Homeಮುಖಪುಟವಯನಾಡಿನಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು: ಪ್ರತಿಭಟನಾನಿರತರ ಮೇಲೆ ಲಾಠಿಚಾರ್ಜ್

ವಯನಾಡಿನಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು: ಪ್ರತಿಭಟನಾನಿರತರ ಮೇಲೆ ಲಾಠಿಚಾರ್ಜ್

- Advertisement -
- Advertisement -

ಕೇರಳದ ವಯನಾಡಿನಲ್ಲಿ 10 ವರ್ಷದ 5ನೇ ವಿದ್ಯಾರ್ಥಿನಿ ಶೆಹಲಾ ಶೆರಿನ್, ಸರ್ಕಾರಿ ಶಾಲೆಯಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಳು. ಎರಡು ದಿನಗಳ ಹಿಂದೆ ಘಟನೆ ನಡೆದಿತ್ತು. ಶಾಲೆ ಮತ್ತು ವೈದ್ಯರ ನಿರ್ಲಕ್ಷ್ಯ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಪ್ರೊಟೆಸ್ಟ್ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವಿನ ಘರ್ಷಣೆಗೆ ಕಾರಣವಾಗಿದೆ.

ಇದನ್ನೂ ಓದಿ: ತರಗತಿಯಲ್ಲಿದ್ದ ಬಾಲಕಿಗೆ ಕಚ್ಚಿದ ಹಾವು: ತಲೆಕೆಡಿಸಿಕೊಳ್ಳದ ಶಿಕ್ಷಕಿ, ಬಾಲಕಿಯ ಧಾರುಣ ಸಾವು

ಶೆಹಲಾ ಶೆರಿನ್ ಸಾವಿಗೆ ಶಾಲೆ ಮತ್ತು ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಮತ್ತು ಶೆಹಲಾ ಸಹಪಾಠಿಗಳು ಆರೋಪಿಸಿದ್ದಾರೆ. ಈಗಾಗಲೇ ಆಸ್ಪತ್ರೆ ವೈದ್ಯರು ಮತ್ತು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಸದಸ್ಯರ ನೇತೃತ್ವದಲ್ಲಿ ಬಾಲಕಿಯ ಸಾವಿಗೆ ನ್ಯಾಯ ಒದಗಿಸುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಹೆಚ್ಚಿದೆ. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಿದ್ಯಾರ್ಥಿಗಳನ್ನು ಬ್ಯಾರಿಕೇಡ್ ನಿಂದ ತಡೆಯಲಾಯಿತು. ಆದರೆ ಬ್ಯಾರಿಕೇಡ್ ತಳ್ಳಿ ಒಳಗೆ ಪ್ರವೇಶಿಸಲು ಯತ್ನಿಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಉತ್ತರ ಕೇರಳದ ವಯನಾಡು ಸರ್ಕಾರಿ ಶಾಲೆಯಲ್ಲಿ 5 ನೇ ತರಗತಿ ವಿದ್ಯಾರ್ಥಿನಿ ಶೆಹಲಾ ಶೆರಿನ್ ಗೆ ಹಾವು ಕಚ್ಚಿ ಮೃತಪಟ್ಟಿದ್ದಾಳೆ. ಸುಲ್ತಾನ್ ಬಾಥೆರಿಯಲ್ಲಿರುವ ಶಾಲೆಯ ತರಗತಿಯಲ್ಲಿ ವಿದ್ಯಾರ್ಥಿನಿ ಶೆಹಲಾ ಕುಳಿತಿದ್ದಳು. ಈ ವೇಳೆ ಮಹಡಿ ಮೇಲಿನ ರಂಧ್ರದೊಳಗಿಂದ ಬಂದ ಹಾವು ಶೆಹಲಾಳನ್ನು ಕಚ್ಚಿದೆ. ಆದರೆ ಶೆಹಲಾ ಉಗುರು ಅಥವಾ ಕಲ್ಲಿನಿಂದ ಏಟು ಮಾಡಿಕೊಂಡಿದ್ದಾಳೆ ಎಂದು ಶಿಕ್ಷಕರು ನಿರ್ಲಕ್ಷಿಸಿದ್ದರು. ಇತ್ತ ಬಾಥೆರಿಯ ತಾಲೂಕು ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋದರೆ ವಿಷ ಏರದಂತೆ ಮಗುವಿಗೆ ಔಷಧಿಯನ್ನು ವೈದ್ಯರು ನೀಡಿಲ್ಲ. ಹೀಗಾಗಿ ಶೆಹಲಾ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ. ಇನ್ನು ಶಿಕ್ಷಕ ಮತ್ತು ವೈದ್ಯರನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ: ಶಿವಸೇನೆ ಶಾಸಕರ ಒಕ್ಕೊರಲ ಒತ್ತಾಯ

ಶೆಹಲಾ ಶೆರಿನ್ ಸಹಪಾಠಿಗಳು, ಶಾಲಾ ಸಮವಸ್ತ್ರದಲ್ಲೇ, ತಮ್ಮ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಫಲಕ ಹಿಡಿದು, ಘೋಷಣೆ ಕೂಗಿ ಶೆಹಲಾಳ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದರು. ಸುಲ್ತಾನ್ ಬಾಥೆ ಪಟ್ಟಣದ ಮೂಲಕ ಮೆರವಣಿಗೆ ಹೊರಟು, ಸರ್ಕಾರಿ ವೃತ್ತಿಪರ ಹೈಯರ್ ಸೆಕೆಂಡರಿ ಶಾಲೆಯ ಮುಂದೆ ಒಂದುಗೂಡಿದರು. ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸಲು ನಿರಾಕರಿಸಿದ ಶಿಕ್ಷಕರು ಮತ್ತು ಅವಳಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಯೊಬ್ಬರು ಆಗ್ರಹಿಸಿದ್ದಾರೆ.

ಬಾಲಕನೊಬ್ಬ ಪ್ಲಾಸ್ಟಿಕ್ ಹಾವನ್ನು ಕೊರಳಲ್ಲಿ ಸುತ್ತಿಕೊಂಡು, ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಲ್ಲ. ಆಟದ ಮೈದಾನದಲ್ಲಿ ಮತ್ತು ತರಗತಿ ಕೋಣೆಗಳ ಒಳಗೆ ಹಾವುಗಳು ಬರುತ್ತಿವೆ ಎಂದು ಆರೋಪಿಸಿದರು. ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ವಿದ್ಯಾರ್ಥಿನಿಯ ಕುಟುಂಬಕ್ಕೆ ಪರಿಹಾರ ನೀಡುವಂತೆ ಕೇರಳ ಸರ್ಕಾರಕ್ಕೆ ಹೇಳಬೇಕೆಂದು ಒತ್ತಾಯಿಸಿದರು.

ಈ ಬಗ್ಗೆ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯಿಸಿ, ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಶಿಕ್ಷಕರು ವಿಫಲರಾಗಿದ್ದಾರೆ. ಇಂತಹ ಸಂದರ್ಭಗಳಲ್ಲಿ ಯಾವ ರೀತಿ ಪ್ರತಿಕ್ರಿಯಿಸಬೇಕು ಎಂದು ಶಿಕ್ಷಕರು, ಮಕ್ಕಳಿಗೆ ತರಬೇತಿ ಮತ್ತು ತಿಳಿವಳಿಕೆ ನೀಡಬೇಕು ಎಂದು ಹೇಳಿದ್ದಾರೆ.

ವಯನಾಡು ಸ್ಥಳೀಯ ನ್ಯಾಯಾಲಯದ ನ್ಯಾಯಾಧೀಶ ಎ.ಹ್ಯಾರಿಸ್, ಶಾಲೆಗೆ ಭೇಟಿ ನೀಡಿ, ಶಾಲೆಯ ಮತ್ತು ಅದರ ಆವರಣದ ಸ್ಥಿತಿ ಕಂಡು ಬೇಸರ ವ್ಯಕ್ತಪಡಿಸಿದರು. ಇದನ್ನು ನಾವು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಮಾಧ್ಯಮ ವರದಿ ಆಧಾರದ ಮೇಲೆ ತಮ್ಮದೇ ಪ್ರಕರಣ ದಾಖಲಿಸಿದ್ದು, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ವೈದ್ಯಕೀಯ ಅಧಿಕಾರಿಯಿಂದ ವರದಿ ಕೋರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...