Homeಮುಖಪುಟನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

- Advertisement -
- Advertisement -

ಹೊಸ ವರ್ಷದ ದಿನದಂದು ಭಾರತದಲ್ಲಿ 67,385 ಶಿಶುಗಳು ಜನಿಸಿದ್ದು, ವಿಶ್ವದಲ್ಲೇ ಇದು ಅಧಿಕ. ಆದರೆ, ಇದೇ ಹೊತ್ತಿನಲ್ಲಿ ರಾಜಸ್ತಾನದ ಕೋಟಾದ ಜೆಕೆ ಲೊನ್ ಸರ್ಕಾರಿ ಆಸ್ಪತ್ರೆಯಲ್ಲಿ ಡಿಸೆಂಬರ್ ತಿಂಗಳೊಂದರಲ್ಲೇ 100ಕ್ಕೂ ಹೆಚ್ಚು ಶಿಶುಗಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಅದಕ್ಕಿಂತ ಆಘಾತಕಾರಿಯಾದದ್ದು, ಈ ವಿಷಯ ಎತ್ತಿಕೊಂಡು ರಾಜಕೀಯ ಮಾಡುತ್ತಿರುವುದು.

ರಾಜಸ್ತಾನದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನವಜಾತ ಶಿಶುಗಳ ಸಾವಿನ ಪ್ರಮಾಣ ಇನ್ನೂ ಹೆಚ್ಚಿತ್ತು ಎಂದು ಹೇಳಿದ್ದಾರೆ. ಇಲ್ಲಿ ಆಸ್ಪತ್ರೆಗಳ ಸುಧಾರಣೆಗೆ ತುರ್ತು ಯೋಜನೆ ರೂಪಿಸುವ ಬದಲು ರಾಜಕೀಯ ಮೇಲುಗೈ ಪಡೆಯುವ ಕೀಳು ಪೈಪೋಟಿ ಶುರುವಾದಂತಿದೆ.

ಬಿಜೆಪಿ ಆಡಳಿತದ ಅವಧಿಯಲ್ಲೂ ಅಲ್ಲಿ ನವಜಾತ ಶಿಶುಗಳ ಪ್ರಮಾಣ ಜಾಸ್ತಿಯೇ ಇತ್ತು ಎಂಬುದೂ ಸತ್ಯ. ಆದರೆ ಈಗ ಪರಸ್ಪರ ದೋಷಾರೂಪಣೆ ಮಾಡುತ್ತ ಕೂಡುವ ಬದಲು ಕೇಂದ್ರದ ನೆರವಿನೊಂದಿಗೆ ನವಜಾತ ಶಿಶುಗಳ ರಕ್ಷಣೆಗೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಅಲ್ಲಿ ಇನ್‌ಕ್ಯುಬೇಟರ್ ಮತ್ತು ಐಸಿಯು ಘಟಕಗಳ ಕೊರತೆಯಿದೆ, ಇರುವ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ವರದಿಯಾಗಿದೆ.

ಕಳೆದ ವರ್ಷ ಉತ್ತರಪ್ರದೇಶದಲ್ಲಿ ಒಂದೇ ಆಸ್ಪತ್ರೆಯಲ್ಲಿ ವಾರದೊಪ್ಪತ್ತಿನಲ್ಲಿ ಹಲವಾರು ನವಜಾತ ಶಿಶುಗಳು ಸಾವನ್ನಪ್ಪಿದ್ದವು ಎಂಬುದನ್ನು ಇಲ್ಲಿ ನೆನೆಯಬಹುದು. ದಕ್ಷಿಣದ ರಾಜ್ಯಗಳಿಗೆ ಹೋಲಿಸಿದರೆ ಉತ್ತರದ ರಾಜ್ಯಗಳಲ್ಲಿ ಅದರಲ್ಲೂ ಭಿಮಾರು ರಾಜ್ಯಗಳಲ್ಲಿ ಈ ಸಮಸ್ಯೆ ತೀವ್ರವಾಗಿದೆ ಎಂಬುದೂ ಇಲ್ಲಿ ಉಲ್ಲೇಖಾರ್ಹ.

ನವಜಾತ ಶಿಶುಗಳ ರಕ್ಷಣೆಗಾಗಿ ವಿಶ್ವಸಂಸ್ಥೆ ಹಲವು ಕಾರ್ಯಕ್ರಮ ರೂಪಿಸಿದೆ, ಧನ ಸಹಾಯವನ್ನೂ ನೀಡುತ್ತಿದೆ. ಆದರೆ, ವಿಶ್ವದಾದ್ಯಂತ ನಿರೀಕ್ಷಿತ ಗುರಿ ಮುಟ್ಟುವುದಕ್ಕೆ ಸ್ಥಳೀಯ ಆಡಳಿತಗಳಿಂದ ಸಾಧ್ಯವಾಗಿಲ್ಲ.
ಕಡಿಮೆ ತೂಕ, ಅವಧಿಪೂರ್ವ ಜನನ, ಸುಸೂತ್ರವಾಗದ ಹೆರಿಗೆಗಳು ಮತ್ತು ಸಿಫ್ರಸ್‌ನಂತಹ ಕಾಯಿಲೆಗಳು ನವಜಾತ ಶಿಶುಗಳನ್ನು ಬಲಿ ತೆಗೆದುಕೊಳ್ಳುತ್ತಿವೆ. ಶುದ್ಧ ನೀರು, ಸ್ವಚ್ಛತೆ ಮತ್ತು ಪೌಷ್ಟಿಕಾಂಶಗಳ ಕೊರತೆ ಮತ್ತು ಪ್ರಾಥಮಿಕ ಆರೋಗ್ಯ ಸೇವೆಗಳ ಅಲಭ್ಯತೆ ಅಥವಾ ಕೊರತೆಯೇ ಇದಕ್ಕೆಲ್ಲ ಮೂಲ ಕಾರಣ. ಈ ಸೌಲಭ್ಯಗಳನ್ನು ಒದಗಿಸುವತ್ತ ನಮ್ಮ ಸರ್ಕಾರಗಳು ತುರ್ತ ಗಮನ ನೀಡಬೇಕಾಗಿದೆ.

ಇಡೀ ವಿಶ್ವದಲ್ಲೇ ನವಜಾತ ಶಿಶುಗಳ ಸಾವಿನ ಪ್ರಮಾಣದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ ಎಂಬುದು ನಾಚಿಕೆಯ ಮತ್ತು ಕಳವಳದ ಸಂಗತಿ.

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...