HomeUncategorizedಲಸಿಕೆ ಹಾಕಿಸಿಕೊಂಡಿದ್ದ ಮತ್ತೊಬ್ಬ ಆರೋಗ್ಯ ಕಾರ್ಯಕರ್ತ ಸಾವು: ಲಸಿಕೆ ಕಾರಣವಲ್ಲ ಎಂದ ಸರ್ಕಾರ

ಲಸಿಕೆ ಹಾಕಿಸಿಕೊಂಡಿದ್ದ ಮತ್ತೊಬ್ಬ ಆರೋಗ್ಯ ಕಾರ್ಯಕರ್ತ ಸಾವು: ಲಸಿಕೆ ಕಾರಣವಲ್ಲ ಎಂದ ಸರ್ಕಾರ

ಲಸಿಕೆ ಪಡೆದ ನಂತರ ಈ ಘಟನೆಯೂ ಸೇರಿದಂತೆ 3 ಸಾವುಗಳ ವರದಿಯಾಗಿವೆ. ಆದರೆ ಇದಕ್ಕೆ ಲಸಿಕೆ ಕಾರಣವಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 

- Advertisement -
- Advertisement -

ಕೊರೊನಾ ಲಸಿಕೆ ಹಾಕಿಸಿಕೊಂಡ ಒಂದು ದಿನದ ನಂತರ ಹೈದರಾಬಾದ್‌ನಲ್ಲಿ 42 ವರ್ಷದ ಆರೋಗ್ಯ ಕಾರ್ಯಕರ್ತ ಬುಧವಾರ ನಿಧನರಾಗಿದ್ದಾರೆ. “ಮೃತರ ಮರಣೋತ್ತರ ಪರೀಕ್ಷೆ ಇನ್ನೂ ನಡೆದಿಲ್ಲ, ಆದರೆ ಇದು ಲಸಿಕೆ ಪರಿಣಾಮದಿಂದಾಗಿ ಸಂಭವಿಸಿದ ಸಾವಲ್ಲ” ಎಂದು ತೆಲಂಗಾಣ ಸರ್ಕಾರ ಹೇಳಿದೆ.

ಜನವರಿ 19 ರಂದು ಹೈದರಾಬಾದ್‌ನ ನಿರ್ಮಲ್ ಜಿಲ್ಲೆಯ ಕುಂತಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಲಸಿಕೆ ಹಾಕಲಾಯಿತು. ಇದಾಗಿ ಒಂದು ದಿನದ ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಬೆಳಿಗ್ಗೆ 5:30 ರ ಸುಮಾರಿಗೆ ನಿರ್ಮಲ್‌ನ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪ್ರಾಥಮಿಕ ಸಂಶೋಧನೆಗಳ ಪ್ರಕಾರ ಅವರ ಸಾವು ವ್ಯಾಕ್ಸಿನೇಷನ್‌ನಿಂದಾಗಿ ಸಂಭವಿಸಿಲ್ಲ ಎಂದು ತೋರುತ್ತಿದೆ. ಮಾರ್ಗಸೂಚಿಯ ಪ್ರಕಾರ, ವೈದ್ಯರ ತಂಡದಿಂದ ಮರಣೋತ್ತರ ಪರೀಕ್ಷೆ ನಡೆಸಲಾಗುವುದು” ಎಂದು ಸಾರ್ವಜನಿಕ ಆರೋಗ್ಯ ಮತ್ತು ಕಲ್ಯಾಣ ನಿರ್ದೇಶಕರು ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ 19 ಲಸಿಕೆ ಕುರಿತ ಪ್ರಶ್ನೆಗಳು ಮತ್ತು ಕಳವಳಗಳು: ಜನ ಆರೋಗ್ಯ ಚಳವಳಿ

ಇದನ್ನೂ ಓದಿ: ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಲಸಿಕೆ ಪಡೆದ ನಂತರ, ಈ ಘಟನೆಯೂ ಸೇರಿದಂತೆ ಒಟ್ಟು 3 ಸಾವುಗಳ ವರದಿಯಾಗಿವೆ. ಆದರೆ ಇದಕ್ಕೆ ಲಸಿಕೆ ಕಾರಣವಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮೊದಲ ಎರಡು ಪ್ರಕರಣಗಳಲ್ಲಿ, ಮೊರಾದಾಬಾದ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ವಾರ್ಡ್‌ಬಾಯ್ ಆಗಿ ಕೆಲಸ ಮಾಡುತ್ತಿದ್ದ 52 ವರ್ಷದ ಮಹಿಪಾಲ್ ಸಿಂಗ್ ಅವರು ಲಸಿಕೆ ಹಾಕಿಸಿಕೊಂಡ ಒಂದು ದಿನದ ನಂತರ ನಿಧನರಾದರು. ಎರಡನೇ ಪ್ರಕರಣದಲ್ಲಿ, ಬಳ್ಳಾರಿಯಲ್ಲಿರುವ ರಾಜ್ಯ ಆರೋಗ್ಯ ವಿಭಾಗದ ಉದ್ಯೋಗಿ 43 ವರ್ಷದ ನಾಗರಾಜು ಲಸಿಕೆ ಹಾಕಿಸಿಕೊಂಡ 2 ದಿನದ ನಂತರ ಸಾವನ್ನಪ್ಪಿದ್ದರು.

ಲಸಿಕೆಯು ಅಡ್ಡಪರಿಣಾಮಗಳನ್ನು ಬೀರುತ್ತದೆ ಎಂದು ಹಲವರು ಆರೋಪಿಸಿದ್ದಾರೆ. ಆದರೆ ಸರ್ಕಾರ ಇದನ್ನು ನಿರಾಕರಿಸುತ್ತಲೆ ಬಂದಿದೆ.


ಇದನ್ನೂ ಓದಿ: ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು: ಸಾವಿಗೆ ಲಸಿಕೆ ಕಾರಣವಲ್ಲ ಎಂದ ಸಚಿವ ಸುಧಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...