್ ತುರ್ತು ಬಳಕೆಗೆ ಈಗಾಗಲೇ ಅನುಮತಿ ನೀಡಿದ್ದಾರೆ. ಜನೆವರಿ 16 ರಿಂದ ಲಸಿಕಾ ಕಾರ್ಯಕ್ರಮ ಆರಂಭವಾಗಲಿದೆ.

3ನೇ ಹಂತದ ಟ್ರಯಲ್ಸ್ ಪೂರ್ಣಗೊಳಿಸಿಲ್ಲ ಮತ್ತು ಸುರಕ್ಷತಾ, ಪರಿಣಾಮಕಾರಿತ್ವದ ದತ್ತಾಂಶ-ಮಾಹಿತಿಯನ್ನು ಪ್ರಕಟಿಸಿಲ್ಲ ಎಂಬ ವಿವಾದಕ್ಕೆ ಈಡಾಗಿರುವ ಏಕೈಕ ದೇಸಿ ಲಸಿಕೆ ಕೊವ್ಯಾಕ್ಸಿನ್, ಈಗ 3ನೇ ಹಂತದ ಟ್ರಯಲ್‌ನ ಸ್ವಯಂಸೇವಕರೊಬ್ಬರ ಸಾವಿನ ನಂತರ ಇನ್ನಷ್ಟು ಆತಂಕ ಮೂಡಿಸಿದೆ.

2019ರ ‘ನ್ಯೂ ಡ್ರಗ್ಸ್ & ಕ್ಲಿನಿಕಲ್ ಟ್ರಯಲ್ ರೂಲ್ಸ್’ (NDCT) ಪ್ರಕಾರ ಈ ಪ್ರಕರಣವನ್ನು ಕಂಪನಿಯ ಸೈಟ್ ತಂಡವು, Institutional Ethics Committee, the Central Drugs Control Standards Organization (CDSCO) and the Data Safety Monitoring Board (DSMB) ಸಂಸ್ಥೆಗಳಿಗೆ ವರದಿ ಮಾಡಿದೆ.

ಸ್ವಯಂಸೇವಕರಲ್ಲಿ ಮೊದಲೇ ಸುಪ್ತವಾಗಿದ್ದ ರೋಗಗಳೂ ಸಾವಿಗೆ ಕಾರಣ ಇರಬಹುದು ಎಂಬ ಭಾರತ್ ಬಯೋಟೆಕ್ ಹೇಳಿಕೆಯನ್ನೂ ಗಮನಿಸಬೇಕು. ಆದರೆ ಯಾವುದೇ ಕಾರಣವಿರಲಿ, ಟ್ರಯಲ್ಸ್‌ನಲ್ಲಿ ಸ್ವಯಂಸೇವಕ ಸಾವೀಗೀಡಾದರೆ ಅದನ್ನು ಉನ್ನತ ಸಂಸ್ಥೆಗಳ ಗಮನಕ್ಕೆ ತರಬೇಕು ಎಂದು New Drugs & Clinical Trials Rules (NDCT) ಹೇಳುತ್ತದೆ.

ಈಗ ಉನ್ನತ ಸಂಸ್ಥೆಗಳ ಗಮನಕ್ಕೆ ಈ ವಿಷಯ ಬಂದಾಗಿದೆ. ಅವರು ಕ್ರಮ ಕೈಗೊಳ್ಳಬಹುದು ಎಂದು ಯಾವ ವಿಶ್ವಾಸದಿಂದ ಹೇಳುವುದು?


ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...