Homeಮುಖಪುಟಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

ಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

- Advertisement -
- Advertisement -

ಅಪಾಯಕಾರಿ ಸ್ಥಳಾಂತರವಾದಾಗ ಚೀತಾಗಳ ಸಾವು ನಿರೀಕ್ಷಿತವಾಗಿದೆ ಎಂದು ದಕ್ಷಿಣ ಆಫ್ರಿಕಾದ ಅರಣ್ಯ, ಮೀನುಗಾರಿಕೆ ಮತ್ತು ಪರಿಸರ ಇಲಾಖೆ ಗುರುವಾರ ತಿಳಿಸಿದೆ.

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚಿರತೆಗಳ ಸಾವನಪ್ಪಿದ್ದು, ಈ ರೀತಿಯ ಯೋಜನೆಯಲ್ಲಿ ನಿರೀಕ್ಷಿತ ಮರಣ ದರವನ್ನು ಕಾಣಬಹುದು ಎಂದು ಸೌತ್ ಆಫ್ರಿಕಾ ಹೇಳಿದೆ.

ನಮೀಬಿಯಾದ ತಂದ ಸಶಾ ಎಂಬ ಚೀತಾ ಮೂತ್ರಪಿಂಡದ ಸೋಂಕಿನಿಂದ ಮಾರ್ಚ್ 27 ರಂದು ಸಾವನ್ನಪ್ಪಿತ್ತು. ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಸ್ಥಳಾಂತರಗೊಂಡ ಉದಯ್ ಎಂಬ ಎರಡನೇ ಚೀತಾ ಏಪ್ರಿಲ್ 23 ರಂದು ಸಾವನ್ನಪ್ಪಿತ್ತು. ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ತಂದ 20 ಚಿರತೆಗಳಲ್ಲಿ ಅವು ಸೇರಿವೆ.

ಶವಪರೀಕ್ಷೆ ಮಾಹಿತಿ ಹೊರಬೀಳುವ ಹೊತ್ತಿನಲ್ಲಿ ದಕ್ಷಿಣ ಆಫ್ರಿಕಾ ಹೇಳಿಕೆ ನೀಡಿದೆ. “ಯಾವುದೇ ರೀತಿಯ ಸಾಂಕ್ರಾಮಿಕ ಕಾಯಿಲೆಯಿಂದ ಉದಯ್ ಸಾವನ್ನಪ್ಪಿರುವ ಯಾವುದೇ ಸೂಚನೆಯಿಲ್ಲ. ಇತರ ಯಾವುದೇ ಚೀತಾಗಳಲ್ಲಿ ಇದೇ ರೀತಿಯ ತೊಂದರೆ ಇಲ್ಲ” ಎಂದಿದೆ.

ಇದನ್ನೂ ಓದಿರಿ: ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

“ಎಲ್ಲಾ ದಕ್ಷಿಣ ಆಫ್ರಿಕಾದ ಚಿರತೆಗಳು ವಿಶಾಲವಾದ ಪ್ರದೇಶದಲ್ಲಿವೆ. ಪ್ರತಿದಿನ ಎರಡು ಬಾರಿ ನಿಕಟವಾಗಿ ಅವುಗಳ ಮೇಲ್ವಿಚಾರಣೆ ಮಾಡಲಾಗುತ್ತದೆ” ಎಂದು ಹೇಳಿಕೆ ತಿಳಿಸಿದೆ. “ಅವುಗಳು ಅರಣ್ಯದಲ್ಲಿ ಬೆಳೆದ ಚೀತಾಗಳಾಗಿರುವುದರಿಂದ ಅವುಗಳ ನಡವಳಿಕೆ, ಚಲನವಲನಗಳು ಮತ್ತು ದೇಹದ ಸ್ಥಿತಿಯನ್ನು ದೂರದಿಂದ ಮೌಲ್ಯಮಾಪನ ಮಾಡಬೇಕು. ಅವುಗಳ ಆರೋಗ್ಯ ಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ಪಡೆಯಲು ಸ್ಥಳದಲ್ಲಿಯೇ ತಂಡವನ್ನು ಇರಿಸಬೇಕು” ಎಂದು ಅಭಿಪ್ರಾಯಪಟ್ಟಿದೆ.

“ದೊಡ್ಡ ಮಾಂಸಾಹಾರಿ ಪ್ರಾಣಿಗಳನ್ನು (ಬೇರೊಂದು ಸ್ಥಳಕ್ಕೆ) ತರುವುದು ಅತ್ಯಂತ ಸಂಕೀರ್ಣ ಮತ್ತು ಅಂತರ್ಗತವಾಗಿ ಅಪಾಯಕಾರಿ ಕಾರ್ಯಾಚರಣೆಗಳಾಗಿವೆ. ಇದು ಯೋಜನೆಯ ನಿರ್ಣಾಯಕ ಹಂತವಾಗಿದೆ. ಚೀತಾಗಳನ್ನು ವಿಸ್ತಾರವಾದ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಲ್ಲಿ ಅವುಗಳ ದಿನನಿತ್ಯದ ಯೋಗಕ್ಷೇಮದ ಮೇಲೆ ಕಡಿಮೆ ನಿಯಂತ್ರಣವಿರುತ್ತದೆ. ಗಾಯ ಮತ್ತು ಮರಣದ ಅಪಾಯಗಳು ಹೆಚ್ಚಾಗುತ್ತವೆ ಮತ್ತು ಈ ಅಪಾಯಗಳನ್ನು ಯೋಜನೆಯಲ್ಲಿ ಒಳಗೊಳ್ಳಬೇಕು” ಎಂದು ತಿಳಿಸಿದೆ.

“ಹೊರಗೆ ಬಿಡಲಾದ ಅನೇಕ ಚೀತಾಗಳು ಕುನೋ ರಾಷ್ಟ್ರೀಯ ಉದ್ಯಾನವನದ ಗಡಿಯಿಂದ ತಪ್ಪಿಸಿಕೊಳ್ಳುತ್ತವೆ ಮತ್ತು ಮರು ಕರೆತರುವ ಪ್ರಕ್ರಿಯೆಯಲ್ಲಿ ಅಲ್ಪಾವಧಿಯ ಒತ್ತಡವನ್ನು ಎದುರಿಸಬೇಕಾಗುತ್ತದೆ” ಎಂದಿರುವ ಆಫ್ರಿಕಾ, “ಚೀತಾಗಳನ್ನು ಅವುಗಳ ಪ್ರದೇಶಕ್ಕೆ ಮತ್ತೆ ತಂದ ನಂತರ ಪರಿಸ್ಥಿತಿಯು ಸ್ಥಿರಗೊಳ್ಳುತ್ತದೆ” ಎಂದು ಹೇಳಿದೆ.

ಇದರ ನಡುವೆ ಫೋರೆನ್ಸಿಕ್ ವಿಜ್ಞಾನಿ ಸೇರಿದಂತೆ ಐದು ಸದಸ್ಯರ ತಂಡವು ನಡೆಸಿದ ಪ್ರಾಥಮಿಕ ಶವಪರೀಕ್ಷೆಯು ಹಲವು ವಿಚಾರಗಳನ್ನು ಬಿಚ್ಚಿಟ್ಟಿದೆ. ಕಾರ್ಡಿಯೋಪಲ್ಮನರಿ ವೈಫಲ್ಯದಿಂದ ಉದಯ್ ಚೀತಾ ಸಾವನ್ನಪ್ಪಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಆರು ವರ್ಷದ ಈ ಚೀತಾ ಬೊಟುಲಿಸಮ್‌ (ದೇಹದ ನರಗಳ ಮೇಲೆ ದಾಳಿ ಮಾಡುವ ವಿಷಕಾರಿ ಅಂಶದಿಂದ ಉಂಟಾದ ಅಪರೂಪದ ಆದರೆ ಗಂಭೀರವಾದ ಕಾಯಿಲೆ. ಇದರಿಂದ ಉಸಿರಾಟದ ತೊಂದರೆ, ಸ್ನಾಯು ಪಾರ್ಶ್ವವಾಯು ಸಂಭವಿಸುವುದು) ಕಾಯಿಲೆಗೆ ತುತ್ತಾಗಿರಬಹುದು ಎಂದು ಊಹಿಸಲಾಗಿದೆ.

“ಜಬಲ್ಪುರ್ ಸಂಸ್ಥೆಯು ಹೆಚ್ಚು ವಿವರವಾದ ಪರೀಕ್ಷೆಯನ್ನು ನಡೆಸುತ್ತದೆ, ಅದರ ನಂತರವೇ ಶ್ವಾಸಕೋಶದ ವೈಫಲ್ಯಕ್ಕೆ ಕಾರಣವೇನು ಎಂದು ನಾವು ತಿಳಿಯುತ್ತೇವೆ” ಎಂದು ಮಧ್ಯಪ್ರದೇಶದ ಮುಖ್ಯ ವನ್ಯಜೀವಿ ವಾರ್ಡನ್ ಜೆಎಸ್ ಚೌಹಾಣ್ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಚೀತಾ ಸ್ಥಳಾಂತರಕ್ಕೆ ಮಧ್ಯಪ್ರದೇಶ ಮನವಿ

ಮಧ್ಯಪ್ರದೇಶದ ಕುನೊ ಉದ್ಯಾನದಲ್ಲಿರುವ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರಿ ಮಧ್ಯ ಪ್ರದೇಶದ ಅರಣ್ಯ ಇಲಾಖೆ ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದೆ.

ಕುನೊ ಉದ್ಯಾನದಲ್ಲಿ ಕಳೆದ ಒಂದು ತಿಂಗಳ ಅಂತರದಲ್ಲೇ ಎರಡು ಚೀತಾ ಮೃತಪಟ್ಟಿವೆ. ಹೀಗಾಗಿ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಇಲಾಖೆ ಕೇಳಿಕೊಂಡಿದೆ.

ಇದನ್ನೂ ಓದಿರಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

‘ಪ್ರಾಜೆಕ್ಟ್‌ ಚೀತಾ’ ಅಡಿಯಲ್ಲಿ ಒಟ್ಟು 20 ಚೀತಾಗಳನ್ನು ಕುನೊ ಉದ್ಯಾನಕ್ಕೆ ಕರೆತರಲಾಗಿತ್ತು. ಎರಡು ತಂಡಗಳಲ್ಲಿ ನಮೀಬಿಯಾ (8) ಹಾಗೂ ದಕ್ಷಿಣ ಆಫ್ರಿಕಾದಿಂದ (12) ಚೀತಾಗಳನ್ನು ಕರೆತರಲಾಗಿತ್ತು. ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ (ಸೆ.17) ದಿನದಂದು ಮೊದಲ ತಂಡದಲ್ಲಿ ಚೀತಾಗಳು ಭಾರತಕ್ಕೆ ಬಂದಿದ್ದವು.

‘ಕುನೊ ಉದ್ಯಾನದಲ್ಲಿ ಚೀತಾಗಳಿಗೆ ಅಗತ್ಯವಾಗಿರುವ ಸೌಲಭ್ಯಗಳು ಇಲ್ಲ. ಚೀತಾಗಳ ಮೇಲೆ ನಿಗಾ ವಹಿಸಲು ಇಲ್ಲಿ ಸಿಬ್ಬಂದಿ ಕೊರತೆ ಇದೆ. ಚೀತಾಗಳಿಗೆ ಓಡಾಡಲು ಬೇಕಾದಷ್ಟು ಜಾಗವೂ ಇಲ್ಲ’ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರಕ್ಕೆ ಚೀತಾ ಗಳನ್ನು ಸ್ಥಳಾಂತರಿಸುವ ಬಗ್ಗೆ ಪತ್ರ ಬರೆಯಲಾಗಿದೆ ಎಂದು ಮಧ್ಯ ಪ್ರದೇಶದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಜೆ.ಎಸ್. ಚೌಹಾಣ್‌ ತಿಳಿಸಿದ್ದಾರೆ.

‘ಕುನೊ ಉದ್ಯಾನವನಕ್ಕೆ ಚೀತಾಗಳು ಹೊಂದಿಕೊಳ್ಳದಿದ್ದರೆ ಅವುಗಳನ್ನು ರಾಜಸ್ಥಾನದ ಮುಕುಂದರಾ ಹಿಲ್ಸ್‌ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಮಾಡಲಾಗಿತ್ತು’ ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...