Homeಮುಖಪುಟರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

- Advertisement -
- Advertisement -

ಶ್ರಮಿಕ್ ವಿಶೇಷ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವುಗಳು ಸಣ್ಣ ಹಾಗೂ ಪ್ರತ್ಯೇಕ ಘಟನೆ, ಇದಕ್ಕಾಗಿ ರೈಲ್ವೇ ಇಲಾಖೆಯನ್ನು ನಿಂದಿಸುವುದು ಸರಿಯಲ್ಲ ಎಂದು ಪಶ್ಚಿಮ ಬಂಗಾಳ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಸೋಮವಾರದಿಂದ ತೀವ್ರ ಉಷ್ಣಾಂಶ ಹಾಗೂ ಹಸಿವೆಯಿಂದ ತಮ್ಮ ರಾಜ್ಯಗಳಿಗೆ ಹೊರಟಿದ್ದ ಒಟ್ಟು ಒಂಬತ್ತು ವಲಸೆ ಕಾರ್ಮಿಕರು ಶ್ರಮಿಕ್ ವಿಶೇಷ ರೈಲುಗಳಲ್ಲಿ ಮೃತಪಟ್ಟಿದ್ದಾರೆ.

“ಕೆಲವು ದುರದೃಷ್ಟಕರ ಘಟನೆಗಳು ನಡೆದಿವೆ, ಇದಕ್ಕಾಗಿ ರೈಲ್ವೆ ಇಲಾಖೆಯನ್ನು ದೂಷಿಸುವುದು ಸರಿಯಲ್ಲ. ವಲಸಿಗರನ್ನು ಅವರ ಊರಿಗೆ ತಲುಪಿಸುವ ಉತ್ತಮ ಕೆಲಸ ಮಾಡುತ್ತಿದೆ. ಕೆಲವು ಸಾವುಗಳು ನಡೆದಿವೆ, ಆದರೆ ಇವು ಪ್ರತ್ಯೇಕ ಘಟನೆಗಳು. ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಸೇವೆ ಸಲ್ಲಿಸಲು ಅತ್ಯುತ್ತಮವಾಗಿ ಪ್ರಯತ್ನಿಸಿದೆ ಎಂಬುದಕ್ಕೆ ನಮ್ಮಲ್ಲಿ ಉದಾಹರಣೆಗಳಿವೆ. ಕೆಲವು ಸಣ್ಣ ಘಟನೆಗಳು ನಡೆದಿವೆ, ಇದಕ್ಕಾಗಿ ರೈಲ್ವೆಗಳನ್ನು ಮುಚ್ಚಿ ಬಿಡಬೇಕು ಎನ್ನುವುದಲ್ಲ” ಸಂಸದರೂ ಆಗಿರುವ ಪಶ್ಚಿಮ ಬಂಗಾಳದ ಮುಖ್ಯಸ್ಥರಾಗಿರುವ ದಿಲೀಪ್ ಘೋಷ್ ಹೇಳಿದ್ದಾರೆ.

ಬಿಹಾರದ ಮುಜಾಫರ್ಪುರ್ ರೈಲ್ವೆ ನಿಲ್ದಾಣದಲ್ಲಿ ಮೃತ ತಾಯಿಯನ್ನು ಎಚ್ಚರಗೊಳಿಸಲು ಯತ್ನಿಸುತ್ತಿರುವ ಮಗುವಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದಂತೆ ಹಲವಾರು ಜನರು ವ್ಯಾಪಕವಾಗಿ ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ದಿಲೀಪ್ ಘೋಷ್ ಹೇಳಿಕೆಯನ್ನು ಪಶ್ಚಿಮ ಬಂಗಾಳದ ವಿಪಕ್ಷ ಸಿಪಿಐ(ಎಂ) ಹಾಗೂ ಆಡಳಿತ ಪಕ್ಷ ಟಿಸಿಎಂ ಖಂಡಿಸಿ, ವಲಸೆ ಕಾರ್ಮಿಕರ ದುಸ್ಥಿತಿಗೆ ಸೂಕ್ಷ್ಮವಾಗಿ ವರ್ತಿಸುವಂತೆ ಹೇಳಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪೊಲಿಟ್‌ಬ್ಯುರೊ ಸದಸ್ಯ ಮೊಹಮ್ಮದ್ ಸಲೀಂ ಮಾತನಾಡಿ, “ಬಿಜೆಪಿಯ ಆಡಳಿತದಲ್ಲಿ ಎಲ್ಲವೂ ಒಳ್ಳೆಯದಕ್ಕಾಗಿ ನಡೆಯುತ್ತದೆ ಎಂದು ಹೇಳುವ ಬಿಜೆಪಿಯ ಜಗತ್ತಿನಲ್ಲಿ ಉಳಿಯಲು ಘೋಷ್‌ರಂತಹ ನಾಯಕರು ಬಯಸುತ್ತಾರೆ. ವಲಸೆ ಕಾರ್ಮಿಕರ ಸಮಸ್ಯೆಯೂ ಮೋದಿ ಸರ್ಕಾರಕ್ಕೆ ಮಾನವ ಜೀವಗಳನ್ನು ಉಳಿಸಲು ಸಾಧ್ಯವಿಲ್ಲ ಎಂದು ಸಾಬೀತು ಮಾಡಿದೆ, ಬಿಜೆಪಿ ನಾಯಕರು ಹಾಗೂ ಕೇಂದ್ರ ಸರ್ಕಾರ ಬಿಕ್ಕಟ್ಟನ್ನು ತಪ್ಪಾಗಿ ನಿರ್ವಹಿಸಿದ ಬಗ್ಗೆ ನಾಚಿಕೆಪಡಬೇಕು” ಎಂದು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕ ಹಾಗೂ ಸಂಸದರೂ ಆಗಿರುವ ಸೌಗತಾ ರಾಯ್ “ಈ ಸಮಸ್ಯೆಯು ಕೇಂದ್ರವು ಕೊರೊನಾ ಬಿಕ್ಕಟ್ಟನ್ನು ಮತ್ತು ಲಾಕ್ ಡೌನ್ ಅನ್ನು ತಪ್ಪಾಗಿ ನಿರ್ವಹಿಸಿದ ಪರಿಣಾಮವಾಗಿದೆ. ಎಷ್ಟೋ ಜನರು ಸಾಯುತ್ತಿದ್ದಾರೆ ಆದರೆ ಏನೂ ಆಗಿಲ್ಲ ಎಂಬಂತೆ ಬಿಜೆಪಿ ನಾಯಕರು ಸೊಕ್ಕಿನಿಂದ ವರ್ತಿಸುತ್ತಿದ್ದಾರೆ. ನಮ್ಮತ್ತ ಬೆರಳು ತೋರಿಸುವ ಮೊದಲು ದಿಲೀಪ್ ಘೋಷ್ ಸೂಕ್ಷ್ಮವಾಗಿ ವರ್ತಿಸಬೇಕು ಹಾಗೂ ಮಾತನಾಡಬೇಕು.” ಎಂಧು ಹೇಳಿದ್ದಾರೆ.


ಓದಿ: ಶ್ರಮಿಕ್ ವಿಶೇಷ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...