Homeಮುಖಪುಟಬಿಹಾರ: ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಯುವಕ ಸಾವು, ತಾಯಿಯಿಂದ ಹತ್ಯೆ ಆರೋಪ

ಬಿಹಾರ: ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಯುವಕ ಸಾವು, ತಾಯಿಯಿಂದ ಹತ್ಯೆ ಆರೋಪ

- Advertisement -
- Advertisement -

ಪಾಟ್ನಾ: ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ 20 ವರ್ಷದ ಫೈಜ್ ಅನ್ವರ್ ಎಂಬ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಅನ್ವರ್ ಕುಟುಂಬಸ್ಥರು ಪೊಲೀಸರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಪೊಲೀಸ್ ವಶದಲ್ಲಿ ಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸಿವಾನ್‌ನ ಮೊಹಿಯುದ್ದೀನ್‌ಪುರದ ನಿವಾಸಿಯಾಗಿರುವ ಅನ್ವರ್ ಅವರನ್ನು ಜುಲೈ 31, 2025ರಂದು ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದರು. ಆದರೆ ಆಗಸ್ಟ್ 2 ರಂದು ಪೊಲೀಸರು, ಆತ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿ ಮೃತ ಎಂದು ಘೋಷಿಸಿದ್ದಾರೆ. ಈ ವಿಚಾರ ಕೇಳಿ ಆಘಾತಕ್ಕೊಳಗಾದ ಅನ್ವರ್ ಕುಟುಂಬಸ್ಥರು, ಆತ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಪೊಲೀಸರು ಥಳಿಸಿದ್ದಾರೆ, ಆತನದ್ದು ಆತ್ಮಹತ್ಯೆಯಲ್ಲ, ಇದೊಂದು ಉದ್ದೇಶಪೂರ್ವಕ ಕೊಲೆ ಎಂದು ಆರೋಪಿಸಿದ್ದಾರೆ.

ಅನ್ವರ್ ಅವರ ಹಿರಿಯ ಸಹೋದರ ಸೈಫ್ ಅಲಿ, “ನನ್ನ ಸಹೋದರನ ದೇಹದ ಮೇಲೆ ಗಾಯದ ಗುರುತುಗಳಿದ್ದವು. ಆತನ ಕುತ್ತಿಗೆಯ ಮೇಲೆ ಎರಡು ಆಳವಾದ ಗುರುತುಗಳಿದ್ದವು. ಇದು ಬಲವಂತವಾಗಿ ಕತ್ತು ಹಿಸುಕಿ ಹತ್ಯೆ ಮಾಡಿರುವುದನ್ನು ಸೂಚಿಸುತ್ತದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಾನು ನನ್ನ ಸಹೋದರನನ್ನು ಭೇಟಿಯಾಗಲು ಹಲವಾರು ಬಾರಿ ಪ್ರಯತ್ನಿಸಿದೆ, ಆದರೆ ಪೊಲೀಸರು ನನ್ನನ್ನು ಮೂರು ಬಾರಿ ಹಿಂದಕ್ಕೆ ಕಳುಹಿಸಿದರು. ನಾನು ಅಂತಿಮವಾಗಿ ಅವನನ್ನು ಭೇಟಿಯಾಗಲು ಅವಕಾಶ ಪಡೆದಾಗ, ಪೊಲೀಸರು ನನ್ನ ಸಹೋದರನ ದೇಹವನ್ನು ಜೈಲಿನ ಆವರಣದಿಂದ ಹೊರಗೆ ಕೊಂಡೊಯ್ಯುವುದನ್ನು ನೋಡಿದೆ. ಅದು ನನ್ನ ಸಹೋದರ ಫೈಜ್ ಎಂದು ಪೊಲೀಸರು ನನಗೆ ತಿಳಿಸಲಿಲ್ಲ” ಎಂದು ಅಲಿ ಆರೋಪಿಸಿದ್ದಾರೆ.

“ನಾನು ಮಧ್ಯಪ್ರವೇಶಿಸಿ, ಅದು ನನ್ನ ಸಹೋದರ ಎಂದು ಖಚಿತಪಡಿಸಿಕೊಂಡೆ. ಪೊಲೀಸರ ಬಳಿ ದೇಹವನ್ನು ಎಲ್ಲಿಗೆ ಮತ್ತು ಏಕೆ ಕರೆದೊಯ್ಯುತ್ತಿದ್ದಾರೆ ಎಂದು ಕೇಳಿದಾಗ, ಅವರು ಆತ ಜೈಲಿನ ಆಸ್ಪತ್ರೆಯ ಒಳಗೆ ಬಿದ್ದಿದ್ದಾನೆ, ಆ ಕಾರಣಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದರು. ಆದರೆ ನಾವು ಸದರ್ ಆಸ್ಪತ್ರೆಗೆ ತಲುಪಿದಾಗ, ಆತನನ್ನು ಮೃತನೆಂದು ಘೋಷಿಸಲಾಗಿತ್ತು” ಎಂದು ಸೈಫ್ ಅಲಿ ಹೇಳಿದ್ದಾರೆ.

ಆಸ್ಪತ್ರೆಯ ಅಧಿಕಾರಿಗಳು ನನ್ನನ್ನು ಪೊಲೀಸರ ಬಳಿ ಕಳುಹಿಸುತ್ತಿದ್ದರು ಮತ್ತು ಪೊಲೀಸರು ನನ್ನನ್ನು ವೈದ್ಯರ ಬಳಿ ಕಳುಹಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ. ಈ ಗೊಂದಲಮಯ ಪರಿಸ್ಥಿತಿಯಿಂದ ಬೇಸತ್ತು, ಅನ್ವರ್ ಅವರ ಕುಟುಂಬವು ಆಸ್ಪತ್ರೆಯ ಹೊರಗೆ ಮೃತದೇಹದೊಂದಿಗೆ ಪ್ರತಿಭಟನೆ ನಡೆಸಿತು. ನಂತರದಲ್ಲಿ, ಪೊಲೀಸರು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದರು.

ಅಧಿಕಾರಿಗಳು ಮೂರು ದಿನಗಳಿಗೂ ಹೆಚ್ಚು ಕಾಲ ಮರಣೋತ್ತರ ಪರೀಕ್ಷೆಯ ವರದಿಯನ್ನು ತಡೆಹಿಡಿದಿದ್ದಾರೆ ಎಂದು ಸೈಫ್ ಅಲಿ ಆರೋಪಿಸಿದ್ದಾರೆ. ಈ ವಿಳಂಬವು ಕಸ್ಟಡಿಯಲ್ಲಿನ ಸಾವಿನ ಮೂಲಭೂತ ಶಿಷ್ಟಾಚಾರಗಳನ್ನು ಉಲ್ಲಂಘಿಸುತ್ತದೆ ಮತ್ತು ಸತ್ಯಾಂಶವನ್ನು ಮುಚ್ಚಿಡುವ ಪ್ರಯತ್ನದ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮೃತನ ಕುಟುಂಬವು ಆಗಸ್ಟ್ 8, 2025ರಂದು ಮೊಫಾಸಿಲ್ ಪೊಲೀಸ್ ಠಾಣೆಯಲ್ಲಿ ಲಿಖಿತ ಅರ್ಜಿ ಸಲ್ಲಿಸಿದೆ, ಆದರೆ ಎಫ್‌ಐಆರ್ ಇನ್ನೂ ದಾಖಲಾಗಿಲ್ಲ. ಅನ್ವರ್ ಅವರ ತಾಯಿ ಜೈದಾ ಖಾತೂನ್, ಜಿಲ್ಲಾಧಿಕಾರಿಗೆ ಸಲ್ಲಿಸಿದ ಲಿಖಿತ ಅರ್ಜಿಯಲ್ಲಿ, “ನನ್ನ ಮಗನನ್ನು ಪೊಲೀಸರು ಕಸ್ಟಡಿಯಲ್ಲಿ ಕೊಂದಿದ್ದಾರೆ” ಎಂದು ಹೇಳಿದ್ದಾರೆ ಮತ್ತು ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಸೈಫ್ ಅಲಿ ಅವರು ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ, ಸಿಬಿಐ ತನಿಖೆ ಮತ್ತು ಫೈಜ್‌ನ ಬಂಧನದ ಸಮಯದಲ್ಲಿ ಕರ್ತವ್ಯದಲ್ಲಿದ್ದ ಎಲ್ಲಾ ಅಧಿಕಾರಿಗಳ ತಕ್ಷಣದ ಅಮಾನತಿಗೆ ಒತ್ತಾಯಿಸಿದ್ದಾರೆ. ಕುಟುಂಬಕ್ಕೆ ಸಹಾಯ ಮಾಡುತ್ತಿರುವ ವಕೀಲರಾದ ಕೈಫ್ ಹಸನ್, ಈ ಪ್ರಕರಣದ ನಿರ್ವಹಣೆಯನ್ನು “ನ್ಯಾಯ ನಿರಾಕರಣೆ” ಎಂದು ಖಂಡಿಸಿದ್ದಾರೆ.

“ಇಂತಹ ಪ್ರಕರಣಗಳಲ್ಲಿ ಪಾರದರ್ಶಕತೆ ಖಚಿತಪಡಿಸುವುದು, ಫೋರೆನ್ಸಿಕ್ ಪರೀಕ್ಷೆಗಳನ್ನು ನಡೆಸುವುದು ಮತ್ತು ಸ್ವತಂತ್ರ ತನಿಖೆಗಳನ್ನು ಪ್ರಾರಂಭಿಸುವುದು ಸರ್ಕಾರದ ಕಾನೂನುಬದ್ಧ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ. ಲಾಕಪ್‌ ಅಥವಾ ಆಸ್ಪತ್ರೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿದ್ದವೇ ಎಂಬುದರ ಬಗ್ಗೆ ಯಾವುದೇ ತನಿಖೆ ನಡೆದಿಲ್ಲ. ಯಾವುದೇ ಸಿಸಿಟಿವಿ ದೃಶ್ಯಾವಳಿ ಅಥವಾ ಅಧಿಕೃತ ದಾಖಲೆಗಳನ್ನು ಕುಟುಂಬದೊಂದಿಗೆ ಹಂಚಿಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಫೈಜ್ ಅವರ ಕುಟುಂಬವು ತಮ್ಮ ಮರಣೋತ್ತರ ವರದಿಗಾಗಿ ಮತ್ತು ಅವರ ಸಾವಿಗೆ ನ್ಯಾಯಕ್ಕಾಗಿ ಕಾಯುತ್ತಿದೆ. ಆದರೆ, ಈವರೆಗೆ ಯಾವುದೇ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಿಲ್ಲ, ಪ್ರಶ್ನಿಸಿಲ್ಲ ಅಥವಾ ಯಾವುದೇ ಅಧಿಕೃತ ವಿಚಾರಣೆ ಪ್ರಾರಂಭವಾಗಿಲ್ಲ. ಕುಟುಂಬಸ್ಥರು ಇನ್ನೂ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದಾರೆ.

ಉತ್ತರಾಖಂಡ  ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...