Homeಮುಖಪುಟಬಿಹಾರ: ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಯುವಕ ಸಾವು, ತಾಯಿಯಿಂದ ಹತ್ಯೆ ಆರೋಪ

ಬಿಹಾರ: ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಯುವಕ ಸಾವು, ತಾಯಿಯಿಂದ ಹತ್ಯೆ ಆರೋಪ

- Advertisement -
- Advertisement -

ಪಾಟ್ನಾ: ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ 20 ವರ್ಷದ ಫೈಜ್ ಅನ್ವರ್ ಎಂಬ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಅನ್ವರ್ ಕುಟುಂಬಸ್ಥರು ಪೊಲೀಸರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಪೊಲೀಸ್ ವಶದಲ್ಲಿ ಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸಿವಾನ್‌ನ ಮೊಹಿಯುದ್ದೀನ್‌ಪುರದ ನಿವಾಸಿಯಾಗಿರುವ ಅನ್ವರ್ ಅವರನ್ನು ಜುಲೈ 31, 2025ರಂದು ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದರು. ಆದರೆ ಆಗಸ್ಟ್ 2 ರಂದು ಪೊಲೀಸರು, ಆತ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿ ಮೃತ ಎಂದು ಘೋಷಿಸಿದ್ದಾರೆ. ಈ ವಿಚಾರ ಕೇಳಿ ಆಘಾತಕ್ಕೊಳಗಾದ ಅನ್ವರ್ ಕುಟುಂಬಸ್ಥರು, ಆತ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಪೊಲೀಸರು ಥಳಿಸಿದ್ದಾರೆ, ಆತನದ್ದು ಆತ್ಮಹತ್ಯೆಯಲ್ಲ, ಇದೊಂದು ಉದ್ದೇಶಪೂರ್ವಕ ಕೊಲೆ ಎಂದು ಆರೋಪಿಸಿದ್ದಾರೆ.

ಅನ್ವರ್ ಅವರ ಹಿರಿಯ ಸಹೋದರ ಸೈಫ್ ಅಲಿ, “ನನ್ನ ಸಹೋದರನ ದೇಹದ ಮೇಲೆ ಗಾಯದ ಗುರುತುಗಳಿದ್ದವು. ಆತನ ಕುತ್ತಿಗೆಯ ಮೇಲೆ ಎರಡು ಆಳವಾದ ಗುರುತುಗಳಿದ್ದವು. ಇದು ಬಲವಂತವಾಗಿ ಕತ್ತು ಹಿಸುಕಿ ಹತ್ಯೆ ಮಾಡಿರುವುದನ್ನು ಸೂಚಿಸುತ್ತದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಾನು ನನ್ನ ಸಹೋದರನನ್ನು ಭೇಟಿಯಾಗಲು ಹಲವಾರು ಬಾರಿ ಪ್ರಯತ್ನಿಸಿದೆ, ಆದರೆ ಪೊಲೀಸರು ನನ್ನನ್ನು ಮೂರು ಬಾರಿ ಹಿಂದಕ್ಕೆ ಕಳುಹಿಸಿದರು. ನಾನು ಅಂತಿಮವಾಗಿ ಅವನನ್ನು ಭೇಟಿಯಾಗಲು ಅವಕಾಶ ಪಡೆದಾಗ, ಪೊಲೀಸರು ನನ್ನ ಸಹೋದರನ ದೇಹವನ್ನು ಜೈಲಿನ ಆವರಣದಿಂದ ಹೊರಗೆ ಕೊಂಡೊಯ್ಯುವುದನ್ನು ನೋಡಿದೆ. ಅದು ನನ್ನ ಸಹೋದರ ಫೈಜ್ ಎಂದು ಪೊಲೀಸರು ನನಗೆ ತಿಳಿಸಲಿಲ್ಲ” ಎಂದು ಅಲಿ ಆರೋಪಿಸಿದ್ದಾರೆ.

“ನಾನು ಮಧ್ಯಪ್ರವೇಶಿಸಿ, ಅದು ನನ್ನ ಸಹೋದರ ಎಂದು ಖಚಿತಪಡಿಸಿಕೊಂಡೆ. ಪೊಲೀಸರ ಬಳಿ ದೇಹವನ್ನು ಎಲ್ಲಿಗೆ ಮತ್ತು ಏಕೆ ಕರೆದೊಯ್ಯುತ್ತಿದ್ದಾರೆ ಎಂದು ಕೇಳಿದಾಗ, ಅವರು ಆತ ಜೈಲಿನ ಆಸ್ಪತ್ರೆಯ ಒಳಗೆ ಬಿದ್ದಿದ್ದಾನೆ, ಆ ಕಾರಣಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದರು. ಆದರೆ ನಾವು ಸದರ್ ಆಸ್ಪತ್ರೆಗೆ ತಲುಪಿದಾಗ, ಆತನನ್ನು ಮೃತನೆಂದು ಘೋಷಿಸಲಾಗಿತ್ತು” ಎಂದು ಸೈಫ್ ಅಲಿ ಹೇಳಿದ್ದಾರೆ.

ಆಸ್ಪತ್ರೆಯ ಅಧಿಕಾರಿಗಳು ನನ್ನನ್ನು ಪೊಲೀಸರ ಬಳಿ ಕಳುಹಿಸುತ್ತಿದ್ದರು ಮತ್ತು ಪೊಲೀಸರು ನನ್ನನ್ನು ವೈದ್ಯರ ಬಳಿ ಕಳುಹಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ. ಈ ಗೊಂದಲಮಯ ಪರಿಸ್ಥಿತಿಯಿಂದ ಬೇಸತ್ತು, ಅನ್ವರ್ ಅವರ ಕುಟುಂಬವು ಆಸ್ಪತ್ರೆಯ ಹೊರಗೆ ಮೃತದೇಹದೊಂದಿಗೆ ಪ್ರತಿಭಟನೆ ನಡೆಸಿತು. ನಂತರದಲ್ಲಿ, ಪೊಲೀಸರು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದರು.

ಅಧಿಕಾರಿಗಳು ಮೂರು ದಿನಗಳಿಗೂ ಹೆಚ್ಚು ಕಾಲ ಮರಣೋತ್ತರ ಪರೀಕ್ಷೆಯ ವರದಿಯನ್ನು ತಡೆಹಿಡಿದಿದ್ದಾರೆ ಎಂದು ಸೈಫ್ ಅಲಿ ಆರೋಪಿಸಿದ್ದಾರೆ. ಈ ವಿಳಂಬವು ಕಸ್ಟಡಿಯಲ್ಲಿನ ಸಾವಿನ ಮೂಲಭೂತ ಶಿಷ್ಟಾಚಾರಗಳನ್ನು ಉಲ್ಲಂಘಿಸುತ್ತದೆ ಮತ್ತು ಸತ್ಯಾಂಶವನ್ನು ಮುಚ್ಚಿಡುವ ಪ್ರಯತ್ನದ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮೃತನ ಕುಟುಂಬವು ಆಗಸ್ಟ್ 8, 2025ರಂದು ಮೊಫಾಸಿಲ್ ಪೊಲೀಸ್ ಠಾಣೆಯಲ್ಲಿ ಲಿಖಿತ ಅರ್ಜಿ ಸಲ್ಲಿಸಿದೆ, ಆದರೆ ಎಫ್‌ಐಆರ್ ಇನ್ನೂ ದಾಖಲಾಗಿಲ್ಲ. ಅನ್ವರ್ ಅವರ ತಾಯಿ ಜೈದಾ ಖಾತೂನ್, ಜಿಲ್ಲಾಧಿಕಾರಿಗೆ ಸಲ್ಲಿಸಿದ ಲಿಖಿತ ಅರ್ಜಿಯಲ್ಲಿ, “ನನ್ನ ಮಗನನ್ನು ಪೊಲೀಸರು ಕಸ್ಟಡಿಯಲ್ಲಿ ಕೊಂದಿದ್ದಾರೆ” ಎಂದು ಹೇಳಿದ್ದಾರೆ ಮತ್ತು ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಸೈಫ್ ಅಲಿ ಅವರು ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ, ಸಿಬಿಐ ತನಿಖೆ ಮತ್ತು ಫೈಜ್‌ನ ಬಂಧನದ ಸಮಯದಲ್ಲಿ ಕರ್ತವ್ಯದಲ್ಲಿದ್ದ ಎಲ್ಲಾ ಅಧಿಕಾರಿಗಳ ತಕ್ಷಣದ ಅಮಾನತಿಗೆ ಒತ್ತಾಯಿಸಿದ್ದಾರೆ. ಕುಟುಂಬಕ್ಕೆ ಸಹಾಯ ಮಾಡುತ್ತಿರುವ ವಕೀಲರಾದ ಕೈಫ್ ಹಸನ್, ಈ ಪ್ರಕರಣದ ನಿರ್ವಹಣೆಯನ್ನು “ನ್ಯಾಯ ನಿರಾಕರಣೆ” ಎಂದು ಖಂಡಿಸಿದ್ದಾರೆ.

“ಇಂತಹ ಪ್ರಕರಣಗಳಲ್ಲಿ ಪಾರದರ್ಶಕತೆ ಖಚಿತಪಡಿಸುವುದು, ಫೋರೆನ್ಸಿಕ್ ಪರೀಕ್ಷೆಗಳನ್ನು ನಡೆಸುವುದು ಮತ್ತು ಸ್ವತಂತ್ರ ತನಿಖೆಗಳನ್ನು ಪ್ರಾರಂಭಿಸುವುದು ಸರ್ಕಾರದ ಕಾನೂನುಬದ್ಧ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ. ಲಾಕಪ್‌ ಅಥವಾ ಆಸ್ಪತ್ರೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿದ್ದವೇ ಎಂಬುದರ ಬಗ್ಗೆ ಯಾವುದೇ ತನಿಖೆ ನಡೆದಿಲ್ಲ. ಯಾವುದೇ ಸಿಸಿಟಿವಿ ದೃಶ್ಯಾವಳಿ ಅಥವಾ ಅಧಿಕೃತ ದಾಖಲೆಗಳನ್ನು ಕುಟುಂಬದೊಂದಿಗೆ ಹಂಚಿಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಫೈಜ್ ಅವರ ಕುಟುಂಬವು ತಮ್ಮ ಮರಣೋತ್ತರ ವರದಿಗಾಗಿ ಮತ್ತು ಅವರ ಸಾವಿಗೆ ನ್ಯಾಯಕ್ಕಾಗಿ ಕಾಯುತ್ತಿದೆ. ಆದರೆ, ಈವರೆಗೆ ಯಾವುದೇ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಿಲ್ಲ, ಪ್ರಶ್ನಿಸಿಲ್ಲ ಅಥವಾ ಯಾವುದೇ ಅಧಿಕೃತ ವಿಚಾರಣೆ ಪ್ರಾರಂಭವಾಗಿಲ್ಲ. ಕುಟುಂಬಸ್ಥರು ಇನ್ನೂ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದಾರೆ.

ಉತ್ತರಾಖಂಡ  ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...