Homeಮುಖಪುಟಬಿಹಾರ: ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಯುವಕ ಸಾವು, ತಾಯಿಯಿಂದ ಹತ್ಯೆ ಆರೋಪ

ಬಿಹಾರ: ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಯುವಕ ಸಾವು, ತಾಯಿಯಿಂದ ಹತ್ಯೆ ಆರೋಪ

- Advertisement -
- Advertisement -

ಪಾಟ್ನಾ: ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ 20 ವರ್ಷದ ಫೈಜ್ ಅನ್ವರ್ ಎಂಬ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಅನ್ವರ್ ಕುಟುಂಬಸ್ಥರು ಪೊಲೀಸರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಪೊಲೀಸ್ ವಶದಲ್ಲಿ ಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸಿವಾನ್‌ನ ಮೊಹಿಯುದ್ದೀನ್‌ಪುರದ ನಿವಾಸಿಯಾಗಿರುವ ಅನ್ವರ್ ಅವರನ್ನು ಜುಲೈ 31, 2025ರಂದು ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದರು. ಆದರೆ ಆಗಸ್ಟ್ 2 ರಂದು ಪೊಲೀಸರು, ಆತ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿ ಮೃತ ಎಂದು ಘೋಷಿಸಿದ್ದಾರೆ. ಈ ವಿಚಾರ ಕೇಳಿ ಆಘಾತಕ್ಕೊಳಗಾದ ಅನ್ವರ್ ಕುಟುಂಬಸ್ಥರು, ಆತ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಪೊಲೀಸರು ಥಳಿಸಿದ್ದಾರೆ, ಆತನದ್ದು ಆತ್ಮಹತ್ಯೆಯಲ್ಲ, ಇದೊಂದು ಉದ್ದೇಶಪೂರ್ವಕ ಕೊಲೆ ಎಂದು ಆರೋಪಿಸಿದ್ದಾರೆ.

ಅನ್ವರ್ ಅವರ ಹಿರಿಯ ಸಹೋದರ ಸೈಫ್ ಅಲಿ, “ನನ್ನ ಸಹೋದರನ ದೇಹದ ಮೇಲೆ ಗಾಯದ ಗುರುತುಗಳಿದ್ದವು. ಆತನ ಕುತ್ತಿಗೆಯ ಮೇಲೆ ಎರಡು ಆಳವಾದ ಗುರುತುಗಳಿದ್ದವು. ಇದು ಬಲವಂತವಾಗಿ ಕತ್ತು ಹಿಸುಕಿ ಹತ್ಯೆ ಮಾಡಿರುವುದನ್ನು ಸೂಚಿಸುತ್ತದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಾನು ನನ್ನ ಸಹೋದರನನ್ನು ಭೇಟಿಯಾಗಲು ಹಲವಾರು ಬಾರಿ ಪ್ರಯತ್ನಿಸಿದೆ, ಆದರೆ ಪೊಲೀಸರು ನನ್ನನ್ನು ಮೂರು ಬಾರಿ ಹಿಂದಕ್ಕೆ ಕಳುಹಿಸಿದರು. ನಾನು ಅಂತಿಮವಾಗಿ ಅವನನ್ನು ಭೇಟಿಯಾಗಲು ಅವಕಾಶ ಪಡೆದಾಗ, ಪೊಲೀಸರು ನನ್ನ ಸಹೋದರನ ದೇಹವನ್ನು ಜೈಲಿನ ಆವರಣದಿಂದ ಹೊರಗೆ ಕೊಂಡೊಯ್ಯುವುದನ್ನು ನೋಡಿದೆ. ಅದು ನನ್ನ ಸಹೋದರ ಫೈಜ್ ಎಂದು ಪೊಲೀಸರು ನನಗೆ ತಿಳಿಸಲಿಲ್ಲ” ಎಂದು ಅಲಿ ಆರೋಪಿಸಿದ್ದಾರೆ.

“ನಾನು ಮಧ್ಯಪ್ರವೇಶಿಸಿ, ಅದು ನನ್ನ ಸಹೋದರ ಎಂದು ಖಚಿತಪಡಿಸಿಕೊಂಡೆ. ಪೊಲೀಸರ ಬಳಿ ದೇಹವನ್ನು ಎಲ್ಲಿಗೆ ಮತ್ತು ಏಕೆ ಕರೆದೊಯ್ಯುತ್ತಿದ್ದಾರೆ ಎಂದು ಕೇಳಿದಾಗ, ಅವರು ಆತ ಜೈಲಿನ ಆಸ್ಪತ್ರೆಯ ಒಳಗೆ ಬಿದ್ದಿದ್ದಾನೆ, ಆ ಕಾರಣಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದರು. ಆದರೆ ನಾವು ಸದರ್ ಆಸ್ಪತ್ರೆಗೆ ತಲುಪಿದಾಗ, ಆತನನ್ನು ಮೃತನೆಂದು ಘೋಷಿಸಲಾಗಿತ್ತು” ಎಂದು ಸೈಫ್ ಅಲಿ ಹೇಳಿದ್ದಾರೆ.

ಆಸ್ಪತ್ರೆಯ ಅಧಿಕಾರಿಗಳು ನನ್ನನ್ನು ಪೊಲೀಸರ ಬಳಿ ಕಳುಹಿಸುತ್ತಿದ್ದರು ಮತ್ತು ಪೊಲೀಸರು ನನ್ನನ್ನು ವೈದ್ಯರ ಬಳಿ ಕಳುಹಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ. ಈ ಗೊಂದಲಮಯ ಪರಿಸ್ಥಿತಿಯಿಂದ ಬೇಸತ್ತು, ಅನ್ವರ್ ಅವರ ಕುಟುಂಬವು ಆಸ್ಪತ್ರೆಯ ಹೊರಗೆ ಮೃತದೇಹದೊಂದಿಗೆ ಪ್ರತಿಭಟನೆ ನಡೆಸಿತು. ನಂತರದಲ್ಲಿ, ಪೊಲೀಸರು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದರು.

ಅಧಿಕಾರಿಗಳು ಮೂರು ದಿನಗಳಿಗೂ ಹೆಚ್ಚು ಕಾಲ ಮರಣೋತ್ತರ ಪರೀಕ್ಷೆಯ ವರದಿಯನ್ನು ತಡೆಹಿಡಿದಿದ್ದಾರೆ ಎಂದು ಸೈಫ್ ಅಲಿ ಆರೋಪಿಸಿದ್ದಾರೆ. ಈ ವಿಳಂಬವು ಕಸ್ಟಡಿಯಲ್ಲಿನ ಸಾವಿನ ಮೂಲಭೂತ ಶಿಷ್ಟಾಚಾರಗಳನ್ನು ಉಲ್ಲಂಘಿಸುತ್ತದೆ ಮತ್ತು ಸತ್ಯಾಂಶವನ್ನು ಮುಚ್ಚಿಡುವ ಪ್ರಯತ್ನದ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮೃತನ ಕುಟುಂಬವು ಆಗಸ್ಟ್ 8, 2025ರಂದು ಮೊಫಾಸಿಲ್ ಪೊಲೀಸ್ ಠಾಣೆಯಲ್ಲಿ ಲಿಖಿತ ಅರ್ಜಿ ಸಲ್ಲಿಸಿದೆ, ಆದರೆ ಎಫ್‌ಐಆರ್ ಇನ್ನೂ ದಾಖಲಾಗಿಲ್ಲ. ಅನ್ವರ್ ಅವರ ತಾಯಿ ಜೈದಾ ಖಾತೂನ್, ಜಿಲ್ಲಾಧಿಕಾರಿಗೆ ಸಲ್ಲಿಸಿದ ಲಿಖಿತ ಅರ್ಜಿಯಲ್ಲಿ, “ನನ್ನ ಮಗನನ್ನು ಪೊಲೀಸರು ಕಸ್ಟಡಿಯಲ್ಲಿ ಕೊಂದಿದ್ದಾರೆ” ಎಂದು ಹೇಳಿದ್ದಾರೆ ಮತ್ತು ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಸೈಫ್ ಅಲಿ ಅವರು ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ, ಸಿಬಿಐ ತನಿಖೆ ಮತ್ತು ಫೈಜ್‌ನ ಬಂಧನದ ಸಮಯದಲ್ಲಿ ಕರ್ತವ್ಯದಲ್ಲಿದ್ದ ಎಲ್ಲಾ ಅಧಿಕಾರಿಗಳ ತಕ್ಷಣದ ಅಮಾನತಿಗೆ ಒತ್ತಾಯಿಸಿದ್ದಾರೆ. ಕುಟುಂಬಕ್ಕೆ ಸಹಾಯ ಮಾಡುತ್ತಿರುವ ವಕೀಲರಾದ ಕೈಫ್ ಹಸನ್, ಈ ಪ್ರಕರಣದ ನಿರ್ವಹಣೆಯನ್ನು “ನ್ಯಾಯ ನಿರಾಕರಣೆ” ಎಂದು ಖಂಡಿಸಿದ್ದಾರೆ.

“ಇಂತಹ ಪ್ರಕರಣಗಳಲ್ಲಿ ಪಾರದರ್ಶಕತೆ ಖಚಿತಪಡಿಸುವುದು, ಫೋರೆನ್ಸಿಕ್ ಪರೀಕ್ಷೆಗಳನ್ನು ನಡೆಸುವುದು ಮತ್ತು ಸ್ವತಂತ್ರ ತನಿಖೆಗಳನ್ನು ಪ್ರಾರಂಭಿಸುವುದು ಸರ್ಕಾರದ ಕಾನೂನುಬದ್ಧ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ. ಲಾಕಪ್‌ ಅಥವಾ ಆಸ್ಪತ್ರೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿದ್ದವೇ ಎಂಬುದರ ಬಗ್ಗೆ ಯಾವುದೇ ತನಿಖೆ ನಡೆದಿಲ್ಲ. ಯಾವುದೇ ಸಿಸಿಟಿವಿ ದೃಶ್ಯಾವಳಿ ಅಥವಾ ಅಧಿಕೃತ ದಾಖಲೆಗಳನ್ನು ಕುಟುಂಬದೊಂದಿಗೆ ಹಂಚಿಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಫೈಜ್ ಅವರ ಕುಟುಂಬವು ತಮ್ಮ ಮರಣೋತ್ತರ ವರದಿಗಾಗಿ ಮತ್ತು ಅವರ ಸಾವಿಗೆ ನ್ಯಾಯಕ್ಕಾಗಿ ಕಾಯುತ್ತಿದೆ. ಆದರೆ, ಈವರೆಗೆ ಯಾವುದೇ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಿಲ್ಲ, ಪ್ರಶ್ನಿಸಿಲ್ಲ ಅಥವಾ ಯಾವುದೇ ಅಧಿಕೃತ ವಿಚಾರಣೆ ಪ್ರಾರಂಭವಾಗಿಲ್ಲ. ಕುಟುಂಬಸ್ಥರು ಇನ್ನೂ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದಾರೆ.

ಉತ್ತರಾಖಂಡ  ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...