Homeಮುಖಪುಟಬಿಹಾರ: ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಯುವಕ ಸಾವು, ತಾಯಿಯಿಂದ ಹತ್ಯೆ ಆರೋಪ

ಬಿಹಾರ: ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಯುವಕ ಸಾವು, ತಾಯಿಯಿಂದ ಹತ್ಯೆ ಆರೋಪ

- Advertisement -
- Advertisement -

ಪಾಟ್ನಾ: ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ 20 ವರ್ಷದ ಫೈಜ್ ಅನ್ವರ್ ಎಂಬ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಅನ್ವರ್ ಕುಟುಂಬಸ್ಥರು ಪೊಲೀಸರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಪೊಲೀಸ್ ವಶದಲ್ಲಿ ಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸಿವಾನ್‌ನ ಮೊಹಿಯುದ್ದೀನ್‌ಪುರದ ನಿವಾಸಿಯಾಗಿರುವ ಅನ್ವರ್ ಅವರನ್ನು ಜುಲೈ 31, 2025ರಂದು ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದರು. ಆದರೆ ಆಗಸ್ಟ್ 2 ರಂದು ಪೊಲೀಸರು, ಆತ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿ ಮೃತ ಎಂದು ಘೋಷಿಸಿದ್ದಾರೆ. ಈ ವಿಚಾರ ಕೇಳಿ ಆಘಾತಕ್ಕೊಳಗಾದ ಅನ್ವರ್ ಕುಟುಂಬಸ್ಥರು, ಆತ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಪೊಲೀಸರು ಥಳಿಸಿದ್ದಾರೆ, ಆತನದ್ದು ಆತ್ಮಹತ್ಯೆಯಲ್ಲ, ಇದೊಂದು ಉದ್ದೇಶಪೂರ್ವಕ ಕೊಲೆ ಎಂದು ಆರೋಪಿಸಿದ್ದಾರೆ.

ಅನ್ವರ್ ಅವರ ಹಿರಿಯ ಸಹೋದರ ಸೈಫ್ ಅಲಿ, “ನನ್ನ ಸಹೋದರನ ದೇಹದ ಮೇಲೆ ಗಾಯದ ಗುರುತುಗಳಿದ್ದವು. ಆತನ ಕುತ್ತಿಗೆಯ ಮೇಲೆ ಎರಡು ಆಳವಾದ ಗುರುತುಗಳಿದ್ದವು. ಇದು ಬಲವಂತವಾಗಿ ಕತ್ತು ಹಿಸುಕಿ ಹತ್ಯೆ ಮಾಡಿರುವುದನ್ನು ಸೂಚಿಸುತ್ತದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಾನು ನನ್ನ ಸಹೋದರನನ್ನು ಭೇಟಿಯಾಗಲು ಹಲವಾರು ಬಾರಿ ಪ್ರಯತ್ನಿಸಿದೆ, ಆದರೆ ಪೊಲೀಸರು ನನ್ನನ್ನು ಮೂರು ಬಾರಿ ಹಿಂದಕ್ಕೆ ಕಳುಹಿಸಿದರು. ನಾನು ಅಂತಿಮವಾಗಿ ಅವನನ್ನು ಭೇಟಿಯಾಗಲು ಅವಕಾಶ ಪಡೆದಾಗ, ಪೊಲೀಸರು ನನ್ನ ಸಹೋದರನ ದೇಹವನ್ನು ಜೈಲಿನ ಆವರಣದಿಂದ ಹೊರಗೆ ಕೊಂಡೊಯ್ಯುವುದನ್ನು ನೋಡಿದೆ. ಅದು ನನ್ನ ಸಹೋದರ ಫೈಜ್ ಎಂದು ಪೊಲೀಸರು ನನಗೆ ತಿಳಿಸಲಿಲ್ಲ” ಎಂದು ಅಲಿ ಆರೋಪಿಸಿದ್ದಾರೆ.

“ನಾನು ಮಧ್ಯಪ್ರವೇಶಿಸಿ, ಅದು ನನ್ನ ಸಹೋದರ ಎಂದು ಖಚಿತಪಡಿಸಿಕೊಂಡೆ. ಪೊಲೀಸರ ಬಳಿ ದೇಹವನ್ನು ಎಲ್ಲಿಗೆ ಮತ್ತು ಏಕೆ ಕರೆದೊಯ್ಯುತ್ತಿದ್ದಾರೆ ಎಂದು ಕೇಳಿದಾಗ, ಅವರು ಆತ ಜೈಲಿನ ಆಸ್ಪತ್ರೆಯ ಒಳಗೆ ಬಿದ್ದಿದ್ದಾನೆ, ಆ ಕಾರಣಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದರು. ಆದರೆ ನಾವು ಸದರ್ ಆಸ್ಪತ್ರೆಗೆ ತಲುಪಿದಾಗ, ಆತನನ್ನು ಮೃತನೆಂದು ಘೋಷಿಸಲಾಗಿತ್ತು” ಎಂದು ಸೈಫ್ ಅಲಿ ಹೇಳಿದ್ದಾರೆ.

ಆಸ್ಪತ್ರೆಯ ಅಧಿಕಾರಿಗಳು ನನ್ನನ್ನು ಪೊಲೀಸರ ಬಳಿ ಕಳುಹಿಸುತ್ತಿದ್ದರು ಮತ್ತು ಪೊಲೀಸರು ನನ್ನನ್ನು ವೈದ್ಯರ ಬಳಿ ಕಳುಹಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ. ಈ ಗೊಂದಲಮಯ ಪರಿಸ್ಥಿತಿಯಿಂದ ಬೇಸತ್ತು, ಅನ್ವರ್ ಅವರ ಕುಟುಂಬವು ಆಸ್ಪತ್ರೆಯ ಹೊರಗೆ ಮೃತದೇಹದೊಂದಿಗೆ ಪ್ರತಿಭಟನೆ ನಡೆಸಿತು. ನಂತರದಲ್ಲಿ, ಪೊಲೀಸರು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದರು.

ಅಧಿಕಾರಿಗಳು ಮೂರು ದಿನಗಳಿಗೂ ಹೆಚ್ಚು ಕಾಲ ಮರಣೋತ್ತರ ಪರೀಕ್ಷೆಯ ವರದಿಯನ್ನು ತಡೆಹಿಡಿದಿದ್ದಾರೆ ಎಂದು ಸೈಫ್ ಅಲಿ ಆರೋಪಿಸಿದ್ದಾರೆ. ಈ ವಿಳಂಬವು ಕಸ್ಟಡಿಯಲ್ಲಿನ ಸಾವಿನ ಮೂಲಭೂತ ಶಿಷ್ಟಾಚಾರಗಳನ್ನು ಉಲ್ಲಂಘಿಸುತ್ತದೆ ಮತ್ತು ಸತ್ಯಾಂಶವನ್ನು ಮುಚ್ಚಿಡುವ ಪ್ರಯತ್ನದ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮೃತನ ಕುಟುಂಬವು ಆಗಸ್ಟ್ 8, 2025ರಂದು ಮೊಫಾಸಿಲ್ ಪೊಲೀಸ್ ಠಾಣೆಯಲ್ಲಿ ಲಿಖಿತ ಅರ್ಜಿ ಸಲ್ಲಿಸಿದೆ, ಆದರೆ ಎಫ್‌ಐಆರ್ ಇನ್ನೂ ದಾಖಲಾಗಿಲ್ಲ. ಅನ್ವರ್ ಅವರ ತಾಯಿ ಜೈದಾ ಖಾತೂನ್, ಜಿಲ್ಲಾಧಿಕಾರಿಗೆ ಸಲ್ಲಿಸಿದ ಲಿಖಿತ ಅರ್ಜಿಯಲ್ಲಿ, “ನನ್ನ ಮಗನನ್ನು ಪೊಲೀಸರು ಕಸ್ಟಡಿಯಲ್ಲಿ ಕೊಂದಿದ್ದಾರೆ” ಎಂದು ಹೇಳಿದ್ದಾರೆ ಮತ್ತು ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಸೈಫ್ ಅಲಿ ಅವರು ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ, ಸಿಬಿಐ ತನಿಖೆ ಮತ್ತು ಫೈಜ್‌ನ ಬಂಧನದ ಸಮಯದಲ್ಲಿ ಕರ್ತವ್ಯದಲ್ಲಿದ್ದ ಎಲ್ಲಾ ಅಧಿಕಾರಿಗಳ ತಕ್ಷಣದ ಅಮಾನತಿಗೆ ಒತ್ತಾಯಿಸಿದ್ದಾರೆ. ಕುಟುಂಬಕ್ಕೆ ಸಹಾಯ ಮಾಡುತ್ತಿರುವ ವಕೀಲರಾದ ಕೈಫ್ ಹಸನ್, ಈ ಪ್ರಕರಣದ ನಿರ್ವಹಣೆಯನ್ನು “ನ್ಯಾಯ ನಿರಾಕರಣೆ” ಎಂದು ಖಂಡಿಸಿದ್ದಾರೆ.

“ಇಂತಹ ಪ್ರಕರಣಗಳಲ್ಲಿ ಪಾರದರ್ಶಕತೆ ಖಚಿತಪಡಿಸುವುದು, ಫೋರೆನ್ಸಿಕ್ ಪರೀಕ್ಷೆಗಳನ್ನು ನಡೆಸುವುದು ಮತ್ತು ಸ್ವತಂತ್ರ ತನಿಖೆಗಳನ್ನು ಪ್ರಾರಂಭಿಸುವುದು ಸರ್ಕಾರದ ಕಾನೂನುಬದ್ಧ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ. ಲಾಕಪ್‌ ಅಥವಾ ಆಸ್ಪತ್ರೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿದ್ದವೇ ಎಂಬುದರ ಬಗ್ಗೆ ಯಾವುದೇ ತನಿಖೆ ನಡೆದಿಲ್ಲ. ಯಾವುದೇ ಸಿಸಿಟಿವಿ ದೃಶ್ಯಾವಳಿ ಅಥವಾ ಅಧಿಕೃತ ದಾಖಲೆಗಳನ್ನು ಕುಟುಂಬದೊಂದಿಗೆ ಹಂಚಿಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಫೈಜ್ ಅವರ ಕುಟುಂಬವು ತಮ್ಮ ಮರಣೋತ್ತರ ವರದಿಗಾಗಿ ಮತ್ತು ಅವರ ಸಾವಿಗೆ ನ್ಯಾಯಕ್ಕಾಗಿ ಕಾಯುತ್ತಿದೆ. ಆದರೆ, ಈವರೆಗೆ ಯಾವುದೇ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಿಲ್ಲ, ಪ್ರಶ್ನಿಸಿಲ್ಲ ಅಥವಾ ಯಾವುದೇ ಅಧಿಕೃತ ವಿಚಾರಣೆ ಪ್ರಾರಂಭವಾಗಿಲ್ಲ. ಕುಟುಂಬಸ್ಥರು ಇನ್ನೂ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದಾರೆ.

ಉತ್ತರಾಖಂಡ  ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...