Homeಮುಖಪುಟಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

ಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

- Advertisement -
- Advertisement -

ಅಪಾಯಕಾರಿ ಸ್ಥಳಾಂತರವಾದಾಗ ಚೀತಾಗಳ ಸಾವು ನಿರೀಕ್ಷಿತವಾಗಿದೆ ಎಂದು ದಕ್ಷಿಣ ಆಫ್ರಿಕಾದ ಅರಣ್ಯ, ಮೀನುಗಾರಿಕೆ ಮತ್ತು ಪರಿಸರ ಇಲಾಖೆ ಗುರುವಾರ ತಿಳಿಸಿದೆ.

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚಿರತೆಗಳ ಸಾವನಪ್ಪಿದ್ದು, ಈ ರೀತಿಯ ಯೋಜನೆಯಲ್ಲಿ ನಿರೀಕ್ಷಿತ ಮರಣ ದರವನ್ನು ಕಾಣಬಹುದು ಎಂದು ಸೌತ್ ಆಫ್ರಿಕಾ ಹೇಳಿದೆ.

ನಮೀಬಿಯಾದ ತಂದ ಸಶಾ ಎಂಬ ಚೀತಾ ಮೂತ್ರಪಿಂಡದ ಸೋಂಕಿನಿಂದ ಮಾರ್ಚ್ 27 ರಂದು ಸಾವನ್ನಪ್ಪಿತ್ತು. ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಸ್ಥಳಾಂತರಗೊಂಡ ಉದಯ್ ಎಂಬ ಎರಡನೇ ಚೀತಾ ಏಪ್ರಿಲ್ 23 ರಂದು ಸಾವನ್ನಪ್ಪಿತ್ತು. ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ತಂದ 20 ಚಿರತೆಗಳಲ್ಲಿ ಅವು ಸೇರಿವೆ.

ಶವಪರೀಕ್ಷೆ ಮಾಹಿತಿ ಹೊರಬೀಳುವ ಹೊತ್ತಿನಲ್ಲಿ ದಕ್ಷಿಣ ಆಫ್ರಿಕಾ ಹೇಳಿಕೆ ನೀಡಿದೆ. “ಯಾವುದೇ ರೀತಿಯ ಸಾಂಕ್ರಾಮಿಕ ಕಾಯಿಲೆಯಿಂದ ಉದಯ್ ಸಾವನ್ನಪ್ಪಿರುವ ಯಾವುದೇ ಸೂಚನೆಯಿಲ್ಲ. ಇತರ ಯಾವುದೇ ಚೀತಾಗಳಲ್ಲಿ ಇದೇ ರೀತಿಯ ತೊಂದರೆ ಇಲ್ಲ” ಎಂದಿದೆ.

ಇದನ್ನೂ ಓದಿರಿ: ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

“ಎಲ್ಲಾ ದಕ್ಷಿಣ ಆಫ್ರಿಕಾದ ಚಿರತೆಗಳು ವಿಶಾಲವಾದ ಪ್ರದೇಶದಲ್ಲಿವೆ. ಪ್ರತಿದಿನ ಎರಡು ಬಾರಿ ನಿಕಟವಾಗಿ ಅವುಗಳ ಮೇಲ್ವಿಚಾರಣೆ ಮಾಡಲಾಗುತ್ತದೆ” ಎಂದು ಹೇಳಿಕೆ ತಿಳಿಸಿದೆ. “ಅವುಗಳು ಅರಣ್ಯದಲ್ಲಿ ಬೆಳೆದ ಚೀತಾಗಳಾಗಿರುವುದರಿಂದ ಅವುಗಳ ನಡವಳಿಕೆ, ಚಲನವಲನಗಳು ಮತ್ತು ದೇಹದ ಸ್ಥಿತಿಯನ್ನು ದೂರದಿಂದ ಮೌಲ್ಯಮಾಪನ ಮಾಡಬೇಕು. ಅವುಗಳ ಆರೋಗ್ಯ ಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ಪಡೆಯಲು ಸ್ಥಳದಲ್ಲಿಯೇ ತಂಡವನ್ನು ಇರಿಸಬೇಕು” ಎಂದು ಅಭಿಪ್ರಾಯಪಟ್ಟಿದೆ.

“ದೊಡ್ಡ ಮಾಂಸಾಹಾರಿ ಪ್ರಾಣಿಗಳನ್ನು (ಬೇರೊಂದು ಸ್ಥಳಕ್ಕೆ) ತರುವುದು ಅತ್ಯಂತ ಸಂಕೀರ್ಣ ಮತ್ತು ಅಂತರ್ಗತವಾಗಿ ಅಪಾಯಕಾರಿ ಕಾರ್ಯಾಚರಣೆಗಳಾಗಿವೆ. ಇದು ಯೋಜನೆಯ ನಿರ್ಣಾಯಕ ಹಂತವಾಗಿದೆ. ಚೀತಾಗಳನ್ನು ವಿಸ್ತಾರವಾದ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಲ್ಲಿ ಅವುಗಳ ದಿನನಿತ್ಯದ ಯೋಗಕ್ಷೇಮದ ಮೇಲೆ ಕಡಿಮೆ ನಿಯಂತ್ರಣವಿರುತ್ತದೆ. ಗಾಯ ಮತ್ತು ಮರಣದ ಅಪಾಯಗಳು ಹೆಚ್ಚಾಗುತ್ತವೆ ಮತ್ತು ಈ ಅಪಾಯಗಳನ್ನು ಯೋಜನೆಯಲ್ಲಿ ಒಳಗೊಳ್ಳಬೇಕು” ಎಂದು ತಿಳಿಸಿದೆ.

“ಹೊರಗೆ ಬಿಡಲಾದ ಅನೇಕ ಚೀತಾಗಳು ಕುನೋ ರಾಷ್ಟ್ರೀಯ ಉದ್ಯಾನವನದ ಗಡಿಯಿಂದ ತಪ್ಪಿಸಿಕೊಳ್ಳುತ್ತವೆ ಮತ್ತು ಮರು ಕರೆತರುವ ಪ್ರಕ್ರಿಯೆಯಲ್ಲಿ ಅಲ್ಪಾವಧಿಯ ಒತ್ತಡವನ್ನು ಎದುರಿಸಬೇಕಾಗುತ್ತದೆ” ಎಂದಿರುವ ಆಫ್ರಿಕಾ, “ಚೀತಾಗಳನ್ನು ಅವುಗಳ ಪ್ರದೇಶಕ್ಕೆ ಮತ್ತೆ ತಂದ ನಂತರ ಪರಿಸ್ಥಿತಿಯು ಸ್ಥಿರಗೊಳ್ಳುತ್ತದೆ” ಎಂದು ಹೇಳಿದೆ.

ಇದರ ನಡುವೆ ಫೋರೆನ್ಸಿಕ್ ವಿಜ್ಞಾನಿ ಸೇರಿದಂತೆ ಐದು ಸದಸ್ಯರ ತಂಡವು ನಡೆಸಿದ ಪ್ರಾಥಮಿಕ ಶವಪರೀಕ್ಷೆಯು ಹಲವು ವಿಚಾರಗಳನ್ನು ಬಿಚ್ಚಿಟ್ಟಿದೆ. ಕಾರ್ಡಿಯೋಪಲ್ಮನರಿ ವೈಫಲ್ಯದಿಂದ ಉದಯ್ ಚೀತಾ ಸಾವನ್ನಪ್ಪಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಆರು ವರ್ಷದ ಈ ಚೀತಾ ಬೊಟುಲಿಸಮ್‌ (ದೇಹದ ನರಗಳ ಮೇಲೆ ದಾಳಿ ಮಾಡುವ ವಿಷಕಾರಿ ಅಂಶದಿಂದ ಉಂಟಾದ ಅಪರೂಪದ ಆದರೆ ಗಂಭೀರವಾದ ಕಾಯಿಲೆ. ಇದರಿಂದ ಉಸಿರಾಟದ ತೊಂದರೆ, ಸ್ನಾಯು ಪಾರ್ಶ್ವವಾಯು ಸಂಭವಿಸುವುದು) ಕಾಯಿಲೆಗೆ ತುತ್ತಾಗಿರಬಹುದು ಎಂದು ಊಹಿಸಲಾಗಿದೆ.

“ಜಬಲ್ಪುರ್ ಸಂಸ್ಥೆಯು ಹೆಚ್ಚು ವಿವರವಾದ ಪರೀಕ್ಷೆಯನ್ನು ನಡೆಸುತ್ತದೆ, ಅದರ ನಂತರವೇ ಶ್ವಾಸಕೋಶದ ವೈಫಲ್ಯಕ್ಕೆ ಕಾರಣವೇನು ಎಂದು ನಾವು ತಿಳಿಯುತ್ತೇವೆ” ಎಂದು ಮಧ್ಯಪ್ರದೇಶದ ಮುಖ್ಯ ವನ್ಯಜೀವಿ ವಾರ್ಡನ್ ಜೆಎಸ್ ಚೌಹಾಣ್ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಚೀತಾ ಸ್ಥಳಾಂತರಕ್ಕೆ ಮಧ್ಯಪ್ರದೇಶ ಮನವಿ

ಮಧ್ಯಪ್ರದೇಶದ ಕುನೊ ಉದ್ಯಾನದಲ್ಲಿರುವ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರಿ ಮಧ್ಯ ಪ್ರದೇಶದ ಅರಣ್ಯ ಇಲಾಖೆ ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದೆ.

ಕುನೊ ಉದ್ಯಾನದಲ್ಲಿ ಕಳೆದ ಒಂದು ತಿಂಗಳ ಅಂತರದಲ್ಲೇ ಎರಡು ಚೀತಾ ಮೃತಪಟ್ಟಿವೆ. ಹೀಗಾಗಿ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಇಲಾಖೆ ಕೇಳಿಕೊಂಡಿದೆ.

ಇದನ್ನೂ ಓದಿರಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

‘ಪ್ರಾಜೆಕ್ಟ್‌ ಚೀತಾ’ ಅಡಿಯಲ್ಲಿ ಒಟ್ಟು 20 ಚೀತಾಗಳನ್ನು ಕುನೊ ಉದ್ಯಾನಕ್ಕೆ ಕರೆತರಲಾಗಿತ್ತು. ಎರಡು ತಂಡಗಳಲ್ಲಿ ನಮೀಬಿಯಾ (8) ಹಾಗೂ ದಕ್ಷಿಣ ಆಫ್ರಿಕಾದಿಂದ (12) ಚೀತಾಗಳನ್ನು ಕರೆತರಲಾಗಿತ್ತು. ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ (ಸೆ.17) ದಿನದಂದು ಮೊದಲ ತಂಡದಲ್ಲಿ ಚೀತಾಗಳು ಭಾರತಕ್ಕೆ ಬಂದಿದ್ದವು.

‘ಕುನೊ ಉದ್ಯಾನದಲ್ಲಿ ಚೀತಾಗಳಿಗೆ ಅಗತ್ಯವಾಗಿರುವ ಸೌಲಭ್ಯಗಳು ಇಲ್ಲ. ಚೀತಾಗಳ ಮೇಲೆ ನಿಗಾ ವಹಿಸಲು ಇಲ್ಲಿ ಸಿಬ್ಬಂದಿ ಕೊರತೆ ಇದೆ. ಚೀತಾಗಳಿಗೆ ಓಡಾಡಲು ಬೇಕಾದಷ್ಟು ಜಾಗವೂ ಇಲ್ಲ’ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರಕ್ಕೆ ಚೀತಾ ಗಳನ್ನು ಸ್ಥಳಾಂತರಿಸುವ ಬಗ್ಗೆ ಪತ್ರ ಬರೆಯಲಾಗಿದೆ ಎಂದು ಮಧ್ಯ ಪ್ರದೇಶದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಜೆ.ಎಸ್. ಚೌಹಾಣ್‌ ತಿಳಿಸಿದ್ದಾರೆ.

‘ಕುನೊ ಉದ್ಯಾನವನಕ್ಕೆ ಚೀತಾಗಳು ಹೊಂದಿಕೊಳ್ಳದಿದ್ದರೆ ಅವುಗಳನ್ನು ರಾಜಸ್ಥಾನದ ಮುಕುಂದರಾ ಹಿಲ್ಸ್‌ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಮಾಡಲಾಗಿತ್ತು’ ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...