Homeಮುಖಪುಟಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

ಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

- Advertisement -
- Advertisement -

ಅಪಾಯಕಾರಿ ಸ್ಥಳಾಂತರವಾದಾಗ ಚೀತಾಗಳ ಸಾವು ನಿರೀಕ್ಷಿತವಾಗಿದೆ ಎಂದು ದಕ್ಷಿಣ ಆಫ್ರಿಕಾದ ಅರಣ್ಯ, ಮೀನುಗಾರಿಕೆ ಮತ್ತು ಪರಿಸರ ಇಲಾಖೆ ಗುರುವಾರ ತಿಳಿಸಿದೆ.

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚಿರತೆಗಳ ಸಾವನಪ್ಪಿದ್ದು, ಈ ರೀತಿಯ ಯೋಜನೆಯಲ್ಲಿ ನಿರೀಕ್ಷಿತ ಮರಣ ದರವನ್ನು ಕಾಣಬಹುದು ಎಂದು ಸೌತ್ ಆಫ್ರಿಕಾ ಹೇಳಿದೆ.

ನಮೀಬಿಯಾದ ತಂದ ಸಶಾ ಎಂಬ ಚೀತಾ ಮೂತ್ರಪಿಂಡದ ಸೋಂಕಿನಿಂದ ಮಾರ್ಚ್ 27 ರಂದು ಸಾವನ್ನಪ್ಪಿತ್ತು. ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಸ್ಥಳಾಂತರಗೊಂಡ ಉದಯ್ ಎಂಬ ಎರಡನೇ ಚೀತಾ ಏಪ್ರಿಲ್ 23 ರಂದು ಸಾವನ್ನಪ್ಪಿತ್ತು. ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ತಂದ 20 ಚಿರತೆಗಳಲ್ಲಿ ಅವು ಸೇರಿವೆ.

ಶವಪರೀಕ್ಷೆ ಮಾಹಿತಿ ಹೊರಬೀಳುವ ಹೊತ್ತಿನಲ್ಲಿ ದಕ್ಷಿಣ ಆಫ್ರಿಕಾ ಹೇಳಿಕೆ ನೀಡಿದೆ. “ಯಾವುದೇ ರೀತಿಯ ಸಾಂಕ್ರಾಮಿಕ ಕಾಯಿಲೆಯಿಂದ ಉದಯ್ ಸಾವನ್ನಪ್ಪಿರುವ ಯಾವುದೇ ಸೂಚನೆಯಿಲ್ಲ. ಇತರ ಯಾವುದೇ ಚೀತಾಗಳಲ್ಲಿ ಇದೇ ರೀತಿಯ ತೊಂದರೆ ಇಲ್ಲ” ಎಂದಿದೆ.

ಇದನ್ನೂ ಓದಿರಿ: ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

“ಎಲ್ಲಾ ದಕ್ಷಿಣ ಆಫ್ರಿಕಾದ ಚಿರತೆಗಳು ವಿಶಾಲವಾದ ಪ್ರದೇಶದಲ್ಲಿವೆ. ಪ್ರತಿದಿನ ಎರಡು ಬಾರಿ ನಿಕಟವಾಗಿ ಅವುಗಳ ಮೇಲ್ವಿಚಾರಣೆ ಮಾಡಲಾಗುತ್ತದೆ” ಎಂದು ಹೇಳಿಕೆ ತಿಳಿಸಿದೆ. “ಅವುಗಳು ಅರಣ್ಯದಲ್ಲಿ ಬೆಳೆದ ಚೀತಾಗಳಾಗಿರುವುದರಿಂದ ಅವುಗಳ ನಡವಳಿಕೆ, ಚಲನವಲನಗಳು ಮತ್ತು ದೇಹದ ಸ್ಥಿತಿಯನ್ನು ದೂರದಿಂದ ಮೌಲ್ಯಮಾಪನ ಮಾಡಬೇಕು. ಅವುಗಳ ಆರೋಗ್ಯ ಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ಪಡೆಯಲು ಸ್ಥಳದಲ್ಲಿಯೇ ತಂಡವನ್ನು ಇರಿಸಬೇಕು” ಎಂದು ಅಭಿಪ್ರಾಯಪಟ್ಟಿದೆ.

“ದೊಡ್ಡ ಮಾಂಸಾಹಾರಿ ಪ್ರಾಣಿಗಳನ್ನು (ಬೇರೊಂದು ಸ್ಥಳಕ್ಕೆ) ತರುವುದು ಅತ್ಯಂತ ಸಂಕೀರ್ಣ ಮತ್ತು ಅಂತರ್ಗತವಾಗಿ ಅಪಾಯಕಾರಿ ಕಾರ್ಯಾಚರಣೆಗಳಾಗಿವೆ. ಇದು ಯೋಜನೆಯ ನಿರ್ಣಾಯಕ ಹಂತವಾಗಿದೆ. ಚೀತಾಗಳನ್ನು ವಿಸ್ತಾರವಾದ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಲ್ಲಿ ಅವುಗಳ ದಿನನಿತ್ಯದ ಯೋಗಕ್ಷೇಮದ ಮೇಲೆ ಕಡಿಮೆ ನಿಯಂತ್ರಣವಿರುತ್ತದೆ. ಗಾಯ ಮತ್ತು ಮರಣದ ಅಪಾಯಗಳು ಹೆಚ್ಚಾಗುತ್ತವೆ ಮತ್ತು ಈ ಅಪಾಯಗಳನ್ನು ಯೋಜನೆಯಲ್ಲಿ ಒಳಗೊಳ್ಳಬೇಕು” ಎಂದು ತಿಳಿಸಿದೆ.

“ಹೊರಗೆ ಬಿಡಲಾದ ಅನೇಕ ಚೀತಾಗಳು ಕುನೋ ರಾಷ್ಟ್ರೀಯ ಉದ್ಯಾನವನದ ಗಡಿಯಿಂದ ತಪ್ಪಿಸಿಕೊಳ್ಳುತ್ತವೆ ಮತ್ತು ಮರು ಕರೆತರುವ ಪ್ರಕ್ರಿಯೆಯಲ್ಲಿ ಅಲ್ಪಾವಧಿಯ ಒತ್ತಡವನ್ನು ಎದುರಿಸಬೇಕಾಗುತ್ತದೆ” ಎಂದಿರುವ ಆಫ್ರಿಕಾ, “ಚೀತಾಗಳನ್ನು ಅವುಗಳ ಪ್ರದೇಶಕ್ಕೆ ಮತ್ತೆ ತಂದ ನಂತರ ಪರಿಸ್ಥಿತಿಯು ಸ್ಥಿರಗೊಳ್ಳುತ್ತದೆ” ಎಂದು ಹೇಳಿದೆ.

ಇದರ ನಡುವೆ ಫೋರೆನ್ಸಿಕ್ ವಿಜ್ಞಾನಿ ಸೇರಿದಂತೆ ಐದು ಸದಸ್ಯರ ತಂಡವು ನಡೆಸಿದ ಪ್ರಾಥಮಿಕ ಶವಪರೀಕ್ಷೆಯು ಹಲವು ವಿಚಾರಗಳನ್ನು ಬಿಚ್ಚಿಟ್ಟಿದೆ. ಕಾರ್ಡಿಯೋಪಲ್ಮನರಿ ವೈಫಲ್ಯದಿಂದ ಉದಯ್ ಚೀತಾ ಸಾವನ್ನಪ್ಪಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಆರು ವರ್ಷದ ಈ ಚೀತಾ ಬೊಟುಲಿಸಮ್‌ (ದೇಹದ ನರಗಳ ಮೇಲೆ ದಾಳಿ ಮಾಡುವ ವಿಷಕಾರಿ ಅಂಶದಿಂದ ಉಂಟಾದ ಅಪರೂಪದ ಆದರೆ ಗಂಭೀರವಾದ ಕಾಯಿಲೆ. ಇದರಿಂದ ಉಸಿರಾಟದ ತೊಂದರೆ, ಸ್ನಾಯು ಪಾರ್ಶ್ವವಾಯು ಸಂಭವಿಸುವುದು) ಕಾಯಿಲೆಗೆ ತುತ್ತಾಗಿರಬಹುದು ಎಂದು ಊಹಿಸಲಾಗಿದೆ.

“ಜಬಲ್ಪುರ್ ಸಂಸ್ಥೆಯು ಹೆಚ್ಚು ವಿವರವಾದ ಪರೀಕ್ಷೆಯನ್ನು ನಡೆಸುತ್ತದೆ, ಅದರ ನಂತರವೇ ಶ್ವಾಸಕೋಶದ ವೈಫಲ್ಯಕ್ಕೆ ಕಾರಣವೇನು ಎಂದು ನಾವು ತಿಳಿಯುತ್ತೇವೆ” ಎಂದು ಮಧ್ಯಪ್ರದೇಶದ ಮುಖ್ಯ ವನ್ಯಜೀವಿ ವಾರ್ಡನ್ ಜೆಎಸ್ ಚೌಹಾಣ್ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಚೀತಾ ಸ್ಥಳಾಂತರಕ್ಕೆ ಮಧ್ಯಪ್ರದೇಶ ಮನವಿ

ಮಧ್ಯಪ್ರದೇಶದ ಕುನೊ ಉದ್ಯಾನದಲ್ಲಿರುವ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರಿ ಮಧ್ಯ ಪ್ರದೇಶದ ಅರಣ್ಯ ಇಲಾಖೆ ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದೆ.

ಕುನೊ ಉದ್ಯಾನದಲ್ಲಿ ಕಳೆದ ಒಂದು ತಿಂಗಳ ಅಂತರದಲ್ಲೇ ಎರಡು ಚೀತಾ ಮೃತಪಟ್ಟಿವೆ. ಹೀಗಾಗಿ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಇಲಾಖೆ ಕೇಳಿಕೊಂಡಿದೆ.

ಇದನ್ನೂ ಓದಿರಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

‘ಪ್ರಾಜೆಕ್ಟ್‌ ಚೀತಾ’ ಅಡಿಯಲ್ಲಿ ಒಟ್ಟು 20 ಚೀತಾಗಳನ್ನು ಕುನೊ ಉದ್ಯಾನಕ್ಕೆ ಕರೆತರಲಾಗಿತ್ತು. ಎರಡು ತಂಡಗಳಲ್ಲಿ ನಮೀಬಿಯಾ (8) ಹಾಗೂ ದಕ್ಷಿಣ ಆಫ್ರಿಕಾದಿಂದ (12) ಚೀತಾಗಳನ್ನು ಕರೆತರಲಾಗಿತ್ತು. ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ (ಸೆ.17) ದಿನದಂದು ಮೊದಲ ತಂಡದಲ್ಲಿ ಚೀತಾಗಳು ಭಾರತಕ್ಕೆ ಬಂದಿದ್ದವು.

‘ಕುನೊ ಉದ್ಯಾನದಲ್ಲಿ ಚೀತಾಗಳಿಗೆ ಅಗತ್ಯವಾಗಿರುವ ಸೌಲಭ್ಯಗಳು ಇಲ್ಲ. ಚೀತಾಗಳ ಮೇಲೆ ನಿಗಾ ವಹಿಸಲು ಇಲ್ಲಿ ಸಿಬ್ಬಂದಿ ಕೊರತೆ ಇದೆ. ಚೀತಾಗಳಿಗೆ ಓಡಾಡಲು ಬೇಕಾದಷ್ಟು ಜಾಗವೂ ಇಲ್ಲ’ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರಕ್ಕೆ ಚೀತಾ ಗಳನ್ನು ಸ್ಥಳಾಂತರಿಸುವ ಬಗ್ಗೆ ಪತ್ರ ಬರೆಯಲಾಗಿದೆ ಎಂದು ಮಧ್ಯ ಪ್ರದೇಶದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಜೆ.ಎಸ್. ಚೌಹಾಣ್‌ ತಿಳಿಸಿದ್ದಾರೆ.

‘ಕುನೊ ಉದ್ಯಾನವನಕ್ಕೆ ಚೀತಾಗಳು ಹೊಂದಿಕೊಳ್ಳದಿದ್ದರೆ ಅವುಗಳನ್ನು ರಾಜಸ್ಥಾನದ ಮುಕುಂದರಾ ಹಿಲ್ಸ್‌ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಮಾಡಲಾಗಿತ್ತು’ ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...