Homeಮುಖಪುಟಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

ಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

- Advertisement -
- Advertisement -

ಅಪಾಯಕಾರಿ ಸ್ಥಳಾಂತರವಾದಾಗ ಚೀತಾಗಳ ಸಾವು ನಿರೀಕ್ಷಿತವಾಗಿದೆ ಎಂದು ದಕ್ಷಿಣ ಆಫ್ರಿಕಾದ ಅರಣ್ಯ, ಮೀನುಗಾರಿಕೆ ಮತ್ತು ಪರಿಸರ ಇಲಾಖೆ ಗುರುವಾರ ತಿಳಿಸಿದೆ.

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚಿರತೆಗಳ ಸಾವನಪ್ಪಿದ್ದು, ಈ ರೀತಿಯ ಯೋಜನೆಯಲ್ಲಿ ನಿರೀಕ್ಷಿತ ಮರಣ ದರವನ್ನು ಕಾಣಬಹುದು ಎಂದು ಸೌತ್ ಆಫ್ರಿಕಾ ಹೇಳಿದೆ.

ನಮೀಬಿಯಾದ ತಂದ ಸಶಾ ಎಂಬ ಚೀತಾ ಮೂತ್ರಪಿಂಡದ ಸೋಂಕಿನಿಂದ ಮಾರ್ಚ್ 27 ರಂದು ಸಾವನ್ನಪ್ಪಿತ್ತು. ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಸ್ಥಳಾಂತರಗೊಂಡ ಉದಯ್ ಎಂಬ ಎರಡನೇ ಚೀತಾ ಏಪ್ರಿಲ್ 23 ರಂದು ಸಾವನ್ನಪ್ಪಿತ್ತು. ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ತಂದ 20 ಚಿರತೆಗಳಲ್ಲಿ ಅವು ಸೇರಿವೆ.

ಶವಪರೀಕ್ಷೆ ಮಾಹಿತಿ ಹೊರಬೀಳುವ ಹೊತ್ತಿನಲ್ಲಿ ದಕ್ಷಿಣ ಆಫ್ರಿಕಾ ಹೇಳಿಕೆ ನೀಡಿದೆ. “ಯಾವುದೇ ರೀತಿಯ ಸಾಂಕ್ರಾಮಿಕ ಕಾಯಿಲೆಯಿಂದ ಉದಯ್ ಸಾವನ್ನಪ್ಪಿರುವ ಯಾವುದೇ ಸೂಚನೆಯಿಲ್ಲ. ಇತರ ಯಾವುದೇ ಚೀತಾಗಳಲ್ಲಿ ಇದೇ ರೀತಿಯ ತೊಂದರೆ ಇಲ್ಲ” ಎಂದಿದೆ.

ಇದನ್ನೂ ಓದಿರಿ: ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

“ಎಲ್ಲಾ ದಕ್ಷಿಣ ಆಫ್ರಿಕಾದ ಚಿರತೆಗಳು ವಿಶಾಲವಾದ ಪ್ರದೇಶದಲ್ಲಿವೆ. ಪ್ರತಿದಿನ ಎರಡು ಬಾರಿ ನಿಕಟವಾಗಿ ಅವುಗಳ ಮೇಲ್ವಿಚಾರಣೆ ಮಾಡಲಾಗುತ್ತದೆ” ಎಂದು ಹೇಳಿಕೆ ತಿಳಿಸಿದೆ. “ಅವುಗಳು ಅರಣ್ಯದಲ್ಲಿ ಬೆಳೆದ ಚೀತಾಗಳಾಗಿರುವುದರಿಂದ ಅವುಗಳ ನಡವಳಿಕೆ, ಚಲನವಲನಗಳು ಮತ್ತು ದೇಹದ ಸ್ಥಿತಿಯನ್ನು ದೂರದಿಂದ ಮೌಲ್ಯಮಾಪನ ಮಾಡಬೇಕು. ಅವುಗಳ ಆರೋಗ್ಯ ಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ಪಡೆಯಲು ಸ್ಥಳದಲ್ಲಿಯೇ ತಂಡವನ್ನು ಇರಿಸಬೇಕು” ಎಂದು ಅಭಿಪ್ರಾಯಪಟ್ಟಿದೆ.

“ದೊಡ್ಡ ಮಾಂಸಾಹಾರಿ ಪ್ರಾಣಿಗಳನ್ನು (ಬೇರೊಂದು ಸ್ಥಳಕ್ಕೆ) ತರುವುದು ಅತ್ಯಂತ ಸಂಕೀರ್ಣ ಮತ್ತು ಅಂತರ್ಗತವಾಗಿ ಅಪಾಯಕಾರಿ ಕಾರ್ಯಾಚರಣೆಗಳಾಗಿವೆ. ಇದು ಯೋಜನೆಯ ನಿರ್ಣಾಯಕ ಹಂತವಾಗಿದೆ. ಚೀತಾಗಳನ್ನು ವಿಸ್ತಾರವಾದ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಲ್ಲಿ ಅವುಗಳ ದಿನನಿತ್ಯದ ಯೋಗಕ್ಷೇಮದ ಮೇಲೆ ಕಡಿಮೆ ನಿಯಂತ್ರಣವಿರುತ್ತದೆ. ಗಾಯ ಮತ್ತು ಮರಣದ ಅಪಾಯಗಳು ಹೆಚ್ಚಾಗುತ್ತವೆ ಮತ್ತು ಈ ಅಪಾಯಗಳನ್ನು ಯೋಜನೆಯಲ್ಲಿ ಒಳಗೊಳ್ಳಬೇಕು” ಎಂದು ತಿಳಿಸಿದೆ.

“ಹೊರಗೆ ಬಿಡಲಾದ ಅನೇಕ ಚೀತಾಗಳು ಕುನೋ ರಾಷ್ಟ್ರೀಯ ಉದ್ಯಾನವನದ ಗಡಿಯಿಂದ ತಪ್ಪಿಸಿಕೊಳ್ಳುತ್ತವೆ ಮತ್ತು ಮರು ಕರೆತರುವ ಪ್ರಕ್ರಿಯೆಯಲ್ಲಿ ಅಲ್ಪಾವಧಿಯ ಒತ್ತಡವನ್ನು ಎದುರಿಸಬೇಕಾಗುತ್ತದೆ” ಎಂದಿರುವ ಆಫ್ರಿಕಾ, “ಚೀತಾಗಳನ್ನು ಅವುಗಳ ಪ್ರದೇಶಕ್ಕೆ ಮತ್ತೆ ತಂದ ನಂತರ ಪರಿಸ್ಥಿತಿಯು ಸ್ಥಿರಗೊಳ್ಳುತ್ತದೆ” ಎಂದು ಹೇಳಿದೆ.

ಇದರ ನಡುವೆ ಫೋರೆನ್ಸಿಕ್ ವಿಜ್ಞಾನಿ ಸೇರಿದಂತೆ ಐದು ಸದಸ್ಯರ ತಂಡವು ನಡೆಸಿದ ಪ್ರಾಥಮಿಕ ಶವಪರೀಕ್ಷೆಯು ಹಲವು ವಿಚಾರಗಳನ್ನು ಬಿಚ್ಚಿಟ್ಟಿದೆ. ಕಾರ್ಡಿಯೋಪಲ್ಮನರಿ ವೈಫಲ್ಯದಿಂದ ಉದಯ್ ಚೀತಾ ಸಾವನ್ನಪ್ಪಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಆರು ವರ್ಷದ ಈ ಚೀತಾ ಬೊಟುಲಿಸಮ್‌ (ದೇಹದ ನರಗಳ ಮೇಲೆ ದಾಳಿ ಮಾಡುವ ವಿಷಕಾರಿ ಅಂಶದಿಂದ ಉಂಟಾದ ಅಪರೂಪದ ಆದರೆ ಗಂಭೀರವಾದ ಕಾಯಿಲೆ. ಇದರಿಂದ ಉಸಿರಾಟದ ತೊಂದರೆ, ಸ್ನಾಯು ಪಾರ್ಶ್ವವಾಯು ಸಂಭವಿಸುವುದು) ಕಾಯಿಲೆಗೆ ತುತ್ತಾಗಿರಬಹುದು ಎಂದು ಊಹಿಸಲಾಗಿದೆ.

“ಜಬಲ್ಪುರ್ ಸಂಸ್ಥೆಯು ಹೆಚ್ಚು ವಿವರವಾದ ಪರೀಕ್ಷೆಯನ್ನು ನಡೆಸುತ್ತದೆ, ಅದರ ನಂತರವೇ ಶ್ವಾಸಕೋಶದ ವೈಫಲ್ಯಕ್ಕೆ ಕಾರಣವೇನು ಎಂದು ನಾವು ತಿಳಿಯುತ್ತೇವೆ” ಎಂದು ಮಧ್ಯಪ್ರದೇಶದ ಮುಖ್ಯ ವನ್ಯಜೀವಿ ವಾರ್ಡನ್ ಜೆಎಸ್ ಚೌಹಾಣ್ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಚೀತಾ ಸ್ಥಳಾಂತರಕ್ಕೆ ಮಧ್ಯಪ್ರದೇಶ ಮನವಿ

ಮಧ್ಯಪ್ರದೇಶದ ಕುನೊ ಉದ್ಯಾನದಲ್ಲಿರುವ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರಿ ಮಧ್ಯ ಪ್ರದೇಶದ ಅರಣ್ಯ ಇಲಾಖೆ ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದೆ.

ಕುನೊ ಉದ್ಯಾನದಲ್ಲಿ ಕಳೆದ ಒಂದು ತಿಂಗಳ ಅಂತರದಲ್ಲೇ ಎರಡು ಚೀತಾ ಮೃತಪಟ್ಟಿವೆ. ಹೀಗಾಗಿ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಇಲಾಖೆ ಕೇಳಿಕೊಂಡಿದೆ.

ಇದನ್ನೂ ಓದಿರಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

‘ಪ್ರಾಜೆಕ್ಟ್‌ ಚೀತಾ’ ಅಡಿಯಲ್ಲಿ ಒಟ್ಟು 20 ಚೀತಾಗಳನ್ನು ಕುನೊ ಉದ್ಯಾನಕ್ಕೆ ಕರೆತರಲಾಗಿತ್ತು. ಎರಡು ತಂಡಗಳಲ್ಲಿ ನಮೀಬಿಯಾ (8) ಹಾಗೂ ದಕ್ಷಿಣ ಆಫ್ರಿಕಾದಿಂದ (12) ಚೀತಾಗಳನ್ನು ಕರೆತರಲಾಗಿತ್ತು. ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ (ಸೆ.17) ದಿನದಂದು ಮೊದಲ ತಂಡದಲ್ಲಿ ಚೀತಾಗಳು ಭಾರತಕ್ಕೆ ಬಂದಿದ್ದವು.

‘ಕುನೊ ಉದ್ಯಾನದಲ್ಲಿ ಚೀತಾಗಳಿಗೆ ಅಗತ್ಯವಾಗಿರುವ ಸೌಲಭ್ಯಗಳು ಇಲ್ಲ. ಚೀತಾಗಳ ಮೇಲೆ ನಿಗಾ ವಹಿಸಲು ಇಲ್ಲಿ ಸಿಬ್ಬಂದಿ ಕೊರತೆ ಇದೆ. ಚೀತಾಗಳಿಗೆ ಓಡಾಡಲು ಬೇಕಾದಷ್ಟು ಜಾಗವೂ ಇಲ್ಲ’ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರಕ್ಕೆ ಚೀತಾ ಗಳನ್ನು ಸ್ಥಳಾಂತರಿಸುವ ಬಗ್ಗೆ ಪತ್ರ ಬರೆಯಲಾಗಿದೆ ಎಂದು ಮಧ್ಯ ಪ್ರದೇಶದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಜೆ.ಎಸ್. ಚೌಹಾಣ್‌ ತಿಳಿಸಿದ್ದಾರೆ.

‘ಕುನೊ ಉದ್ಯಾನವನಕ್ಕೆ ಚೀತಾಗಳು ಹೊಂದಿಕೊಳ್ಳದಿದ್ದರೆ ಅವುಗಳನ್ನು ರಾಜಸ್ಥಾನದ ಮುಕುಂದರಾ ಹಿಲ್ಸ್‌ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಮಾಡಲಾಗಿತ್ತು’ ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...