Homeಮುಖಪುಟರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

- Advertisement -
- Advertisement -

ಶ್ರಮಿಕ್ ವಿಶೇಷ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವುಗಳು ಸಣ್ಣ ಹಾಗೂ ಪ್ರತ್ಯೇಕ ಘಟನೆ, ಇದಕ್ಕಾಗಿ ರೈಲ್ವೇ ಇಲಾಖೆಯನ್ನು ನಿಂದಿಸುವುದು ಸರಿಯಲ್ಲ ಎಂದು ಪಶ್ಚಿಮ ಬಂಗಾಳ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಸೋಮವಾರದಿಂದ ತೀವ್ರ ಉಷ್ಣಾಂಶ ಹಾಗೂ ಹಸಿವೆಯಿಂದ ತಮ್ಮ ರಾಜ್ಯಗಳಿಗೆ ಹೊರಟಿದ್ದ ಒಟ್ಟು ಒಂಬತ್ತು ವಲಸೆ ಕಾರ್ಮಿಕರು ಶ್ರಮಿಕ್ ವಿಶೇಷ ರೈಲುಗಳಲ್ಲಿ ಮೃತಪಟ್ಟಿದ್ದಾರೆ.

“ಕೆಲವು ದುರದೃಷ್ಟಕರ ಘಟನೆಗಳು ನಡೆದಿವೆ, ಇದಕ್ಕಾಗಿ ರೈಲ್ವೆ ಇಲಾಖೆಯನ್ನು ದೂಷಿಸುವುದು ಸರಿಯಲ್ಲ. ವಲಸಿಗರನ್ನು ಅವರ ಊರಿಗೆ ತಲುಪಿಸುವ ಉತ್ತಮ ಕೆಲಸ ಮಾಡುತ್ತಿದೆ. ಕೆಲವು ಸಾವುಗಳು ನಡೆದಿವೆ, ಆದರೆ ಇವು ಪ್ರತ್ಯೇಕ ಘಟನೆಗಳು. ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಸೇವೆ ಸಲ್ಲಿಸಲು ಅತ್ಯುತ್ತಮವಾಗಿ ಪ್ರಯತ್ನಿಸಿದೆ ಎಂಬುದಕ್ಕೆ ನಮ್ಮಲ್ಲಿ ಉದಾಹರಣೆಗಳಿವೆ. ಕೆಲವು ಸಣ್ಣ ಘಟನೆಗಳು ನಡೆದಿವೆ, ಇದಕ್ಕಾಗಿ ರೈಲ್ವೆಗಳನ್ನು ಮುಚ್ಚಿ ಬಿಡಬೇಕು ಎನ್ನುವುದಲ್ಲ” ಸಂಸದರೂ ಆಗಿರುವ ಪಶ್ಚಿಮ ಬಂಗಾಳದ ಮುಖ್ಯಸ್ಥರಾಗಿರುವ ದಿಲೀಪ್ ಘೋಷ್ ಹೇಳಿದ್ದಾರೆ.

ಬಿಹಾರದ ಮುಜಾಫರ್ಪುರ್ ರೈಲ್ವೆ ನಿಲ್ದಾಣದಲ್ಲಿ ಮೃತ ತಾಯಿಯನ್ನು ಎಚ್ಚರಗೊಳಿಸಲು ಯತ್ನಿಸುತ್ತಿರುವ ಮಗುವಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದಂತೆ ಹಲವಾರು ಜನರು ವ್ಯಾಪಕವಾಗಿ ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ದಿಲೀಪ್ ಘೋಷ್ ಹೇಳಿಕೆಯನ್ನು ಪಶ್ಚಿಮ ಬಂಗಾಳದ ವಿಪಕ್ಷ ಸಿಪಿಐ(ಎಂ) ಹಾಗೂ ಆಡಳಿತ ಪಕ್ಷ ಟಿಸಿಎಂ ಖಂಡಿಸಿ, ವಲಸೆ ಕಾರ್ಮಿಕರ ದುಸ್ಥಿತಿಗೆ ಸೂಕ್ಷ್ಮವಾಗಿ ವರ್ತಿಸುವಂತೆ ಹೇಳಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪೊಲಿಟ್‌ಬ್ಯುರೊ ಸದಸ್ಯ ಮೊಹಮ್ಮದ್ ಸಲೀಂ ಮಾತನಾಡಿ, “ಬಿಜೆಪಿಯ ಆಡಳಿತದಲ್ಲಿ ಎಲ್ಲವೂ ಒಳ್ಳೆಯದಕ್ಕಾಗಿ ನಡೆಯುತ್ತದೆ ಎಂದು ಹೇಳುವ ಬಿಜೆಪಿಯ ಜಗತ್ತಿನಲ್ಲಿ ಉಳಿಯಲು ಘೋಷ್‌ರಂತಹ ನಾಯಕರು ಬಯಸುತ್ತಾರೆ. ವಲಸೆ ಕಾರ್ಮಿಕರ ಸಮಸ್ಯೆಯೂ ಮೋದಿ ಸರ್ಕಾರಕ್ಕೆ ಮಾನವ ಜೀವಗಳನ್ನು ಉಳಿಸಲು ಸಾಧ್ಯವಿಲ್ಲ ಎಂದು ಸಾಬೀತು ಮಾಡಿದೆ, ಬಿಜೆಪಿ ನಾಯಕರು ಹಾಗೂ ಕೇಂದ್ರ ಸರ್ಕಾರ ಬಿಕ್ಕಟ್ಟನ್ನು ತಪ್ಪಾಗಿ ನಿರ್ವಹಿಸಿದ ಬಗ್ಗೆ ನಾಚಿಕೆಪಡಬೇಕು” ಎಂದು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕ ಹಾಗೂ ಸಂಸದರೂ ಆಗಿರುವ ಸೌಗತಾ ರಾಯ್ “ಈ ಸಮಸ್ಯೆಯು ಕೇಂದ್ರವು ಕೊರೊನಾ ಬಿಕ್ಕಟ್ಟನ್ನು ಮತ್ತು ಲಾಕ್ ಡೌನ್ ಅನ್ನು ತಪ್ಪಾಗಿ ನಿರ್ವಹಿಸಿದ ಪರಿಣಾಮವಾಗಿದೆ. ಎಷ್ಟೋ ಜನರು ಸಾಯುತ್ತಿದ್ದಾರೆ ಆದರೆ ಏನೂ ಆಗಿಲ್ಲ ಎಂಬಂತೆ ಬಿಜೆಪಿ ನಾಯಕರು ಸೊಕ್ಕಿನಿಂದ ವರ್ತಿಸುತ್ತಿದ್ದಾರೆ. ನಮ್ಮತ್ತ ಬೆರಳು ತೋರಿಸುವ ಮೊದಲು ದಿಲೀಪ್ ಘೋಷ್ ಸೂಕ್ಷ್ಮವಾಗಿ ವರ್ತಿಸಬೇಕು ಹಾಗೂ ಮಾತನಾಡಬೇಕು.” ಎಂಧು ಹೇಳಿದ್ದಾರೆ.


ಓದಿ: ಶ್ರಮಿಕ್ ವಿಶೇಷ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...