Homeಮುಖಪುಟಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

ಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

- Advertisement -
- Advertisement -

ಅಪಾಯಕಾರಿ ಸ್ಥಳಾಂತರವಾದಾಗ ಚೀತಾಗಳ ಸಾವು ನಿರೀಕ್ಷಿತವಾಗಿದೆ ಎಂದು ದಕ್ಷಿಣ ಆಫ್ರಿಕಾದ ಅರಣ್ಯ, ಮೀನುಗಾರಿಕೆ ಮತ್ತು ಪರಿಸರ ಇಲಾಖೆ ಗುರುವಾರ ತಿಳಿಸಿದೆ.

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚಿರತೆಗಳ ಸಾವನಪ್ಪಿದ್ದು, ಈ ರೀತಿಯ ಯೋಜನೆಯಲ್ಲಿ ನಿರೀಕ್ಷಿತ ಮರಣ ದರವನ್ನು ಕಾಣಬಹುದು ಎಂದು ಸೌತ್ ಆಫ್ರಿಕಾ ಹೇಳಿದೆ.

ನಮೀಬಿಯಾದ ತಂದ ಸಶಾ ಎಂಬ ಚೀತಾ ಮೂತ್ರಪಿಂಡದ ಸೋಂಕಿನಿಂದ ಮಾರ್ಚ್ 27 ರಂದು ಸಾವನ್ನಪ್ಪಿತ್ತು. ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಸ್ಥಳಾಂತರಗೊಂಡ ಉದಯ್ ಎಂಬ ಎರಡನೇ ಚೀತಾ ಏಪ್ರಿಲ್ 23 ರಂದು ಸಾವನ್ನಪ್ಪಿತ್ತು. ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ತಂದ 20 ಚಿರತೆಗಳಲ್ಲಿ ಅವು ಸೇರಿವೆ.

ಶವಪರೀಕ್ಷೆ ಮಾಹಿತಿ ಹೊರಬೀಳುವ ಹೊತ್ತಿನಲ್ಲಿ ದಕ್ಷಿಣ ಆಫ್ರಿಕಾ ಹೇಳಿಕೆ ನೀಡಿದೆ. “ಯಾವುದೇ ರೀತಿಯ ಸಾಂಕ್ರಾಮಿಕ ಕಾಯಿಲೆಯಿಂದ ಉದಯ್ ಸಾವನ್ನಪ್ಪಿರುವ ಯಾವುದೇ ಸೂಚನೆಯಿಲ್ಲ. ಇತರ ಯಾವುದೇ ಚೀತಾಗಳಲ್ಲಿ ಇದೇ ರೀತಿಯ ತೊಂದರೆ ಇಲ್ಲ” ಎಂದಿದೆ.

ಇದನ್ನೂ ಓದಿರಿ: ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

“ಎಲ್ಲಾ ದಕ್ಷಿಣ ಆಫ್ರಿಕಾದ ಚಿರತೆಗಳು ವಿಶಾಲವಾದ ಪ್ರದೇಶದಲ್ಲಿವೆ. ಪ್ರತಿದಿನ ಎರಡು ಬಾರಿ ನಿಕಟವಾಗಿ ಅವುಗಳ ಮೇಲ್ವಿಚಾರಣೆ ಮಾಡಲಾಗುತ್ತದೆ” ಎಂದು ಹೇಳಿಕೆ ತಿಳಿಸಿದೆ. “ಅವುಗಳು ಅರಣ್ಯದಲ್ಲಿ ಬೆಳೆದ ಚೀತಾಗಳಾಗಿರುವುದರಿಂದ ಅವುಗಳ ನಡವಳಿಕೆ, ಚಲನವಲನಗಳು ಮತ್ತು ದೇಹದ ಸ್ಥಿತಿಯನ್ನು ದೂರದಿಂದ ಮೌಲ್ಯಮಾಪನ ಮಾಡಬೇಕು. ಅವುಗಳ ಆರೋಗ್ಯ ಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ಪಡೆಯಲು ಸ್ಥಳದಲ್ಲಿಯೇ ತಂಡವನ್ನು ಇರಿಸಬೇಕು” ಎಂದು ಅಭಿಪ್ರಾಯಪಟ್ಟಿದೆ.

“ದೊಡ್ಡ ಮಾಂಸಾಹಾರಿ ಪ್ರಾಣಿಗಳನ್ನು (ಬೇರೊಂದು ಸ್ಥಳಕ್ಕೆ) ತರುವುದು ಅತ್ಯಂತ ಸಂಕೀರ್ಣ ಮತ್ತು ಅಂತರ್ಗತವಾಗಿ ಅಪಾಯಕಾರಿ ಕಾರ್ಯಾಚರಣೆಗಳಾಗಿವೆ. ಇದು ಯೋಜನೆಯ ನಿರ್ಣಾಯಕ ಹಂತವಾಗಿದೆ. ಚೀತಾಗಳನ್ನು ವಿಸ್ತಾರವಾದ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಲ್ಲಿ ಅವುಗಳ ದಿನನಿತ್ಯದ ಯೋಗಕ್ಷೇಮದ ಮೇಲೆ ಕಡಿಮೆ ನಿಯಂತ್ರಣವಿರುತ್ತದೆ. ಗಾಯ ಮತ್ತು ಮರಣದ ಅಪಾಯಗಳು ಹೆಚ್ಚಾಗುತ್ತವೆ ಮತ್ತು ಈ ಅಪಾಯಗಳನ್ನು ಯೋಜನೆಯಲ್ಲಿ ಒಳಗೊಳ್ಳಬೇಕು” ಎಂದು ತಿಳಿಸಿದೆ.

“ಹೊರಗೆ ಬಿಡಲಾದ ಅನೇಕ ಚೀತಾಗಳು ಕುನೋ ರಾಷ್ಟ್ರೀಯ ಉದ್ಯಾನವನದ ಗಡಿಯಿಂದ ತಪ್ಪಿಸಿಕೊಳ್ಳುತ್ತವೆ ಮತ್ತು ಮರು ಕರೆತರುವ ಪ್ರಕ್ರಿಯೆಯಲ್ಲಿ ಅಲ್ಪಾವಧಿಯ ಒತ್ತಡವನ್ನು ಎದುರಿಸಬೇಕಾಗುತ್ತದೆ” ಎಂದಿರುವ ಆಫ್ರಿಕಾ, “ಚೀತಾಗಳನ್ನು ಅವುಗಳ ಪ್ರದೇಶಕ್ಕೆ ಮತ್ತೆ ತಂದ ನಂತರ ಪರಿಸ್ಥಿತಿಯು ಸ್ಥಿರಗೊಳ್ಳುತ್ತದೆ” ಎಂದು ಹೇಳಿದೆ.

ಇದರ ನಡುವೆ ಫೋರೆನ್ಸಿಕ್ ವಿಜ್ಞಾನಿ ಸೇರಿದಂತೆ ಐದು ಸದಸ್ಯರ ತಂಡವು ನಡೆಸಿದ ಪ್ರಾಥಮಿಕ ಶವಪರೀಕ್ಷೆಯು ಹಲವು ವಿಚಾರಗಳನ್ನು ಬಿಚ್ಚಿಟ್ಟಿದೆ. ಕಾರ್ಡಿಯೋಪಲ್ಮನರಿ ವೈಫಲ್ಯದಿಂದ ಉದಯ್ ಚೀತಾ ಸಾವನ್ನಪ್ಪಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಆರು ವರ್ಷದ ಈ ಚೀತಾ ಬೊಟುಲಿಸಮ್‌ (ದೇಹದ ನರಗಳ ಮೇಲೆ ದಾಳಿ ಮಾಡುವ ವಿಷಕಾರಿ ಅಂಶದಿಂದ ಉಂಟಾದ ಅಪರೂಪದ ಆದರೆ ಗಂಭೀರವಾದ ಕಾಯಿಲೆ. ಇದರಿಂದ ಉಸಿರಾಟದ ತೊಂದರೆ, ಸ್ನಾಯು ಪಾರ್ಶ್ವವಾಯು ಸಂಭವಿಸುವುದು) ಕಾಯಿಲೆಗೆ ತುತ್ತಾಗಿರಬಹುದು ಎಂದು ಊಹಿಸಲಾಗಿದೆ.

“ಜಬಲ್ಪುರ್ ಸಂಸ್ಥೆಯು ಹೆಚ್ಚು ವಿವರವಾದ ಪರೀಕ್ಷೆಯನ್ನು ನಡೆಸುತ್ತದೆ, ಅದರ ನಂತರವೇ ಶ್ವಾಸಕೋಶದ ವೈಫಲ್ಯಕ್ಕೆ ಕಾರಣವೇನು ಎಂದು ನಾವು ತಿಳಿಯುತ್ತೇವೆ” ಎಂದು ಮಧ್ಯಪ್ರದೇಶದ ಮುಖ್ಯ ವನ್ಯಜೀವಿ ವಾರ್ಡನ್ ಜೆಎಸ್ ಚೌಹಾಣ್ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಚೀತಾ ಸ್ಥಳಾಂತರಕ್ಕೆ ಮಧ್ಯಪ್ರದೇಶ ಮನವಿ

ಮಧ್ಯಪ್ರದೇಶದ ಕುನೊ ಉದ್ಯಾನದಲ್ಲಿರುವ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರಿ ಮಧ್ಯ ಪ್ರದೇಶದ ಅರಣ್ಯ ಇಲಾಖೆ ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದೆ.

ಕುನೊ ಉದ್ಯಾನದಲ್ಲಿ ಕಳೆದ ಒಂದು ತಿಂಗಳ ಅಂತರದಲ್ಲೇ ಎರಡು ಚೀತಾ ಮೃತಪಟ್ಟಿವೆ. ಹೀಗಾಗಿ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಇಲಾಖೆ ಕೇಳಿಕೊಂಡಿದೆ.

ಇದನ್ನೂ ಓದಿರಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

‘ಪ್ರಾಜೆಕ್ಟ್‌ ಚೀತಾ’ ಅಡಿಯಲ್ಲಿ ಒಟ್ಟು 20 ಚೀತಾಗಳನ್ನು ಕುನೊ ಉದ್ಯಾನಕ್ಕೆ ಕರೆತರಲಾಗಿತ್ತು. ಎರಡು ತಂಡಗಳಲ್ಲಿ ನಮೀಬಿಯಾ (8) ಹಾಗೂ ದಕ್ಷಿಣ ಆಫ್ರಿಕಾದಿಂದ (12) ಚೀತಾಗಳನ್ನು ಕರೆತರಲಾಗಿತ್ತು. ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ (ಸೆ.17) ದಿನದಂದು ಮೊದಲ ತಂಡದಲ್ಲಿ ಚೀತಾಗಳು ಭಾರತಕ್ಕೆ ಬಂದಿದ್ದವು.

‘ಕುನೊ ಉದ್ಯಾನದಲ್ಲಿ ಚೀತಾಗಳಿಗೆ ಅಗತ್ಯವಾಗಿರುವ ಸೌಲಭ್ಯಗಳು ಇಲ್ಲ. ಚೀತಾಗಳ ಮೇಲೆ ನಿಗಾ ವಹಿಸಲು ಇಲ್ಲಿ ಸಿಬ್ಬಂದಿ ಕೊರತೆ ಇದೆ. ಚೀತಾಗಳಿಗೆ ಓಡಾಡಲು ಬೇಕಾದಷ್ಟು ಜಾಗವೂ ಇಲ್ಲ’ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರಕ್ಕೆ ಚೀತಾ ಗಳನ್ನು ಸ್ಥಳಾಂತರಿಸುವ ಬಗ್ಗೆ ಪತ್ರ ಬರೆಯಲಾಗಿದೆ ಎಂದು ಮಧ್ಯ ಪ್ರದೇಶದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಜೆ.ಎಸ್. ಚೌಹಾಣ್‌ ತಿಳಿಸಿದ್ದಾರೆ.

‘ಕುನೊ ಉದ್ಯಾನವನಕ್ಕೆ ಚೀತಾಗಳು ಹೊಂದಿಕೊಳ್ಳದಿದ್ದರೆ ಅವುಗಳನ್ನು ರಾಜಸ್ಥಾನದ ಮುಕುಂದರಾ ಹಿಲ್ಸ್‌ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಮಾಡಲಾಗಿತ್ತು’ ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...