Homeಮುಖಪುಟರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

- Advertisement -
- Advertisement -

ಶ್ರಮಿಕ್ ವಿಶೇಷ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವುಗಳು ಸಣ್ಣ ಹಾಗೂ ಪ್ರತ್ಯೇಕ ಘಟನೆ, ಇದಕ್ಕಾಗಿ ರೈಲ್ವೇ ಇಲಾಖೆಯನ್ನು ನಿಂದಿಸುವುದು ಸರಿಯಲ್ಲ ಎಂದು ಪಶ್ಚಿಮ ಬಂಗಾಳ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಸೋಮವಾರದಿಂದ ತೀವ್ರ ಉಷ್ಣಾಂಶ ಹಾಗೂ ಹಸಿವೆಯಿಂದ ತಮ್ಮ ರಾಜ್ಯಗಳಿಗೆ ಹೊರಟಿದ್ದ ಒಟ್ಟು ಒಂಬತ್ತು ವಲಸೆ ಕಾರ್ಮಿಕರು ಶ್ರಮಿಕ್ ವಿಶೇಷ ರೈಲುಗಳಲ್ಲಿ ಮೃತಪಟ್ಟಿದ್ದಾರೆ.

“ಕೆಲವು ದುರದೃಷ್ಟಕರ ಘಟನೆಗಳು ನಡೆದಿವೆ, ಇದಕ್ಕಾಗಿ ರೈಲ್ವೆ ಇಲಾಖೆಯನ್ನು ದೂಷಿಸುವುದು ಸರಿಯಲ್ಲ. ವಲಸಿಗರನ್ನು ಅವರ ಊರಿಗೆ ತಲುಪಿಸುವ ಉತ್ತಮ ಕೆಲಸ ಮಾಡುತ್ತಿದೆ. ಕೆಲವು ಸಾವುಗಳು ನಡೆದಿವೆ, ಆದರೆ ಇವು ಪ್ರತ್ಯೇಕ ಘಟನೆಗಳು. ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಸೇವೆ ಸಲ್ಲಿಸಲು ಅತ್ಯುತ್ತಮವಾಗಿ ಪ್ರಯತ್ನಿಸಿದೆ ಎಂಬುದಕ್ಕೆ ನಮ್ಮಲ್ಲಿ ಉದಾಹರಣೆಗಳಿವೆ. ಕೆಲವು ಸಣ್ಣ ಘಟನೆಗಳು ನಡೆದಿವೆ, ಇದಕ್ಕಾಗಿ ರೈಲ್ವೆಗಳನ್ನು ಮುಚ್ಚಿ ಬಿಡಬೇಕು ಎನ್ನುವುದಲ್ಲ” ಸಂಸದರೂ ಆಗಿರುವ ಪಶ್ಚಿಮ ಬಂಗಾಳದ ಮುಖ್ಯಸ್ಥರಾಗಿರುವ ದಿಲೀಪ್ ಘೋಷ್ ಹೇಳಿದ್ದಾರೆ.

ಬಿಹಾರದ ಮುಜಾಫರ್ಪುರ್ ರೈಲ್ವೆ ನಿಲ್ದಾಣದಲ್ಲಿ ಮೃತ ತಾಯಿಯನ್ನು ಎಚ್ಚರಗೊಳಿಸಲು ಯತ್ನಿಸುತ್ತಿರುವ ಮಗುವಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದಂತೆ ಹಲವಾರು ಜನರು ವ್ಯಾಪಕವಾಗಿ ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ದಿಲೀಪ್ ಘೋಷ್ ಹೇಳಿಕೆಯನ್ನು ಪಶ್ಚಿಮ ಬಂಗಾಳದ ವಿಪಕ್ಷ ಸಿಪಿಐ(ಎಂ) ಹಾಗೂ ಆಡಳಿತ ಪಕ್ಷ ಟಿಸಿಎಂ ಖಂಡಿಸಿ, ವಲಸೆ ಕಾರ್ಮಿಕರ ದುಸ್ಥಿತಿಗೆ ಸೂಕ್ಷ್ಮವಾಗಿ ವರ್ತಿಸುವಂತೆ ಹೇಳಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪೊಲಿಟ್‌ಬ್ಯುರೊ ಸದಸ್ಯ ಮೊಹಮ್ಮದ್ ಸಲೀಂ ಮಾತನಾಡಿ, “ಬಿಜೆಪಿಯ ಆಡಳಿತದಲ್ಲಿ ಎಲ್ಲವೂ ಒಳ್ಳೆಯದಕ್ಕಾಗಿ ನಡೆಯುತ್ತದೆ ಎಂದು ಹೇಳುವ ಬಿಜೆಪಿಯ ಜಗತ್ತಿನಲ್ಲಿ ಉಳಿಯಲು ಘೋಷ್‌ರಂತಹ ನಾಯಕರು ಬಯಸುತ್ತಾರೆ. ವಲಸೆ ಕಾರ್ಮಿಕರ ಸಮಸ್ಯೆಯೂ ಮೋದಿ ಸರ್ಕಾರಕ್ಕೆ ಮಾನವ ಜೀವಗಳನ್ನು ಉಳಿಸಲು ಸಾಧ್ಯವಿಲ್ಲ ಎಂದು ಸಾಬೀತು ಮಾಡಿದೆ, ಬಿಜೆಪಿ ನಾಯಕರು ಹಾಗೂ ಕೇಂದ್ರ ಸರ್ಕಾರ ಬಿಕ್ಕಟ್ಟನ್ನು ತಪ್ಪಾಗಿ ನಿರ್ವಹಿಸಿದ ಬಗ್ಗೆ ನಾಚಿಕೆಪಡಬೇಕು” ಎಂದು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕ ಹಾಗೂ ಸಂಸದರೂ ಆಗಿರುವ ಸೌಗತಾ ರಾಯ್ “ಈ ಸಮಸ್ಯೆಯು ಕೇಂದ್ರವು ಕೊರೊನಾ ಬಿಕ್ಕಟ್ಟನ್ನು ಮತ್ತು ಲಾಕ್ ಡೌನ್ ಅನ್ನು ತಪ್ಪಾಗಿ ನಿರ್ವಹಿಸಿದ ಪರಿಣಾಮವಾಗಿದೆ. ಎಷ್ಟೋ ಜನರು ಸಾಯುತ್ತಿದ್ದಾರೆ ಆದರೆ ಏನೂ ಆಗಿಲ್ಲ ಎಂಬಂತೆ ಬಿಜೆಪಿ ನಾಯಕರು ಸೊಕ್ಕಿನಿಂದ ವರ್ತಿಸುತ್ತಿದ್ದಾರೆ. ನಮ್ಮತ್ತ ಬೆರಳು ತೋರಿಸುವ ಮೊದಲು ದಿಲೀಪ್ ಘೋಷ್ ಸೂಕ್ಷ್ಮವಾಗಿ ವರ್ತಿಸಬೇಕು ಹಾಗೂ ಮಾತನಾಡಬೇಕು.” ಎಂಧು ಹೇಳಿದ್ದಾರೆ.


ಓದಿ: ಶ್ರಮಿಕ್ ವಿಶೇಷ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...