Homeಕರ್ನಾಟಕಬಿಜೆಪಿ ಕಾರ್ಯಕರ್ತ‌ ಸಂತೋಷ್‌ ಸಾವು: ಎಫ್‌ಐಆರ್‌‌ ದಾಖಲು; ಸಚಿವ ಈಶ್ವರಪ್ಪ ಆರೋಪಿ ನಂ. 1

ಬಿಜೆಪಿ ಕಾರ್ಯಕರ್ತ‌ ಸಂತೋಷ್‌ ಸಾವು: ಎಫ್‌ಐಆರ್‌‌ ದಾಖಲು; ಸಚಿವ ಈಶ್ವರಪ್ಪ ಆರೋಪಿ ನಂ. 1

- Advertisement -
- Advertisement -

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ದ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಸಂತೋಷ್‌ ಅವರ ಸಹೋದರ ಪ್ರಶಾಂತ್‌ ಪಾಟೀಲ್ ನೀಡಿದ ದೂರಿನ ಪ್ರಕಾರ ಪೊಲೀಸರು ಈಶ್ವರಪ್ಪ ಸೇರಿದಂತೆ ಅವರ ಆಪ್ತರಿಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆಗಾಗಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಸಚಿವ ಕೆ.ಎಸ್. ಈಶ್ವರಪ್ಪ ಅವರು 40% ಕಮೀಷನ್‌‌‌ಗೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಇದು ರಾಜ್ಯದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇದರ ನಂತರ ಮಂಗಳವಾರದಂದು ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಸಾವಿಗೂ ಮುಂಚೆ ಮಾಧ್ಯಮಗಳಿಗೆ ಕಳುಹಿಸಿದ ಡೆತ್‌ ನೋಟ್‌ನಲ್ಲಿ ಅವರು, ‘‘ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ” ಎಂದು ನೇರವಾಗಿ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉಡುಪಿ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಒಂದನೇ ಆರೋಪಿಯಾಗಿ ಸಚಿವ ಕೆ.ಎಸ್. ಈಶ್ವರಪ್ಪ, ಎರಡನೇ ಆರೋಪಿಯಾಗಿ ಅವರ ಆಪ್ತ ಬಸವರಾಜ ಮತ್ತು ಮೂರನೇ ಆರೋಪಿಯಾಗಿ ಅವರ ಮತ್ತೊಬ್ಬ ಆಪ್ತ ರಮೇಶ್‌ ಸೇರಿದಂತೆ ಇತರರನ್ನು ಹೆಸರಿಸಲಾಗಿದೆ.

ಇದನ್ನೂ ಓದಿ:ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ತಾವು ಕೈಗೊಂಡಿರುವ 4 ಕೋಟಿ ರೂ.ಗಳ ಕಾಮಗಾರಿಯಲ್ಲಿ 40% ದಷ್ಟು ಕಮಿಷನ್ ನೀಡುವಂತೆ ಸಚಿವರ ಸಂಗಡಿಗರು ಒತ್ತಾಯಿಸಿದ್ದಾರೆ ಎಂದು ಪ್ರಶಾಂತ್‌ ಪಾಟೀಲ್‌ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಸಚಿವ ಈಶ್ವರಪ್ಪ ಅವರು, ಸಂತೋಷ್‌ ಯಾರೆಂದು ತನಗೆ ಗೊತ್ತಿಲ್ಲ ಎಂದು ನಿನ್ನೆಯೆ ಹೇಳಿದ್ದಾರೆ. ಜೊತೆಗೆ ಅವರ ಸಾವಿನ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಕೋರಿದ್ದ ಪ್ರತಿಪಕ್ಷ ಕಾಂಗ್ರೆಸ್‌‌ನ ಬೇಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ.

ಸಂತೋಷ್‌ ಪಾಟಿಲ್‌‌ ಅವರು ಬರೆದಿದ್ದಾರೆ ಎಂದು ಎನ್ನಲಾಗಿರುವ ಪತ್ರದಲ್ಲಿ, “ನನ್ನ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್. ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ” ಎಂದು ಬರೆಯಲಾಗಿದೆ.

“ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರಿಂದನೆ ಎಲ್ಲರು ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ಪತ್ರದಲ್ಲಿ ಅವರು “ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತ್‌ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕಳೆದುಕೊಂಡ ಬಂದಿರುತ್ತೆನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೆ ಸಂಬಂಧ ಇರುವುದಿಲ್ಲ” ಎಂದು ಪತ್ರವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ:ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸಲ್ಲ: ಮೃತ ಸಂತೋಷ್‌ ಸಹೋದರ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...