Homeಮುಖಪುಟಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

ಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

- Advertisement -
- Advertisement -

ಅಪಾಯಕಾರಿ ಸ್ಥಳಾಂತರವಾದಾಗ ಚೀತಾಗಳ ಸಾವು ನಿರೀಕ್ಷಿತವಾಗಿದೆ ಎಂದು ದಕ್ಷಿಣ ಆಫ್ರಿಕಾದ ಅರಣ್ಯ, ಮೀನುಗಾರಿಕೆ ಮತ್ತು ಪರಿಸರ ಇಲಾಖೆ ಗುರುವಾರ ತಿಳಿಸಿದೆ.

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚಿರತೆಗಳ ಸಾವನಪ್ಪಿದ್ದು, ಈ ರೀತಿಯ ಯೋಜನೆಯಲ್ಲಿ ನಿರೀಕ್ಷಿತ ಮರಣ ದರವನ್ನು ಕಾಣಬಹುದು ಎಂದು ಸೌತ್ ಆಫ್ರಿಕಾ ಹೇಳಿದೆ.

ನಮೀಬಿಯಾದ ತಂದ ಸಶಾ ಎಂಬ ಚೀತಾ ಮೂತ್ರಪಿಂಡದ ಸೋಂಕಿನಿಂದ ಮಾರ್ಚ್ 27 ರಂದು ಸಾವನ್ನಪ್ಪಿತ್ತು. ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಸ್ಥಳಾಂತರಗೊಂಡ ಉದಯ್ ಎಂಬ ಎರಡನೇ ಚೀತಾ ಏಪ್ರಿಲ್ 23 ರಂದು ಸಾವನ್ನಪ್ಪಿತ್ತು. ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ತಂದ 20 ಚಿರತೆಗಳಲ್ಲಿ ಅವು ಸೇರಿವೆ.

ಶವಪರೀಕ್ಷೆ ಮಾಹಿತಿ ಹೊರಬೀಳುವ ಹೊತ್ತಿನಲ್ಲಿ ದಕ್ಷಿಣ ಆಫ್ರಿಕಾ ಹೇಳಿಕೆ ನೀಡಿದೆ. “ಯಾವುದೇ ರೀತಿಯ ಸಾಂಕ್ರಾಮಿಕ ಕಾಯಿಲೆಯಿಂದ ಉದಯ್ ಸಾವನ್ನಪ್ಪಿರುವ ಯಾವುದೇ ಸೂಚನೆಯಿಲ್ಲ. ಇತರ ಯಾವುದೇ ಚೀತಾಗಳಲ್ಲಿ ಇದೇ ರೀತಿಯ ತೊಂದರೆ ಇಲ್ಲ” ಎಂದಿದೆ.

ಇದನ್ನೂ ಓದಿರಿ: ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

“ಎಲ್ಲಾ ದಕ್ಷಿಣ ಆಫ್ರಿಕಾದ ಚಿರತೆಗಳು ವಿಶಾಲವಾದ ಪ್ರದೇಶದಲ್ಲಿವೆ. ಪ್ರತಿದಿನ ಎರಡು ಬಾರಿ ನಿಕಟವಾಗಿ ಅವುಗಳ ಮೇಲ್ವಿಚಾರಣೆ ಮಾಡಲಾಗುತ್ತದೆ” ಎಂದು ಹೇಳಿಕೆ ತಿಳಿಸಿದೆ. “ಅವುಗಳು ಅರಣ್ಯದಲ್ಲಿ ಬೆಳೆದ ಚೀತಾಗಳಾಗಿರುವುದರಿಂದ ಅವುಗಳ ನಡವಳಿಕೆ, ಚಲನವಲನಗಳು ಮತ್ತು ದೇಹದ ಸ್ಥಿತಿಯನ್ನು ದೂರದಿಂದ ಮೌಲ್ಯಮಾಪನ ಮಾಡಬೇಕು. ಅವುಗಳ ಆರೋಗ್ಯ ಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ಪಡೆಯಲು ಸ್ಥಳದಲ್ಲಿಯೇ ತಂಡವನ್ನು ಇರಿಸಬೇಕು” ಎಂದು ಅಭಿಪ್ರಾಯಪಟ್ಟಿದೆ.

“ದೊಡ್ಡ ಮಾಂಸಾಹಾರಿ ಪ್ರಾಣಿಗಳನ್ನು (ಬೇರೊಂದು ಸ್ಥಳಕ್ಕೆ) ತರುವುದು ಅತ್ಯಂತ ಸಂಕೀರ್ಣ ಮತ್ತು ಅಂತರ್ಗತವಾಗಿ ಅಪಾಯಕಾರಿ ಕಾರ್ಯಾಚರಣೆಗಳಾಗಿವೆ. ಇದು ಯೋಜನೆಯ ನಿರ್ಣಾಯಕ ಹಂತವಾಗಿದೆ. ಚೀತಾಗಳನ್ನು ವಿಸ್ತಾರವಾದ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಲ್ಲಿ ಅವುಗಳ ದಿನನಿತ್ಯದ ಯೋಗಕ್ಷೇಮದ ಮೇಲೆ ಕಡಿಮೆ ನಿಯಂತ್ರಣವಿರುತ್ತದೆ. ಗಾಯ ಮತ್ತು ಮರಣದ ಅಪಾಯಗಳು ಹೆಚ್ಚಾಗುತ್ತವೆ ಮತ್ತು ಈ ಅಪಾಯಗಳನ್ನು ಯೋಜನೆಯಲ್ಲಿ ಒಳಗೊಳ್ಳಬೇಕು” ಎಂದು ತಿಳಿಸಿದೆ.

“ಹೊರಗೆ ಬಿಡಲಾದ ಅನೇಕ ಚೀತಾಗಳು ಕುನೋ ರಾಷ್ಟ್ರೀಯ ಉದ್ಯಾನವನದ ಗಡಿಯಿಂದ ತಪ್ಪಿಸಿಕೊಳ್ಳುತ್ತವೆ ಮತ್ತು ಮರು ಕರೆತರುವ ಪ್ರಕ್ರಿಯೆಯಲ್ಲಿ ಅಲ್ಪಾವಧಿಯ ಒತ್ತಡವನ್ನು ಎದುರಿಸಬೇಕಾಗುತ್ತದೆ” ಎಂದಿರುವ ಆಫ್ರಿಕಾ, “ಚೀತಾಗಳನ್ನು ಅವುಗಳ ಪ್ರದೇಶಕ್ಕೆ ಮತ್ತೆ ತಂದ ನಂತರ ಪರಿಸ್ಥಿತಿಯು ಸ್ಥಿರಗೊಳ್ಳುತ್ತದೆ” ಎಂದು ಹೇಳಿದೆ.

ಇದರ ನಡುವೆ ಫೋರೆನ್ಸಿಕ್ ವಿಜ್ಞಾನಿ ಸೇರಿದಂತೆ ಐದು ಸದಸ್ಯರ ತಂಡವು ನಡೆಸಿದ ಪ್ರಾಥಮಿಕ ಶವಪರೀಕ್ಷೆಯು ಹಲವು ವಿಚಾರಗಳನ್ನು ಬಿಚ್ಚಿಟ್ಟಿದೆ. ಕಾರ್ಡಿಯೋಪಲ್ಮನರಿ ವೈಫಲ್ಯದಿಂದ ಉದಯ್ ಚೀತಾ ಸಾವನ್ನಪ್ಪಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಆರು ವರ್ಷದ ಈ ಚೀತಾ ಬೊಟುಲಿಸಮ್‌ (ದೇಹದ ನರಗಳ ಮೇಲೆ ದಾಳಿ ಮಾಡುವ ವಿಷಕಾರಿ ಅಂಶದಿಂದ ಉಂಟಾದ ಅಪರೂಪದ ಆದರೆ ಗಂಭೀರವಾದ ಕಾಯಿಲೆ. ಇದರಿಂದ ಉಸಿರಾಟದ ತೊಂದರೆ, ಸ್ನಾಯು ಪಾರ್ಶ್ವವಾಯು ಸಂಭವಿಸುವುದು) ಕಾಯಿಲೆಗೆ ತುತ್ತಾಗಿರಬಹುದು ಎಂದು ಊಹಿಸಲಾಗಿದೆ.

“ಜಬಲ್ಪುರ್ ಸಂಸ್ಥೆಯು ಹೆಚ್ಚು ವಿವರವಾದ ಪರೀಕ್ಷೆಯನ್ನು ನಡೆಸುತ್ತದೆ, ಅದರ ನಂತರವೇ ಶ್ವಾಸಕೋಶದ ವೈಫಲ್ಯಕ್ಕೆ ಕಾರಣವೇನು ಎಂದು ನಾವು ತಿಳಿಯುತ್ತೇವೆ” ಎಂದು ಮಧ್ಯಪ್ರದೇಶದ ಮುಖ್ಯ ವನ್ಯಜೀವಿ ವಾರ್ಡನ್ ಜೆಎಸ್ ಚೌಹಾಣ್ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಚೀತಾ ಸ್ಥಳಾಂತರಕ್ಕೆ ಮಧ್ಯಪ್ರದೇಶ ಮನವಿ

ಮಧ್ಯಪ್ರದೇಶದ ಕುನೊ ಉದ್ಯಾನದಲ್ಲಿರುವ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರಿ ಮಧ್ಯ ಪ್ರದೇಶದ ಅರಣ್ಯ ಇಲಾಖೆ ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದೆ.

ಕುನೊ ಉದ್ಯಾನದಲ್ಲಿ ಕಳೆದ ಒಂದು ತಿಂಗಳ ಅಂತರದಲ್ಲೇ ಎರಡು ಚೀತಾ ಮೃತಪಟ್ಟಿವೆ. ಹೀಗಾಗಿ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಇಲಾಖೆ ಕೇಳಿಕೊಂಡಿದೆ.

ಇದನ್ನೂ ಓದಿರಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

‘ಪ್ರಾಜೆಕ್ಟ್‌ ಚೀತಾ’ ಅಡಿಯಲ್ಲಿ ಒಟ್ಟು 20 ಚೀತಾಗಳನ್ನು ಕುನೊ ಉದ್ಯಾನಕ್ಕೆ ಕರೆತರಲಾಗಿತ್ತು. ಎರಡು ತಂಡಗಳಲ್ಲಿ ನಮೀಬಿಯಾ (8) ಹಾಗೂ ದಕ್ಷಿಣ ಆಫ್ರಿಕಾದಿಂದ (12) ಚೀತಾಗಳನ್ನು ಕರೆತರಲಾಗಿತ್ತು. ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ (ಸೆ.17) ದಿನದಂದು ಮೊದಲ ತಂಡದಲ್ಲಿ ಚೀತಾಗಳು ಭಾರತಕ್ಕೆ ಬಂದಿದ್ದವು.

‘ಕುನೊ ಉದ್ಯಾನದಲ್ಲಿ ಚೀತಾಗಳಿಗೆ ಅಗತ್ಯವಾಗಿರುವ ಸೌಲಭ್ಯಗಳು ಇಲ್ಲ. ಚೀತಾಗಳ ಮೇಲೆ ನಿಗಾ ವಹಿಸಲು ಇಲ್ಲಿ ಸಿಬ್ಬಂದಿ ಕೊರತೆ ಇದೆ. ಚೀತಾಗಳಿಗೆ ಓಡಾಡಲು ಬೇಕಾದಷ್ಟು ಜಾಗವೂ ಇಲ್ಲ’ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರಕ್ಕೆ ಚೀತಾ ಗಳನ್ನು ಸ್ಥಳಾಂತರಿಸುವ ಬಗ್ಗೆ ಪತ್ರ ಬರೆಯಲಾಗಿದೆ ಎಂದು ಮಧ್ಯ ಪ್ರದೇಶದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಜೆ.ಎಸ್. ಚೌಹಾಣ್‌ ತಿಳಿಸಿದ್ದಾರೆ.

‘ಕುನೊ ಉದ್ಯಾನವನಕ್ಕೆ ಚೀತಾಗಳು ಹೊಂದಿಕೊಳ್ಳದಿದ್ದರೆ ಅವುಗಳನ್ನು ರಾಜಸ್ಥಾನದ ಮುಕುಂದರಾ ಹಿಲ್ಸ್‌ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಮಾಡಲಾಗಿತ್ತು’ ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...